Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಫ್ರೀಡಂ ಪಾರ್ಕಿನಲ್ಲಿ 10ನೇ ದಿನಕ್ಕೆ...

ಫ್ರೀಡಂ ಪಾರ್ಕಿನಲ್ಲಿ 10ನೇ ದಿನಕ್ಕೆ ಕಾಲಿಟ್ಟ ಅಕ್ಷರ ದಾಸೋಹ ನೌಕರರ ಧರಣಿ

ಮಳೆಯ ನಡುವೆಯೂ ಮುಂದುವರಿದ ಹೋರಾಟ

ವಾರ್ತಾಭಾರತಿವಾರ್ತಾಭಾರತಿ7 Nov 2023 8:52 PM IST
share
ಫ್ರೀಡಂ ಪಾರ್ಕಿನಲ್ಲಿ 10ನೇ ದಿನಕ್ಕೆ ಕಾಲಿಟ್ಟ ಅಕ್ಷರ ದಾಸೋಹ ನೌಕರರ ಧರಣಿ

ಬೆಂಗಳೂರು, ನ.7: ಕೆಲಸ ಖಾಯಂಗೊಳಿಸಬೇಕು ಸೇರಿದಂತೆ ವಿವಿಧ ಬೇಡಿಕೆ ಈಡೇರಿಕೆ ಆಗ್ರಹಿಸಿ ರಾಜ್ಯ ಅಕ್ಷರ ದಾಸೋಹ ನೌಕರರ ಸಂಘದಿಂದ ನಡೆಯುತ್ತಿರುವ ಅನಿರ್ದಿಷ್ಟಾವಧಿ ಧರಣಿ ಇಂದಿಗೆ 10ನೆ ದಿನಕ್ಕೆ ಕಾಲಿಟ್ಟಿದ್ದು, ಮಳೆಯ ನಡುವೆಯೂ ಪಟ್ಟುಬಿಡದೆ ಸಾವಿರಾರರು ನೌಕರರ ಮಂಗಳವಾರ ಹೋರಾಟ ನಡೆಸಿದರು.

ಬೆಂಗಳೂರಿನ ಫ್ರೀಡಂ ಪಾರ್ಕಿನಲ್ಲಿ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಆಗ್ರಹಿಸಿ ವಿಧಾನಸೌಧ ಚಲೋ, ಅನಿರ್ದಿಷ್ಟಾವಧಿ ಹೋರಾಟ ನಡೆಸುತ್ತಿರುವ ಬಿಸಿಯೂಟ ನೌಕರರು, ಮಂಗಳವಾರ ಸಂಜೆ ಮಳೆಯ ನಡುವೆಯೂ ಧರಣಿ ನಡೆಸಿ ರಾಜ್ಯ ಸರಕಾರದ ವಿರುದ್ಧ ಆಕ್ರೋಶ ಹೊರಹಾಕಿದರು.

ಈ ಕುರಿತು ಮಾತನಾಡಿದ ರಾಜ್ಯ ಅಕ್ಷರ ದಾಸೋಹ ನೌಕರರ ಸಂಘದ ಪ್ರಧಾನ ಕಾರ್ಯದರ್ಶಿ ಮಾಲಿನಿ ಮೇಸ್ತಾ, ಬಿಸಿಯೂಟ ತಯಾರಿಸುವ ಮಹಿಳೆಯರು ಸಾಕಷ್ಟು ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಅವುಗಳ ನಿವಾರಣೆಗಾಗಿ ಸರಕಾರಕ್ಕೆ ಹಲವು ಬಾರಿ ಮನವಿ ಸಲ್ಲಿಸಲಾಗಿದ್ದು, ನಮ್ಮ ಬೇಡಿಕೆಗಳು ಪೂರ್ಣ ಪ್ರಮಾಣದಲ್ಲಿ ಈಡೇರುತ್ತಿಲ್ಲ. ಹೀಗಾಗಿ, ಈ ಬಾರಿ ಅನಿರ್ದಿಷ್ಟಾವಧಿ ಧರಣಿ ಆರಂಭಿಸಲಾಗಿದೆ. ಇನ್ನೂ, ನ.16ರಿಂದ ರಾಜ್ಯ ವ್ಯಾಪಿ ಬಿಸಿಯೂಟ ತಯಾರಿಕೆ ಬಂದ್ ಮಾಡುವ ಕರೆ ನೀಡಲಾಗುವುದು ಎಂದರು.

ಅಕ್ಷರ ದಾಸೋಹ ಯೋಜನೆ ಸಂಪೂರ್ಣವಾಗಿ ಶಿಕ್ಷಣ ಇಲಾಖೆ ಅಡಿಯಲ್ಲಿಯೇ ನಡೆಯಬೇಕು. ಸಾದಿಲ್ವಾರು ಜಂಟಿ ಖಾತೆ ಜವಾಬ್ದಾರಿಯನ್ನು ಮುಖ್ಯ ಅಡುಗೆ ನೌಕರರಿಂದ ಎಸ್‍ಡಿಎಂಸಿಗೆ ವರ್ಗಾವಣೆ ಮಾಡಿರುವ ಕ್ರಮ ವಾಪಾಸು ಮಾಡಬೇಕು. 60 ವರ್ಷ ಆಗಿದೆ ಎನ್ನುವ ಕಾರಣದಿಂದ 2022ರಿಂದ ಕೆಲಸದಿಂದ ತೆಗೆದಿರುವ ಎಲ್ಲರಿಗೂ 1 ಲಕ್ಷ ಇಡಿಗಂಟು ಕೊಡಬೇಕು. ಬಜೆಟ್‍ನಲ್ಲಿ ಹೆಚ್ಚಳ ಮಾಡಿರುವ 1 ಸಾವಿರ ವೇತನವನ್ನು ಜನವರಿ ತಿಂಗಳಿಂದ ಅನ್ವಯವಾಗುವಂತೆ ಆದೇಶಿಸಬೇಕು ಎಂದು ಅವರು ಒತ್ತಾಯಿಸಿದರು.

ಹಲವಾರು ವರ್ಷಗಳಿಂದ ಬಿಸಿಯೂಟ ನೌಕರರ ಸಂಘಟನೆಯವರು ಬೇಡಿಕೆಗಳನ್ನು ಈಡೇರಿಸುವಂತೆ ಹೋರಾಟ ನಡೆಸುತ್ತಿದ್ದರೂ ಈವರೆಗೆ ಫಲ ಸಿಕ್ಕಿಲ್ಲ. ಆ.16, 17ರಂದು ಬೆಂಗಳೂರಿನಲ್ಲಿ ನಡೆದ ಹೋರಾಟ, ಕಳೆದ ವರ್ಷ ಡಿ. 28ರಂದು ಬೆಳಗಾವಿ ಸುವರ್ಣಸೌಧ ಎದುರು ನಡೆದ ಹೋರಾಟ, ಫೆ.13, 14, 15ರಂದು ಬೆಂಗಳೂರಿನಲ್ಲಿ ನಡೆದ ಹೋರಾಟದ ಸಂದರ್ಭದಲ್ಲಿ ಸಮಸ್ಯೆ ಬಗೆಹರಿಸುವ ಬಗ್ಗೆ ಭರವಸೆ ನೀಡಲಾಗಿದ್ದರೂ, ಈವರೆಗೂ ಪರಿಹಾರ ಸಿಗದೆ ಇರುವ ಕಾರಣದಿಂದ ಬೆಂಗಳೂರಿನಲ್ಲಿ ಅನಿರ್ದಿಷ್ಟಾವಧಿ ಹೋರಾಟ ಮುಂದುವರಿಸಲಾಗಿದೆ ಎಂದು ಅವರು ಬೇಸರ ವ್ಯಕ್ತಪಡಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X