Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಸರಕಾರಿ ಹುದ್ದೆಗಳ ನೇಮಕಾತಿ ಪರೀಕ್ಷೆ...

ಸರಕಾರಿ ಹುದ್ದೆಗಳ ನೇಮಕಾತಿ ಪರೀಕ್ಷೆ ಅಕ್ರಮ ತಡೆಗಟ್ಟಲು ವಿಧೇಯಕ ಮಂಡನೆ

‘10 ವರ್ಷ ಜೈಲು ಶಿಕ್ಷೆ, 10 ಕೋಟಿ ರೂ.ದಂಡ, ಸ್ವತ್ತು ಮುಟ್ಟುಗೋಲು’

ವಾರ್ತಾಭಾರತಿವಾರ್ತಾಭಾರತಿ6 Dec 2023 4:44 PM IST
share
ಸರಕಾರಿ ಹುದ್ದೆಗಳ ನೇಮಕಾತಿ ಪರೀಕ್ಷೆ ಅಕ್ರಮ ತಡೆಗಟ್ಟಲು ವಿಧೇಯಕ ಮಂಡನೆ

ಬೆಳಗಾವಿ: ಸಾರ್ವಜನಿಕ ಪರೀಕ್ಷೆಗಳ ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ಪರೀಕ್ಷೆಗಳಲ್ಲಿ ಅನುಚಿತ ವಿಧಾನ ಬಳಕೆಯನ್ನು ನಿರ್ಬಂಧಿಸಲು ಮುಂದಾಗಿರುವ ರಾಜ್ಯ ಸರಕಾರವು, ಮಹತ್ವದ ಕರ್ನಾಟಕ ಸಾರ್ವಜನಿಕ ಪರೀಕ್ಷೆ(ನೇಮಕಾತಿಯಲ್ಲಿನ ಭ್ರಷ್ಟಾಚಾರ ಮತ್ತು ಅನುಚಿತ ವಿಧಾನಗಳ ಪ್ರತಿಬಂಧಕ ಕ್ರಮಗಳು) ವಿಧೇಯಕ-2023 ಅನ್ನು ಬುಧವಾರ ವಿಧಾನಸಭೆಯಲ್ಲಿ ಮಂಡಿಸಿದೆ.

ಪರೀಕ್ಷಾ ಅಕ್ರಮ ನಡೆಸುವವರಿಗೆ 10 ವರ್ಷಗಳ ವರೆಗೆ ಜೈಲು ಶಿಕ್ಷೆ, 10 ಕೋಟಿ ರೂ.ವರೆಗೆ ದಂಡ, ಸ್ವತ್ತು ಮುಟ್ಟುಗೋಲು ಹಾಕಿಕೊಳ್ಳಲು ಹಾಗೂ ಅಂತಹ ಅಪರಾಧಗಳ ವಿಚಾರಣೆಗಾಗಿ ನ್ಯಾಯಾಲಯಗಳನ್ನು ಸ್ಥಾಪಿಸಲು ಅವಕಾಶ ಕಲ್ಪಿಸುವ ವಿಧೇಯಕ ಇದಾಗಿದೆ.

ಪರೀಕ್ಷಾ ಅಕ್ರಮದಲ್ಲಿ ಭಾಗಿಯಾಗುವ ಅಭ್ಯರ್ಥಿಗೆ 5 ವರ್ಷಗಳ ಕಠಿಣ ಶಿಕ್ಷೆ ಮತ್ತು 10 ಲಕ್ಷ ರೂ.ವರೆಗೆ ದಂಡ ವಿಧಿಸುವುದು ಮತ್ತು ಒಳಸಂಚು ನಡೆಸುವವರಿಗೆ 8 ರಿಂದ 12 ವರ್ಷಗಳ ಕಠಿಣ ಶಿಕ್ಷೆ ಮತ್ತು 15 ಲಕ್ಷ ರೂ.ಗಳಿಂದ 10 ಕೋಟಿ ರೂ.ಗಳವರೆಗೆ ದಂಡ ವಿಧಿಸಲು ಈ ವಿಧೇಯಕದಲ್ಲಿ ಅವಕಾಶ ಕಲ್ಪಿಸಲಾಗಿದೆ.

ವಿಧೇಯಕದ ಉದ್ದೇಶ ಮತ್ತು ಕಾರಣಗಳು: ಸಾರ್ವಜನಿಕ ಪರೀಕ್ಷೆಗಳ ಅಕ್ರಮಗಳು ಹಾಗೂ ಭ್ರಷ್ಟಾಚಾರ ಮತ್ತು ಅನುಚಿತ ವಿಧಾನಗಳ ಬಳಕೆಯು ಮಿತಿ ಮೀರುತ್ತಿದೆ. ಈ ವಿಷಯವು ಕೆಲವು ಸೀಮಿತ ವ್ಯಕ್ತಿಗಳಿಗೆ ಹಗೂ ನಿಹಿತವಾದ ಹಿತಾಸಕ್ತಿಗಳಿಗೆ ಅಗಾದ ಪ್ರಮಾಣದ ಹಣಕಾಸಿನ ಅನುಕೂಲಗಳನ್ನು ಒಳಗೊಂಡಿರುವುದು ಮಾತ್ರವಲ್ಲದೆ ರಾಜ್ಯದ ಯುವ ಜನತೆಯ ಪ್ರಗತಿಯ ಅವಕಾಶಗಳನ್ನು ಕುಂಠಿತಗೊಳಿಸುತ್ತಿದೆ.

ಈ ಅಕ್ರಮ ಜಾಲವು ನ್ಯಾಯ ಸಮ್ಮತ ರೀತಿಯಲ್ಲಿ ಸಾರ್ವಜನಿಕ ಪರೀಕ್ಷೆಗಳನ್ನು ನಡೆಸುವುದನ್ನು ವಿಫಲಗೊಳಿಸಲು ಹೊಸ ಹೊಸ ಭ್ರಷ್ಟ ಮತ್ತು ಅನುಚಿತ ವಿಧಾನಗಳನ್ನು ಬಳಸುವ ಮೂಲಕ ಲಕ್ಷಾಂತರ ಪ್ರತಿಭಾನ್ವಿತ ಮತ್ತು ಕಠಿಣ ಪರಿಶ್ರಮ ಪಡುವ ಯುವ ಆಕಾಂಕ್ಷಿಗಳಿಗೆ ಅವಕಾಶಗಳಿಂದ ವಂಚಿತಗೊಳಿಸುತ್ತಿವೆ.

ರಾಜ್ಯ ಸರಕಾರದ ಅಡಿಯಲ್ಲಿನ ಹುದ್ದೆಗಳ ನೇಮಕಾತಿಯ ವಿಷಯದಲ್ಲಿ ಪ್ರಶ್ನೆಪತ್ರಿಕೆಗಳ ಸೋರಿಕೆಯು ಕೇವಲ ಜನಸಾಮಾನ್ಯರ ನಂಬಿಕೆ ದ್ರೋಹವಾಗುವುದು ಮಾತ್ರವಲ್ಲದೆ ರಾಜ್ಯವು ಗಣನೀಯವಾದ ಆಡಳಿತಾತ್ಮಕ ವೆಚ್ಚವನ್ನೂ ಅನುಭವಿಸುತ್ತಿದೆ ಮತ್ತು ಪರೀಕ್ಷೆ ನಡೆಸುವುದು ಪ್ರಶ್ನಾರ್ಹವಾದಾಗ ರಾಜ್ಯದ ಗೌರವಕ್ಕೂ ಚ್ಯುತಿಯಾಗುತ್ತದೆ.

ಸಂವಿಧಾನದ ಸಮಾನ ಅವಕಾಶಗಳ ನಿಯಮಾವಳಿಗೆ ಒಳಪಟ್ಟು, ನ್ಯಾಯ ಸಮ್ಮತ ಹಾಗೂ ನ್ಯಾಯಯುತ ಕಾರ್ಯವಿಧಾನದ ಮೂಲಕ ಹುದ್ದೆಗಳಿಗೆ ಆಯ್ಕೆ ಮಾಡುವುದು ಸಂವಿಧಾನದ ಅಗತ್ಯ. ಪ್ರಶ್ನೆ ಪತ್ರಿಕೆಗಳ ಸೋರಿಕೆ ಅಪರಾಧವನ್ನು ಮತ್ತು ಸ್ವಾಯತ್ತ ಸಂಸ್ಥೆಗಳು, ಪ್ರಾಧಿಕಾರಗಳು, ಮಂಡಳಿಗಳು ಅಥವಾ ನಿಗಮವನ್ನು ಒಳಗೊಂಡಂತೆ ರಾಜ್ಯ ಸರಕಾರದಡಿಯಲ್ಲಿನ ಯಾವುದೇ ಹುದ್ದೆಗೆ ನೇಮಕಾತಿ ಉದ್ದೇಶಕ್ಕಾಗಿ ಸಾರ್ವಜನಿಕ ಪರೀಕ್ಷೆಗಳಲ್ಲಿ ಅನುಚಿತ ವಿಧಾನವನ್ನು ಬಳಸುವುದನ್ನು ಪ್ರತಿಬಂಧಿಸಲು ಮತ್ತು ತಡೆಗಟ್ಟಲು ಪರಿಣಾಮಕಾರಿ ಕ್ರಮಗಳನ್ನು ಕೈಗೊಳ್ಳಲು ಈ ವಿಧೇಯಕವನ್ನು ಪ್ರಸ್ತಾವಿಸಲಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X