Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಬೆಂಗಳೂರು ಉಪನಗರ ಸಾರಿಗೆ ಯೋಜನೆ| 16,876...

ಬೆಂಗಳೂರು ಉಪನಗರ ಸಾರಿಗೆ ಯೋಜನೆ| 16,876 ಕೋಟಿ ರೂ.ಪರಿಷ್ಕೃತ ಅಂದಾಜಿಗೆ ಸಚಿವ ಸಂಪುಟ ಅನುಮೋದನೆ

ವಾರ್ತಾಭಾರತಿವಾರ್ತಾಭಾರತಿ2 Jan 2026 10:51 PM IST
share
ಬೆಂಗಳೂರು ಉಪನಗರ ಸಾರಿಗೆ ಯೋಜನೆ| 16,876 ಕೋಟಿ ರೂ.ಪರಿಷ್ಕೃತ ಅಂದಾಜಿಗೆ ಸಚಿವ ಸಂಪುಟ ಅನುಮೋದನೆ

ಬೆಂಗಳೂರು,ಜ.2: ಬೆಂಗಳೂರು ಉಪನಗರ ಸಾರಿಗೆ ಯೋಜನೆಯ ಕಾರಿಡಾರ್ 2 ಮತ್ತು 4ರ ಪರಿಷ್ಕೃತ ಅಂದಾಜು ವೆಚ್ಚ 16,876 ಕೋಟಿ ರೂ.ಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ಶುಕ್ರವಾರ ವಿಧಾನಸೌಧದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ನೀಡಲಾಗಿದೆ.

ಇತರ ನಿರ್ಣಯಗಳು: ದೇವನಹಳ್ಳಿ ತಾಲೂಕಿನ ಗುಟ್ಟಹಳ್ಳಿ ಗ್ರಾಮದಲ್ಲಿ ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಪ್ರದೇಶ ಯೋಜನಾ ಪ್ರಾಧಿಕಾರದಿಂದ ಅನುಮೋದನೆ ನೀಡಲಾಗಿರುವ ವಸತಿ ಬಡಾವಣೆಯಲ್ಲಿನ 3,300.16 ಚ.ಮೀ.ವಿಸ್ತೀರ್ಣದ ನಾಗರಿಕ ಸೌಲಭ್ಯ ನಿವೇಶನವನ್ನು ‘ಕಾಂಗ್ರೆಸ್ ಭವನ ಟ್ರಸ್ಟ್, ಬೆಂಗಳೂರು’ ಇವರಿಗೆ 30 ವರ್ಷಗಳ ಅವಧಿಗೆ ಗುತ್ತಿಗೆ ಆಧಾರದ ಮೇಲೆ ಮಂಜೂರು ಮಾಡಲು ನಿರ್ಧರಿಸಲಾಗಿದೆ.

ಬೆಳಗಾವಿ ಜಿಲ್ಲೆಯ ಗೋಕಾಕ್ ತಾಲೂಕಿನಲ್ಲಿ 100 ಹಾಸಿಗೆಗಳ ಹೊಸ ತಾಲೂಕು ಸಾರ್ವಜನಿಕ ಆಸ್ಪತ್ರೆಯನ್ನು 40 ಕೋಟಿ ರೂ.ಗಳ ಅಂದಾಜು ಮೊತ್ತದಲ್ಲಿ ನಿರ್ಮಿಸಲು ತಾತ್ವಿಕ ಅನುಮೋದನೆ ನೀಡಲಾಗಿದೆ.

6 ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿನ ನಾಗರಿಕ ಸೌಲಭ್ಯ ನಿವೇಶನಗಳನ್ನು ಬ್ಲಾಕ್ ಕಾಂಗ್ರೆಸ್ ಕಚೇರಿ ಕಟ್ಟಡ ನಿರ್ಮಾಣ ಮಾಡುವ ಸಲುವಾಗಿ ‘ಕಾಂಗ್ರೆಸ್ ಭವನ ಟ್ರಸ್ಟ್, ಬೆಂಗಳೂರು’ ಇವರಿಗೆ ಗುತ್ತಿಗೆ ಆಧಾರದ ಮೇಲೆ ಮಂಜೂರು ಮಾಡಲು ನಿರ್ಧಾರಿಸಲಾಗಿದೆ.

ಕಲಬುರಗಿ ನಗರಾಭಿವೃದ್ಧಿ ಪ್ರಾಧಿಕಾರದಿಂದ ಅನುಮೋದನೆಗೊಂಡ ಶೇಖರೋಜಾ ಸರ್ವೆ ನಂ.111/2ರಲ್ಲಿನ 2338.91 ಚ.ಮೀ ವಿಸ್ತೀರ್ಣವುಳ್ಳ ನಾಗರಿಕ ಸೌಲಭ್ಯ ನಿವೇಶನ ಪಿ.ಎಲ್-01 ಅನ್ನು ಶಿಕ್ಷಕರ ಭವನ ನಿರ್ಮಿಸಲು ರಾಜ್ಯ ಪ್ರೌಢ ಶಾಲಾ ಶಿಕ್ಷಕರ ಸಂಘ ಹಾಗೂ ಕಲಬುರಗಿ ಜಿಲ್ಲಾ ಸಂಘಕ್ಕೆ ರಿಯಾಯಿತಿ ದರದಲ್ಲಿ ಹಂಚಿಕೆ ಮಾಡಲು ನಿರ್ಧರಿಸಲಾಗಿದೆ.

2025-26ನೆ ಸಾಲಿಗೆ ರಾಜ್ಯದ ಸರಕಾರಿ ಪ್ರಾಥಮಿಕ ಶಾಲೆಗಳು ಮತ್ತು ಪ್ರೌಢ ಶಾಲೆಗಳಿಗೆ ಅಗತ್ಯವಿರುವ 41,685 ಪಿಠೋಪಕರಣಗಳನ್ನು ಕೆಎಸ್‍ಎಫ್‍ಐಸಿಯಿಂದ ನೇರ ಖರೀದಿಯ ಮೂಲಕ ಅಂದಾಜು 8.67 ಕೋಟಿ ರೂ.ವೆಚ್ಚದಲ್ಲಿ ಮತ್ತು ಅಲ್ಪಾವಧಿಯ ಟೆಂಡರ್ ಮೂಲಕ ಅಂದಾಜು 26.67 ಕೋಟಿ ರೂ.ವೆಚ್ಚದಲ್ಲಿ ಖರೀದಿಸಲು ಆಡಳಿತಾತ್ಮಕ ಅನುಮೋದನೆ ನೀಡಲಾಗಿದೆ.

100 ಪಶುವೈದ್ಯಕೀಯ ಸಂಸ್ಥೆಗಳ ನೂತನ ಕಟ್ಟಡಗಳನ್ನು 50 ಕೋಟಿ ರೂ.ಗಳ ಅಂದಾಜು ಮೊತ್ತದಲ್ಲಿ ನಬಾರ್ಡ್ ಅನುದಾನದೊಂದಿಗೆ ನಿರ್ಮಿಸಲು ಹಾಗೂ ಇತ್ತೀಚೆಗೆ ರಸ್ತೆ ಅಪಘಾತದಲ್ಲಿ ಮೃತಪಟ್ಟ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಅವರ ಮಗಳು ಚೈತನ್ಯಾ ಮಹಾಂತೇಶ್ ಅವರಿಗೆ ವಿಶೇಷ ಪ್ರಕರಣವೆಂದು ಪರಿಗಣಿಸಿ, ರಾಜ್ಯ ಸರಕಾರ ಸಚಿವಾಲಯದ ‘ಗ್ರೂಪ್ ಸಿ’ ಸೇವೆಗೆ ಅನುಕಂಪದ ಆಧಾರದ ಮೇಲೆ ನೇಮಕ ಮಾಡಲು ನಿರ್ಧರಿಸಲಾಗಿದೆ.

ಹೈದರಾಬಾದ್‍ನ ಐಐಟಿ ಸಹಯೋಗದೊಂದಿಗೆ ಹೊಸ ‘ಕರ್ನಾಟಕ ಜಿಎಸ್‍ಟಿ ಅನಲೈಟಿಕ್ಸ್ ಪೋರ್ಟಲ್’ 19 ಕೋಟಿ ರೂ.ಗಳ ಅಂದಾಜು ಮೊತ್ತದಲ್ಲಿ ಅಭಿವೃದ್ಧಿಪಡಿಸಲು ಹಾಗೂ ಕಾರ್ಯಗತಗೊಳಿಸಲು ಅನುಮೋದನೆ ನೀಡಲಾಗಿದೆ.



share
ವಾರ್ತಾಭಾರತಿ
ವಾರ್ತಾಭಾರತಿ
Next Story
X