Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ನ.4 ರಿಂದ ಮೂರು ದಿನಗಳ ಕಾಲ ‘ಬೆಂಗಳೂರು...

ನ.4 ರಿಂದ ಮೂರು ದಿನಗಳ ಕಾಲ ‘ಬೆಂಗಳೂರು ಕೌಶಲ್ಯ ಶೃಂಗಸಭೆ 2025’ ಆಯೋಜನೆ

ವಾರ್ತಾಭಾರತಿವಾರ್ತಾಭಾರತಿ31 Oct 2025 8:49 PM IST
share
ನ.4 ರಿಂದ ಮೂರು ದಿನಗಳ ಕಾಲ ‘ಬೆಂಗಳೂರು ಕೌಶಲ್ಯ ಶೃಂಗಸಭೆ 2025’ ಆಯೋಜನೆ

ಬೆಂಗಳೂರು : ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮವು ಕರ್ನಾಟಕ ಕೌಶಲ್ಯ ಅಭಿವೃದ್ಧಿ ಪ್ರಾಧಿಕಾರ ಹಾಗೂ ಕರ್ನಾಟಕ ಡಿಜಿಟಲ್ ಎಕಾನಮಿ ಮಿಷನ್ ಸಹಭಾಗಿತ್ವದೊಂದಿಗೆ ನ.4 ರಿಂದ ನ.6ರವರೆಗೆ ಇಲ್ಲಿನ ಖಾಸಗಿ ಹೋಟೆಲ್‍ನಲ್ಲಿ ಮೊದಲ ಬಾರಿಗೆ ‘ಬೆಂಗಳೂರು ಕೌಶಲ್ಯ ಶೃಂಗಸಭೆ 2025’ಯನ್ನು ಆಯೋಜಿಸುತ್ತಿದೆ.

ನ.4ರಂದು ಶೃಂಗಸಭೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಉದ್ಘಾಟಿಸಲಿದ್ದು, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ವೈದ್ಯಕೀಯ ಶಿಕ್ಷಣ ಮತ್ತು ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ಸಚಿವ ಡಾ.ಶರಣಪ್ರಕಾಶ್ ಆರ್.ಪಾಟೀಲ್, ಡಾ. ಎಂ.ಬಿ. ಪಾಟೀಲ್, ಪ್ರಿಯಾಂಕ್ ಖರ್ಗೆ, ಡಾ. ಎಂ.ಸಿ. ಸುಧಾಕರ್ ಸೇರಿದಂತೆ ಮತ್ತಿತರರು ಉಪಸ್ಥಿತರಿರಲಿದ್ದಾರೆ.

ಈ ಶೃಂಗಸಭೆಯಲ್ಲಿ ವಿಶೇಷ ಆಹ್ವಾನಿತರಾಗಿ ಮಾರಿಷಸ್ ಗಣರಾಜ್ಯದ ಕಾರ್ಮಿಕ ಮತ್ತು ಕೈಗಾರಿಕಾ ಸಂಬಂಧಗಳ ಸಚಿವ ಮುಹಮ್ಮದ್ ರೆಝಾ ಖಾಸ್ಸಂ ಉತೀಮ್, ಜರ್ಮನಿ ರಾಯಭಾರಿ ಡಾ. ಫಿಲಿಪ್ ಅಕೆರ್ಮನ್, ಕೋರ್ಸೆರಾ ಸಂಸ್ಥೆಯ ಭಾರತ ಮತ್ತು ಏಷ್ಯಾ ಪೆಸಿಫಿಕ್ ವಿಭಾಗದ ವ್ಯವಸ್ಥಾಪಕ ನಿರ್ದೇಶಕ ಅಶುತೋಷ್ ಗುಪ್ತಾ ಸೇರಿದಂತೆ ಮತ್ತಿತರ ಅತಿಥಿ ಗಣ್ಯರು ಭಾಗವಹಿಸಲಿದ್ದಾರೆ.

‘ಮಾನವ ಸಂಪನ್ಮೂಲ 2030: ವಿಸ್ತರಣೆ, ವ್ಯವಸ್ಥೆಗಳು, ಸಮನ್ವಯ’ ತತ್ವದಡಿಯಲ್ಲಿ ಶೃಂಗಸಭೆಯನ್ನು ನಡೆಸಲಾಗುತ್ತಿದ್ದು, ಸಭೆಯಲ್ಲಿ 100ಕ್ಕೂ ಹೆಚ್ಚು ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ಭಾಷಣಕಾರರು, 50ಕ್ಕೂ ಹೆಚ್ಚು ಪ್ರದರ್ಶಕರು, ಸಹಭಾಗಿದಾರರು ಸೇರಿ 3,000ಕ್ಕೂ ಹೆಚ್ಚು ಮಂದಿ ಭಾಗವಹಿಸಲಿದ್ದಾರೆ.

ಸಭೆಯನ್ನು ಕರ್ನಾಟಕದ ಕೌಶಲ್ಯ ಮತ್ತು ಮಾನವ ಸಂಪನ್ಮೂಲವನ್ನು ಜಾಗತಿಕ ಉದ್ಯೋಗಾರ್ಹತೆಗೆ ತಯಾರಿಸುವ ಉದ್ದೇಶದಿಂದ ಆಯೋಜಿಸಲಾಗುತ್ತಿದೆ. ಸಭೆಯು ವಿದೇಶಿ ಸಹಭಾಗಿತ್ವಗಳ ವೃದ್ಧಿ, ಭಾಷಾ ತರಬೇತಿ ಮತ್ತು ಪ್ರಮಾಣಪತ್ರ ನೀಡುವ ವ್ಯವಸ್ಥೆಗಳಿಗೆ ಉತ್ತೇಜನ ನೀಡಲಾಗುತ್ತದೆ. ಈ “ಬೆಂಗಳೂರು ಕೌಶಲ್ಯ ಶೃಂಗಸಭೆ”ಯಲ್ಲಿ ಭಾಗವಹಿಸಲು ಸಾರ್ವಜನಿಕರಿಗೆ ಅವಕಾಶ ಕಲ್ಪಸಲಾಗಿದೆ.

ನೋಂದಣಿ ಹಾಗೂ ಹೆಚ್ಚಿನ ಮಾಹಿತಿಗಾಗಿ https://bengaluruskillsummit.com/ ಗೆ ಸಂಪರ್ಕಿಸಬಹುದಾಗಿದೆ ಎಂದು ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮವು ಪ್ರಕಟನೆಯಲ್ಲಿ ತಿಳಿಸಿದೆ.

ಬೆಂಗಳೂರು ಕೌಶಲ್ಯ ಶೃಂಗಸಭೆ ಭಾರತವನ್ನು ಮುಂದಿನ ಮಾನವ ಸಂಪನ್ಮೂಲ ಅಭಿವೃದ್ಧಿಯ ಕಡೆಗೆ ಮುನ್ನಡೆಸುವಲ್ಲಿ ಕರ್ನಾಟಕದ ದೃಢಸಂಕಲ್ಪವನ್ನು ಪ್ರತಿಬಿಂಬಿಸುತ್ತದೆ. ನಮ್ಮ ಪ್ರಾಥಮಿಕ ಗುರಿಯು ಸಮಾವೇಶ, ಕೈಗಾರಿಕಾ ಅವಶ್ಯಕತೆಗಳಿಗೆ ಹೊಂದಿಕೊಂಡು, ಜಾಗತಿಕ ಮಾನದಂಡಗಳಿಗೆ ತಕ್ಕಂತೆ ಇರುವ ಕೌಶಲ್ಯಾಭಿವೃದ್ಧಿ ಚೌಕಟ್ಟನ್ನು ನಿರ್ಮಿಸುವುದಾಗಿದೆ. ಇದರಿಂದ ಯುವಜನರು ಕೌಶಲ್ಯ ವೃತ್ತಿಪರರು, ಆವಿಷ್ಕಾರಕರು ಅಥವಾ ಉದ್ಯಮಿಗಳಾಗಿ ಭವಿಷ್ಯದ ಆರ್ಥಿಕತೆಯನ್ನು ರೂಪಿಸಲು ಶಕ್ತಿಶಾಲಿಗಳಾಗುತ್ತಾರೆ.

-ಡಾ. ಶರಣಪ್ರಕಾಶ್ ಪಾಟೀಲ್, ಕೌಶಲ್ಯಾಭಿವೃದ್ಧಿ ಸಚಿವ

ಬೆಂಗಳೂರು ಕೌಶಲ್ಯ ಶೃಂಗಸಭೆಯ ಉದ್ದೇಶ ತಂತ್ರಜ್ಞಾನ ಮತ್ತು ಮಾನವ ಸಂಪನ್ಮೂಲ ಅಭಿವೃದ್ಧಿಯ ನವೀನ ಆಲೋಚನೆಗಳನ್ನು ಒಂದೇ ವೇದಿಕೆಗೆ ಒಗ್ಗೂಡಿಸುವುದು. ಇದರ ಮೂಲಕ ಕೌಶಲ್ಯಾಭಿವೃದ್ಧಿಯು ಯುವಜನತೆಗೆ ನಿಜವಾದ ಉದ್ಯೋಗಾವಕಾಶವನ್ನು ಅರ್ಥಪೂರ್ಣ ಉದ್ಯೋಗಾವಕಾಶಗಳನ್ನಾಗಿ ಹೇಗೆ ಪರಿವರ್ತಿಸಬಹುದು ಎಂಬುದನ್ನು ಅನ್ವೇಷಿಸುವುದಾಗಿದೆ.

-ಡಾ. ಗಾಯತ್ರಿ ವಾಸುದೇವನ್, ಲೇಬರ್‍ನೆಟ್ ಸರ್ವಿಸಸ್ ಇಂಡಿಯಾ ಪ್ರೈ. ಲಿ.ನ ಅಧ್ಯಕ್ಷೆ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X