Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಗಾಝಾ ಮೇಲೆ ಇಸ್ರೇಲ್ ದಾಳಿ ಖಂಡಿಸಿ...

ಗಾಝಾ ಮೇಲೆ ಇಸ್ರೇಲ್ ದಾಳಿ ಖಂಡಿಸಿ ಬೆಂಗಳೂರಿನಲ್ಲಿ ಮಾನವ ಸರಪಳಿ

ದಾಳಿ ನಿಲ್ಲಿಸಲು ಇಸ್ರೇಲ್ ಮೇಲೆ ಭಾರತ ಒತ್ತಡ ಹೇರಬೇಕು: ಬಹುತ್ವ ಕರ್ನಾಟಕ

ವಾರ್ತಾಭಾರತಿವಾರ್ತಾಭಾರತಿ16 Oct 2023 9:38 PM IST
share
ಗಾಝಾ ಮೇಲೆ ಇಸ್ರೇಲ್ ದಾಳಿ ಖಂಡಿಸಿ ಬೆಂಗಳೂರಿನಲ್ಲಿ ಮಾನವ ಸರಪಳಿ

ಪ್ರತಿಭಟನಾಕಾರರನ್ನು ವಶಕ್ಕೆ ಪಡೆದ ಪೊಲೀಸರು

ಬೆಂಗಳೂರು: ಇಸ್ರೇಲ್ ದೇಶವು ಗಾಝಾ ಮೇಲೆ ನಡೆಸುತ್ತಿರುವ ದಾಳಿಯನ್ನು ಖಂಡಿಸಿ, ಸೋಮವಾರದಂದು ಬಹುತ್ವ ಕರ್ನಾಟಕದ ಸಾವಿರಾರು ಕಾರ್ಯಕರ್ತರು ನಗರದ ಎಂಜಿ ರಸ್ತೆಯಲ್ಲಿ ಬೃಹತ್ ಮಾನವ ಸರಪಳಿಯನ್ನು ನಿರ್ಮಿಸುವ ಮೂಲಕ ಮೌನ ಪ್ರತಿಭಟನೆ ನಡೆಸಿದರು.

ಗಾಝಾ ಮೇಲೆ ದಾಳಿ ನಡೆಸದಂತೆ ಭಾರತ ಸರಕಾರ ಇಸ್ರೇಲ್ ಮೇಲೆ ಒತ್ತಡ ತರಬೇಕು. ಫೆಲೆಸ್ತೀನ್ ಅನ್ನು ಪ್ರತ್ಯೇಕ ದೇಶವಾಗಿ ಗುರುತಿಸಿ ಅಲ್ಲಿನ ಜನರಿಗೆ ಮೂಲಭೂತ ಹಕ್ಕುಗಳು ನೀಡುವುದೇ ಸಮಸ್ಯೆಗೆ ಪರಿಹಾರವಾಗಿದೆ. ಗಾಝಾ ಪ್ರದೇಶದಿಂದ ಬರುತ್ತಿರುವ ಸುದ್ದಿಗಳು ಆತಂಕಕಾರಿಯಾಗಿದ್ದು, 2007ರಿಂದ ಅಕ್ರಮ ದಿಗ್ಬಂಧನವನ್ನು ಎದುರಿಸುತ್ತಿರುವ ಗಾಝಾ ನಿವಾಸಿಗಳು ಈ ವರ್ಷ ಅ.7ರಿಂದ ನಡೆಯುತ್ತಿರುವ ಸಮರದಿಂದ ನರಳಾಡುತಿದ್ದಾರೆಂದು ಕಾರ್ಯಕರ್ತರು ಬೇಸರ ವ್ಯಕ್ತಪಡಿಸಿದರು.

ವಿದೇಶಾಂಗ ಸಚಿವಾಲಯದ ವಕ್ತಾರರು ಇತ್ತೀಚೆಗೆ ಮಾಧ್ಯಮಗೊಂದಿಗೆ ಮಾತನಾಡಿದ್ದ ವೇಳೆ, ‘ಭಾರತವು ಯಾವಾಗಲೂ ಫೆಲೆಸ್ತೀನ್ ಸಾರ್ವಭೌಮ, ಸ್ವತಂತ್ರ ಮತ್ತು ಕಾರ್ಯಸಾಧ್ಯವಾದ ರಾಜ್ಯವನ್ನು ಸ್ಥಾಪಿಸಲು ನೇರ ಮಾತುಕತೆಗಳ ಪುನರಾರಂಭವನ್ನು ಪ್ರತಿಪಾದಿಸುತ್ತದೆ ಹಾಗೂ ಇಸ್ರೇಲ್‌ನೊಂದಿಗೆ ಅಕ್ಕಪಕ್ಕದಲ್ಲಿ, ಶಾಂತಿಯಿಂದ ಸುರಕ್ಷಿತ ಮತ್ತು ಮಾನ್ಯತೆ ಪಡೆದ ಗಡಿಗಳಲ್ಲಿ ವಾಸಿಸುವ ಹಾಗೆ ಪ್ರತಿಪಾದಿಸುತ್ತದೆ’ ಎಂದು ಹೇಳಿಕೆ ನೀಡಿದ್ದಾರೆ. ಈ ಹೇಳಿಕೆ ಸ್ವಾಗತಾರ್ಹವಾಗಿದ್ದು, ಈ ಗುರಿ ತಲುಪುವಂತೆ ವಿಶ್ವಸಂಸ್ಥೆ ಮೇಲೆ ಒತ್ತಡ ಹಾಕಬೇಕು ಎಂದು ಅವರು ಆಗ್ರಹಿಸಿದರು.

ವಿಶ್ವ ಸಂಸ್ಥೆಯ ಪ್ರಕಾರ ಯುದ್ದದಲ್ಲಿ ಕನಿಷ್ಠ 600 ಮಕ್ಕಳು ಸೇರಿದಂತೆ 1,900ಕ್ಕೂ ಹೆಚ್ಚು ಫೆಲೆಸ್ತೀನ್ ನಿವಾಸಿಗಳು ಮೃತಪಟ್ಟಿದ್ದಾರೆ. 7,600ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಇನ್ನು ಇಸ್ರೇಲಿ ದಾಳಿಯ ಪರಿಣಾಮವಾಗಿ 4,23,000ಕ್ಕೂ ಹೆಚ್ಚು ಜನರು ಸ್ಥಳಾಂತರಗೊಂಡಿದ್ದಾರೆ ಎಂದು ಕಾರ್ಯಕರ್ತರು ತಿಳಿಸಿದರು.

ಗಾಝಾ ಮೇಲೆ ನಡೆಯುತ್ತಿರುವ ದಾಳಿಯನ್ನು ಜಗತ್ತಿನ ಎಲ್ಲ ದೇಶಗಳು ಖಂಡಿಸಬೇಕು. ಆದರೆ ಅದರ ಬದಲಿಗೆ ಜಗ್ಗತ್ತಿನಾದ್ಯಂತ ಇಸ್ರೇಲ್‌ಗೆ ನೆರವು ದೊರಕುತ್ತಿದೆ. ಇಸ್ರೇಲ್ ಮಾಡುತ್ತಿರುವ ಅನ್ಯಾಯದ ಬಗ್ಗೆ ಖಂಡನೆಯಾಗುತ್ತಿಲ್ಲ. ಜೊತೆಗೆ, ಫೆಲೆಸ್ತೀನ್ ಬಗ್ಗೆ ಸಾಕಷ್ಟು ಸುಳ್ಳು ಸುದ್ದಿಗಳು ಬೇರೆ ಹಬ್ಬುತ್ತಿವೆ. ಮಾಧ್ಯಮದ ವರದಿಯೊಂದರ ಪ್ರಕಾರ ಬಹಳಷ್ಟು ಸುಳ್ಳು ಸುದ್ದಿ ಭಾರತದಿಂದ ಹೋಗುತ್ತಿದೆ ಎಂದು ಹಲವರು ಆರೋಪಿಸಿದ್ದಾರೆ ಎಂದು ಅವರು ಕಳವಳ ವ್ಯಕ್ತಪಡಿಸಿದರು.

ಭಾರತ ಸರಕಾರ ಗಾಝಾ ಮೇಲೆ ನಡೆಯುತ್ತಿರುವ ದಾಳಿ ನಿಲ್ಲುವಂತೆ ಒತ್ತಡ ತರಬೇಕು. ಅಂತರರಾಷ್ಟ್ರೀಯ ಕ್ರಿಮಿನಲ್ ನ್ಯಾಯಾಲಯ ಸಧ್ಯಕ್ಕೆ ನಡೆಯುತ್ತಿರುವ ಯುದ್ಧದ ಬಗ್ಗೆ ತನಿಖೆ ನಡೆಸಬೇಕು ಹಾಗೂ ವರದಿಯನ್ನು ಬಹಿರಂಗಪಡಿಸಬೇಕು ಎಂದು ಅವರು ಒತ್ತಾಯಿಸಿದರು.

ಈ ವೇಳೆ ಬಹುತ್ವ ಕರ್ನಾಟಕದ ವಿನಯ್ ಶ್ರೀನಿವಾಸ್, ಮಧು ಭೂಷಣ್, ಮಮತಾ ಸಾಗರ್, ಕ್ಲಿಫ್ಟನ್ ರೊಜಾರಿಯೋ, ನಿಶಾ, ನರಸಿಂಹ ಮೂರ್ತಿ, ತೌಸೀಫ್ ಮಸೂದ್, ತನ್ವೀರ್ ಅಹ್ಮದ್, ಸೋಲಿಡಾರಿಟಿ ಯೂತ್ ಮೂಮೆಂಟ್‌ನ ಲಬೀದ್ ಶಾಫಿ, ದಾನಿಶ್ ಸೇರಿದಂತೆ ಹಲವರು ಭಾಗವಹಿಸಿದ್ದರು.

ಮೌನ ಪ್ರತಿಭಟನೆ ನಡೆಸಿದ್ದರೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಸೇರುತ್ತಿದ್ದುದನ್ನು ಗಮನಿಸಿದ ಕಬ್ಬನ್ ಪಾರ್ಕ್‌ ಪೊಲೀಸ್ ಠಾಣೆಯ ಪೊಲೀಸರು ಮುಂಚೂಣಿಯಲ್ಲಿದ್ದ ಕೆಲವು ಪ್ರತಿಭಟನಾಕಾರರನ್ನು ವಶಕ್ಕೆ ಪಡೆದಿದ್ದಾರೆ. ವಶಕ್ಕೆ ಪಡೆಯುವ ವೇಳೆ ಪ್ರತಿಭಟನಾಕಾರರು ಹಾಗೂ ಪೊಲೀಸರೊಂದಿಗೆ ವಾಗ್ವಾದವೂ ನಡೆಯಿತು.









Tags

Israel-Palestine
share
ವಾರ್ತಾಭಾರತಿ
ವಾರ್ತಾಭಾರತಿ
Next Story
X