Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಬೆಂಗಳೂರು: ಮಣಿಪುರ ಹಿಂಸಾಚಾರ ತಡೆಯುವಂತೆ...

ಬೆಂಗಳೂರು: ಮಣಿಪುರ ಹಿಂಸಾಚಾರ ತಡೆಯುವಂತೆ ಒತ್ತಾಯ

► ಫ್ರೀಡಂ ಪಾರ್ಕ್‍ನಲ್ಲಿ ಅಖಿಲ ಕರ್ನಾಟಕ ಕ್ರೈಸ್ತ ಮಾನವ ಹಕ್ಕುಗಳ ಒಕ್ಕೂಟದ ಕಾರ್ಯಕರ್ತರಿಂದ ಧರಣಿ

ವಾರ್ತಾಭಾರತಿವಾರ್ತಾಭಾರತಿ15 July 2023 9:45 PM IST
share
ಬೆಂಗಳೂರು: ಮಣಿಪುರ ಹಿಂಸಾಚಾರ ತಡೆಯುವಂತೆ ಒತ್ತಾಯ

ಬೆಂಗಳೂರು, ಜು. 15: ‘ಮಣಿಪುರದಲ್ಲಿ ಮೇ 3ರಂದು ಎರಡು ಜನಾಂಗೀಯ ಗುಂಪುಗಳ ಸಂಘರ್ಷದಿಂದ ಆರಂಭವಾದ ಗದ್ದಲವು ತೀವ್ರ ಹಿಂಸಾಚಾರ ಸ್ವರೂಪವನ್ನು ಪಡೆದುಕೊಂಡಿದೆ. ಹಾಗಾಗಿ ಕೇಂದ್ರ ಸರಕಾರವು ಹಿಂಸಾಚಾರ ತಡೆಯಬೇಕು’ ಎಂದು ಒತ್ತಾಯಿಸಿ ಅಖಿಲ ಕರ್ನಾಟಕ ಕ್ರೈಸ್ತ ಮಾನವ ಹಕ್ಕುಗಳ ಒಕ್ಕೂಟದ ಕಾರ್ಯಕರ್ತರು ಧರಣಿ ನಡೆಸಿದರು.

ಶನಿವಾರ ಇಲ್ಲಿನ ಫ್ರೀಡಂ ಪಾರ್ಕ್‍ನಲ್ಲಿ ಧರಣಿ ಸತ್ಯಾಗ್ರಹ ನಡೆಸಿದ ಒಕ್ಕೂಟದ ಕಾರ್ಯಕರ್ತರು, ‘ಮಣಿಪುರ ಹಿಂಸಾಚಾರದಿಂದ 200 ಜನರು ಪ್ರಾಣವನ್ನು ಕಳೆದುಕೊಂಡಿದ್ದಾರೆ, 300 ಜನ ಗಾಯಗೊಂಡಿದ್ದಾರೆ, ಸರಿ ಸುಮಾರು 60 ಸಾವಿರ ಜನರು ಸ್ಥಳಾಂತರವಾಗಿದ್ದಾರೆ. ಪರಿಸ್ಥಿತಿ ಚಿಂತಾಜನಕವಾಗಿದ್ದು, ಜನ ಜೀವನ ಸಹಜ ಸ್ಥಿತಿಗೆ ಬರುವಂತೆ ಕ್ರಮಗಳನ್ನು ಕೈಗೊಳ್ಳಬೇಕಿದೆ. ಶಸ್ತ್ರಾಸ್ತ್ರ ಸಜ್ಜಿತ ಅಪರಾಧ ಪ್ರಕರಣಗಳು ಹೆಚ್ಚುತ್ತಿದ್ದು, ಸುಮಾರು 5,053 ಪ್ರಕರಣಗಳು ವರದಿಯಾಗಿವೆ ಎಂದು ಆರೋಪಿಸಿದರು.

ಸಾಂಸ್ಕøತಿಕ ಮತ್ತು ಧಾರ್ಮಿಕ ವೈವಿಧ್ಯತೆಗೆ ಹೆಸರುವಾಸಿ ಆಗಿರುವ ಮಣಿಪುರವು ಇತ್ತೀಚಿನ ಈ ಘಟನೆಗಳಿಂದ ಭೀಕರ ಪರಿಣಾಮವನ್ನು ಎದುರಿಸುತ್ತಿದೆ. ವಿವಿಧ ಧಾರ್ಮಿಕ ಸಮುದಾಯಗಳ ಶಾಂತಿಯುತ ಸಹಬಾಳ್ವೆಗೆ ಈ ಘಟನೆಗಳಿಂದ ಭಂಗ ಉಂಟಾಗಿದೆ. ಉದ್ದೇಶಿತ ಹಿಂಸಾಚಾರ, ಚರ್ಚ್‍ಗಳ ಧ್ವಂಸ ಮತ್ತು ಕ್ರಿಶ್ಚಿಯನ್ನರನ್ನು ಗುರಿಯಾಗಿಟ್ಟುಕೊಂಡು ಒಡ್ಡುವ ಬೆದರಿಕೆಗಳು ಸಮುದಾಯದ ಸದಸ್ಯರಲ್ಲಿ ಅಪಾರ ಭಯ ಮತ್ತು ವೇದನೆಯನ್ನು ಉಂಟುಮಾಡಿದೆ. ಇಂತಹ ಹಿಂಸಾಚಾರಗಳು ವ್ಯಕ್ತಿಗಳ ಮೂಲಭೂತ ಹಕ್ಕುಗಳನ್ನು ಉಲ್ಲಂಘಿಸುವುದು ಮಾತ್ರವಲ್ಲದೆ ನಮ್ಮ ಸಮಾಜದ ರಚನೆಯನ್ನು ನಾಶಪಡಿಸುತ್ತವೆ ಎಂದು ಅವರು ತಿಳಿಸಿದ್ದಾರೆ.

ಈ ಸಂಘರ್ಷವು ಬಹುತೇಕ ಹಿಂದೂಗಳೇ ಇರುವ ಮೈತೇಯಿ ಸಮುದಾಯ ಹಾಗೂ ಬಹುತೇಕ ಕ್ರೈಸ್ತರೇ ಇರುವ ಕುಕಿ ಬುಡಕಟ್ಟು ಸಮುದಾಯದ ನಡುವೆ ನಡೆಯುತ್ತಿದೆ. ಕೋಪೋದ್ರಿಕ್ತ ಗುಂಪುಗಳು ಶಸ್ತ್ರಾಸ್ತ್ರ ಸಜ್ಜಿತವಾಗಿ ಮನೆಗಳನ್ನು, ಚರ್ಚುಗಳನ್ನು, ಹಾಗೂ ಕಚೇರಿಗಳನ್ನು ಧ್ವಂಸ ಮಾಡಿ, ಬೆಂಕಿ ಹಚ್ಚಿರುವ ಅನೇಕ ಪ್ರಕರಣಗಳು ವರದಿಯಾಗಿವೆ. ಮಿಲಿಟರಿ ಹಾಗೂ ಸರಕಾರಗಳು ಅಲ್ಲಿ ಮಾನವ ಹಕ್ಕುಗಳ ಉಲ್ಲಂಘನೆಯನ್ನು ನಡೆಸಿರುವ ಇತಿಹಾಸ ಇದೆ ಎಂಬುದನ್ನು ನಾವೂ ಗಮನದಲ್ಲಿಟ್ಟುಕೊಳ್ಳಬೇಕು ಎಂದು ತಿಳಿಸಿದ್ದಾರೆ.

ಸಂತ್ರಸ್ತ ಕುಟುಂಬಗಳಿಗೆ 10 ಲಕ್ಷ ರೂಪಾಯಿಗಳ ನೆರವು ಹಾಗೂ ಕುಟುಂಬಸ್ಥರಿಗೆ ಉದ್ಯೋಗವನ್ನು ನೀಡುವ ಕ್ರಮವನ್ನು ಸ್ವಾಗತಿಸುತ್ತೇವೆ. ಇದಕ್ಕಿಂತಲೂ ಹೆಚ್ಚಿನ ಪರಿಹಾರವನ್ನು ಅವರಿಗೆ ನೀಡುವ ಅಗತ್ಯವಿದೆ. ಸಂತ್ರಸ್ಥ ಸಮುದಾಯದ ಭರವಸೆ ಮತ್ತು ವಿಶ್ವಾಸವನ್ನು ಮರು ಗಳಿಸುವುದು ಅತ್ಯಂತ ಪ್ರಮುಖ ವಿಚಾರವಾಗಿದೆ. ಶಸ್ತ್ರಸಜ್ಜಿತರನ್ನು ನಿಶಸ್ತ್ರಗೊಳಿಸುವುದು ಹಾಗೂ ಸಮಾಜ ವಿರೋಧಿ ಅಂಶಗಳನ್ನು ಮಟ್ಟ ಹಾಕಿ, ಅವರು ಕಾನೂನನ್ನು ಕೈಗೆತ್ತಿಕೊಳ್ಳವುದನ್ನು ತಡೆಯುವುದು ತುರ್ತಾಗಿದೆ. ನಾಶವಾದ ಮನೆಗಳು, ಚರ್ಚುಗಳು, ಹಾಗೂ ಸಾರ್ವಜನಿಕ ಆಸ್ತಿಗಳನ್ನು ಮರುಸ್ಥಾಪಿಸಿ, ರಾಜ್ಯವು ಸಹಜ ಸ್ಥಿತಿಗೆ ಮರಳುವಂತೆ ಮಾಡುವುದು ಅನಿವಾರ್ಯವಾಗಿದೆ ಎಂದು ಧರಣಿನಿತರು ಒತ್ತಾಯಿಸಿದ್ದಾರೆ.

ಪ್ರತಿಭಟನೆಯಲ್ಲಿ ಅಖಿಲ ಕರ್ನಾಟಕ ಕ್ರೈಸ್ತ ಮಾನವ ಹಕ್ಕುಗಳ ಒಕ್ಕೂಟ ವೇದಿಕೆಯ ಅಧ್ಯಕ್ಷರೂ ಆಗಿರುವ ಆಚ್ ಬಿಷಪ್ ಡಾ.ಪೀಟರ್ ಮಚಾದೊ, ಮಾಜಿ ಸಚಿವೆ ಮಾರ್ಗರೇಟ್ ಆಳ್ವಾ, ಕಾಂತರಾಜ್, ಪ್ರೊ. ಜಾಫೆಟ್, ಆಂಟನಿ ವಿಕ್ರಮ್, ಶಶಿಂತಾ, ಫಾ.ಸಿಫ್ರಾನ್ಸಿಸ್, ಫಾ.ಜಯನಾಥನ್ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.




share
ವಾರ್ತಾಭಾರತಿ
ವಾರ್ತಾಭಾರತಿ
Next Story
X