Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಬೆಂಗಳೂರು | ರೈಲುಗಳ ಮೂಲಕ ಮಾಂಸ ಸರಬರಾಜು...

ಬೆಂಗಳೂರು | ರೈಲುಗಳ ಮೂಲಕ ಮಾಂಸ ಸರಬರಾಜು ಪ್ರಕರಣ : ಆರೋಗ್ಯ ಇಲಾಖೆ ಹೇಳಿದ್ದೇನು?

ವಾರ್ತಾಭಾರತಿವಾರ್ತಾಭಾರತಿ27 July 2024 4:46 PM IST
share
ಬೆಂಗಳೂರು | ರೈಲುಗಳ ಮೂಲಕ ಮಾಂಸ ಸರಬರಾಜು ಪ್ರಕರಣ : ಆರೋಗ್ಯ ಇಲಾಖೆ ಹೇಳಿದ್ದೇನು?

ಬೆಂಗಳೂರು : ಮೆಜೆಸ್ಟಿಕ್‌ನ ಕ್ರಾಂತಿಕಾರಿ ಸಂಗೊಳ್ಳಿರಾಯಣ್ಣ ರೈಲ್ವೆ ನಿಲ್ದಾಣದಲ್ಲಿ ವ್ಯಾಪಾರಿಯೊಬ್ಬರು ತೆಗೆದುಕೊಂಡು ಹೋಗುತ್ತಿದ್ದ ಕುರಿ ಮಾಂಸದ ಬಾಕ್ಸ್ ಗಳನ್ನು ತೆಗೆಸಿ ಈ ಮಾಂಸದಲ್ಲಿ ನಾಯಿ ಮಾಂಸ ಬೆರೆಸಲಾಗಿದೆ ಎಂದು ಪುನೀತ್ ಕೆರೆಹಳ್ಳಿ‌ ಸಾಕ್ಷ್ಯಾಧಾರ ರಹಿತ ಆರೋಪ ಮಾಡಿರುವ ಘಟನೆ ಶುಕ್ರವಾರ ವರದಿಯಾಗಿತ್ತು. ಇದರ ಬೆನ್ನಲ್ಲೇ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಈ ಘಟನೆ ಸಂಬಂಧ ಸ್ಪಷ್ಟನೆ ನೀಡಿದೆ.

ಈ ಕುರಿತಂತೆ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿರುವ ಆಹಾರ ಸುರಕ್ಷತೆ ಮತ್ತು‌ ಗುಣಮಟ್ಟ‌ ಇಲಾಖೆಯ ಆಯುಕ್ತರು, ಜುಲೈ 26 ರಂದು ಮಾಧ್ಯಮಗಳಲ್ಲಿ ಬೆಂಗಳೂರು ನಗರಕ್ಕೆ ರೈಲುಗಳ ಮುಖಾಂತರ ಕುರಿ ಮತ್ತು ಇತರೆ ಪ್ರಾಣಿಗಳ ಮಾಂಸವು ಸರಬರಾಜು ಆಗುತ್ತಿರುವ ಕುರಿತಂತೆ ಸುದ್ದಿಗಳು ಭಿತ್ತರವಾಗಿರುತ್ತದೆ. ಈ ಕುರಿತಂತೆ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಇಲಾಖೆ ವತಿಯಿಂದ‌ ಅಗತ್ಯ ‌ಕ್ರಮಗಳನ್ನು ವಹಿಸಲಾಗಿದೆ. ಬೆಂಗಳೂರು ನಗರಕ್ಕೆ ರೈಲುಗಳ ಮುಖಾಂತರ ಕುರಿ ಮತ್ತು ಇತರೆ ಪ್ರಾಣಿಗಳ ಮಾಂಸವು ಸರಬರಾಜು ಆಗುತ್ತಿರುವ ಕುರಿತಂತೆ ಪರಿಶೀಲಿಸಲು ಪೋಲಿಸ್ ಇಲಾಖೆ ಹಾಗೂ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಇಲಾಖೆಯ ಅಧಿಕಾರಿಗಳು ತಪಾಸಣೆ ಮಾಡಿರುತ್ತಾರೆ ಎಂದು ತಿಳಿಸಿದೆ.

ಘಟನೆ ಸಂಬಂಧ ವ್ಯಾಪ್ತಿಯ ಅಂಕಿತಾಧಿಕಾರಿಗಳು ಮತ್ತು ಆಹಾರ ಸುರಕ್ಷತಾಧಿಕಾರಿಗಳು ರೈಲ್ವೆ ನಿಲ್ದಾಣಕ್ಕೆ ಭೇಟಿ ನೀಡಿ ಪರಿಶೀಲಿಸಿರುತ್ತಾರೆ. ಪರಿಶೀಲನೆ ಸಂಧರ್ಭದಲ್ಲಿ ರಾಜಸ್ಥಾನದಿಂದ ಬಂದ ರೈಲಿನ ಮೂಲಕ ಸ್ವೀಕೃತವಾದ ಪಾರ್ಸೆಲ್‌ಗಳನ್ನು ನಿಲ್ದಾಣದ ಹೊರ ಆವರಣದಲ್ಲಿ ಸಾಗಾಣಿಕೆ ವಾಹನದಲ್ಲಿರಿಸಿರುವುದು ಕಂಡುಬಂದಿರುತ್ತದೆ. ಒಟ್ಟು 90 ಸಂಖ್ಯೆಯ ಪಾರ್ಸೆಲ್‌ಗಳಿದ್ದು, ಅವುಗಳನ್ನು ಪರಿಶೀಲಿಸಲಾಗಿ ಪ್ರಾಣಿಯ ಮಾಂಸವಿರುವುದು ಕಂಡುಬಂದಿರುತ್ತದೆ. ಯಾವ ಪ್ರಾಣಿಯ ಮಾಂಸವೆಂದು ಖಚಿತಪಡಿಸಿಕೊಳ್ಳಲು ಮಾಂಸದ ಮಾದರಿಯನ್ನು ಸಂಗ್ರಹಿಸಿ, ಆಹಾರ ಪ್ರಯೋಗಾಲಯಕ್ಕೆ ವಿಶ್ಲೇಷಣೆಗಾಗಿ ಸಲ್ಲಿಸಲಾಗಿರುತ್ತದೆ ಎಂದು ಹೇಳಿದೆ.

ವಿಶ್ಲೇಷಣಾ ಫಲಿತಾಂಶದ ಆಧಾರದ ಮೇಲೆ ಮುಂದಿನ ಕಾನೂನಾತ್ಮಕ ಕ್ರಮಗಳನ್ನು ಜರುಗಿಸಲಾಗುತ್ತದೆ. ಪಾರ್ಸೆಲ್‌ಗಳನ್ನು ಕಳುಹಿಸಿದವರ ಮತ್ತು ಸ್ವೀಕರಿಸಿದವರ ಎಫ್‌ಎಸ್‌ಎಸ್‌ಎಐ ಪರವಾನಿಗೆ ಸೇರಿಂದತೆ ವಿವರವಾದ ಮಾಹಿತಿಗಳನ್ನು ಸಂಗ್ರಹಿಸಲಾಗುತ್ತಿದೆ. ಲೋಪದೋಷಗಳು ಕಂಡುಬಂದಲ್ಲಿ ನಿಯಾಮನುಸಾರ ಮುಂದಿನ ಕಾನೂನು ಕ್ರಮಜರುಗಿಸಲಾಗುವುದು ಎಂದು‌ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Tags

Bangaloredog meatpuneeth kerehalli
share
ವಾರ್ತಾಭಾರತಿ
ವಾರ್ತಾಭಾರತಿ
Next Story
X