Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ವಿಪಕ್ಷಗಳ ವಿರೋಧದ ನಡುವೆ ವಿಧಾನಸಭೆಯಲ್ಲಿ...

ವಿಪಕ್ಷಗಳ ವಿರೋಧದ ನಡುವೆ ವಿಧಾನಸಭೆಯಲ್ಲಿ ‘ಎಪಿಎಂಸಿ’ ತಿದ್ದುಪಡಿ ವಿಧೇಯಕ ಅಂಗೀಕಾರ

ವಾರ್ತಾಭಾರತಿವಾರ್ತಾಭಾರತಿ17 July 2023 5:18 PM IST
share
ವಿಪಕ್ಷಗಳ ವಿರೋಧದ ನಡುವೆ ವಿಧಾನಸಭೆಯಲ್ಲಿ ‘ಎಪಿಎಂಸಿ’ ತಿದ್ದುಪಡಿ ವಿಧೇಯಕ ಅಂಗೀಕಾರ

ಬೆಂಗಳೂರು, ಎ.17: ವಿರೋಧ ಪಕ್ಷಗಳಾದ ಜೆಡಿಎಸ್ ಹಾಗೂ ಬಿಜೆಪಿಯ ಧರಣಿ ನಡುವೆಯೆ ಸೋಮವಾರ ವಿಧಾನಸಭೆಯಲ್ಲಿ ರಾಜ್ಯ ಕೃಷಿ ಉತ್ಪನ್ನ ಮಾರುಕಟ್ಟೆ ವ್ಯವಹಾರ(ನಿಯಂತ್ರಣ ಮತ್ತು ಅಭಿವೃದ್ಧಿ)(ತಿದ್ದುಪಡಿ) ವಿಧೇಯಕ 2023ಕ್ಕೆ ಅಂಗೀಕಾರ ಲಭಿಸಿತು.

ಭೋಜನ ವಿರಾಮದ ಬಳಿಕ ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ್ ಮಂಡಿಸಿದ ವಿಧೇಯಕದ ಮೇಲೆ ಆಡಳಿತ ಪಕ್ಷದ ಸದಸ್ಯರಾದ ಟಿ.ಬಿ.ಜಯಚಂದ್ರ, ಬಿ.ಆರ್.ಪಾಟೀಲ್, ಕೆ.ಷಡಕ್ಷರಿ, ಕೆ.ಎಂ. ಶಿವಲಿಂಗೇಗೌಡ, ಬಿಜೆಪಿ ಸದಸ್ಯರಾದ ಸಿದ್ದುಸವದಿ, ಆರಗ ಜ್ಞಾನೇಂದ್ರ, ಜೆಡಿಎಸ್ ಸದಸ್ಯ ಎಚ್.ಡಿ. ರೇವಣ್ಣ ಚರ್ಚೆ ನಡೆಸಿದರು.

2020ರಲ್ಲಿ ಬಿಜೆಪಿ ಸರಕಾರ ಜಾರಿಗೆ ತಂದಿದ್ದ ಎಪಿಎಂಸಿ ಕಾಯ್ದೆಯಲ್ಲಿ ರೈತರು ತಾವು ಬೆಳೆದ ಬೆಳೆಗಳನ್ನು ಎಪಿಸಿಎಂ ಒಳಗೆ ಹಾಗೂ ಹೊರಗಡೆ ಮಾರಾಟ ಮಾಡಲು ಅವಕಾಶ ಕಲ್ಪಿಸಲಾಗಿತ್ತು. ಇದೀಗ ಕಾಂಗ್ರೆಸ್ ಸರಕಾರವು ಈ ಕಾಯ್ದೆಗೆ ತಿದ್ದುಪಡಿ ತಂದು ರೈತರು ತಮ್ಮ ಬೆಳೆಗಳನ್ನು ಎಪಿಎಂಸಿ ಒಳಗಡೆ ಮಾರಾಟ ಮಾಡುವುದರಿಂದ ರೈತರಿಗೆ ಹೆಚ್ಚಿನ ಆದಾಯ ಹಾಗೂ ಎಪಿಎಂಸಿಗಳ ನಿರ್ವಹಣೆಯು ಸಾಧ್ಯವಾಗುತ್ತದೆ ಎಂದು ತಿಳಿಸಿದೆ.

ಎಪಿಎಂಸಿ ಕಾಯ್ದೆಯನ್ನು ತರಾತುರಿಯಲ್ಲಿ ಜಾರಿಗೆ ತರುವ ಬದಲು ರೈತ ಮುಖಂಡರನ್ನು ಕರೆಸಿ ಚರ್ಚೆ ಮಾಡಿ, ರೈತರ ಮನೆ ಹಾಳು ಮಾಡುವ ಕಾಯ್ದೆ ಇದಾಗಿದೆ ಎಂದು ಜೆಡಿಎಸ್ ಸದಸ್ಯ ಎಚ್.ಡಿ.ರೇವಣ್ಣ ಮಾಡಿದ ಟೀಕೆಯಿಂದಾಗಿ ಕಾಂಗ್ರೆಸ್ ಹಾಗೂ ಜೆಡಿಎಸ್ ಸದಸ್ಯರ ನಡುವೆ ವಾಗ್ವಾದ ನಡೆಯಿತು.

ಗದ್ದಲದ ನಡುವೆಯೆ ಸರಕಾರದ ಪರವಾಗಿ ಉತ್ತರಿಸಿದ ಸಚಿವ ಶಿವಾನಂದ ಪಾಟೀಲ್, ಈ ಕಾಯ್ದೆಯನ್ನು ತರಾತುರಿಯಲ್ಲಿ ಜಾರಿಗೆ ತಂದಿಲ್ಲ. ಕೇಂದ್ರ ಸರಕಾರ ಸುಗ್ರೀವಾಜ್ಞೆ ಹೊರಡಿಸುವ ಮುನ್ನವೆ ರಾಜ್ಯ ಸರಕಾರ ಕೃಷಿ ಕಾಯ್ದೆಗಳಿಗೆ ಸುಗ್ರೀವಾಜ್ಞೆ ತಂದಿತ್ತು. ಅವರು ತಂದಿದ್ದ ತಿದ್ದುಪಡಿಗಳಿಂದ ರೈತರಿಗೆ ಯಾವುದೆ ಲಾಭ ಸಿಗಲಿಲ್ಲ. ರೈತರ ಹಿತದೃಷ್ಟಿಯಿಂದ ನಾವು ಅಗತ್ಯ ತಿದ್ದುಪಡಿಗಳನ್ನು ತಂದಿದ್ದೇವೆ ಎಂದರು.

ಈ ವೇಳೆ ಎಪಿಎಂಸಿ ಕಾಯ್ದೆಗೆ ತಿದ್ದುಪಡಿ ತರುವುದನ್ನು ವಿರೋಧಿಸಿ ಬಿಜೆಪಿ ಹಾಗೂ ಜೆಡಿಎಸ್ ಸದಸ್ಯರು ಸದನದ ಬಾವಿಗಿಳಿದು ಧರಣಿ ನಡೆಸಿದರು. ಇದೇ ಸಂದರ್ಭದಲ್ಲಿ ವಿಧೇಯಕಕ್ಕೆ ಧ್ವನಿಮತದ ಅಂಗೀಕಾರ ಲಭಿಸಿತು. ಬಳಿಕ ಸ್ಪೀಕರ್ ಯು.ಟಿ.ಖಾದರ್ ಸದನವನ್ನು 10 ನಿಮಿಷ ಮುಂದೂಡಿದರು.

ಸದನ ಸಮಾವೇಶಗೊಂಡ ಬಳಿಕವು ಪ್ರತಿಪಕ್ಷಗಳು ಧರಣಿ ಮುಂದುವರೆಸಿದರು. ಈ ವೇಳೆ ಮಾತನಾಡಿದ ಎಚ್.ಡಿ.ರೇವಣ್ಣ, ಈ ಕಾಯ್ದೆಗೆ ವಿರೋಧ ಇದೆ ಎಂದು ಹೇಳುತ್ತಿಲ್ಲ. ರೈತ ಮುಖಂಡರನ್ನು ಕರೆಸಿಕೊಳ್ಳಿ ಎಂದರು. ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ ಕಾಂಗ್ರೆಸ್ ಸದಸ್ಯ ನಾರಾಯಣಸ್ವಾಮಿ, ಸದನದಲ್ಲಿ ವಿಧೇಯಕ ಅಂಗೀಕಾರ ಪಡೆದ ಬಳಿಕ ಮತ್ತೆ ಚರ್ಚೆಗೆ ಅವಕಾಶ ಯಾಕೆ? ಎಂದು ಪ್ರಶ್ನಿಸಿದರು.

ಇದಕ್ಕೆ ಪ್ರತಿಕ್ರಿಯಿಸಿದ ಎಚ್.ಡಿ.ರೇವಣ್ಣ, ನಾವು ಸ್ಪೀಕರ್ ಕಚೇರಿಯಲ್ಲಿ ಕೆಲವು ಸಲಹೆಗಳನ್ನು ನೀಡಿದ್ದೇವೆ. ಶಿವಾನಂದ ಪಾಟೀಲ್ ಸಹಕಾರಿ ರಂಗದಿಂದ ಬಂದಿದ್ದಾರೆ. ನಮ್ಮ ಉದ್ದೇಶ ರೈತರು ಉಳಿಯಬೇಕು. ಬೆಳಗ್ಗೆ ಹೂವು, ಹಣ್ಣು ತರುವ ಬೆಳೆಗಾರರು ಎಪಿಎಂಸಿಗೆ ಬರುವುದಿಲ್ಲ. ಸಂತೆಯಲ್ಲಿ ಮಾರಾಟ ಮಾಡುತ್ತಾರೆ. ಕೆಲವು ವಿಚಾರಗಳನ್ನು ತಿದ್ದುಪಡಿಯಲ್ಲಿ ತನ್ನಿ, ಸಂತೆಯಲ್ಲಿ ಮಾರಾಟ ಮಾಡಲು ಅವಕಾಶ ನೀಡಿ ಎಂದರು.

ಈ ವೇಳೆ ಮಾತನಾಡಿದ ಸಚಿವ ಶಿವಾನಂದ ಪಾಟೀಲ್, ಸ್ಪೀಕರ್ ಕಚೇರಿಯಲ್ಲಿ ವಿರೋಧ ಪಕ್ಷದ ಸದಸ್ಯರು ನೀಡಿರುವ ಸಲಹೆಗಳನ್ನು ಪರಿಗಣಿಸುತ್ತೇವೆ. ರೈತ ಮುಖಂಡರನ್ನು ಕರೆಸಿ ಮಾತನಾಡುತ್ತೇವೆ ಎಂದು ಹೇಳಿದ ಬಳಿಕ ಪ್ರತಿಪಕ್ಷಗಳು ಧರಣಿ ಕೈ ಬಿಟ್ಟರು.

Tags

APMC
share
ವಾರ್ತಾಭಾರತಿ
ವಾರ್ತಾಭಾರತಿ
Next Story
X