Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಕನ್ನಡ ಚಿತ್ರರಂಗದ ಹಿರಿಯ ನಟಿ ಲೀಲಾವತಿ...

ಕನ್ನಡ ಚಿತ್ರರಂಗದ ಹಿರಿಯ ನಟಿ ಲೀಲಾವತಿ ನಿಧನ

ವಾರ್ತಾಭಾರತಿವಾರ್ತಾಭಾರತಿ8 Dec 2023 6:06 PM IST
share
ಕನ್ನಡ ಚಿತ್ರರಂಗದ ಹಿರಿಯ ನಟಿ ಲೀಲಾವತಿ ನಿಧನ

ಬೆಂಗಳೂರು, ಡಿ.8: ಕನ್ನಡ ಚಿತ್ರರಂಗದ ಹಿರಿಯ ನಟಿ ಲೀಲಾವತಿ ಅವರು ವಯೋಸಹಜ ಅನಾರೋಗ್ಯದಿಂದ ಬೆಂಗಳೂರು ಗ್ರಾಮಾಂತರ ವ್ಯಾಪ್ತಿಯ ನೆಲಮಂಗಲದ ಖಾಸಗಿ ಆಸ್ಪತ್ರೆಯಲ್ಲಿ ಶುಕ್ರವಾರ ನಿಧನರಾಗಿದ್ದಾರೆ.

85 ವರ್ಷದ ನಟಿ ಲೀಲಾವತಿ ಅವರು ಪುತ್ರ ವಿನೋದ್ ರಾಜ್ ಹಾಗೂ ಅಪಾರ ಅಭಿಮಾನಿಗಳನ್ನು ಅಗಲಿದ್ದಾರೆ. ನೆಲಮಂಗಲದ ಜ್ಯೂನಿಯರ್ ಕಾಲೇಜು ಎದುರಿನ ಡಾ.ಬಿ.ಆರ್.ಅಂಬೇಡ್ಕರ್ ಮೈದಾನದಲ್ಲಿ ನಾಳೆ ಮಧ್ಯಾಹ್ನದವರೆಗೆ ಸಾರ್ವಜನಿಕರ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಲೀಲಾವತಿ ಅವರ ಅಂತ್ಯಕ್ರಿಯೆಯು ನೆಲಮಂಗಲ ಸಮೀಪದ ಸೋಲದೇವನಹಳ್ಳಿಯ ಅವರ ತೋಟದಲ್ಲಿ ನೇರವೇರಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.

1938ರಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿಯಲ್ಲಿ ಜನಿಸಿದ್ದ ಲೀಲಾವತಿ ಅವರು, ಓದಿದ್ದು 2ನೇ ತರಗತಿ ಮಾತ್ರ. ನಾಟಕ, ರಂಗಭೂಮಿ ಬಗೆಗೆ ಚಿಕ್ಕವಯಸ್ಸಿನಲ್ಲೇ ಆಸಕ್ತಿ ಹೊಂದಿದ್ದ ಲೀಲಾವತಿ ಅವರು ಮೈಸೂರಿನಲ್ಲಿ ವೃತ್ತಿಜೀವನ ಆರಂಭಿಸಿದ್ದರು. ಅವರು ವೃತ್ತಿ ರಂಗಭೂಮಿಯಲ್ಲಿ ಸಂಪೂರ್ಣ ತೊಡಗಿಸಿಕೊಳ್ಳುವ ಮುನ್ನ ಕೆಲವೆಡೆ ಮನೆ ಕೆಲಸವನ್ನೂ ನಿರ್ವಹಿಸಿದ್ದರು. 50 ವರ್ಷಗಳ ಕಾಲ ಅವರು ಚಿತ್ರರಂಗದಲ್ಲಿ ಸೇವೆ ಸಲ್ಲಿಸಿದ್ದ ಅವರು ಪುತ್ರ ವಿನೋದ್ ರಾಜ್ ನಟನೆಯ ‘ಯಾರದು'(2009) ಚಿತ್ರದ ನಂತರ ನಟನೆಯಿಂದ ದೂರ ಉಳಿದಿದ್ದರು.

ಸುಬ್ಬಯ್ಯ ನಾಯ್ಡು ಅವರ ಸಂಸ್ಥೆ ಹಾಗೂ ಮಹಾಲಿಂಗ ಭಾಗವತರ ನಾಟಕ ಸಂಸ್ಥೆಗಳಲ್ಲಿ ರಂಗಭೂಮಿ ಕಲಾವಿದೆಯಾಗಿ ಅಭಿನಯಿಸಿದ್ದ ಲೀಲಾವತಿ ಅವರು 1949ರಲ್ಲಿ ಶಂಕರ್ ಸಿಂಗ್ ಅವರ ‘ನಾಗಕನ್ನಿಕ’ ಚಿತ್ರದಲ್ಲಿ ಸಖಿಯ ಪಾತ್ರದ ಮುಖಾಂತರ ಕನ್ನಡ ಚಿತ್ರರಂಗ ಪ್ರವೇಶಿಸಿದ್ದರು. 1953ರಲ್ಲಿ ಬಿಡುಗಡೆಯಾಗಿದ್ದ ‘ಚಂಚಲ ಕುಮಾರಿ’ ಚಿತ್ರದ ಅವರ ಪಾತ್ರವು ಪ್ರಮುಖವಾಗಿತ್ತು. ಅನಂತರದಲ್ಲಿ ‘ಮಾಂಗಲ್ಯ ಯೋಗ' ಚಿತ್ರದ ಮೂಲಕ ಲೀಲಾವತಿ ಅವರು ನಾಯಕಿಯಾಗಿ ಅಭಿನಯಿಸಿದ್ದರು.

ಡಾ.ರಾಜ್‍ಕುಮಾರ್, ಉದಯ್‍ಕುಮಾರ್, ಕಲ್ಯಾಣ್‍ಕುಮಾರ್, ಡಾ.ವಿಷ್ಣುವರ್ಧನ್, ಅಂಬರೀಷ್, ಶಂಕರ್ ನಾಗ್, ಅನಂತ್‍ನಾಗ್ ಸೇರಿದಂತೆ ಮುಂತಾದವರ ಜೊತೆ ಲೀಲಾವತಿ ಅವರು ಅಭಿನಯಿಸಿದ್ದರು. ಕನ್ನಡ, ತಮಿಳು, ತೆಲುಗು, ಮಲಯಾಳಂ, ತುಳು ಸೇರಿದಂತೆ ಮುಂತಾದ ಭಾಷೆಗಳಲ್ಲಿ ಸುಮಾರು 600ಕ್ಕೂ ಅಧಿಕ ಸಿನಿಮಾಗಳಲ್ಲಿ ನಟಿಸಿದ್ದಾರೆ.

ಪ್ರಶಸ್ತಿ-ಪುರಸ್ಕಾರ: ಲೀಲಾವತಿ ಅವರು ಮದುವೆ ಮಾಡಿನೋಡು ಮತ್ತು ಸಂತ ತುಕಾರಾಮ್ ಸಿನಿಮಾಗಳಿಗೆ 2 ರಾಷ್ಟ್ರ ಪ್ರಶಸ್ತಿಗಳನ್ನು ಪಡೆದಿದ್ದು, ತುಂಬಿದ ಕೊಡ, ಮಹಾತ್ಯಾಗ, ಭಕ್ತ ಕುಂಬಾರ, ಸಿಪಾಯಿ ರಾಮು, ಗೆಜ್ಜೆ ಪೂಜೆ ಚಿತ್ರಗಳಲ್ಲಿನ ಮನೋಜ್ಞ ಅಭಿನಯಕ್ಕೆ ರಾಜ್ಯ ಪ್ರಶಸ್ತಿ ಪಡೆದಿದ್ದಾರೆ. ಕನ್ನಡದ ಕಂದ ಚಿತ್ರಕ್ಕೆ 2006ರಲ್ಲಿ ಫಿಲ್ಮ್ ಫೇರ್ ಪ್ರಶಸ್ತಿ ಕೂಡ ಸಿಕ್ಕಿತ್ತು. ಜೀವಮಾನ ಸಾಧನೆಗಾಗಿ 1999ರಲ್ಲಿ ಲೀಲಾವತಿ ಅವರು ಡಾ.ರಾಜ್‍ಕುಮಾರ್ ಪ್ರಶಸ್ತಿ ಪಡೆದರು. 2008ರಲ್ಲಿ ತುಮಕೂರು ವಿಶ್ವವಿದ್ಯಾಲಯದಿಂದ ಅವರಿಗೆ ಗೌರವ ಡಾಕ್ಟರೇಟ್ ನೀಡಲಾಗಿತ್ತು.

2022ರಲ್ಲಿ ನಟಿ ಲೀಲಾವತಿ ಅವರು ಜನರ ಆರೋಗ್ಯ ಸೇವೆಗಾಗಿ ಸ್ವಂತ ಖರ್ಚಿನಲ್ಲಿ ಸೋಲದೇವನಹಳ್ಳಿಯಲ್ಲಿ ಆಸ್ಪತ್ರೆಯೊಂದನ್ನು ಕಟ್ಟಿಸಿದ್ದರು. ಇಷ್ಟು ಮಾತ್ರವಲ್ಲದೆ ಲೀಲಾವತಿ ಅವರು ಬಡ ಕಲಾವಿದರಿಗೂ ನೆರವಾಗಿದ್ದರು.

ಲೀಲಾವತಿ ಅವರ ನಿಧನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಗೃಹಸಚಿವ ಡಾ.ಜಿ.ಪರಮೇಶ್ವರ್, ಸಚಿವರಾದ ಎಂ.ಬಿ.ಪಾಟೀಲ, ಪ್ರಿಯಾಂಕ್‍ಖರ್ಗೆ, ಲಕ್ಷ್ಮೀ ಹೆಬ್ಬಾಳ್ಕರ್, ವಿಪಕ್ಷ ನಾಯಕ ಆರ್.ಅಶೋಕ್, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಮಾಜಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ, ಸಂಸದೆ ಸುಮಲತಾ ಹಾಗೂ ಚಿತ್ರರಂಗದ ಗಣ್ಯರಾದ ದ್ವಾರಕೀಶ್, ಅನಂತ್‍ನಾಗ್, ಶ್ರುತಿ, ಗಿರಿಜಾ ಲೋಕೇಶ್, ಸುಂದರ್‍ರಾಜ್, ದರ್ಶನ್, ಸುದೀಪ್ ಸೇರಿದಂತೆ ಹಲವರು ಸಂತಾಪ ಸೂಚಿಸಿದ್ದಾರೆ.

ಸರಕಾರ ಮಾಡುವ ಕೆಲಸ ಲೀಲಾವತಿ ಮಾಡುತ್ತಿದ್ದರು!

‘ನಟಿ ಲೀಲಾವತಿಯವರು ನನ್ನನ್ನು ಸೇರಿದಂತೆ ಸಾಕಷ್ಟು ಕಲಾವಿದರಿಗೆ ಪ್ರತಿ ತಿಂಗಳು ಹಣವನ್ನು ನೀಡುತ್ತಿದ್ದರು. ಇದರಿಂದ ಕಷ್ಟದಲ್ಲಿ ಇರುವ ಕಲಾವಿದರಿಗೆ ಸಹಾಯವಾಗುತ್ತಿತ್ತು. ಬಣ್ಣ ಹಚ್ಚಿದರೆ ಮಾತ್ರ ನಮ್ಮ ಜೀವನ ನಡೆಯುತ್ತದೆ. ಆದರೆ ಕೊರೊನಾ ನಂತರ ಅವಕಾಶ ಕಡಿಮೆಯಾಗಿದೆ. ಇದರಿಂದ ಸಾಕಷ್ಟು ಕಲಾವಿದರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಇವರಿಗೆ ನಟಿ ಲೀಲಾವತಿಯವರು ಮಾಶಾಸನ ನೀಡುವ ಮೂಲಕ ಸರಕಾರ ಮಾಡುವ ಕೆಲಸವನ್ನು ತಾವು ಮಾಡುತ್ತಿದ್ದರು’ ಎಂದು ನಟ ವೈಜನಾಥ್ ಬಿರಾದಾರ ಹೇಳಿದ್ದಾರೆ.


share
ವಾರ್ತಾಭಾರತಿ
ವಾರ್ತಾಭಾರತಿ
Next Story
X