Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಗ್ಯಾರಂಟಿ ಯೋಜನೆಗಳನ್ನು ಮುಂದಿಟ್ಟುಕೊಂಡು...

ಗ್ಯಾರಂಟಿ ಯೋಜನೆಗಳನ್ನು ಮುಂದಿಟ್ಟುಕೊಂಡು ಲೋಕಸಭಾ ಚುನಾವಣೆ ಎದುರಿಸಲು ಸಿದ್ಧರಿದ್ದೀರಾ?: ಪ್ರಧಾನಿ ಮೋದಿಗೆ ಸಿಎಂ ಸಿದ್ದರಾಮಯ್ಯ ಸವಾಲು

ವಾರ್ತಾಭಾರತಿವಾರ್ತಾಭಾರತಿ2 Aug 2023 10:37 PM IST
share
ಗ್ಯಾರಂಟಿ ಯೋಜನೆಗಳನ್ನು ಮುಂದಿಟ್ಟುಕೊಂಡು ಲೋಕಸಭಾ ಚುನಾವಣೆ ಎದುರಿಸಲು ಸಿದ್ಧರಿದ್ದೀರಾ?: ಪ್ರಧಾನಿ ಮೋದಿಗೆ ಸಿಎಂ ಸಿದ್ದರಾಮಯ್ಯ ಸವಾಲು

ಬೆಂಗಳೂರು, ಆ.2: ‘ಮುಂದಿನ ಲೋಕಸಭಾ ಚುನಾವಣೆಯನ್ನು ಗ್ಯಾರಂಟಿ ಯೋಜನೆಗಳ ವಿಷಯವನ್ನೆ ಮುಂದಿಟ್ಟುಕೊಂಡು ಎದುರಿಸಲು ನಾವು ಸಿದ್ಧರಿದ್ದೇವೆ, ನೀವು ಸಿದ್ಧರಿದ್ದೀರಾ?’ ಎಂದು ಪ್ರಧಾನಿ ನರೇಂದ್ರ ಮೋದಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸವಾಲು ಹಾಕಿದ್ದಾರೆ.

ಸ್ವಾರ್ಥಕ್ಕಾಗಿ ಘೋಷಿಸಿದ ಗ್ಯಾರಂಟಿ ಯೋಜನೆ ಜಾರಿಯಿಂದ ಕರ್ನಾಟಕ ಸರಕಾರದ ಬಳಿ ಅಭಿವೃದ್ಧಿ ಕಾರ್ಯಗಳಿಗೆ ಹಣವಿಲ್ಲ ಎಂಬ ಪ್ರಧಾನಿ ನರೇಂದ್ರ ಮೋದಿ ಟೀಕೆಗೆ ಸಿದ್ದರಾಮಯ್ಯ ಈ ಮೇಲಿನಂತೆ ಪ್ರತಿಕ್ರಿಯಿಸಿದ್ದಾರೆ.

ಕರ್ನಾಟಕದ ಗ್ಯಾರಂಟಿ (ಉಚಿತ) ಯೋಜನೆಗಳಿಂದಾಗಿ ರಾಜ್ಯದ ಖಜಾನೆ ಬರಿದಾಗಲಿದೆ ಮತ್ತು ಅಭಿವೃದ್ದಿಗೆ ಹಣ ಇಲ್ಲದಂತಾಗಿದೆ ಎಂದು ಕಾಳಜಿ ವ್ಯಕ್ತಪಡಿಸಿರುವ ಪ್ರಧಾನಿಗೆ ಧನ್ಯವಾದಗಳು. ನರೇಂದ್ರ ಮೋದಿಯವರೇ, ಇದು ನಿಮ್ಮ ವೈಯಕ್ತಿಕ ಅಭಿಪ್ರಾಯವೇ, ಪ್ರಧಾನಿಯವರ ಅಭಿಪ್ರಾಯವೇ? ಇಲ್ಲವೆ ಪಕ್ಷದ ಅಭಿಪ್ರಾಯವೇ? ಎನ್ನುವುದನ್ನು ದಯವಿಟ್ಟು ಸ್ಪಷ್ಟಪಡಿಸಿ ಎಂದು ಅವರು ವಿನಂತಿಸಿದ್ದಾರೆ.

ಗ್ಯಾರಂಟಿ ಯೋಜನೆಗಳನ್ನು ವಿರೋಧಿಸುವುದಾದರೆ ನಿಮ್ಮ ಮತ್ತು ನಿಮ್ಮ ಪಕ್ಷದ ನಿಲುವನ್ನು ಸ್ಪಷ್ಟಪಡಿಸಿ. ಕರ್ನಾಟಕದ ಬಿಜೆಪಿ ನಾಯಕರಿಗೂ ನಮ್ಮ ಗ್ಯಾರಂಟಿ ಯೋಜನೆಗಳನ್ನು ಸಾರ್ವಜನಿಕವಾಗಿ ವಿರೋಧಿಸಲು ನಿರ್ದೇಶನ ನೀಡಿ. ಮುಂದಿನ ಲೋಕಸಭಾ ಚುನಾವಣೆಯನ್ನು ಗ್ಯಾರಂಟಿ ಯೋಜನೆಗಳ ವಿಷಯವನ್ನೆ ಮುಂದಿಟ್ಟುಕೊಂಡು ಎದುರಿಸಲು ನಾವು ಸಿದ್ಧರಿದ್ದೇವೆ, ನೀವು ಸಿದ್ಧರಿದ್ದರೆ ಹಾಗೆಂದು ಘೋಷಿಸಿಬಿಡಿ ಎಂದು ಸಿದ್ದರಾಮಯ್ಯ ಸವಾಲು ಹಾಕಿದ್ದಾರೆ.

ಇಲ್ಲಿ ನಮ್ಮ ಸರಕಾರದ ಗ್ಯಾರಂಟಿ ಯೋಜನೆಗಳನ್ನು ತಕ್ಷಣ ಜಾರಿಗೊಳಿಸಬೇಕೆಂದು ಕರ್ನಾಟಕದ ಬಿಜೆಪಿ ನಾಯಕರು ಒಂದೇ ಸಮನೆ ನಮ್ಮ ಬೆನ್ನು ಹತ್ತಿದ್ದಾರೆ. ಬಡವರಿಗೆ ನೀಡುವ ಹೆಚ್ಚುವರಿ ಅಕ್ಕಿಯಲ್ಲಿ ಒಂದು ಕಾಳು ಕಡಿಮೆ ಮಾಡಿದರೂ ಹೋರಾಟ ನಡೆಸುವುದಾಗಿ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಗುಡುಗುತ್ತಲೇ ಇದ್ದಾರೆ. ಈ ಬಗ್ಗೆ ನಿಮ್ಮ ಅಭಿಪ್ರಾಯ ಏನು? ಎಂದು ಅವರು ಪ್ರಶ್ನಿಸಿದ್ದಾರೆ.

ಯುಗಾದಿ, ಗಣೇಶ ಚತುರ್ಥಿ ಮತ್ತು ದೀಪಾವಳಿ ಹಬ್ಬಗಳ ಸಮಯದಲ್ಲಿ ವರ್ಷಕ್ಕೆ ಮೂರು ಗ್ಯಾಸ್ ಸಿಲಿಂಡರ್ ಮತ್ತು ಬಿಪಿಎಲ್ ಕುಟುಂಬಗಳಿಗೆ ಅರ್ಧ ಲೀಟರ್ ನಂದಿನಿ ಹಾಲು ಉಚಿತವಾಗಿ ನೀಡುತ್ತೇವೆ ಎಂದು ಇತ್ತೀಚಿನ ವಿಧಾನಸಭಾ ಚುನಾವಣೆಯ ಪೂರ್ವದಲ್ಲಿ ಬಿಡುಗಡೆಗೊಳಿಸಿದ್ದ ಪ್ರಣಾಳಿಕೆಯಲ್ಲಿ ಕರ್ನಾಟಕದ ಬಿಜೆಪಿ ಭರವಸೆ ನೀಡಿತ್ತು. ಇದು ಫ್ರೀಬಿ, ರೇವ್ಡಿ ಯೋಜನೆಗಳಲ್ಲವೇ? ಎಂದು ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ.

ವಿಧಾನಸಭಾ ಚುನಾವಣೆ ಎದುರಿಸಲಿರುವ ಮಧ್ಯಪ್ರದೇಶದ ಮುಖ್ಯಮಂತ್ರಿ ಹೆಣ್ಣುಮಕ್ಕಳ ಖಾತೆಗೆ ಮಾಸಿಕ ಒಂದು ಸಾವಿರ ರೂಪಾಯಿ ಜಮೆ ಮಾಡುವ ಲಾಡ್ಲಿ-ಬೆಹನಾ ಯೋಜನೆಯ ಘೋಷಣೆ ಮಾಡಿದ್ದಾರೆ. ಇದನ್ನು 3 ಸಾವಿರ ರೂಪಾಯಿಗೆ ಹೆಚ್ಚಿಸುವ ಭರವಸೆ ನೀಡಿದ್ದಾರೆ. ಇದು ಉಚಿತ ಯೋಜನೆ ಅಲ್ಲವೇ? ಎಂದು ಮುಖ್ಯಮಂತ್ರಿ ಕೇಳಿದ್ದಾರೆ.

ಕೇಂದ್ರ ಸರಕಾರದ್ದೆ ಯೋಜನೆಯಾಗಿರುವ ರೈತರ ಖಾತೆಗೆ ವಾರ್ಷಿಕ ಆರು ಸಾವಿರ ರೂಪಾಯಿಗಳನ್ನು ಜಮೆ ಮಾಡುವ ಕಿಸಾನ್ ಸಮ್ಮಾನ್ ಯೋಜನೆಯನ್ನು ನೀವು ಹೇಗೆ ವ್ಯಾಖ್ಯಾನಿಸುತ್ತೀರಿ? ನಾನು ಐದು ಕಿಲೋ ಅಕ್ಕಿಯನ್ನು ಹೆಚ್ಚುವರಿಯಾಗಿ ನೀಡಿದರೆ ಅದರಿಂದ ರಾಜ್ಯದ ಖಜಾನೆ ಬರಿದಾಗಲಿದೆ ಎನ್ನುವುದು ನಿಮ್ಮ ಅಭಿಪ್ರಾಯವಾಗಿದ್ದರೆ, ಐದು ಕಿಲೋ ಅಕ್ಕಿಯನ್ನು ಉಚಿತವಾಗಿ ನೀಡುವ ಪಿಎಂ ಗರೀಬ್ ಅನ್ನ ಕಲ್ಯಾಣ ಯೋಜನೆಯನ್ನು ಯಾವ ಗುಂಪಿಗೆ ಸೇರಿಸುತ್ತೀರಿ? ಎಂದು ಅವರು ಪ್ರಶ್ನಿಸಿದ್ದಾರೆ.

ಉಚಿತ ಸ್ವರೂಪದ ಎಂಟು ಯೋಜನೆಗಳನ್ನು ಕೇಂದ್ರ ಸರಕಾರ ಅಂದಾಜು 1.25 ಲಕ್ಷ ಕೋಟಿ ರೂ. ವೆಚ್ಚದಲ್ಲಿ ಅನುಷ್ಠಾನಗೊಳಿಸುತ್ತಿದೆ. ಉಚಿತ ಯೋಜನೆಗಳನ್ನು ವಿರೋಧಿಸುತ್ತಿರುವ ನೀವು ಈ ಯೋಜನೆಗಳನ್ನು ಹೇಗೆ ಸಮರ್ಥಿಸುತ್ತೀರಿ? ಎಂದು ಸಿದ್ದರಾಮಯ್ಯ ತೀಕ್ಷ್ಣವಾಗಿ ಪ್ರಶ್ನಿಸಿದ್ದಾರೆ.

ಡಬಲ್ ಎಂಜಿನ್ ಸರಕಾರದ ಜನವಿರೋಧಿ ಆಡಳಿತದಿಂದ ಬೇಸತ್ತು ಹೋಗಿರುವ ಕರ್ನಾಟಕದ ಜನತೆ ನಮ್ಮ ಗ್ಯಾರಂಟಿ ಯೋಜನೆಗಳಿಗೆ ಜನಾದೇಶವನ್ನು ನೀಡಿ ಬಿಜೆಪಿಯನ್ನು ತಿರಸ್ಕರಿಸಿದ್ದಾರೆ. ನುಡಿದಂತೆ ನಡೆಯುವ ಬದ್ಧತೆ ಹೊಂದಿರುವ ನಾವು ಕೊಟ್ಟ ಭಾಷೆಯನ್ನು ಉಳಿಸುವ ಪ್ರಯತ್ನ ಮಾಡುತ್ತಿದ್ದೇವೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

ಬೆಲೆ ಏರಿಕೆ ಮತ್ತು ನಿರುದ್ಯೋಗಗಳಿಂದಾಗಿ ವಿಪರೀತ ಆರ್ಥಿಕ ಒತ್ತಡಕ್ಕೆ ಸಿಕ್ಕಿ ಕೈಖಾಲಿ ಮಾಡಿಕೊಂಡಿರುವ ಜನಸಾಮಾನ್ಯರನ್ನು ಆರ್ಥಿಕ ಹೊರೆಯಿಂದ ಪಾರು ಮಾಡಲು, ಸಾಲದ ಶೂಲದಿಂದ ಕೆಳಗಿಳಿಸಲು ಮತ್ತು ಸಾಮಾಜಿಕ ಭದ್ರತೆಯನ್ನು ಒದಗಿಸಲು ಇಡೀ ದೇಶಕ್ಕೆ ಕರ್ನಾಟಕ ಮಾದರಿಯ ಆಡಳಿತದ ಅವಶ್ಯಕತೆ ಇದೆ ಎಂದು ಮುಖ್ಯಮಂತ್ರಿ ಪ್ರತಿಪಾದಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X