ದಿಲ್ಲಿ ಸ್ಫೋಟ ಪ್ರಕರಣ| ಕೇಂದ್ರ ಗೃಹ ಸಚಿವ ಅಮಿತ್ ಶಾ ನೇತೃತ್ವದ ಭದ್ರತಾ ವ್ಯವಸ್ಥೆ ಸಂಪೂರ್ಣ ಕುಸಿದಿದೆ: ಬಿ.ಕೆ. ಹರಿಪ್ರಸಾದ್ ಟೀಕೆ

ಬಿ.ಕೆ. ಹರಿಪ್ರಸಾದ್
ಬೆಂಗಳೂರು: ದಿಲ್ಲಿ ಕಾರು ಸ್ಫೋಟ ಘಟನೆಯು ರಾಷ್ಟ್ರದ ಭದ್ರತೆಗೆ ಎದುರಾದ ಗಂಭೀರ ಸವಾಲಾಗಿದ್ದು, ಈ ಭಯಾನಕ ಕೃತ್ಯವನ್ನು ತೀವ್ರವಾಗಿ ಖಂಡಿಸುತ್ತೇವೆ ಎಂದು ಹಿರಿಯ ಕಾಂಗ್ರೆಸ್ ನಾಯಕ ಬಿ.ಕೆ. ಹರಿಪ್ರಸಾದ್ ಹೇಳಿದ್ದಾರೆ.
ಕೇಂದ್ರ ಗೃಹ ಸಚಿವ ಅಮಿತ್ ಶಾ ನೇತೃತ್ವದ ಭದ್ರತಾ ವ್ಯವಸ್ಥೆ ಸಂಪೂರ್ಣ ಕುಸಿದಿದೆ. ದೇಶದ ರಾಜಧಾನಿಯೇ ಸುರಕ್ಷಿತವಾಗಿರದಿದ್ದರೆ, ಇಡೀ ಭಾರತವು ಹೇಗೆ ಸುರಕ್ಷಿತವಾಗಿರಲು ಸಾಧ್ಯ ಎಂದು ಪ್ರಶ್ನಿಸಿರುವ ಅವರು, ಅಮಿತ್ ಶಾ ತಕ್ಷಣ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಹೇಳಿದ್ದಾರೆ.
ಈ ಕುರಿತು ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಅವರು, ದಿಲ್ಲಿಯಲ್ಲಿ ನಡೆದ ಕಾರು ಸ್ಫೋಟದ ಕ್ರೂರ ಘಟನೆ ರಾಷ್ಟ್ರದ ಭದ್ರತೆಗೆ ಎದುರಾದ ಗಂಭೀರ ಸವಾಲು. ಅಮಾಯಕ ನಾಗರಿಕರ ಪ್ರಾಣ ಕಸಿದುಕೊಂಡ ಈ ಭಯಾನಕ ಕೃತ್ಯವನ್ನು ನಾವು ತೀವ್ರವಾಗಿ ಖಂಡಿಸುತ್ತೇವೆ. ರಾಷ್ಟ್ರದ ರಾಜಧಾನಿಯಲ್ಲೇ ಇಂತಹ ಕೃತ್ಯ ನಡೆದಿರುವುದು ಸರ್ಕಾರದ ಭದ್ರತಾ ವ್ಯವಸ್ಥೆಯ ವಿಫಲತೆಯ ಸ್ಪಷ್ಟ ನಿದರ್ಶನ. ದಿಲ್ಲಿಯಂತಹ ಉನ್ನತ ಭದ್ರತಾ ವಲಯದಲ್ಲಿ ಸ್ಫೋಟ ಸಂಭವಿಸಿರುವುದು ಕೇವಲ ಕಾನೂನು ಸುವ್ಯವಸ್ಥೆಯ ವಿಷಯವಲ್ಲ — ಇದು ರಾಷ್ಟ್ರದ ಆಂತರಿಕ ಭದ್ರತೆಯ ಮೇಲಿನ ನಂಬಿಕೆಗೆ ಬಿದ್ದ ಭಾರಿ ಹೊಡೆತ ಎಂದು ಬಿ.ಕೆ. ಹರಿಪ್ರಸಾದ್ ಹೇಳಿದ್ದಾರೆ.
ಕೇಂದ್ರ ಗೃಹ ಸಚಿವ ಅಮಿತ್ ಶಾ ನೇತೃತ್ವದ ಭದ್ರತಾ ವ್ಯವಸ್ಥೆ ಸಂಪೂರ್ಣ ಕುಸಿದಿದೆ. ದೇಶದ ರಾಜಧಾನಿಯೇ ಸುರಕ್ಷಿತವಾಗಿರದಿದ್ದರೆ, ಇಡೀ ಭಾರತವು ಹೇಗೆ ಸುರಕ್ಷಿತವಾಗಿರಲು ಸಾಧ್ಯ? ಗೃಹ ಸಚಿವರ ಅಸಮರ್ಥತೆ ಮತ್ತು ನಿರ್ಲಕ್ಷ್ಯದಿಂದಲೇ ಇಂತಹ ದಾರುಣ ಘಟನೆಗಳು ಮತ್ತೆ ಮತ್ತೆ ಮರುಕಳಿಸುತ್ತಿದೆ. ಪುಲ್ವಾಮಾ ಬಳಿ 40 ಭಾರತೀಯ ವೀರ ಯೋಧರನ್ನ ಬಲಿ ಪಡೆದುಕೊಂಡಿದ್ದು, ಪಹಲ್ಗಾಮ್ ನಲ್ಲಿ ಅಮಾಯಕ 26 ಪ್ರವಾಸಿಗರ ಬಲಿ, ರಾಷ್ಟ್ರ ರಾಜಧಾನಿಯಲ್ಲೇ ಭೀಕರ ಬಾಂಬ್ ಸ್ಪೋಟ ಹೀಗೆ ಸಾಲು ಸಾಲು ಭಯೋತ್ಪಾದಕ ಚಟುವಟಿಕೆಗಳು ನಡೆಯುತ್ತಿದ್ದರೂ ಕಡಿವಾಣ ಹಾಕುವಲ್ಲಿ ಸಂಪೂರ್ಣ ವಿಫಲವಾಗುತ್ತಿದೆ ಎಂದು ಟೀಕಿಸಿದರು.
ಅಮಾಯಕ ಜನರ ಪ್ರಾಣಗಳು ರಾಜಕೀಯ ಆಟಗಳಿಗೆ ಬಲಿಯಾಗುತ್ತಿರುವುದು ಅಕ್ಷಮ್ಯ. ಜನರ ಜೀವ ಮತ್ತು ಸುರಕ್ಷತೆಯ ಖಾತ್ರಿ ನೀಡಬೇಕಾದ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ತಮ್ಮ ಜವಾಬ್ದಾರಿಯಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ. ಗೃಹ ಸಚಿವರ ಮೇಲ್ವಿಚಾರಣೆಯಲ್ಲಿರುವ ಭದ್ರತಾ ವ್ಯವಸ್ಥೆ ವಿಫಲವಾಗಿದೆ ಎಂಬುದು ಸ್ಪಷ್ಟವಾಗಿರುವಾಗ, ನೈತಿಕ ಹೊಣೆಹೊತ್ತು ಗೃಹ ಸಚಿವ ಅಮಿತ್ ಶಾ ತಕ್ಷಣ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಅವರು ಹೇಳಿದ್ದಾರೆ.
ಘಟನೆಯಲ್ಲಿ ಭಾಗಿಯಾಗಿರುವ ದುಷ್ಕರ್ಮಿಗಳನ್ನು ಕೂಡಲೇ ಬಂಧಿಸಿ. ದಿಲ್ಲಿಯ ಜನತೆಗೆ ನ್ಯಾಯ ಸಿಗಬೇಕು, ತಪ್ಪಿತಸ್ಥರನ್ನು ಕಾನೂನಿನ ಮುಂದೆ ತರಬೇಕು, ಮತ್ತು ಭದ್ರತಾ ವ್ಯವಸ್ಥೆಯಲ್ಲಿ ತಕ್ಷಣ ಕ್ರಮ ಕೈಗೊಳ್ಳಬೇಕು ಅವರು ಆಗ್ರಹಿಸಿದರು.
ದೆಹಲಿಯಲ್ಲಿ ನಡೆದ ಕಾರ್ ಸ್ಫೋಟದ ಕ್ರೂರ ಘಟನೆ ರಾಷ್ಟ್ರದ ಭದ್ರತೆಗೆ ಎದುರಾದ ಗಂಭೀರ ಸವಾಲು. ಅಮಾಯಕ ನಾಗರಿಕರ ಪ್ರಾಣ ಕಸಿದುಕೊಂಡ ಈ ಭಯಾನಕ ಕೃತ್ಯವನ್ನು ನಾವು ತೀವ್ರವಾಗಿ ಖಂಡಿಸುತ್ತೇವೆ.
— Hariprasad.B.K. (@HariprasadBK2) November 11, 2025
ರಾಷ್ಟ್ರದ ರಾಜಧಾನಿಯಲ್ಲೇ ಇಂತಹ ಕೃತ್ಯ ನಡೆದಿರುವುದು ಸರ್ಕಾರದ ಭದ್ರತಾ ವ್ಯವಸ್ಥೆಯ ವಿಫಲತೆಯ ಸ್ಪಷ್ಟ ನಿದರ್ಶನ. ದೆಹಲಿಯಂತಹ ಉನ್ನತ ಭದ್ರತಾ…







