Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಬೇಲೂರು | ಕಾಂಗ್ರೆಸ್ ಕಾರ್ಯಕರ್ತರ...

ಬೇಲೂರು | ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಜಟಾಪಟಿ: ಕುರ್ಚಿಗಳಲ್ಲಿ ಬಡಿದಾಟ !

ವಾರ್ತಾಭಾರತಿವಾರ್ತಾಭಾರತಿ9 Dec 2023 3:48 PM IST
share
ಬೇಲೂರು | ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಜಟಾಪಟಿ: ಕುರ್ಚಿಗಳಲ್ಲಿ ಬಡಿದಾಟ !

ಬೇಲೂರು, ಡಿ.9: ಮಾಜಿ ಸಚಿವ ಬಿ.ಶಿವರಾಂ ಮತ್ತು ಕಾಂಗ್ರೆಸ್ ಮುಖಂಡ ಜಿತ್ತೇನಹಳ್ಳಿ ರಾಮಚಂದ್ರ ನೇತೃತ್ವದಲ್ಲಿಂದು ಆಯೋಜಿಸಿದ್ದ ಪಕ್ಷದ ಕಾರ್ಯಕರ್ತರ ಸಭೆಯಲ್ಲಿ ಎರಡು ಗುಂಪುಗಳ ನಡುವೆ ಮಾತಿನ ಚಕಮಕಿ, ಪರಸ್ಪರ ಕುರ್ಚಿಯನ್ನು ಎತ್ತಿಕೊಂಡು ಬಡಿದಾಡಿದ ಘಟನೆ ನಡೆದಿದೆ.

ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಬೇಲೂರು ಹೊರ ವಲಯದ ಭಾರತ್ ಕನ್ವೆನ್ಷನ್ ಹಾಲ್ ಸಭಾಂಗಣದಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಸಭೆ ಕರೆಯಲಾಗಿತ್ತು. ಸಭೆಯಲ್ಲಿ ಪ್ರತಿ ಮುಖಂಡರು ತಮ್ಮ ತಮ್ಮ ಅಭಿಪ್ರಾಯವನ್ನು ವೇದಿಕೆ ಮೇಲೆ ವ್ಯಕ್ತಪಡಿಸಲು ಮುಕ್ತ ಅವಕಾಶ ಕಲ್ಪಿಸಲಾಗಿತ್ತು. ಈ ಸಂದರ್ಭದಲ್ಲಿ ತಾಪಂ ಮಾಜಿ ಸದಸ್ಯ ನೆರ್ಲಿಗೆ ಸೋಮಣ್ಣ ಮಾತನಾಡಿ, ಕಳೆದ ವಿಧಾನಸಭೆ ಚುನಾವಣೆಯಲ್ಲಿ ಬಿ.ಶಿವರಾಂ ಅಲ್ಪ ಅಂತರದಿಂದ ಪರಾಭವಗೊಳ್ಳಲು ಕಾರ್ಯಕರ್ತರು ಕಾರಣ ಎಂದರು. ಈ ಹೇಳಿಕೆಗೆ ಕಾಂಗ್ರೆಸ್ ಮುಖಂಡರಾದ ಧನ್ ಪಾಲ್, ಯಮಸಂದಿ ಪಾಪಣ್ಣ, ಮಲ್ಲೇಶ ಇನ್ನಿತರರು ತಮ್ಮ ಆಕ್ರೋಶ ವ್ಯಕ್ತಪಡಿಸಿದಲ್ಲದೆ ಮಾತಿನ ಸಮರಕ್ಕಿಳಿದರು.

ಈ ವೇಳೆ ಎಂ.ಆರ್.ವೆಂಕಟೇಶ, ಜಮಾಲ್ ಇನ್ನಿತರರು ಗೊಂದಲ ನಿವಾರಿಸಲು ಪ್ರಯತ್ನಿಸಿದರೂ ವಿಫಲವಾಯಿತು. ಸಭೆಯಲ್ಲಿ ಗೊಂದಲ ಹೆಚ್ಚಾಯಿತು. ಕೆಲ ಕಾಂಗ್ರೆಸ್ ಮುಖಂಡರು ಮತ್ತು ಕಾರ್ಯಕರ್ತರು ಮಾತಿನ ಜಟಾಪಟಿಯ ಮಧ್ಯೆ ಕೆಲವರು ಕುರ್ಚಿಯನ್ನು ಮೇಲೆತ್ತಿ ಬಡಿದಾಡಿಕೊಂಡ ಘಟನೆ ನಡೆಯಿತು.

ಕೆಲ ಕಿಡಿಗೇಡಿಗಳಿಂದ ಉದ್ದೇಶಪೂರ್ವಕವಾಗಿ ಗೊಂದಲ ಸೃಷ್ಟಿ

ಈ ಬಗ್ಗೆ ಪುರಸಭಾ ಮಾಜಿ ಅಧ್ಯಕ್ಷ ಎಂ.ಆರ್.ವೆಂಕಟೇಶ ಮಾತನಾಡಿ, ಇಂದಿನ ಸಭೆ ಹಾಸನ ಲೋಕಸಭಾ ಚುನಾವಣೆಗೆ ಯಾರು ಅಭ್ಯರ್ಥಿಯಾಗಬೇಕೆಂಬ ನಿಟ್ಟಿನಲ್ಲಿ ಕಾರ್ಯಕರ್ತರ ಅಭಿಪ್ರಾಯ ಪಡೆಯಲು ಕರೆದ ಸಭೆಯಲ್ಲಿ ಕೆಲ ಕಿಡಿಗೇಡಿಗಳು ಉದ್ದೇಶಪೂರ್ವಕವಾಗಿ ಗೊಂದಲ ಸೃಷ್ಟಿಸಿದ್ದಾರೆ. ಕಾರಣವಾಗಿದ್ದಾರೆ.ಅವರಿಗೆ ನಾವುಗಳು ತಕ್ಕ ಪಾಠ ಕಲಿಸಬೇಕು. ಮುಂದಿನ ಲೋಕಸಭಾ ಚುನಾವಣೆಯಲ್ಲಿ ಬಿ.ಶಿವರಾಂ ಅಭ್ಯರ್ಥಿಯಾಗಲಿ ಎಂದ ಮಾತಿಗೆ ಪುರಸಭಾ ಮಾಜಿ ಸದಸ್ಯರಾದ ಜಿ.ಶಾಂತಕುಮಾರ್, ಸತೀಶ್, ನಾಗರಾಜು, ಶ್ರೀನಿವಾಸ್ ಒಮ್ಮತ ವ್ಯಕ್ತಪಡಿಸಿದರು. ಈ ವೇಳೆ ಯಮಸಂದಿ ಪಾಪಣ್ಣ ಮತ್ತು ವೈ.ಟಿ.ದಾಮೋದರ, ಕಾರ್ಯಕರ್ತರನ್ನು ಮರೆಯಬೇಡಿ ಎಂದು ಕಿವಿ ಮಾತು ಹೇಳಿದರು.

ಕಾಂಗ್ರೆಸ್ ಮುಖಂಡ ಜಿತ್ತೇನಹಳ್ಳಿ ರಾಮಚಂದ್ರ ಮಾತನಾಡಿ, ಜಿಲ್ಲೆಯಲ್ಲಿ ಬಿ.ಶಿವರಾಂ ಅವರ ಅವಿರತ ಶ್ರಮ ಹಾಗೂ ಸಂಘಟನೆ ಕಾಂಗ್ರೆಸ್ ಪಕ್ಷಕ್ಕೆ ಬೇಕಿದೆ. ನಾನು ಕೂಡ ಆಕಾಂಕ್ಷಿಯಾಗಿರುವೆ. ಅದರೆ ಮುಂದಿನ ಲೋಕಸಭಾ ಚುನಾವಣೆಯಲ್ಲಿ ಬಿ.ಶಿವರಾಂ ಸ್ಪರ್ಧೆ ನಡೆಸಿದರೆ ಖಚಿತವಾಗಿ ಗೆಲ್ಲುತ್ತಾರೆ ಎಂಬ ಆಶಾಭಾವನೆ ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ ಮಾಜಿ ಸಚಿವ ಬಿ.ಶಿವರಾಂ, ಪುರಸಭೆ ಅಧ್ಯಕ್ಷೆ ತೀರ್ಥಕುಮಾರಿ, ಕೆ.ಪಿ.ಶೈಲೇಶ್, ಪುನೀತ್ ಗೌಡ, ಚಿಕ್ಕಬ್ಯಾಡಿಗೆರೆ ಮಂಜುನಾಥ, ಎಂ.ಜಿ.ವೆಂಕಟೇಶ್ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

.....................................

ವಿನಾ ಕಾರಣ ಗೊಂದಲ ಸೃಷ್ಟಿ: ಬಿ.ಶಿವರಾಂ

ಸಭೆಯ ಬಳಿಕ ಮಾತನಾಡಿದ ಮಾಜಿ ಸಚಿವ ಬಿ.ಶಿವರಾಂ, ಕಳೆದ ಚುನಾವಣೆ ಸಂದರ್ಭ ಆಗಿರುವ ಲೋಪ ದೋಷದ ಬಗ್ಗೆ, ಮುಂದಿನ ಚುನಾವಣೆಯ ಗಮನದಲ್ಲಿಟ್ಟುಕೊಂಡು ಕರೆದ ಸಭೆಯಲ್ಲಿ ವಿನಾಕಾರಣ ಗೊಂದಲ ಸೃಷ್ಟಿಯಾಗಿದ್ದು, ದುರದೃಷ್ಟಕರ. ನಾನು ಕಾರ್ಯಕರ್ತರು ಮತ್ತು ಮುಖಂಡರನ್ನು ಏಕಾಭಿಪ್ರಾಯದಲ್ಲಿ ನೋಡುವೆ, ಈಗಾಗಲೇ ಬಿಜೆಪಿ- ಜೆಡಿಎಸ್ ಮೈತ್ರಿಯಾದ ಬಳಿಕ ರಾಜ್ಯದ 28 ಸ್ಥಾನ ನಾವೇ ಗೆಲ್ಲುತ್ತವೆ ಎನ್ನುವ ಹೊತ್ತಿನಲ್ಲಿ ಕಾಂಗ್ರೆಸ್ ಗುಂಪುಗಾರಿಕೆ ಎಷ್ಟರ ಮಟ್ಟಿಗೆ ಸರಿ? ಸದ್ಯ ಜಿತ್ತೇನಹಳ್ಳಿ ರಾಮಚಂದ್ರ ಕಾರ್ಯಕರ್ತರ ಅಭಿಪ್ರಾಯಕ್ಕೆ ಬಂದಿದ್ದಾರೆ. ನಾನೇನು ಅಭ್ಯರ್ಥಿಯಾಗಲು ಬಂದಿಲ್ಲ, ನಮಗೆ ಹಾಸನದಲ್ಲಿ ಎಂಪಿ ಸ್ಥಾನ ಗೆಲ್ಲುವುದಷ್ಟೇ ಮುಖ್ಯ ಎಂದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X