Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಜಮ್ಮು-ಕಾಶ್ಮೀರ ರಣಜಿ ಕ್ರಿಕೆಟ್...

ಜಮ್ಮು-ಕಾಶ್ಮೀರ ರಣಜಿ ಕ್ರಿಕೆಟ್ ಆಡುತ್ತಿರುವುದು ನರೇಂದ್ರ ಮೋದಿಯ ಮುತ್ಸದ್ದಿ ನಾಯಕತ್ವದ ಫಲ ಎಂದ ಬಸವರಾಜ ಬೊಮ್ಮಾಯಿ!

ReshmaReshma25 Feb 2026 12:45 PM IST
share
ಜಮ್ಮು-ಕಾಶ್ಮೀರ ರಣಜಿ ಕ್ರಿಕೆಟ್ ಆಡುತ್ತಿರುವುದು ನರೇಂದ್ರ ಮೋದಿಯ ಮುತ್ಸದ್ದಿ ನಾಯಕತ್ವದ ಫಲ ಎಂದ ಬಸವರಾಜ ಬೊಮ್ಮಾಯಿ!
► ಎಲ್ಲವನ್ನೂ ಮೋದೀಜಿ ಮಾಡಿದ್ದು ಅನ್ನೋದೇ ಇವರ ಮಂತ್ರವಾಗಿದೆ : ಬಿ.ಕೆ.ಹರಿಪ್ರಸಾದ್ ►67 ವರ್ಷದಿಂದಲೂ ಜಮ್ಮು-ಕಾಶ್ಮೀರ ರಣಜಿ ಆಡುತ್ತಿದೆ ಎಂದು ಮಾಜಿ ಸಿಎಂಗೆ ನೆನಪಿಸಿದ ಕ್ರಿಕೆಟ್ ಪ್ರೇಮಿಗಳು

ಬೆಂಗಳೂರು : ಜಮ್ಮು ಕಾಶ್ಮೀರ ಕ್ರಿಕೆಟ್ ತಂಡವು ಹುಬ್ಬಳ್ಳಿಯಲ್ಲಿ ರಣಜಿ ಪಂದ್ಯ ಆಡುತ್ತಿರುವುದು ಆರ್ಟಿಕಲ್ 370 ರದ್ದತಿಯ ನಂತರದ ಹೊಸ ವಾತಾವರಣದ ಪ್ರತೀಕವಾಗಿದೆ ಎಂಬ ಬಸವರಾಜ್ ಬೊಮ್ಮಾಯಿ ಅವರ ಹೇಳಿಕೆಯು ಸಾಮಾಜಿಕ ಜಾಲತಾಣದಲ್ಲಿ ಟೀಕೆಗೆ ಗುರಿಯಾಗಿದೆ.

ಬೊಮ್ಮಾಯಿ ಅವರು ಸಾಮಾಜಿಕ ಜಾಲತಾಣ ಎಕ್ಸ್‌ ನಲ್ಲಿ, ಜಮ್ಮು ಕಾಶ್ಮೀರ ಕ್ರಿಕೆಟ್ ತಂಡ ಹುಬ್ಬಳ್ಳಿಯಲ್ಲಿ ರಣಜಿ ಪಂದ್ಯ ಆಡುತ್ತಿರುವುದು ಆರ್ಟಿಕಲ್ 370 ರದ್ದತಿಯ ನಂತರ ಜಮ್ಮು ಕಾಶ್ಮೀರದಲ್ಲಿ ಸಾಮಾನ್ಯ ಜೀವನ ಮರುಕಳಿಸುತ್ತಿರುವುದಕ್ಕೆ ಸಂಕೇತವಾಗಿದೆ ಎಂದು ಹೇಳಿದ್ದರು. ಜೊತೆಗೆ, ಜಮ್ಮು ಕಾಶ್ಮೀರವು ಭಾರತದ ಪ್ರತಿಯೊಂದು ಕ್ಷೇತ್ರದಲ್ಲೂ ಸಮಗ್ರವಾಗಿ ಭಾಗಿಯಾಗುತ್ತಿರುವುದು ನರೇಂದ್ರ ಮೋದಿ ಅವರ ದೃಢ ನಾಯಕತ್ವದ ಫಲವಾಗಿದೆ ಎಂದು ತಮ್ಮ ಪೋಸ್ಟ್‌ನಲ್ಲಿ ಉಲ್ಲೇಖಿಸಿದ್ದರು.

ಈ ಹೇಳಿಕೆ ಕುರಿತು ಸಾಮಾಜಿಕ ಜಾಲತಾಣ ಎಕ್ಸ್‌ ನಲ್ಲಿ ಪ್ರತಿಕ್ರಿಯಿಸಿರುವ ಬಿ.ಕೆ.ಹರಿಪ್ರಸಾದ್ ಅವರು, ಬಸವರಾಜ್ ಬೊಮ್ಮಾಯಿ ಅಂತವರು ನಮ್ಮ‌ ರಾಜ್ಯದ ಮುಖ್ಯಮಂತ್ರಿ ಆಗಿದ್ದರು. ಒಂದು ಸಾಮಾನ್ಯ ಗೂಗಲ್ ಸರ್ಚ್‌ ಮಾಡಿದರೂ ಜಮ್ಮು & ಕಾಶ್ಮೀರ ಕ್ರಿಕೆಟ್ ತಂಡ 1959-60ರಿಂದಲೇ ರಣಜಿ ಟ್ರೋಫಿಯಲ್ಲಿ ಆಡುತ್ತಿದೆ ಎಂಬುದು ತಿಳಿಯುತ್ತದೆ ಎಂದು ಅವರು ಹೇಳಿದ್ದಾರೆ.

ಎಲ್ಲವನ್ನೂ ಮೋದೀಜಿ ಮಾಡಿದ್ದು ಅನ್ನೋದೇ ಇವರ ಮಂತ್ರವಾಗಿದೆ ಎಂದು ಅವರು ವ್ಯಂಗ್ಯವಾಡಿದರು.

ಅಲ್ಲದೇ ಬೊಮ್ಮಾಯಿ ಅವರ ಹೇಳಿಕೆಗೆ ಸಾಮಾಜಿಕ ಜಾಲತಾಣ ಫೇಸ್‌ ಬುಕ್‌ ನಲ್ಲಿ ರಾಮಮೋಹನ್ ಬಿ.ಎಸ್. ಎಂಬವರು ಪ್ರತಿಕ್ರಿಯಿಸಿ, ಹೌದು ಏನೇ ಒಳ್ಳೆಯದು ಆದರೂ ಅದು ಮೋದಿಜಿ, ಏನೇ ಕೆಟ್ಟದ್ದು ಆದರೂ ಅದು ಈ ಹೊತ್ತಿಗೂ ನೆಹರೂನೇ ಕಾರಣ. ನಿಮಗೆ ರಾಜಕೀಯ ಬಿಟ್ಟು ವಾಸ್ತವ ಮಾತಾಡೋಕ್ಕೆ ಬರೋದಿಲ್ಲವಾ ಎಂದು ತಿಳಿಸಿದ್ದಾರೆ.

ದಿವ್ಯಾ ಗೌಡ ಎಂಬವರು, 1950-1960 ರಿಂದ ಜಮ್ಮು ಕಾಶ್ಮೀರ ರಣಜಿ ಆಟ ಆಡಿಕೊಂಡು ಬರುತ್ತಾ ಇದೆ. ಬಿಜೆಪಿ ಎಂದರೆ ಸುಳ್ಳು, ಬಿಜೆಪಿ ಅಂದರೆ ಮೋಸ, ಸುಳ್ಳೇ ಇವರ ಮನೆ ದೇವರು. ಯಾವುದೇ ಪೋಸ್ಟ್ ಮಾಡೋಕೆ ಮುಂಚೆ ಏನ್ ಮಾಡ್ತಾ ಇದ್ದೇನೆ ಎಂದು ತಿಳಿದುಕೊಂಡು ಮಾಡಿ ಎಂದು ತಿಳಿಸಿದ್ದಾರೆ.

ಜಮ್ಮು ಕಾಶ್ಮೀರ ಕ್ರಿಕೆಟ್ ತಂಡವು ಹುಬ್ಬಳ್ಳಿಯಲ್ಲಿ ರಣಜಿ ಪಂದ್ಯ ಆಡುತ್ತಿರುವುದು ಆರ್ಟಿಕಲ್ 370 ರದ್ದತಿಯ ನಂತರದ ಹೊಸ ವಾತಾವರಣದ ಪ್ರತೀಕವಾಗಿದೆ. ಇದು ಜಮ್ಮು ಕಾಶ್ಮೀರದಲ್ಲಿ ಸಾಮಾನ್ಯ ಜೀವನ ಕ್ರಮೇಣ ಮರುಕಳಿಸುತ್ತಿರುವುದಕ್ಕೂ ಸ್ಪಷ್ಟ ಸಂಕೇತ.ಜಮ್ಮು ಕಾಶ್ಮೀರವು ಭಾರತದ ಪ್ರತಿಯೊಂದು ಕ್ಷೇತ್ರದಲ್ಲೂ ಸಮಗ್ರವಾಗಿ ಭಾಗಿಯಾಗುತ್ತಿರುವುದು… pic.twitter.com/ukfuSchcC7

— Basavaraj S Bommai (@BSBommai) February 24, 2026

ಬಸವರಾಜ್ ಬೊಮ್ಮಾಯಿ ಅಂತವರು ನಮ್ಮ‌ ರಾಜ್ಯದ ಮುಖ್ಯಮಂತ್ರಿ ಆಗಿದ್ರು. 🤦🏽‍♂️ಒಂದು ಬೇಸಿಕ್ ಗೂಗಲ್ ಸರ್ಚ್ ಮಾಡಿದ್ರೆ ಗೊತ್ತಾಗ್ತಿತ್ತು ಜಮ್ಮು & ಕಾಶ್ಮೀರ ಕ್ರಿಕೆಟ್ ತಂಡ 1959 - 60 ರಿಂದ ರಣಜಿ ಆಡ್ತಿದೆ ಅಂತ.ಒಟ್ನಲ್ಲಿ ಎಲ್ಲವನ್ನೂ ಮೋದೀಜಿ ಮಾಡಿದ್ದು ಅನ್ನೋದೊಂದೇ ಮಂತ್ರ ಇವುಗಳದ್ದು. pic.twitter.com/ldQukvbHQN

— Hariprasad.B.K. (@HariprasadBK2) February 25, 2026

Tags

Ranji TrophyBasavaraj BommaiJammu Kashmir
share
Reshma
Reshma
Next Story
X