Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಬೆಂಗಳೂರು | ಕೃಷಿಮೇಳಕ್ಕೆ ಚಾಲನೆ; ಮೊದಲ...

ಬೆಂಗಳೂರು | ಕೃಷಿಮೇಳಕ್ಕೆ ಚಾಲನೆ; ಮೊದಲ ದಿನವೇ 80 ಲಕ್ಷ ರೂ.ಗೂ ಅಧಿಕ ವಹಿವಾಟು

ವಾರ್ತಾಭಾರತಿವಾರ್ತಾಭಾರತಿ17 Nov 2023 11:10 PM IST
share
ಬೆಂಗಳೂರು | ಕೃಷಿಮೇಳಕ್ಕೆ ಚಾಲನೆ; ಮೊದಲ ದಿನವೇ 80 ಲಕ್ಷ ರೂ.ಗೂ ಅಧಿಕ ವಹಿವಾಟು

ಬೆಂಗಳೂರು, ಜ.17: ನಗರದ ಜಿಕೆವಿಕೆ ಆವರಣದಲ್ಲಿ ನಡೆಯುವ ನಾಲ್ಕು ದಿನಗಳ ಕೃಷಿಮೇಳಕ್ಕೆ ಶುಕ್ರವಾರದಂದು ಮುಖ್ಯಮಂತ್ರಿಗಳಿಂದ ಅದ್ಧೂರಿ ಚಾಲನೆ ದೊರೆತಿದ್ದು, ಮೊದಲ ದಿನವೇ 80 ಲಕ್ಷ ರೂ. ಗಳಿಗೂ ಅಧಿಕ ವಹಿವಾಟು ನಡೆದಿದೆ.

ಬೆಂಗಳೂರು ನಗರ, ಗ್ರಾಮಾಂತರ, ಚಿಕ್ಕಬಳ್ಳಾಪುರ ಜಿಲ್ಲೆ ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳು ಹಾಗೂ ನೆರೆ ರಾಜ್ಯಗಳಿಂದಲೂ ಸುಮಾರು 1 ಲಕ್ಷಕ್ಕೂ ಅಧಿಕ ಜನರು ಮೇಳಕ್ಕೆ ಬೇಟಿ ನೀಡಿದ್ದಾರೆ. 8 ಸಾವಿರಕ್ಕೂ ಅಧಿಕ ಮಂದಿ ರಿಯಾಯಿತಿ ದರದ ಊಟ ಸವಿದರು.

ಮೇಳದಲ್ಲಿ ಒಟ್ಟು 625 ಮಳಿಗೆಗಳನ್ನು ತೆರೆಯಲಾಗಿದ್ದು, ಕೃಷಿ ಪರಿಕರಗಳ ಮಳಿಗೆಗಳು ಮತ್ತು ಕೃಷಿ ಇಂಜಿನಿಯರಿಂಗ್ ಮತ್ತು ಪಶುಸಂಗೋಪನೆ ಮಳಿಗೆಗಳಲ್ಲಿ ನೂತನ ತಂತ್ರಜ್ಞಾನಗಳನ್ನು ಪ್ರದರ್ಶಿಸಲಾಗಿದೆ.

ಹಾಗೆಯೇ ರೈತರ ಸಮಸ್ಯೆಗಳಿಗೆ ತಜ್ಞರಿಂದ ವೈಜ್ಞಾನಿಕ ಸಲಹೆ, ತಜ್ಞ ವಿಜ್ಞಾನಿಗಳ ತಂಡದಿಂದ ಕೃಷಿ ಸಂಬಂಧಿ ಪ್ರಶ್ನೆಗಳಿಗೆ ಭೌತಿಕವಾಗಿ ಮತ್ತು ಝೂಮ್ ಸಭೆ ಮೂಲಕ ನೇರ ಪರಿಹಾರ ನೀಡಲಾಗುತ್ತಿದೆ. ಗುಲಾಬಿಯ ಬದಲಿಗೆ ಆರ್ನಮೆಂಟಲ್ ಸೂರ್ಯಕಾಂತಿಯನ್ನು ಕೃಷಿ ವಿವಿ ಆವರಣದಲ್ಲಿ ಬೆಳೆಯಲಾಗಿದೆ. ಈ ಹೂಗಳಿಂದಲೇ ಮೇಳದ ಮುಖ್ಯ ವೇದಿಕೆಯನ್ನು ಅಲಂಕಾರಗೊಳಿಸಿರುವುದು ವಿಶೇಷವಾಗಿತ್ತು.

ಬಾಡಲ್ ಬದನೆ, ಯುರೋಪಿಯನ್/ಇಂಗ್ಲಿಷ್ ಸೌತೆ, ಚೆರ್ರಿ ಟೊಮೋಟಾ, ಪೆÇೀಲ್ ಬೀನ್ಸ್, ಐಸ್‍ಬರ್ಗ್, ಬ್ರೊಕೋಲಿಯಂತಹ ವಿಶಿಷ್ಟ ಸೊಪ್ಪು ತರಕಾರಿ ಹಾಗೂ ಹೂ ತಳಿಗಳು ನೋಡುಗರನ್ನು ಆಕರ್ಷಿಸುತ್ತಿದ್ದವು. ಡಾರ್ಪರ್, ರ್ಯಾಂಬುಲೆಟ್, ಬನ್ನೂರು, ಎಳಗ, ಸಾನನ್, ನಾರಿಸುವರ್ಣ ತಳಿಯ ಕುರಿಗಳು, ಫಿಜ್ಜಲ್, ರೋಸ್ ಕುಂಬ್, ಸಿಲ್ಕಿ, ಮಲೇಷಿಯನ್, ಸೆರಾಮ, ಹೌಡನ್, ಸೆಬ್‍ರೈಟ್, ಕೊಲಂಬಿಯನ್ ಬರಾಮ ಕೋಳಿ ತಳಿಗಳನ್ನು ಪ್ರದರ್ಶನ ಮತ್ತು ಮಾರಾಟಕ್ಕೆ ಅವಕಾಶ ಮಾಡಿಕೊಡಲಾಗಿದೆ.

ವೇದಿಕೆಯಲ್ಲಿ ಮಾಜಿ ಪ್ರಧಾನಮಂತ್ರಿ ಎಚ್.ಡಿ. ದೇವೇಗೌಡ ರಾಜ್ಯ ಮಟ್ಟದ ಅತ್ಯುತ್ತಮ ರೈತ ಪ್ರಶಸ್ತಿಯನ್ನು ದೇವನಹಳ್ಳಿ ತಾಲೂಕಿನ ಬಿ.ಆರ್. ಮಂಜುನಾಥ, ಡಾ. ಎಂ.ಎಚ್. ಮರೀಗೌಡ ರಾಜ್ಯ ಮಟ್ಟದ ಅತ್ಯುತ್ತಮ ತೋಟಗಾರಿಕೆ ರೈತ ಪ್ರಶಸ್ತಿಯನ್ನು ಶಿವಮೊಗ್ಗದ ಎಚ್. ಟಿ. ರಾಜೇಂದ್ರರಿಗೆ ನೀಡಲಾಯಿತು.

ಕ್ಯಾನ್ ಬ್ಯಾಂಕ್ ರಾಜ್ಯಮಟ್ಟದ ಅತ್ಯುತ್ತಮ ರೈತ ಪ್ರಶಸ್ತಿಯನ್ನು ರಾಮನಗರದ ಬಿ.ಪಿ.ವಾಸು, ಕ್ಯಾನ್ ಬ್ಯಾಂಕ್ ರಾಜ್ಯ ಮಟ್ಟದ ಅತ್ಯುತ್ತಮ ರೈತ ಮಹಿಳೆ ಪ್ರಶಸ್ತಿಯನ್ನು ಶ್ರೀನಿವಾಸಪುರದ ಎ.ವಿ.ರತ್ನಮ್ಮ, ಡಾ. ಆರ್. ದ್ವಾರಕೀನಾಥ್ ಅತ್ಯುತ್ತಮ ರೈತ ಪ್ರಶಸ್ತಿಯನ್ನು ಚನ್ನರಾಯಪಟ್ಟಣದ ಬಿ.ಜಿ. ಮಂಜೇಗೌಡರಿಗೆ ನೀಡಲಾಯಿತು.

ಗ್ಯಾರಂಟಿ ಕಾರ್ಯಕ್ರಮಗಳಾದ ಸರಕಾರಿ ಬಸ್‍ನಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ ಮಾಡಲು ಅನುವು ಮಾಡಿರುವ ಶಕ್ತಿ ಯೋಜನೆ, ಮನೆಯ ಯಜಮಾನಿಯರಿಗೆ ಆರ್ಥಿಕ ನೆರವು ಕಲ್ಪಿಸುವ ಗೃಹಲಕ್ಷ್ಮಿ ಯೋಜನೆ, ಗೃಹಜ್ಯೋತಿ ಯೋಜನೆ, ಪ್ರತಿ ಫಲಾನುಭವಿಗೆ 10 ಕೆಜಿ ಉಚಿತ ಆಹಾರಧಾನ್ಯ ನೀಡುವ ಅನ್ನಭಾಗ್ಯ ಯೋಜನೆ ಹಾಗೂ ಯುವಕರ ಶ್ರೇಯೋಭಿವೃದ್ಧಿಗಾಗಿ ಯುವನಿಧಿ ಯೋಜನೆಯ ಮಾಹಿತಿಯನ್ನು ಮೇಳದಲ್ಲಿ ಪ್ರದರ್ಶಿಸಲಾಗಿದೆ.

‘ಕೃಷಿಮೇಳದಲ್ಲಿ ನಿರ್ಮಿಸಿರುವ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ರಾಜ್ಯ ಸರಕಾರದ ಕಾರ್ಯಕ್ರಮಗಳ ಮಾಹಿತಿ ಪ್ರದರ್ಶನದ ಮಳಿಗೆ ವೀಕ್ಷಕರ ಪಾಲಿಗೆ ಸರಕಾರದ ಸೌಲಭ್ಯಗಳ ಮಾಹಿತಿ ಕೋಶವಾಗಿ ಮಾರ್ಪಡಿಸಿದೆ.








share
ವಾರ್ತಾಭಾರತಿ
ವಾರ್ತಾಭಾರತಿ
Next Story
X