Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ವಿಶ್ವದ ಶ್ರೇಷ್ಠ ತಜ್ಞ...

ವಿಶ್ವದ ಶ್ರೇಷ್ಠ ತಜ್ಞ ಸಿದ್ದರಾಮಯ್ಯರಿಗೇಕೆ ಸಲಹೆಗಾರ: ಎಚ್.ಡಿ ಕುಮಾರಸ್ವಾಮಿ ವ್ಯಂಗ್ಯ

ವಾರ್ತಾಭಾರತಿವಾರ್ತಾಭಾರತಿ30 Dec 2023 8:27 PM IST
share
ವಿಶ್ವದ ಶ್ರೇಷ್ಠ ತಜ್ಞ ಸಿದ್ದರಾಮಯ್ಯರಿಗೇಕೆ ಸಲಹೆಗಾರ: ಎಚ್.ಡಿ ಕುಮಾರಸ್ವಾಮಿ ವ್ಯಂಗ್ಯ

ಬೆಂಗಳೂರು: ‘ತಾನು ದಾಖಲೆಯ ಬಜೆಟ್ ಮಂಡಿಸಿದೆ’ ಎನ್ನುವ ವಿಶ್ವದ ಶ್ರೇಷ್ಠ ಆರ್ಥಿಕ ತಜ್ಞ ಸಿದ್ದರಾಮಯ್ಯ ತಮಗೆ ಸಲಹೆ ಕೊಡಲು ಮತ್ತೊಬ್ಬ ಆರ್ಥಿಕ ಸಲಹೆಗಾರರನ್ನು ನೇಮಿಸಿಕೊಂಡಿರುವುದು ಹಾಸ್ಯಾಸ್ಪದ ಎಂದು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ.ಕುಮಾರಸ್ವಾಮಿ ವ್ಯಂಗ್ಯವಾಡಿದ್ದಾರೆ.

ಶನಿವಾರ ಇಲ್ಲಿನ ಜೆಪಿ ಭವನದಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಹಲವು ಬಾರಿ ಮಂತ್ರಿಯಾಗಿದ್ದ ದೇಶಪಾಂಡೆ ಅವರನ್ನು ಆಡಳಿತ ಸುಧಾರಣಾ ಆಯೋಗದ ಅಧ್ಯಕ್ಷರನ್ನಾಗಿ ನೇಮಿಸಲಾಗಿದೆ. ಆದರೆ, ಇದು ಕಾಂಗ್ರೆಸ್ ಸರಕಾರ ಅಸ್ತಿತ್ವಕ್ಕೆ ಬಂದ ನಂತರ ಮಾಡಿದ ವರ್ಗಾವಣೆ ದಂಧೆ, ಭ್ರಷ್ಟಾಚಾರದ ಸುಧಾರಣೆಗೆ ಈ ನೇಮಕ ನಡೆದಿದೆಯೇ ಎಂಬ ಅನುಮಾನ ಮೂಡುತ್ತಿದೆ ಎಂದು ಟೀಕಿಸಿದರು.

ಅದೇ ರೀತಿ, ಹಿರಿಯ ಶಾಸಕ ಬಿ.ಆರ್.ಪಾಟೀಲ ಅವರನ್ನೂ ಸಲಹೆಗಾರರನ್ನಾಗಿ ನೇಮಿಸಲಾಗಿದೆ. ಕೆಪಿಸಿಸಿ ಅಧ್ಯಕ್ಷರಾಗಿದ್ದ ಡಾ.ಜಿ.ಪರಮೇಶ್ವರ್ ನೇತೃತ್ವದಲ್ಲಿ 2013ರಲ್ಲಿ ಪಕ್ಷವನ್ನು ಅಧಿಕಾರಕ್ಕೆ ತಂದರೂ, ಅವರ ಕ್ಷೇತ್ರದಲ್ಲಿ ಸೋಲು ಕಂಡರು. ಇದರ ಹಿಂದೆ ಯಾರ ರಾಜಕೀಯ ತಂತ್ರಗಾರಿಕೆ ಇತ್ತು ಎನ್ನುವುದು ಎಲ್ಲರಿಗೂ ಗೊತ್ತಿದೆ. ಇಂತಹ ರಾಜಕೀಯ ತಂತ್ರಗಾರಿಕೆಯ ಮೇಧಾವಿಗೆ ರಾಜಕೀಯ ಸಲಹೆಗಾರರು ಏಕೆ ಬೇಕು? ಎಂದು ಪ್ರಶ್ನಿಸಿದರು.

ಸರಕಾರ ಜನರಿಯಲ್ಲಿ ಉದ್ಯೋಗ ಮೇಳ ಮಾಡುವ ಘೋಷಣೆ ಮಾಡಿದೆ. ರಾಜಕಾರಣಿಗಳು ತಮ್ಮ ಏಳಿಗೆಗಾಗಿ ಉದ್ಯೋಗ ಮೇಳ, ಆರೋಗ್ಯ ಮೇಳ ಮಾಡುತ್ತಾರೆ. ಪ್ರಯೋಜನ ಮಾತ್ರ ಶೂನ್ಯ. ಸರ್ಕಾರ ಇಂತಹ ಮೇಳ ಮಾಡುವ ಮೊದಲು ಸರ್ಕಾರದಲ್ಲೇ ಖಾಲಿ ಇರುವ 2.50 ಲಕ್ಷ ಹುದ್ದೆಗಳನ್ನು ಭರ್ತಿ ಮಾಡಬೇಕು ಎಂದು ಕುಮಾರಸ್ವಾಮಿ ಆಗ್ರಹಿಸಿದರು.

ಇನ್ನೂ, ಬಿಜೆಪಿ ಅವಧಿಯಲ್ಲಿ ಇದ್ದ ವಿದೇಶಿ ಬಂಡವಾಳ ಹೂಡಿಕೆಗಿಂದ ಈಗ ಅದು 2.5 ಶತಕೋಟಿ ಡಾಲರ್ ಕುಸಿದಿದೆ. ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್ ಅಮೆರಿಕಕ್ಕೆ ಹೋಗಿ ತಂದ ಬಂಡವಾಳ ಇನ್ನೂ ವಿಮಾನದಲ್ಲೇ ಬರುತ್ತಿದೆ ಎಂದ ಅವರು, ಈ ಬಾರಿಯ ಬಜೆಟ್ ಗಾತ್ರವನ್ನು 3.50 ಲಕ್ಷ ಕೋಟಿಗೆ ಏರಿಸುವ ಮಾತು ಹೇಳುತ್ತಿದ್ದಾರೆ. ಯಾವುದೇ ಅಭಿವೃದ್ಧಿ ಕಾರ್ಯಗಳಿಗೆ ಸರಕಾರದ ಬಳಿ ಹಣವಿಲ್ಲ. ಇದೆಲ್ಲದಕ್ಕೂ ಹೊಸ ಸಲಹೆಗಾರರು ನೆರವಾಗಬಹುದು ಎಂದು ಟೀಕಿಸಿದರು.

ಸುರಂಗ ನಿರ್ಮಾಣಕ್ಕಾಗಿ ಕುಸ್ತಿ: ಬೆಂಗಳೂರಿನಲ್ಲಿ ಸುರಂಗ ನಿರ್ಮಾಣ ಮಾಡುವ ಯೋಜನೆಗಾಗಿ ಇಬ್ಬರು ಸಚಿವರ ನಡುವೆ ಕುಸ್ತಿ ಶುರುವಾಗಿದೆ. ಈ ಸುರಂಗ ಯೋಜನೆಗೆ 80ಸಾವಿರ ಕೋಟಿ ರೂ.ವೆಚ್ಚ ಆಗುತ್ತದೆ ಎಂದು ಸರಕಾರ ಹೇಳಿದೆ. ಆದರೆ, ಈ ಯೋಜನೆಯನ್ನು ಯಾವಾಗ ಪೂರ್ಣ ಮಾಡುತ್ತೇವೆ ಎಂದು ಸರಕಾರ ಹೇಳುತ್ತಿಲ್ಲ. ನಾನು ಮುಖ್ಯಮಂತ್ರಿ ಆಗಿದ್ದಾಗ ಮಿನ್ಸ್ ರಸ್ತೆಯಿಂದ ಹೆಬ್ಬಾಳದವರಿಗೆ ಸುರಂಗ ರಸ್ತೆ ನಿರ್ಮಾಣ ಯೋಜನೆ ರೂಪಿಸಿದ್ದೆ. ಅದಕ್ಕೆ ಅಂತಿಮ ಹಂತದ ಅನುಮೋದನೆಯನ್ನೂ ಕೊಡಲಾಗಿತ್ತು. ಆದರೆ, ಅಷ್ಟರಲ್ಲಿ ನನ್ನ ಸರಕಾರ ಹೋಯಿತು. ಆ ಯೋಜನೆ ಅಲ್ಲಿಗೇ ನಿಂತು ಹೋಯಿತು ಎಂದು ಕುಮಾರಸ್ವಾಮಿ ಹೇಳಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X