Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಡಿ.13ರಂದು ಸರಕಾರದ ವಿರುದ್ಧ ಬಿಜೆಪಿ...

ಡಿ.13ರಂದು ಸರಕಾರದ ವಿರುದ್ಧ ಬಿಜೆಪಿ ಹೋರಾಟ: ಎನ್.ರವಿಕುಮಾರ್

ವಾರ್ತಾಭಾರತಿವಾರ್ತಾಭಾರತಿ11 Dec 2023 9:01 PM IST
share
ಡಿ.13ರಂದು ಸರಕಾರದ ವಿರುದ್ಧ ಬಿಜೆಪಿ ಹೋರಾಟ: ಎನ್.ರವಿಕುಮಾರ್

ಬೆಳಗಾವಿ: ರಾಜ್ಯ ಸರಕಾರವು ಬರ ನಿರ್ವಹಣೆಯಲ್ಲಿ ವಿಫಲ, ಶಾಸಕರಿಗೆ ಅನುದಾನ ಕಡಿತ, ನೀರಾವರಿ ಯೋಜನೆಗಳಿಗೆ ಅನುದಾನ ಬಿಡುಗಡೆ ಮಾಡದಿರುವುದು ಸೇರಿದಂತೆ ಇನ್ನಿತರ ವಿಷಯಗಳನ್ನು ಅಧಿವೇಶನದಲ್ಲಿ ಚರ್ಚೆಗೆ ಕೈಗೆತ್ತಿಕೊಳ್ಳುವಂತೆ ಆಗ್ರಹಿಸಿ ಡಿ.13ರಂದು ಬೆಳಗಾವಿಯಲ್ಲಿ ಬಿಜೆಪಿ ಬೃಹತ್ ಹೋರಾಟ ಹಮ್ಮಿಕೊಂಡಿದೆ ಎಂದು ವಿಧಾನ ಪರಿಷತ್ ಸದಸ್ಯ ಎನ್.ರವಿಕುಮಾರ್ ತಿಳಿಸಿದರು.

ಸೋಮವಾರ ಬೆಳಗಾವಿಯ ಕನ್ನಡ ಸಾಹಿತ್ಯ ಭವನದಲ್ಲಿ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಸುಮಾರು 25 ಸಾವಿರಕ್ಕೂ ಹೆಚ್ಚು ರೈತರು, ಬಡವರು, ಯುವಕರು, ಮಹಿಳೆಯರು, ಕಾರ್ಮಿಕರು, ಮಾಜಿ ಮುಖ್ಯಮಂತ್ರಿಗಳಾದ ಬಿ.ಎಸ್.ಯಡಿಯೂರಪ್ಪ, ಡಿ.ವಿ.ಸದಾನಂದಗೌಡ, ಬಸವರಾಜ ಬೊಮ್ಮಾಯಿ, ಮಾಜಿ ಡಿಸಿಎಂಗಳಾದ ಗೋವಿಂದ ಕಾರಜೋಳ, ಕೆ.ಎಸ್.ಈಶ್ವರಪ್ಪ, ಮಾಜಿ ಸಚಿವ ಶ್ರೀರಾಮುಲು ಸೇರಿದಂತೆ ಇನ್ನಿತರ ಮುಖಂಡರು ಹೋರಾಟದಲ್ಲಿ ಭಾಗವಹಿಸುತ್ತಾರೆ ಎಂದರು.

ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ವಿಪಕ್ಷ ನಾಯಕ ಆರ್.ಅಶೋಕ್, ಸ್ಥಳೀಯ ಸಂಸದರು, ಶಾಸಕರು ಭಾಗವಹಿಸಲಿರುವ ಈ ಹೋರಾಟದಲ್ಲಿ ಸರಕಾರಕ್ಕೆ ಬಾರುಕೋಲು ಹಾಗೂ ಛಡಿ ಏಟು ಕೊಡುವ ಆಂದೋಲನವನ್ನು ಅಂದು ಮಾಡಲಿದ್ದೇವೆ ಎಂದು ಅವರು ವಿವರಿಸಿದರು.

ರೈತರಿಗೆ ನಾವು 7 ಗಂಟೆ ವಿದ್ಯುತ್ ಕೊಡುತ್ತಿದ್ದೆವು. ಈ ಸರಕಾರ 5 ಗಂಟೆಯೂ ವಿದ್ಯುತ್ ಸರಬರಾಜು ಮಾಡುತ್ತಿಲ್ಲ. ಹೊಸ ಬೋರ್‍ವೆಲ್ ಕೊರೆಸಿದಾಗ ವಿದ್ಯುತ್ ಸಂಪರ್ಕಕ್ಕೆ ತಗಲುವ 2 ರಿಂದ 3 ಲಕ್ಷ ರೂ.ವೆಚ್ಚವನ್ನು ರೈತರೆ ಭರಿಸಬೇಕೆಂದು ಸರಕಾರ ತಿಳಿಸಿದೆ. ರೈತರು, ಬಡವರ ಮೇಲೆ ಬರೆ ಹಾಕುವ ಸರಕಾರ ಇದು ಎಂದು ರವಿಕುಮಾರ್ ಆಕ್ರೋಶ ವ್ಯಕ್ತಪಡಿಸಿದರು.

ಶಾಸಕರಿಗೆ ಅನುದಾನ ಕೊಡುತ್ತಿಲ್ಲ. ಕೃಷ್ಣಾ, ಕಳಸಾ ಬಂಡೂರಿ ಸೇರಿ ಉತ್ತರ ಕರ್ನಾಟಕದ ಯಾವುದೇ ನೀರಾವರಿ ಯೋಜನೆಗೆ ನಯಾಪೈಸೆಯನ್ನೂ ಕೊಟ್ಟಿಲ್ಲ. ಆರು ತಿಂಗಳಾದರೂ ಒಂದು ಕಿಮೀ ರಸ್ತೆ ಮಾಡಿಲ್ಲ. ರೈತರು, ಉತ್ತರ ಕರ್ನಾಟಕದ ಬಗ್ಗೆ ಕಳಕಳಿರಹಿತ, ಅಭಿವೃದ್ಧಿ ಶೂನ್ಯ ಸರಕಾರ ಇದು ಎಂದು ಅವರು ಆರೋಪಿಸಿದರು.

ಎಸ್ಸಿ-ಎಸ್ಟಿಗಳ ಅಭಿವೃದ್ಧಿಗೆ ಮೀಸಲಿಟ್ಟ 34 ಸಾವಿರ ಕೋಟಿ ರೂ.ಗಳಲ್ಲಿ 11,500 ಕೋಟಿ ರೂ.ಗಳನ್ನು ಸರಕಾರ ಬೇರೆ ಇಲಾಖೆಗೆ ವರ್ಗಾಯಿಸಿದೆ. ದೇವರಾಜ ಅರಸು ನಿಗಮ, ಅಂಬೇಡ್ಕರ್ ನಿಗಮ, ಜಗಜೀವನ್ ರಾಂ ನಿಗಮ, ಅಂಬಿಗರ ಚೌಡಯ್ಯ ನಿಗಮ ಸೇರಿ ಅನೇಕ ಹಿಂದುಳಿದ ವರ್ಗಗಳ ನಿಗಮಗಳಿಗೆ ಒಂದು ಪೈಸೆ ಅನುದಾನ ಕೊಟ್ಟಿಲ್ಲ ಎಂದು ರವಿಕುಮಾರ್ ಟೀಕಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಬಿಜೆಪಿ ರಾಜ್ಯ ವಕ್ತಾರ ಎಂ.ಬಿ.ಜಿರಲಿ, ಬೆಳಗಾವಿ ಗ್ರಾಮಾಂತರ ಜಿಲ್ಲಾಧ್ಯಕ್ಷ ಸಂಜಯ್ ಪಾಟೀಲ್, ಮಾಜಿ ಶಾಸಕ ಅನಿಲ್ ಬೆನಕೆ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಬಿರಾದಾರ್, ಮುಖಂಡ ರವಿ ಪಾಟೀಲ್, ಜಿಲ್ಲಾ ಮಾಧ್ಯಮ ಸಂಚಾಲಕ ಶರದ್ ಪಾಟೀಲ್ ಭಾಗವಹಿಸಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X