Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಶ್ರೀರಂಗಪಟ್ಟಣ ಮಸೀದಿಯಲ್ಲಿ ಮದ್ರಸಾ...

ಶ್ರೀರಂಗಪಟ್ಟಣ ಮಸೀದಿಯಲ್ಲಿ ಮದ್ರಸಾ ನಡೆಸುತ್ತಿರುವ ಹಿನ್ನೆಲೆ: ಕೇಂದ್ರ, ರಾಜ್ಯಕ್ಕೆ ಹೈಕೋರ್ಟ್ ನೋಟಿಸ್

ವಾರ್ತಾಭಾರತಿವಾರ್ತಾಭಾರತಿ18 Jan 2024 8:25 PM IST
share
ಶ್ರೀರಂಗಪಟ್ಟಣ ಮಸೀದಿಯಲ್ಲಿ ಮದ್ರಸಾ ನಡೆಸುತ್ತಿರುವ ಹಿನ್ನೆಲೆ: ಕೇಂದ್ರ, ರಾಜ್ಯಕ್ಕೆ ಹೈಕೋರ್ಟ್ ನೋಟಿಸ್

ಬೆಂಗಳೂರು: ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದ ಐತಿಹಾಸಿಕ ಜುಮ್ಮಾ ಮಸೀದಿಯು ಕೇಂದ್ರೀಯ ಸಂರಕ್ಷಿತಾ ಸ್ಮಾರಕವಾಗಿದ್ದು, ಅಲ್ಲಿ ನಡೆಸಲಾಗುತ್ತಿರುವ ಮದ್ರಸಾ ಮುಚ್ಚಿಸುವಂತೆ ಕೋರಿ ಸಲ್ಲಿಸಿದ್ದ ಅರ್ಜಿಗೆ ಸಂಬಂಧಿಸಿದಂತೆ ಕೇಂದ್ರ ಸಂಸ್ಕೃತಿ ಇಲಾಖೆ ಸೇರಿ ಏಳು ಪ್ರತಿವಾದಿಗಳಿಗೆ ಹೈಕೋರ್ಟ್ ನೋಟಿಸ್ ಜಾರಿ ಮಾಡಿದೆ.

ರಾಮನಗರ ಜಿಲ್ಲೆಯ ಕನಕಪುರ ತಾಲೂಕಿನ ಹೊಸ ಕಬ್ಬಾಳು ಗ್ರಾಮದ ಅಭಿಷೇಕ್ ಗೌಡ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ಹೈಕೋರ್ಟ್ ವಿಭಾಗೀಯ ನ್ಯಾಯಪೀಠದಲ್ಲಿ ನಡೆಯಿತು.

ವಿಚಾರಣೆ ಆರಂಭವಾಗುತ್ತಿದಂತೆ ಮುಖ್ಯ ನ್ಯಾಯಮೂರ್ತಿ ಪಿ.ಬಿ.ವರಾಳೆ ಅವರು, ಸಂರಕ್ಷಿತ ಸ್ಮಾರಕದಲ್ಲಿ ಮದ್ರಸಾ ಇದೆ ಎಂಬುದಕ್ಕೆ ದಾಖಲೆ ಎಲ್ಲಿದೆ? ನೀವು ನೀಡಿರುವ ಮನವಿಯಲ್ಲಿ ಮದ್ರಸಾವು ಸ್ಮಾರಕದ ಸಮೀಪ ಇದೆ ಎಂದಿದೆ. ಸ್ಮಾರಕದ ಒಳಗೆ ಇದೆ ಎಂದಿಲ್ಲ. ದೀರ್ಘಾವಧಿಯಿಂದ ಅಸ್ತಿತ್ವದಲ್ಲಿರುವ ಸ್ಮಾರಕ ಇದಾಗಿದೆ. 1951 ಅಥವಾ 1995ರ ಗೆಜೆಟ್ ನೋಟಿಫಿಕೇಶನ್ ಅನ್ನು ಸಂಗ್ರಹಿಸಿದ್ದೀರಾ? ಎಂದರು.

ಆಗ ನ್ಯಾಯಮೂರ್ತಿ ಕೃಷ್ಣ ದೀಕ್ಷಿತ್ ಅವರು, ಇದು ಗಂಭೀರ ವಿಚಾರವಾಗಿದ್ದು, ನೀವು ಆಕ್ಷೇಪಣೆ ಸಲ್ಲಿಸಿ. ಆನಂತರ ಇದನ್ನು ಪರಿಗಣಿಸುತ್ತೇವೆ. ಅನುಮತಿ ಪಡೆದು ಅದನ್ನು ನಡೆಸಲಾಗುತ್ತಿದೆಯೇ ಎಂಬುದು ನಮಗೆ ಗೊತ್ತಿಲ್ಲ ಎಂದು ಅರ್ಜಿದಾರರ ಪರ ವಕೀಲರಿಗೆ ದೀಕ್ಷಿತ್ ಅವರು ತಿಳಿಸಿದರು.

ಇದಕ್ಕೆ ದನಿಗೂಡಿಸಿದ ಮುಖ್ಯ ನ್ಯಾಯಮೂರ್ತಿಗಳು, ಸರಕಾರ ತಕ್ಷಣ ಕ್ರಮಕೈಗೊಳ್ಳಬೇಕು. ಕೇಂದ್ರ ಸಂಸ್ಕೃತಿ ಇಲಾಖೆ, ಭಾರತೀಯ ಪುರಾತತ್ವ ಇಲಾಖೆಯ (ಎಎಸ್‍ಐ) ಮಹಾನಿರ್ದೇಶಕರು, ದಕ್ಷಿಣ ಪ್ರಾಂತ್ಯದ ಎಎಸ್‍ಐ ಪ್ರಾದೇಶಿಕ ನಿರ್ದೇಶಕರು, ಬೆಂಗಳೂರು ವೃತ್ತದ ಎಎಸ್‍ಐ, ಶ್ರೀರಂಗಪಟ್ಟಣದ ಸಂರಕ್ಷಣಾ ಸಹಾಯಕರು, ರಾಜ್ಯ ಕಂದಾಯ ಇಲಾಖೆ ಮತ್ತು ಮಂಡ್ಯ ಜಿಲ್ಲಾಧಿಕಾರಿಗೆ ನೋಟಿಸ್ ಜಾರಿ ಮಾಡಬೇಕು ಎಂದು ಆದೇಶಿಸಿದರು.

ಕೇಂದ್ರೀಯ ಸಂರಕ್ಷಿತ ಸ್ಮಾರಕವಾದ ಜುಮ್ಮಾ ಮಸೀದಿಯ ಒಳಗೆ ಸ್ನಾನಗೃಹ, ಅಡುಗೆ ಮನೆ ನಿರ್ಮಿಸಲಾಗಿದೆ. ಸಂಕೀರ್ಣವಾದ ಕೆತ್ತನೆಗಳಿಗೆ ಹಾನಿ ಮಾಡಲಾಗಿದೆ. ಜುಮ್ಮಾ ಮಸೀದಿಯ ಒಳಗೆ ಕಳೆದ ಎರಡು ವರ್ಷಗಳಿಂದ ಮದ್ರಸಾ ನಡೆಸಲಾಗುತ್ತಿದೆ ಎಂದು ಆಕ್ಷೇಪಿಸಲಾಗಿದೆ.

ಪ್ರಾಚೀನ ಸ್ಮಾರಕ ಮತ್ತು ಪುರಾತತ್ವ ಸ್ಥಳ ಮತ್ತು ಅವಶೇಷಗಳ ಕಾಯಿದೆ ಸೆಕ್ಷನ್ 16 ಮತ್ತು ಪ್ರಾಚೀನ ಸ್ಮಾರಕಗಳು ಮತ್ತು ಪುರಾತತ್ವ ಸ್ಥಳ ಮತ್ತು ಅವಶೇಷಗಳ (ತಿದ್ದುಪಡಿ ಮತ್ತು ಸಿಂಧುತ್ವ) ನಿಯಮಗಳ ನಿಯಮ 7 ಮತ್ತು 8ರ ಉಲ್ಲಂಘನೆಯಾಗಿದೆ. ಮದ್ರಸಾ ಮುಚ್ಚುವ ಮೂಲಕ ನಿಯಮಗಳನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಬೇಕು ಎಂದು ಕೋರಲಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X