Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಕರ್ನಾಟಕದ ಸರಕಾರಿ ಶಾಲೆಗಳ ದುಃಸ್ಥಿತಿ...

ಕರ್ನಾಟಕದ ಸರಕಾರಿ ಶಾಲೆಗಳ ದುಃಸ್ಥಿತಿ ಸರಿಪಡಿಸಲು CJP ಸಹ ಸಂಚಾಲಕ ಅಶುತೋಷ್ ರಾಂಕ ಆಗ್ರಹ

ವಾರ್ತಾಭಾರತಿವಾರ್ತಾಭಾರತಿ11 Sept 2026 8:39 PM IST
share
ಕರ್ನಾಟಕದ ಸರಕಾರಿ ಶಾಲೆಗಳ ದುಃಸ್ಥಿತಿ ಸರಿಪಡಿಸಲು CJP ಸಹ ಸಂಚಾಲಕ ಅಶುತೋಷ್ ರಾಂಕ ಆಗ್ರಹ

ಬೆಂಗಳೂರು : ಕರ್ನಾಟಕದ ಸರಕಾರಿ ಶಾಲೆಗಳು ದುಃಸ್ಥಿತಿಯಲ್ಲಿದ್ದು, ಅಪಾಯ ಉಂಟಾಗುವ ಮೊದಲೇ ಸರಕಾರ ಸರಿಪಡಿಸಬೇಕು ಎಂದು ಕಾಕ್ರೋಚ್ ಜನತಾ ಪಾರ್ಟಿಯ(ಸಿಜೆಪಿ) ಸಹ ಸಂಚಾಲಕ ಅಶುತೋಷ್‌ ರಾಂಕ ಆಗ್ರಹಿಸಿದ್ದಾರೆ.

ಶುಕ್ರವಾರ ನಗರದ ಪ್ರೆಸ್‍ಕ್ಲಬ್‍ನಲ್ಲಿ ಆಯೋಜಿಸಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಿಜೆಪಿ ತಂಡವು ರಾಜ್ಯದ ಸುಮಾರು 50 ಶಾಲೆಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದೆ. ಎರಡು ದಿನಗಳಲ್ಲಿ ಬೆಂಗಳೂರಿನ ನಾಲ್ಕು ಶಾಲೆಗಳಿಗೆ ಭೇಟಿ ನೀಡಿದ್ದೇನೆ. ವರ್ತೂರಿನ ಸರಕಾರಿ ಉರ್ದು ಶಾಲೆಯ ಕಟ್ಟಡ ಶಿಥಿಲಗೊಂಡಿದ್ದು, ಒಂದೊಂದೆ ತುಂಡುಗಳು ಬೀಳುತ್ತಿರುವುದನ್ನು ಕಂಡೆವು. ನಮ್ಮ ಭೇಟಿಯ ನಂತರ ದುರಸ್ತಿಗೆ ಕ್ರಮ ಕೈಗೊಂಡಿರುವುದು ಸ್ವಾಗತಾರ್ಹ. ಈ ರೀತಿ ಇರುವ ಎಲ್ಲ ಶಾಲೆಗಳಲ್ಲಿ ಅಪಾಯ ಉಂಟಾಗದಂತೆ ತಕ್ಷಣ ಕ್ರಮ ಕೈಗೊಳ್ಳಬೇಕು ಎಂದರು.

ಸರ್ಜಾಪುರದ ಶಾಲೆಗೆ ಭೇಟಿ ನೀಡಿದಾಗ ಅಲ್ಲಿಯ 9 ಶಿಕ್ಷಕರಲ್ಲಿ ಎಂಟು ಮಂದಿಯನ್ನು ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (ಎಸ್‍ಐಆರ್) ಕರ್ತವ್ಯಕ್ಕೆ ನಿಯೋಜಿಸಲಾಗಿತ್ತು. ಜೆ.ಪಿ.ನಗರ ಶಾಲೆಗೆ ಭೇಟಿ ನೀಡಿದಾಗ ಅಲ್ಲಿ ಮೂಲಸೌಕರ್ಯ ಪರವಾಗಿಲ್ಲ ಎಂಬಂತಿತ್ತು. ಆದರೆ, ಶೌಚಾಲಯ ಸ್ವಲ್ಪವೂ ಸ್ವಚ್ಛವಾಗಿರಲಿಲ್ಲ. ಇದೇ ರೀತಿ ಇನ್ನೊಂದು ಶಾಲೆಯಲ್ಲಿಯೂ ನೈರ್ಮಲ್ಯ ಇರಲಿಲ್ಲ ಎಂದು ಅವರು ತಿಳಿಸಿದರು.

ಶಾಲೆಗಳಲ್ಲಿ ಶಿಕ್ಷಕರು ಮತ್ತು ಸಿಬ್ಬಂದಿಯ ಕೊರತೆ ಇದೆ. ಇರುವವರನ್ನು ಬೇರೆ ಕೆಲಸಕ್ಕೆ ನಿಯೋಜನೆ ಮಾಡಿದರೆ ಶಿಕ್ಷಣದ ಮೇಲೆ ಪರಿಣಾಮ ಬೀರುತ್ತದೆ. ಕೊರತೆ ನೀಗಿಸಲು ಕ್ರಮ ವಹಿಸಬೇಕು. ಬೇರೆ ಕೆಲಸಕ್ಕೆ ನಿಯೋಜಿಸಬಾರದು. ದುಃಸ್ಥಿತಿಯಲ್ಲಿರುವ ಕಟ್ಟಡಗಳನ್ನು ಸರಿಪಡಿಸಬೇಕು. ಮುಖ್ಯವಾಗಿ ಶೌಚಾಲಯದ ಸ್ವಚ್ಛತೆಗಾಗಿ ಸಿಬ್ಬಂದಿಯನ್ನು ನೇಮಕ ಮಾಡಬೇಕು. ನಿರ್ವಹಣೆಗೆ ಒತ್ತು ನೀಡಬೇಕು ಎಂದು ಅವರು ಒತ್ತಾಯಿಸಿದರು.

ರಾಜ್ಯ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರನ್ನು ಭೇಟಿ ಮಾಡಿ ಸಮಸ್ಯೆಗಳನ್ನು ವಿವರಿಸಿದ್ದೇವೆ. ಈ ಬಗ್ಗೆ ಕ್ರಮ ವಹಿಸುವುದಾಗಿ ಸಚಿವರು ಭರವಸೆ ನೀಡಿದ್ದಾರೆ. ಕರ್ನಾಟಕ ಪಬ್ಲಿಕ್ ಸ್ಕೂಲ್(ಕೆಪಿಎಸ್) ಯೋಜನೆಯ ಬಗ್ಗೆ ಸಚಿವರು ವಿವರಿಸಿದ್ದು, 2 ಸಾವಿರಕ್ಕೂ ಅಧಿಕ ಮಾದರಿ ಶಾಲೆಗಳನ್ನಾಗಿ ಮೇಲ್ದರ್ಜೆಗೇರಿಸುತ್ತಿರುವ ಬಗ್ಗೆ ತಿಳಿಸಿದರು. ಈ ಯೋಜನೆಯನ್ನು ಸಿಜೆಪಿ ಸ್ವಾಗತಿಸಿದೆ ಎಂದು ಅಶುತೋಷ್ ರಾಂಕ ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಸಿಜೆಪಿ ರಾಷ್ಟ್ರೀಯ ಕಾರ್ಯದರ್ಶಿ ಅಫ್ರೀನ್ ನವಾಜ್, ಪದಾಧಿಕಾರಿ ಅನಿತಾ, ವೈದ್ಯ ಡಾ.ಪೂರ್ಣಾನಂದ ಉಪಸ್ಥಿತರಿದ್ದರು.

Tags

Ashutosh Ranka
share
ವಾರ್ತಾಭಾರತಿ
ವಾರ್ತಾಭಾರತಿ
Next Story
X