Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. 15 ದಿನಗಳಲ್ಲಿ 78 ಗಂಟೆ ನಡೆದ ವಿಧಾನಸಭೆ...

15 ದಿನಗಳಲ್ಲಿ 78 ಗಂಟೆ ನಡೆದ ವಿಧಾನಸಭೆ ಅಧಿವೇಶನ: ಸ್ಪೀಕರ್ ಯು.ಟಿ.ಖಾದರ್

''ಅಶಿಸ್ತು ಹಾಗೂ ಅಗೌರವದಿಂದ ವರ್ತಿಸಿದ 10 ಸದಸ್ಯರ ಅಮಾನತು''

ವಾರ್ತಾಭಾರತಿವಾರ್ತಾಭಾರತಿ21 July 2023 4:06 PM IST
share
15 ದಿನಗಳಲ್ಲಿ 78 ಗಂಟೆ ನಡೆದ ವಿಧಾನಸಭೆ ಅಧಿವೇಶನ: ಸ್ಪೀಕರ್ ಯು.ಟಿ.ಖಾದರ್

ಬೆಂಗಳೂರು, ಜು.21: ಹದಿನಾರನೆ ವಿಧಾನಸಭೆಯ ಮೊದಲನೆ ಅಧಿವೇಶನದ ಮುಂದುವರೆದ ಉಪವೇಶನವು ಜು.3ರಿಂದ 21ರ ವರೆಗೆ ಒಟ್ಟು 15 ದಿನಗಳ ಕಾಲ ಸುಮಾರು 78 ಗಂಟೆ 35 ನಿಮಿಷಗಳ ಕಾಲ ಕಾರ್ಯ ಕಲಾಪ ನಡೆಸಲಾಗಿದೆ ಎಂದು ಸ್ಪೀಕರ್ ಯು.ಟಿ.ಖಾದರ್ ತಿಳಿಸಿದರು.

ಶುಕ್ರವಾರ ವಿಧಾನಸಭೆಯ ಅಧಿವೇಶನವನ್ನು ಅನಿರ್ದಿಷ್ಟಾವಧಿಗೆ ಮುಂದೂಡಿದ ಬಳಿಕ ವಿಧಾನಸೌಧದಲ್ಲಿ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಜು.3ರಂದು ರಾಜ್ಯಪಾಲರು ವಿಧಾನ ಮಂಡಲದ ಉಭಯ ಸದನಗಳ ಸದಸ್ಯರನ್ನುದ್ದೇಶಿಸಿ ಮಾಡಿದ ಭಾಷಣದ ವಂದನಾ ನಿರ್ಣಯದಲ್ಲಿ 31 ಸದಸ್ಯರು ಒಟ್ಟು 12 ಗಂಟೆ 39 ನಿಮಿಷಗಳ ಕಾಲ ಭಾಗವಹಿಸಿದ್ದರು. ವಂದನಾ ನಿರ್ಣಯದ ಪ್ರಸ್ತಾವವನ್ನು ಜು.13ರಂದು ಅಂಗೀಕರಿಸಲಾಗಿದೆ ಎಂದರು.

2023-24ನೆ ಸಾಲಿನ ಆಯವ್ಯಯ ಅಂದಾಜುಗಳನ್ನು ಮುಖ್ಯಮಂತ್ರಿ ಜು.7ರಂದು ಮಂಡಿಸಿದರು. ಆಯವ್ಯಯದ ಸಾಮಾನ್ಯ ಚರ್ಚೆಯಲ್ಲಿ 62 ಸದಸ್ಯರು ಒಟ್ಟು 12 ಗಂಟೆ 52 ನಿಮಿಷಗಳ ಕಾಲ ಭಾಗವಹಿಸಿದ್ದರು. ಜು.20ರಂದು ಮುಖ್ಯಮಂತ್ರಿ ಉತ್ತರ ನೀಡಿದ ನಂತರ ಮತಕ್ಕೆ ಹಾಕಿ ಅಂಗೀಕರಿಸಲಾಯಿತು ಎಂದು ಸ್ಪೀಕರ್ ಹೇಳಿದರು.

ಈ ಅಧಿವೇಶನದಲ್ಲಿ ವಿಧಾನಸಭೆಯ ನೂತನ ಉಪ ಸಭಾಧ್ಯಕ್ಷರನ್ನಾಗಿ ರುದ್ರಪ್ಪ ಲಮಾಣಿಯವರನ್ನು ಚುನಾಯಿಸಲಾಗಿದೆ. ಅಲ್ಲದೇ, ಇತ್ತೀಚೆಗೆ ನಿಧನ ಹೊಂದಿದ ಗಣ್ಯರಿಗೆ ಸಂತಾಪ ಸೂಚನಾ ನಿರ್ಣಯವನ್ನು ಮಂಡಿಸಿ, ಅಂಗೀಕರಿಸಲಾಗಿದೆ. ರಾಜ್ಯಪಾಲರಿಂದ ಒಪ್ಪಿಗೆ ಪಡೆದ ವಿಧೇಯಕಗಳ ಬಗ್ಗೆ ಕಾರ್ಯದರ್ಶಿಯವರ ವರದಿಯನ್ನು ಮಂಡಿಸಲಾಗಿದೆ ಎಂದು ಅವರು ತಿಳಿಸಿದರು.

ಭಾರತದ ಲೆಕ್ಕನಿಯಂತ್ರಕರು ಮತ್ತು ಮಹಾಲೆಕ್ಕಪರಿಶೋಧಕರು ನೀಡಿರುವ ರಾಜ್ಯ ಸರಕಾರದ ಹಣಕಾಸಿನ ವ್ಯವಹಾರಗಳ ಲೆಕ್ಕ ಪರಿಶೋಧನಾ ವರದಿಯನ್ನು (2023ರ ವರದಿ ಸಂಖ್ಯೆ-2) ಸದನದಲ್ಲಿ ಮಂಡಿಸಲಾಗಿದೆ. 15ನೆ ವಿಧಾನಸಭೆಯ 2021-22 ಹಾಗೂ 2022-23ನೆ ಸಾಲಿನ ಸರಕಾರಿ ಭರವಸೆಗಳ ಸಮಿತಿಯ ಹದಿನೈದನೆ ವರದಿ, 15ನೆ ವಿಧಾನಸಭೆಯ 2020-21ನೆ ಸಾಲಿನ ಸಾರ್ವಜನಿಕ ಲೆಕ್ಕಪತ್ರಗಳ ಸಮಿತಿಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಗೆ ಸಂಬಂಧಪಟ್ಟ 12ನೆ ವಿಶೇಷ ವರದಿಯನ್ನು ಸದನದಲ್ಲಿ ಮಂಡಿಸಲಾಗಿದೆ ಎಂದು ಅವರು ಹೇಳಿದರು.

ಒಟ್ಟು 29 ಅಧಿಸೂಚನೆಗಳು, 12 ಅಧ್ಯಾದೇಶಗಳು ಮತ್ತು 70 ವಾರ್ಷಿಕ ವರದಿಗಳು, 99 ಲೆಕ್ಕ ಪರಿಶೋಧನಾ ವರದಿಗಳು, 14 ಅನುಪಾಲನ ವರದಿಗಳು ಹಾಗೂ ಒಂದು ಲೆಕ್ಕ ತಪಾಸಣಾ ವರದಿಯನ್ನು ಸದನದಲ್ಲಿ ಮಂಡಿಸಲಾಗಿದೆ. ಈ ಅಧಿವೇಶನದಲ್ಲಿ ಧನವಿನಿಯೋಗ ವಿಧೇಯಕವು ಸೇರಿದಂತೆ ಒಟ್ಟು 14 ವಿಧೇಯಕಗಳನ್ನು ಮಂಡಿಸಿ ಅಂಗೀಕರಿಸಲಾಗಿದೆ. ನಿಯಮ 60 ರಡಿಯಲ್ಲಿ ನೀಡಿದ್ದ 6 ಸೂಚನೆಗಳನ್ನು ನಿಯಮ 69ಕ್ಕೆ ಪರಿವರ್ತಿಸಲಾಗಿದ್ದು, ಒಟ್ಟು 4 ಸೂಚನೆಗಳನ್ನು ನಿಯಮ 69ರಡಿಯಲ್ಲಿ ಚರ್ಚಿಸಲಾಗಿದೆ ಎಂದು ಅವರು ಹೇಳಿದರು.

ಒಟ್ಟು 1149 ಪ್ರಶ್ನೆಗಳನ್ನು ಸ್ವೀಕರಿಸಲಾಗಿದ್ದು, ಸದನದಲ್ಲಿ ಉತ್ತರಿಸಬೇಕಾಗಿದ್ದ 120 ಪ್ರಶ್ನೆಗಳ ಪೈಕಿ 120 ಪಶ್ನೆಗಳಿಗೆ ಉತ್ತರಿಸಲಾಗಿದೆ. ಲಿಖಿತ ಮೂಲಕ ಉತ್ತರಿಸುವ 1013 ಪ್ರಶ್ನೆಗಳ ಪೈಕಿ 966 ಪ್ರಶ್ನೆಗಳಿಗೆ ಉತ್ತರಗಳನ್ನು ಸ್ವೀಕರಿಸಲಾಗಿದೆ. ನಿಯಮ 351 ರಡಿಯಲ್ಲಿ 249 ಸೂಚನೆಗಳ ಪೈಕಿ 153 ಸೂಚನೆಗಳ ಉತ್ತರಗಳನ್ನು ಸ್ವೀಕರಿಸಲಾಗಿದೆ ಎಂದು ಖಾದರ್ ಹೇಳಿದರು.

ಗಮನ ಸೆಳೆಯುವ 202 ಸೂಚನೆಗಳ ಪೈಕಿ 181 ಸೂಚನಾ ಪತ್ರಗಳ ಉತ್ತರಗಳನ್ನು ಸ್ವೀಕರಿಸಲಾಗಿದೆ. ಶೂನ್ಯ ವೇಳೆಯಲ್ಲಿ ಒಟ್ಟು 16 ಸೂಚನೆಗಳನ್ನು ಚರ್ಚಿಸಲಾಗಿದೆ. ವಿಧಾನ ಮಂಡಲದ, ವಿಧಾನಸಭೆಯ ವಿವಿಧ ಸಮಿತಿಗಳಿಗೆ, ವಿಧಾನಸಭೆಯ ನಿಯಮಾವಳಿ ಸಮಿತಿಗೆ, ರಾಜ್ಯ ಮುಕ್ತ ವಿವಿ, ವಿದ್ಯಾವಿಷಯಕ ಪರಿಷತ್ತಿಗೆ ಹಾಗೂ ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿವಿಗೆ ಸೆನೆಟ್‍ಗೆ ಸದಸ್ಯರನ್ನು ನಾಮ ನಿರ್ದೇಶನ ಮಾಡಲು ಸದನವು ಸಭಾಧ್ಯಕ್ಷರಿಗೆ ಅಧಿಕಾರ ನೀಡಿದೆ ಎಂದು ಖಾದರ್ ಹೇಳಿದರು.

ಈ ಸದನದಲ್ಲಿ ಅಶಿಸ್ತು ಹಾಗೂ ಅಗೌರವದಿಂದ ವರ್ತಿಸಿದ ಹತ್ತು ಸದಸ್ಯರನ್ನು ಜು.19ರಂದು ಈ ಅಧಿವೇಶನ ಮುಕ್ತಾಯವಾಗುವವರೆಗೆ ಸದನಕ್ಕೆ ಬಾರದಂತೆ ಅತ್ಯಂತ ತಡೆಹಿಡಿಯಲಾಗಿದೆ (ಅಮಾನತ್ತುಗೊಳಿಸಲಾಗಿದೆ) ಎಂದು ಖಾದರ್ ಮಾಹಿತಿ ನೀಡಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X