Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಅಂಗನವಾಡಿ ಕಾರ್ಯಕರ್ತೆಯರ ಗೌರವ ಧನ...

ಅಂಗನವಾಡಿ ಕಾರ್ಯಕರ್ತೆಯರ ಗೌರವ ಧನ ಹೆಚ್ಚಳಕ್ಕೆ ಆಗ್ರಹಿಸಿ ಫೆ.1ಕ್ಕೆ ‘ಬೆಂಗಳೂರು ಚಲೋ’

ವಾರ್ತಾಭಾರತಿವಾರ್ತಾಭಾರತಿ27 Jan 2024 8:23 PM IST
share
ಅಂಗನವಾಡಿ ಕಾರ್ಯಕರ್ತೆಯರ ಗೌರವ ಧನ ಹೆಚ್ಚಳಕ್ಕೆ ಆಗ್ರಹಿಸಿ ಫೆ.1ಕ್ಕೆ ‘ಬೆಂಗಳೂರು ಚಲೋ’

ಬೆಂಗಳೂರು: ಅಂಗನವಾಡಿ ಕಾರ್ಯಕರ್ತೆ, ಸಹಾಯಕಿಯರ ಗೌರವಧನ ಹೆಚ್ಚಳ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಫೆ.1ಕ್ಕೆ ‘ಬೆಂಗಳೂರು ಚಲೋ’ ಹಮ್ಮಿಕೊಳ್ಳಲಾಗಿದೆ ಎಂದು ಕರ್ನಾಟಕ ರಾಜ್ಯ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಫೆಡರೇಷನ್ ತಿಳಿಸಿದೆ.

ಶನಿವಾರ ನಗರದಲ್ಲಿ ಆಯೋಜಿಸಿದ್ದ ಸುದ್ದಿಗೋಷ್ಠಿಯಲ್ಲಿ ಫೆಡರೇಷನ್‍ನ ಅಧ್ಯಕ್ಷ ಬಿ.ಅಮ್ಜದ್ ಮಾತನಾಡಿ, ಅಂಗನವಾಡಿ ಕಾರ್ಯಕರ್ತೆಯರಿಗೆ 15ಸಾವಿರ ರೂ., ಸಹಾಯಕಿಯರಿಗೆ 10 ಸಾವಿರ ರೂ.ಗೌರವಧನ ಹೆಚ್ಚಿಸಬೇಕು. ನಿವೃತ್ತರಿಗೆ 3 ಲಕ್ಷ ರೂ.ಇಡುಗಂಟು ಜಾರಿಗೊಳಿಸಬೇಕು. ಇದನ್ನು ಸರಕಾರ ಆರನೇ ಗ್ಯಾರೆಂಟಿಯಾಗಿ ಘೋಷಿಸಬೇಕು ಎಂದು ಹೇಳಿದರು.

ಕಾರ್ಯಕರ್ತೆಯರು ಮತ್ತು ಸಹಾಯಕಿಯರು ಗ್ರಾಚ್ಯುಟಿ ಪಡೆಯಲು ಅರ್ಹರು ಎಂಬ ಸುಪ್ರೀಂ ಕೋರ್ಟಿನ ತೀರ್ಪನ್ನು ಈಗಾಗಲೇ ಹಿಂದೆ ನಿವೃತ್ತಿ ಆಗಿರುವವರೆಲ್ಲರಿಗೂ ಅನ್ವಯಿಸುವಂತೆ ನೀಡಲು ಆಡಳಿತಾತ್ಮಕವಾಗಿ ಗ್ರಾಚುಟಿ ತೀರ್ಪನ್ನು ಜಾರಿಗೊಳಿಸಬೇಕು. 2023ರ ಎ.1ರಿಂದ ನಿವೃತ್ತಿಯಾದವರಿಗೆ ಗ್ರಾಚ್ಯುಟಿ ನೀಡಬೇಕೆಂಬ ಆದೇಶವನ್ನು ಹಿಂದಿನ ಸರಕಾರ ನೀಡಿದೆ. ಅಂದಿನಿಂದ ಇಲ್ಲಿಯವರೆವಿಗೂ ಸುಮಾರು 2500ಕಾರ್ಯಕರ್ತರು ಸಹಾಯಕಿಯರು ನಿವೃತ್ತಿಯಾಗಿದ್ದಾರೆ. ಯಾರಿಗೂ ಗ್ರಾಚ್ಯುಟಿ ಹಣ ಕೊಟ್ಟ್ಟಿಲ್ಲ. ಹೀಗಾಗಿ ಇಲಾಖೆ ಕೂಡಲೇ ಬಿಡುಗಡೆ ಮಾಡಬೇಕು ಎಂದರು.

ತೀವ್ರ ಸ್ವರೂಪದ ಅನಾರೋಗ್ಯ ಪೀಡಿತರಾಗಿರುವವರಿಗೆ ಪರಿಹಾರಧನ 3ಲಕ್ಷ ರೂ.ನೀಡಿ ಸ್ವಯಂ ನಿವೃತ್ತಿಗೆ ಅವಕಾಶ ನೀಡುವಂತೆ ಹಿಂದಿನ ಬಜೆಟ್‍ನಲ್ಲಿ ಘೋಷಿಸಲಾಗಿದೆ. ಅದನ್ನು ಜಾರಿಮಾಡಬೇಕು. ಮೊಟ್ಟೆ ಸರಬರಾಜಿನ ಟೆಂಡರ್ ರದ್ದುಗೊಳಿಸಿ, ಬಾಲವಿಕಾಸ ಸಮಿತಿಯ ಖಾತೆಗೆ ಮೊಟ್ಟೆ ಖರೀದಿಸಲು ಮುಂಗಡವಾಗಿ ಹಣ ಬಿಡುಗಡೆಗೊಳಿಸಬೇಕು ಎಂದು ಅವರು ಆಗ್ರಹಿಸಿದರು.

ಅಂಗನವಾಡಿಗಳಿಗೆ ಪರ್ಯಾಯವಾಗಿ ಸರಕಾರದ ವಿವಿಧ ಇಲಾಖೆಗಳು ಶಿಶುಪಾಲನಾ, (ಕಟ್ಟಡಕಾರ್ಮಿಕ ಇಲಾಖೆ, ಗ್ರಾಮೀಣಾಭಿವೃದ್ದಿ ಇಲಾಖೆ, ಶಿಕ್ಷಣ ಇಲಾಖೆ, ಬಿಬಿಎಂಪಿಗಳಲ್ಲಿ) ಕೇಂದ್ರಗಳು ತೆರೆಯುತ್ತಿವೆ. 4 ರಿಂದ 5 ವರ್ಷ ವಯೋಮಾನದ ಮಕ್ಕಳಿಗೆ ಸರಕಾರಿ ಶಾಲೆಗಳಲ್ಲಿ ಪೂರ್ವಪ್ರಾಥಮಿಕ ತರಗತಿಗಳನ್ನು ತೆರೆಯುವುದನ್ನು ಕೈಬಿಟ್ಟು ಅಂಗನವಾಡಿಗಳನ್ನು ಬಲಗೊಳಿಸಬೇಕು ಎಂದು ಬಿ. ಅಮ್ಜದ್ ಹೇಳಿದರು.

ಕಾರ್ಯಕರ್ತೆಯರ ಮತ್ತು ಸಹಾಯಕಿಯರ ಕೆಲಸಕ್ಕೆ ನೇಮಕ ಮಾಡಿದಾಗ ನೀಡುವ ಆದೇಶದಲ್ಲಿ ‘ತಾತ್ಕಾಲಿಕ’ ನೇಮಕಾತಿ ಎಂಬ ಪದವನ್ನು ಕೈಬಿಡಬೇಕು. ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯಲ್ಲಿ ದೀರ್ಘಕಾಲ(5ರಿಂದ 10ವರ್ಷ ಮೇಲ್ಪಟ್ಟು) ಒಂದೇ ಜಾಗದಲ್ಲಿ ಕೆಲಸ ನಿರ್ವಹಿಸುತ್ತಿರುವ ಅಧಿಕಾರಿಗಳು ಮೇಲ್ವಿಚಾರಕರು, ಹಾಗೂ ಸಿಬ್ಬಂದಿಗಳನ್ನು ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯ ನಿಯಾಮಾನುಸಾರ ವರ್ಗಾವಣೆಗೊಳಿಸಬೇಕು ಎಂದು ಅವರು ತಿಳಿಸಿದರು.

ಮಾತೃ ವಂದನಾ ಪ್ರೋತ್ಸಾಹಧನ ಬಾಕಿ ಇರುವುದನ್ನು ಬಿಡುಗಡೆ ಮಾಡಬೇಕು. ಸ್ರೀಶಕ್ತಿ ಮಾಹಿತಿಯನ್ನು ಕಾರ್ಯಕರ್ತೆಯರು ಕೊಡಲು ಸಾಧ್ಯವಿಲ್ಲ. ಏಕೆಂದರೆ ಯಾವುದೇ ಪ್ರೋತ್ಸಾಹಧನ ಕೊಡುತ್ತಿಲ್ಲ. ಇಲಾಖೆ ಈ ಕುರಿತು ಕಮಿಟಿ ರಚಿಸಿದೆ, ಹೀಗಾಗಿ ಕಮಿಟಿಯವರಿಗೆ ಜವಾಬ್ದಾರಿ ಕೊಟ್ಟು ಮಾಹಿತಿ ಪಡೆಯುವಂತೆ ಆದೇಶ ನೀಡಬೇಕು ಎಂದು ಅವರು ತಿಳಿಸಿದರು.

Tags

Bangalore ChaloAnganwadi
share
ವಾರ್ತಾಭಾರತಿ
ವಾರ್ತಾಭಾರತಿ
Next Story
X