Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಬೆಂಗಳೂರು: ಕೃಷಿ ಮೇಳದಲ್ಲಿ ಜನರ ಗಮನ...

ಬೆಂಗಳೂರು: ಕೃಷಿ ಮೇಳದಲ್ಲಿ ಜನರ ಗಮನ ಸೆಳೆದ ಬೆಲ್ಲದ ಪರಿಷೆ, ಮಧುವನ

ವಾರ್ತಾಭಾರತಿವಾರ್ತಾಭಾರತಿ19 Nov 2023 12:02 AM IST
share
ಬೆಂಗಳೂರು: ಕೃಷಿ ಮೇಳದಲ್ಲಿ ಜನರ ಗಮನ ಸೆಳೆದ ಬೆಲ್ಲದ ಪರಿಷೆ, ಮಧುವನ

ಬೆಂಗಳೂರು: ನಗರದ ಜಿಕೆವಿಕೆ ಆವರಣದಲ್ಲಿ ನಡೆಯುತ್ತಿರುವ ಕೃಷಿಮೇಳದಲ್ಲಿ ಪ್ರದರ್ಶಿಸಲಾದ ಬೆಲ್ಲದ ಪರಿಷೆಯು ನೋಡುಗರನ್ನು ಸೆಳೆಯುತ್ತಿದೆ. ಸಕ್ಕರೆಯನ್ನು ಹೆಚ್ಚಾಗಿ ಬಳಕೆ ಮಾಡುತ್ತಿರುವ ಕಾಲಘಟ್ಟದಲ್ಲಿ ಜನರಿಗೆ ಬೆಲ್ಲದ ಉಪಯೋಗವನ್ನು ತಿಳಿಸುವ ಸಲುವಾಗಿ ಮಂಡ್ಯ ಕೃಷಿ ಇಲಾಖೆಯು ಬೆಲ್ಲದ ಪರಿಷೆಯನ್ನು ಒಂದು ಮಳೆಗೆಯನ್ನು ತೆರೆದಿದೆ.

ಬೆಲ್ಲದಲ್ಲಿ ಮಳಿಗೆಯಲ್ಲೇ ಆಲೆಮನೆಯನ್ನು ಸಿದ್ಧಪಡಿಸಿ ಪ್ರೇಕ್ಷಕರಿಗೆ ವೀಕ್ಷಿಸಲು ಅನುವು ಮಾಡಿಕೊಡಲಾಗಿತ್ತು. ಕೇವಲ ಬೆಲ್ಲವನ್ನು ಉಪಯೋಗಿಸುವ ನಗರದ ಮಂದಿ ಬೆಲ್ಲ ತಯಾರಿಸುವ ಆಲೆಮನೆ ನೋಡಿ ಕಣ್ತುಂಬಿಕೊಂಡರು. ಅಲ್ಲದೆ ವಿವಿಧ ಬಗೆಯ ಬೆಲ್ಲಗಳನ್ನು ನಾನಾ ಆಕಾರದಲ್ಲಿ ತಯಾರಿಸಿ ಪ್ರದರ್ಶನಕ್ಕೆ ಇಡಲಾಗಿತ್ತು. 1 ಕೆ.ಜಿ.ಯಿಂದ ಹಿಡಿದು ಸುಮಾರು 10 ಕೆ.ಜಿ.ಯ ವರೆಗೆ ಬೆಲ್ಲದ ಉತ್ಪನ್ನಗಳನ್ನು ತಯಾರು ಮಾಡಲಾಗಿತ್ತು.

‘ಬೆಲ್ಲ ಬಳಸಿ, ಆರೋಗ್ಯ ಉಳಿಸಿ’ ಎಂಬ ವಾಕ್ಯದಡಿಯನ್ನು ಇಲಾಖೆಯ ಸಿಬ್ಬಂದಿಗಳು ಮಳಿಗೆ ಬಂದ ಜನರಿಗೆ ಬೆಲ್ಲವನ್ನು ಬಳಸುವುದರಿಂದ ಆಗುವ ಪ್ರಯೋಜನೆಗಳನ್ನು ತಿಳಿಸುತ್ತಿದ್ದರು. ಸಂಸ್ಕರಿಸಿದ ಸಕ್ಕರೆಗಿಂತ ಬೆಲ್ಲವು ಹೆಚ್ಚು ಆರೋಗ್ಯಕರವಾಗಿದೆ. ಬೆಲ್ಲವು ವಿವಿಧ ಖನಿಜಗಳ ವಿಶಿಷ್ಟ ಮಿಶ್ರಣವಾಗಿದೆ ಎಂದು ಸರ್ವಾಜನಿಕರಿಗೆ ಸಿಬ್ಬಂದಿಗಳು ಮಾಹಿತಿ ನೀಡಿದರು.

ಕೃಷಿಕರನ್ನು ಸೆಳೆದ ಮಧುವನ: ಕೃಷಿಮೇಳದ ಹಿನ್ನೆಲೆಯಲ್ಲಿ ಜಿಕೆವಿಕೆ ಆವರಣದಲ್ಲಿ ಹೂವು, ತರಕಾರಿ ಸೇರಿದಂತೆ ವಿವಿಧ ತಳಿಗಳ ಗಿಡಗಳನ್ನು ಬೆಳೆಸಲಾಗಿತ್ತು. ಇದರ ನಡುವೆ ಜೇನುಕೃಷಿ ವಿಭಾಗವು ಸುಮಾರು ಇಪ್ಪತ್ತಕ್ಕೂ ಅಧಿಕ ಜೇನುಪಟ್ಟಿಗೆಗಳನ್ನಿಟ್ಟು ಮಧುವನ್ನು ನಿರ್ಮಾಣ ಮಾಡಿತ್ತು. ಮಧುವನದಲ್ಲಿರುವ ಜೇನುಹುಳುಗಳು ಸೂರ್ಯಕಾಂತಿ ಸೇರಿದಂತೆ ವಿವಿಧ ಗಿಡಗಳ ಹೂವುಗಳಿಂದ ಮಕರಂಧವನ್ನು ಹೀರಿ ತಮ್ಮ ಜೇನುಪಟ್ಟಿಗೆಗಳಿಗೆ ಬರುತ್ತಿದ್ದವು. ಇದನ್ನು ನೋಡಲು ನೆರೆದಿದ್ದ ಸಾರ್ವಜನಿಕರಿಗೆ ಜೇನುಕೃಷಿ ವಿಭಾಗದ ಸಿಬ್ಬಂದಿಗಳು ಮಾಹಿತಿಯನ್ನು ನೀಡುತ್ತಿದ್ದರು.

ಇದಲ್ಲದೆ ಮಧುವನದಲ್ಲಿ ಜೇನು ಪೆಟ್ಟಿಗೆ, ಚೌಕಟ್ಟುಗಳು, ಬಾಚಾಣಿಗಳು, ಧೂಮಪಾನಿ, ಮೇಣ ಸೇರಿದಂತೆ ಜೇನುಕೃಷಿ ಸಲಕರಣೆಗಳನ್ನು ಪ್ರದರ್ಶನಕ್ಕೆ ಮತ್ತು ಮಾರಾಟಕ್ಕೆ ಇಡಲಾಗಿತ್ತು. ಕೃಷಿ ವಿಶ್ವವಿದ್ಯಾಲಯದಲ್ಲಿಯೇ ಜೇನುಕೃಷಿಯಿಂದ ಉತ್ಪಾದಿಸಿದ ತುಪ್ಪವನ್ನು ಮಧುವನದಲ್ಲಿ ಸರ್ವಾಜನಿಕರಿಗೆ ಮಾರಾಟ ಮಾಡಲಾಗುತ್ತಿತ್ತು.

ಔಷಧೀಯ ಸಸ್ಯೋದ್ಯಾನ: ಕೃಷಿಮೇಳದ ಅಂಗವಾಗಿ ಅರ್ಧ ಎಕರೆ ಜಾಗದಲ್ಲಿ ವಿವಿಯು ಔಷಧೀಯ ಸಸ್ಯೋದ್ಯಾನವನ್ನು ನಿರ್ಮಾಣ ಮಾಡಿತ್ತು. ಅಶ್ವಗಂಧ, ತುಳಿಸಿ, ಅಲೋವೆರಾ ಮುಂತಾದ ಸಸ್ಯಗಳನ್ನು ಬೆಳೆಸಲಾಗಿತ್ತು. ಸಾರ್ವಜನಿಕರಿಗೆ ಸಸ್ಯಗಳ ಹೆಸರು, ಅದರ ಉಪಯೋಗವನ್ನು ತಿಳಿಸಲು ಫಲಕಗಳನ್ನು ಗಿಡಗಳ ಬಳಿ ಅವವಡಿಸಲಾಗಿತ್ತು.

ಇನ್ನು ಎರಡು ಎಕರೆ ಪ್ರದೇಶದಲ್ಲಿ ವಿವಿಧ ಮೇವಿನ ತಳಿಗಳನ್ನು ಬೆಳೆಯಲಾಗಿದ್ದು, ರೈತರಿಗೆ ಮಾಹಿತಿಯನ್ನು ನೀಡಲಾಗುತ್ತಿದೆ. ಕೃಷಿ ವಿವಿಯು ಕೃಷಿ ಪಾಲಿಮಾರ್ ಶೆಡ್‍ನಲ್ಲಿ ಆರ್ನಮೆಂಟಲ್ ಸೂರ್ಯಕಾಂತಿ ಗಿಡಗಳನ್ನು ಬೆಳೆಸಲಾಗಿತ್ತು. ಗುಲಾಬಿಯ ಬದಲಿಗೆ ಈ ಹೂಗಳಿಂದಲೇ ಮೇಳದ ಮುಖ್ಯ ವೇದಿಕೆಯನ್ನು ಅಲಂಕಾರಗೊಳಿಸಿರುವುದು ವಿಶೇಷವಾಗಿತ್ತು.




















share
ವಾರ್ತಾಭಾರತಿ
ವಾರ್ತಾಭಾರತಿ
Next Story
X