Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಹತಾಶ ಸ್ಥಿತಿಗೆ ತಲುಪಿರುವ ಬಿಜೆಪಿಗೆ ಯಾವ...

ಹತಾಶ ಸ್ಥಿತಿಗೆ ತಲುಪಿರುವ ಬಿಜೆಪಿಗೆ ಯಾವ ಭವಿಷ್ಯವೂ ಇಲ್ಲ: ಎಂ ಬಿ ಪಾಟೀಲ್

ವಾರ್ತಾಭಾರತಿವಾರ್ತಾಭಾರತಿ8 Sept 2023 12:48 PM IST
share
ಹತಾಶ ಸ್ಥಿತಿಗೆ ತಲುಪಿರುವ ಬಿಜೆಪಿಗೆ ಯಾವ ಭವಿಷ್ಯವೂ ಇಲ್ಲ: ಎಂ ಬಿ ಪಾಟೀಲ್

ಬೆಂಗಳೂರು: ಚುನಾವಣೆ ಮುಗಿದು ಐದಾರು ತಿಂಗಳಾದರೂ ಬಿಜೆಪಿಗೆ ವಿರೋಧ ಪಕ್ಷದ ನಾಯಕನನ್ನು ಆಯ್ಕೆ ಮಾಡಲು ಆಗಿಲ್ಲ. ಜನರಿಂದ ತಿರಸ್ಕೃತವಾಗಿರುವ ಆ ಪಕ್ಷವು ಈಗಾಗಲೇ ಮುಳುಗಿ ಹೋಗಿರುವ ಹಡಗು. ಸಂಪೂರ್ಣ ಹತಾಶ ಸ್ಥಿತಿ ತಲುಪಿರುವ ಪಕ್ಷಕ್ಕೆ ಯಾವ ಭವಿಷ್ಯವೂ ಇಲ್ಲ ಎಂದು ಭಾರೀ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ್ ಟೀಕಿಸಿದ್ದಾರೆ.

ಇಲ್ಲಿನ ತಮ್ಮ ನಿವಾಸದಲ್ಲಿ ಶುಕ್ರವಾರ ಸುದ್ದಿಗಾರರ ಜತೆ ಮಾತನಾಡಿದ ಅವರು, ಕಾಂಗ್ರೆಸ್ ಸರಕಾರವು ಕೇವಲ ನೂರು ದಿನಗಳಲ್ಲಿ ಮಾಡಿರುವ ಸಾಧನೆ ಕಂಡು ಪ್ರಧಾನಿ ಮೋದಿ ಕೂಡ ನಿರುತ್ತರರಾಗಿದ್ದಾರೆ ಎಂದರು.

ಬಿಜೆಪಿ ಮುಖಂಡರು ಮತ್ತು ಕಾರ್ಯಕರ್ತರು ಖಾಲಿಯಾಗುತ್ತಿದ್ದಾರೆ. ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಯಾರೊಂದಿಗೂ ಮೈತ್ರಿ ಮಾಡಿಕೊಳ್ಳುವುದಿಲ್ಲ. ಬಿಜೆಪಿ ಮತ್ತು ಜೆಡಿಎಸ್ ಏನಾದರೂ ಮಾಡಿಕೊಳ್ಳಲಿ. ಇದರಿಂದ ಸೆಕ್ಯುಲರ್ ಎನ್ನುವ ಹೆಸರು ಇಟ್ಟುಕೊಂಡಿರುವ ಜೆಡಿಎಸ್ ಬಣ್ಣವೂ ಬಯಲಾಗಲಿದೆ. ನಾವು ಏಕಾಂಗಿಯಾಗಿ ರಾಜ್ಯದಲ್ಲಿ ಕನಿಷ್ಠಪಕ್ಷ 20 ಸ್ಥಾನಗಳನ್ನಾದರೂ ಗೆಲ್ಲಲಿದ್ದೇವೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು.

ಬಿಜೆಪಿ ಯಡಿಯೂರಪ್ಪ ಅವರಂತಹ ಹಿರಿಯರನ್ನು ಕೆಟ್ಟದಾಗಿ ನಡೆಸಿಕೊಳ್ಳುತ್ತಿದೆ. ಇದು ಅವರಿಗೂ ಗೊತ್ತು. ಆದರೂ ಅವರು ಮಾತನಾಡುವ ಸ್ಥಿತಿಯಲ್ಲಿ ಇಲ್ಲ. ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ಆ ಪಕ್ಷದ 25 ಸಂಸದರು ರಾಜ್ಯಕ್ಕೆ ನ್ಯಾಯ ಕೊಡಿಸಬೇಕು. ಆದರೆ ಅವರೆಲ್ಲ ಮೋದಿಯವರಿಗೆ ಹೆದರಿಕೊಂಡು ತುಟಿ ಬಿಚ್ಚುತ್ತಿಲ್ಲ ಎಂದು ಅವರು ಪ್ರತಿಪಾದಿಸಿದರು.

ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಕೆಆರ್ ಎಸ್ ಗೆ ಭೇಟಿ‌ ನೀಡುತ್ತಿರುವುದರ ಹಿಂದೆ ರಾಜಕೀಯ ಪ್ರಚಾರ ಪಡೆಯುವ ಉದ್ದೇಶವಿದೆ. ಸ್ವತಃ ನೀರಾವರಿ ಸಚಿವರೂ ಆಗಿದ್ದ ಅವರು ಹೀಗೆ ನಡೆದುಕೊಳ್ಳುತ್ತಿರುವುದು ಅನುಚಿತ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ಕಾಂಗ್ರೆಸ್ ನಾಯಕ ಹರಿಪ್ರಸಾದ್ ಅವರು ಸಣ್ಣಪುಟ್ಟ ಜಾತಿಗಳನ್ನು ಒಗ್ಗೂಡಿಸಲು ಮುಂದಾಗಿರುವುದರಲ್ಲಿ ತಪ್ಪಿಲ್ಲ. ಕುಂಬಾರ, ಕಮ್ಮಾರ, ಉಪ್ಪಾರ ತರಹದ ಅತಿಸಣ್ಣ ಜಾತಿಗಳಿಗೂ ಕಾಂಗ್ರೆಸ್ ಬೆಲೆ ಕೊಡುತ್ತದೆ. ಇಂತಹ ಸಮುದಾಯಕ್ಕೆ ಸೇರಿದ ವೀರಪ್ಪ ಮೊಯ್ಲಿಯವರನ್ನು ಮುಖ್ಯಮಂತ್ರಿಗಳನ್ನಾಗಿ ಮಾಡಿದ ಶ್ರೇಯಸ್ಸು ನಮ್ಮ ಪಕ್ಷದ್ದಾಗಿದೆ. ಆದರೆ ಹರಿಪ್ರಸಾದ್ ಅವರು ರಾಜ್ಯ ಸರಕಾರದ ವಿರುದ್ಧವೇ ಹೋರಾಡುತ್ತೇನೆ ಎಂದು ಹೇಳಿರುವುದು ನನಗೆ ಗೊತ್ತಿಲ್ಲ ಎಂದು ಎಂ.ಬಿ ಪಾಟೀಲ್ ಹೇಳಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X