ಅಕ್ರಮ, ಆಡಳಿತ ವಿಫಲ ಆರೋಪ: ಕಿದ್ವಾಯಿ ಸಂಸ್ಥೆ ವಿರುದ್ಧ ತನಿಖೆಗೆ ಸಿಎಂ ಆದೇಶ
![ಅಕ್ರಮ, ಆಡಳಿತ ವಿಫಲ ಆರೋಪ: ಕಿದ್ವಾಯಿ ಸಂಸ್ಥೆ ವಿರುದ್ಧ ತನಿಖೆಗೆ ಸಿಎಂ ಆದೇಶ ಅಕ್ರಮ, ಆಡಳಿತ ವಿಫಲ ಆರೋಪ: ಕಿದ್ವಾಯಿ ಸಂಸ್ಥೆ ವಿರುದ್ಧ ತನಿಖೆಗೆ ಸಿಎಂ ಆದೇಶ](https://www.varthabharati.in/h-upload/2023/09/16/1191622-fyahvozayaeau-c.webp)
ಬೆಂಗಳೂರು: ಕಿದ್ವಾಯಿ ಸ್ಮಾರಕ ಗಂಥಿ ಸಂಸ್ಥೆೆಯಲ್ಲಿ ನಡೆದಿರುವ ಆರೋಪಗಳ ಕುರಿತು ತನಿಖೆ ನಡೆಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಉನ್ನತ ಮಟ್ಟದ ತನಿಖೆಗೆ ಆದೇಶಿಸಿದ್ದಾರೆ.
ಕಿದ್ವಾಯಿ ನಿರ್ದೇಶಕರು ಹಾಗೂ ಆಡಳಿತ ವ್ಯವಸ್ಥೆೆ ವಿಫಲತೆ ವಿರುದ್ಧ ಹಲವಾರು ಆರೋಪಗಳು ಕೇಳಿ ಬಂದ ಹಿನ್ನಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತನಿಖೆಗೆ ಆದೇಶಿಸಿದ್ದಾರೆ. ಕಿದ್ವಾಯಿ ಸ್ಮಾರಕ ಗಂಥಿ ಸಂಸ್ಥೆೆಯಲ್ಲಿ ರೋಗಿಗಳಿಗೆ ಸಮರ್ಪಕ ಚಿಕಿತ್ಸೆೆ ದೊರೆಯುತ್ತಿಲ್ಲ. ಟೆಂಡರ್ಗಳು ಹಾಗೂ ಔಷಧಗಳ ಖರೀದಿಯಲ್ಲಿ ಪಾರದರ್ಶಕತೆ ಇಲ್ಲದೆ ಅಕ್ರಮಗಳು ನಡೆದಿರುವ ಬಗ್ಗೆೆ ವ್ಯಾಪಕ ದೂರುಗಳು ಕೇಳಿ ಬಂದಿದೆ. ಈ ಹಿನ್ನಲೆಯಲ್ಲಿ ಒಬ್ಬ ಐಎಎಸ್ ಅಧಿಕಾರಿಯ ನೇತೃತ್ವದಲ್ಲಿ ಉತ್ತಮ ಚಾರಿತ್ರ್ಯ ಹೊಂದಿರುವ ಸಹಕಾರ ಇಲಾಖೆಯ ಅಧಿಕಾರಿ ಮತ್ತು ಆರ್ಥಿಕ ಇಲಾಖೆ ಅಧಿಕಾರಿಯನ್ನೊಳಗೊಂಡ ತಂಡವನ್ನು ರಚಿಸಿ ಎರಡು ವಾರದೊಳಗೆ ಪಾರದರ್ಶಕ ವರದಿ ಸಲ್ಲಿಸುವಂತೆ ಮುಖ್ಯಕಾರ್ಯದರ್ಶಿಯವರಿಗೆ ಆದೇಶಿಸಿದ್ದಾರೆ.
ದೂರಿನಲ್ಲಿ ಏನಿದೆ?: ಪೆಟ್ಸ್ಕ್ಯಾನ್ ಟೆಂಡರ್ ನಿಯಮ ಉಲ್ಲಂಘನೆಯಾಗಿದ್ದು, ನಿರ್ದೇಶಕರು ಅವಧಿಗೂ ಮುನ್ನವೇ ಟೆಂಡರ್ ಕಾರ್ಯಾದೇಶ, ಬಿಲ್ಲಿಂಗ್, ಹೆಚ್ಚುವರಿ ಹಣ ವಸೂಲಿ, ಟೆಂಡರ್ ನಿಯಮ ಉಲ್ಲಂಸಿ ಮಾನವ ಸಂಪನ್ಮೂಲನ ಒದಗಣೆ, ಕಳಪೆ ಪೆಟ್ಸ್ಕ್ಯಾನ್ ಯಂತ್ರ ಖರೀದಿ, ಜಿಎಸ್ಟಿ ವಂಚನೆ, ಸರಕಾರದ ಅನುಮೋದನೆ ಇಲ್ಲದೆ ಟೆಂಡರ್ದಾರರಿಗೆ ಪೆಟ್ಸ್ಕ್ಯಾನ್ ಪರೀಕ್ಷೆೆಗಳ ಹಣ ಸಂದಾಯ, ಪಿಪಿಪಿ ಮಾದರಿಯ ನಿಯಮ ಉಲ್ಲಂಘನೆ, ಕಳಪೆ ಗುಣಮಟ್ಟದ ಔಷಧಿ, ಔಷಧಿಗಳ ಖರೀದಿಯಲ್ಲಿ ಅಕ್ರಮ, ರೋಗಿಗಳ ಸಾವಿನ ಸಂಖ್ಯೆೆ ಹೆಚ್ಚಳ ಹಾಗೂ ಆಡಳಿತ ವ್ಯವಸ್ಥೆೆಯ ಸಂಪೂರ್ಣ ವಿಫಲತೆ ಕುರಿತಂತೆ ಸುಮಾರು 15ಕ್ಕೂ ಹೆಚ್ಚು ಆರೋಪಗಳ ದೂರು ಸಲ್ಲಿಸಲಾಗಿದೆ.