Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಬೆಂಗಳೂರು ತಂತ್ರಜ್ಞಾನ ಶೃಂಗಸಭೆ :...

ಬೆಂಗಳೂರು ತಂತ್ರಜ್ಞಾನ ಶೃಂಗಸಭೆ : ‘ನಿಪುಣ ಕರ್ನಾಟಕ’ ಯೋಜನೆ ಪ್ರಕಟ

ವಾರ್ತಾಭಾರತಿವಾರ್ತಾಭಾರತಿ19 Nov 2025 8:42 PM IST
share
ಬೆಂಗಳೂರು ತಂತ್ರಜ್ಞಾನ ಶೃಂಗಸಭೆ : ‘ನಿಪುಣ ಕರ್ನಾಟಕ’ ಯೋಜನೆ ಪ್ರಕಟ
ಬೆಂಗಳೂರು ನಾವೀನ್ಯತಾ ವರದಿ ಬಿಡುಗಡೆ

ಬೆಂಗಳೂರು : ವೃತ್ತಿನಿರತರ ಕೌಶಲವೃದ್ಧಿಗೆ ಒತ್ತು ನೀಡುತ್ತಿರುವ ರಾಜ್ಯ ಸರಕಾರವು, ಬೆಂಗಳೂರು ತಂತ್ರಜ್ಞಾನ ಶೃಂಗಸಭೆಯ ಎರಡನೆ ದಿನವಾದ ಭವಿಷ್ಯಕ್ಕೆ ಸಿದ್ಧರಿರುವ ಕುಶಲ ಉದ್ಯೋಗಿಗಳನ್ನು ಸೃಷ್ಟಿಸಲು ಪ್ರಮುಖ ಕಾರ್ಪೊರೇಟ್‍ಗಳ ಪಾಲುದಾರಿಕೆಯಡಿ ‘ನಿಪುಣ ಕರ್ನಾಟಕ’ ಯೋಜನೆ ಪ್ರಕಟಿಸಿದೆ.

ಬುಧವಾರ ತುಮಕೂರು ರಸ್ತೆಯಲ್ಲಿರುವ ಬೆಂಗಳೂರು ಅಂತರ್‍ರಾಷ್ಟ್ರೀಯ ವಸ್ತು ಪ್ರದರ್ಶನ ಕೇಂದ್ರದಲ್ಲಿ ಆಯೋಜಿಸಲಾಗಿರುವ ಬೆಂಗಳೂರು ತಂತ್ರಜ್ಞಾನ ಶೃಂಗಸಭೆಯಲ್ಲಿ ಮಾಹಿತಿ ಮತ್ತು ತಂತ್ರಜ್ಞಾನ ಸಚಿವ ಪ್ರಿಯಾಂಕ್ ಖರ್ಗೆ ಸೇರಿದಂತೆ ಇನ್ನಿತರ ಗಣ್ಯರ ಸಮುಖದಲ್ಲಿ, ನಿಪುಣ ಕರ್ನಾಟಕ ಯೋಜನೆ ಹಾಗೂ ಬೆಂಗಳೂರು ನಾವೀನ್ಯತಾ ವರದಿಯನ್ನು ಬಿಡುಗಡೆ ಮಾಡಿದರು.

ಕುಶಲ ಉದ್ಯೋಗಿಗಳಿಗೆ ಬೇಡಿಕೆ ಹೆಚ್ಚಿಗೆ ಇರುವ ಕೃತಕ ಬುದ್ಧಿಮತ್ತೆ, ಸೈಬರ್ ಸುರಕ್ಷತೆ, ಡೇಟಾ ಸೈನ್ಸ್ ಕ್ಷೇತ್ರಗಳಲ್ಲಿ ತರಬೇತಿ ನೀಡಲು ಉದ್ದೇಶಿಸಲಾಗಿದೆ. ಈ ತರಬೇತಿ ಯೋಜನೆ ಫಲವಾಗಿ 2,800 ಉದ್ಯೋಗ ಅವಕಾಶಗಳು ಸೃಷ್ಟಿಯಾಗಲಿವೆ ಎಂದು ನಿರೀಕ್ಷಿಸಲಾಗಿದೆ.

4 ಸಾವಿರ ಯುವ ಜನರ ವೃತ್ತಿ ಕೌಶಲ ಹೆಚ್ಚಿಸಲಿರುವ ಈ ಕಾರ್ಯಕ್ರಮವು ದೂರಗಾಮಿ ಪರಿಣಾಮ ಬೀರಲಿದೆ. ಪ್ರತಿಷ್ಠಿತ ಕಾರ್ಪೊರೇಟ್‍ಗಳಾದ ಕ್ಯಾಪ್‍ಜೆಮಿನಿ, ವೆಲ್ಸ್ ಫರ್ಗೊ, ಸ್ಟ್ಯಾಂಡರ್ಡ್ ಚಾರ್ಟರ್ಡ್ ಮತ್ತು ಸುಮೆರಿ ಕಂಪನಿಗಳ ಉದ್ಯೋಗಿಗಳು ತರಬೇತಿ ನೀಡಲಿದ್ದಾರೆ. ಐಸಿಟಿ ಅಕಾಡೆಮಿ, ಎಆರ್‌ಡಬ್ಲ್ಯುಎಸ್, ಎಫ್‍ಯುಇಎಲ್ ಮತ್ತು ಎಐಎಸ್‍ಇಸಿಟಿ-ತರಬೇತಿ ಪಾಲುದಾರ ಸಂಸ್ಥೆಗಳಾಗಿವೆ.

ಹೆಚ್ಚುವರಿಯಾಗಿ 10 ಸಾವಿರ ಯುವ ಜನರ ವೃತ್ತಿ ಕೌಶಲ ಹೆಚ್ಚಿಸಲು ಐಟಿ, ಜೈವಿಕ ತಂತ್ರಜ್ಞಾನ, ಎಲೆಕ್ಟ್ರಾನಿಕ್ಸ್ ಸಿಸ್ಟಮ್ ಡಿಸೈನ್ ಆ್ಯಂಡ್ ಮ್ಯಾನುಫ್ಯಾಕ್ಚರಿಂಗ್ (ಇಎಸ್‍ಡಿಎಂ), ಬ್ಯಾಂಕಿಂಗ್, ಹಣಕಾಸು ಸೇವೆ ಮತ್ತು ವಿಮೆ (ಬಿಎಫ್‍ಎಸ್‍ಐ) ವಲಯದ ಪ್ರಮುಖ ಕಂಪನಿಗಳು ತರಬೇತಿ ನೀಡಲು ಇಂಗಿತ ವ್ಯಕ್ತಪಡಿಸಿವೆ.

ನವೋದ್ಯಮ ಉತ್ಪನ್ನಗಳ ಪ್ರದರ್ಶನ: ರಾಜ್ಯ ಸರಕಾರದ ಎಲೆಕ್ಟ್ರಾನಿಕ್ಸ್ ಇಲಾಖೆಯು, ತಂತ್ರಜ್ಞಾನ ಶೃಂಗ ಸಭೆಯ ಮೇಳದಲ್ಲಿ 50 ನವೋದ್ಯಮಗಳ ನಾವೀನ್ಯತಾ ಉತ್ಪನ್ನಗಳನ್ನು ಪ್ರದರ್ಶಿಸುತ್ತಿದ್ದು, ಮೇಳಕ್ಕೆ ಭೇಟಿ ನೀಡಿದವರ ಗಮನ ಸೆಳೆಯುತ್ತಿವೆ. ಐಟಿ, ಕೃಷಿ ತಂತ್ರಜ್ಞಾನ, ವೈದ್ಯಕೀಯ ತಂತ್ರಜ್ಞಾನ, ಕೃತಕ ಬುದ್ಧಿಮತ್ತೆ, ಡೀಪ್‍ಟೆಕ್, ಐಒಟಿ, ಸೈಬರ್ ಸುರಕ್ಷತೆ, ವೈಮಾಂತರಿಕ್ಷ ಹಾಗೂ ರಕ್ಷಣೆ, ವಂಚನೆಯ ವಹಿವಾಟು ತಡೆಯುವ ಆ್ಯಪ್ ಮುಂತಾದವು ಇಲ್ಲಿನ ಪ್ರಮುಖ ಆಕರ್ಷಣೆಗಳಾಗಿವೆ.

ಬೆಂಗಳೂರು ನಾವೀನ್ಯತಾ ವರದಿ ಬಿಡುಗಡೆ: ಶೃಂಗಸಭೆಯಲ್ಲಿ ಬೆಂಗಳೂರು ನಾವೀನ್ಯತಾ ವರದಿ ಬಿಡುಗಡೆ ಮಾಡಲಾಗಿದ್ದು, ಬೆಂಗಳೂರು ನಗರವು ಈಗ ಕೃತಕ ಬುದ್ಧಿಮತ್ತೆ ಹಾಗೂ ಕ್ವಾಂಟಮ್ ಕಂಪ್ಯೂಟಿಂಗ್ ಕೇಂದ್ರವಾಗಿ ರೂಪುಗೊಂಡಿರುವುದರ ಮೇಲೆ ಬೆಳಕು ಚೆಲ್ಲಿದೆ. ಈ ಕ್ಷೇತ್ರಗಳ ಜಾಗತಿಕ ದೈತ್ಯ ಕಂಪನಿಗಳಾದ ಓಪನ್‍ಎಐ, ಆ್ಯಂಥ್ರೊಫಿಕ್ ಮತ್ತು ಗ್ರಾಫ್‍ಕೋರ್-ಗಳನ್ನು ಆಕರ್ಷಿಸುತ್ತಿದೆ.

ಬೆಂಗಳೂರು ಈಗ ವಿಶ್ವದ ಐದನೆ ಅತಿದೊಡ್ಡ ಯೂನಿಕಾರ್ನ್ ಶಕ್ತಿಕೇಂದ್ರವಾಗಿದೆ. ಒಂದು ಶತಕೋಟಿ ಡಾಲರ್ ಮೊತ್ತದ ವಹಿವಾಟು ನಡೆಸುವ (ಯೂನಿಕಾರ್ನ್) 53 ನವೋದ್ಯಮಗಳು ಬೆಂಗಳೂರಿನಲ್ಲಿ ಕಾರ್ಯನಿರ್ವಹಿಸುತ್ತಿವೆ. ಇವುಗಳ ಒಟ್ಟಾರೆ ವಹಿವಾಟಿನ ಮೊತ್ತ ಅಂದಾಜು 1.70 ಲಕ್ಷ ಕೋಟಿ ರೂ.( 192 ಶತಕೋಟಿ ಡಾಲರ್) ಗಳಷ್ಟಿದೆ. ದೇಶದ ಒಟ್ಟಾರೆ ಯೂನಿಕಾರ್ನ್ ಮೌಲ್ಯಕ್ಕೆ ಬೆಂಗಳೂರು ಯೂನಿಕಾರ್ನ್‍ಗಳ ಕೊಡುಗೆ ಶೇ 42ರಷ್ಟಿದೆ.

ಸೂನಿಕಾರ್ನ್‍ಗಳ ತಾಣ: ಬೆಂಗಳೂರು ನಗರವು ಯೂನಿಕಾರ್ನ್ ಹಾದಿಯಲ್ಲಿ ಸಾಗಿರುವ ನವೋದ್ಯಮಗಳನ್ನು(ಸೂನಿಕಾರ್ನ್) ಚುಂಬಕದಂತೆ ಸೆಳೆಯುತ್ತಿದೆ. ನಗರದಲ್ಲಿ 39 ಸೂನಿಕಾರ್ನ್‍ಗಳಿದ್ದು, ದಿಲ್ಲಿ ಎನ್‍ಸಿಆರ್ (30), ಮುಂಬೈ (21) ಗಿಂತ ಮುಂಚೂಣಿಯಲ್ಲಿದೆ. ಇದು ಜಾಗತಿಕ ತಂತ್ರಜ್ಞಾನ ಪ್ರತಿಭಾನ್ವಿತರನ್ನು ಸೃಷ್ಟಿಸುತ್ತಿರುವ ಬೆಂಗಳೂರಿನ ಪ್ರಾಬಲ್ಯಕ್ಕೆ ಕನ್ನಡಿ ಹಿಡಿಯುತ್ತದೆ.

ಜಾಗತಿಕ ಸಾಮರ್ಥ್ಯ ಕೇಂದ್ರಗಳು (ಜಿಸಿಸಿ): ದೇಶದಲ್ಲಿರುವ ಜಾಗತಿಕ ಸಾಮರ್ಥ್ಯ ಕೇಂದ್ರಗಳಲ್ಲಿ ಶೇ.40ರಷ್ಟು ಕೇಂದ್ರಗಳಿಗೆ ಬೆಂಗಳೂರು ಅವಕಾಶ ಕಲ್ಪಿಸಿದೆ. ಇದು 2029ರ ವೇಳೆಗೆ ದುಪ್ಪಟ್ಟಾಗುವ ನಿರೀಕ್ಷೆ ಇದೆ.

ಡೀಪ್‍ಟೆಕ್ ಹಾಗೂ ಪೇಟೆಂಟ್‍ನಲ್ಲಿ ಮುನ್ನಡೆ: 2020 ರಿಂದ 2023ರ ಅವಧಿಯಲ್ಲಿ ಬೆಂಗಳೂರಿನ ಕಂಪ್ಯೂಟರ್ ಸೈನ್ಸ್, ಎಲೆಕ್ಟ್ರಾನಿಕ್ಸ್ ಮತ್ತು ಕಮ್ಯುನಿಕೇಷನ್ಸ್ ಕ್ಷೇತ್ರಗಳಲ್ಲಿನ ಕಂಪನಿಗಳು ಗರಿಷ್ಠ ಪೇಟೆಂಟ್‍ಗಳನ್ನು ಪಡೆದುಕೊಂಡಿವೆ.

ಮಹಿಳೆಯರ ನೇತೃತ್ವದಲ್ಲಿನ ನಾವೀನ್ಯತೆ: ಮಹಿಳೆಯರ ನೇತೃತ್ವದಲ್ಲಿನ ನವೋದ್ಯಮಗಳ ಸಂಖ್ಯೆಯಲ್ಲಿಯೂ ಬೆಂಗಳೂರು ಮುಂಚೂಣಿಯಲ್ಲಿದೆ. ಇಂತಹ 1,600 ನವೋದ್ಯಮಗಳು ಇಲ್ಲಿವೆ.

ಬೆಂಗಳೂರಿನ ಆಚೆಗೆ ವಿಸ್ತರಣೆ: 450ಕ್ಕೂ ಹೆಚ್ಚು ನವೊದ್ಯಮಗಳು ಬೆಂಗಳೂರಿನ ಆಚೆಗಿನ ಮಂಗಳೂರು, ಮೈಸೂರು, ಹುಬ್ಬಳ್ಳಿ-ಧಾರವಾಡ ನಗರಗಳಲ್ಲಿ ಕಾರ್ಯನಿರ್ವಹಿಸುತ್ತಿವೆ ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ.

ಈ ಸಂದರ್ಭದಲ್ಲಿ ಕಿಯೋನಿಕ್ಸ್ ಅಧ್ಯಕ್ಷ ಶರತ್‍ಕುಮಾರ್ ಬಚ್ಚೇಗೌಡ, ಸರಕಾರದ ವಿಷನ್ ಗ್ರೂಪ್ ಮುಖ್ಯಸ್ಥ ಪ್ರಶಾಂತ್ ಪ್ರಕಾಶ್, ಮಾಹಿತಿ ಮತ್ತು ತಂತ್ರಜ್ಞಾನ ಇಲಾಖೆಯ ಕಾರ್ಯದರ್ಶಿ ಡಾ.ಮಂಜುಳಾ ಎನ್. ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

Tags

Bangalore Tech Summit
share
ವಾರ್ತಾಭಾರತಿ
ವಾರ್ತಾಭಾರತಿ
Next Story
X