Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಕಾಂಗ್ರೆಸ್ ʼಗ್ಯಾರಂಟಿʼಗಳನ್ನು...

ಕಾಂಗ್ರೆಸ್ ʼಗ್ಯಾರಂಟಿʼಗಳನ್ನು ಮುಟ್ಟುವುದು ಬಿಜೆಪಿ- ಜೆಡಿಎಸ್ ಹಣೆಯಲ್ಲಿ ಬರೆದಿಲ್ಲ : ಡಿಸಿಎಂ ಡಿ.ಕೆ.ಶಿವಕುಮಾರ್

ವಾರ್ತಾಭಾರತಿವಾರ್ತಾಭಾರತಿ17 April 2024 1:16 PM IST
share
ಕಾಂಗ್ರೆಸ್ ʼಗ್ಯಾರಂಟಿʼಗಳನ್ನು ಮುಟ್ಟುವುದು ಬಿಜೆಪಿ- ಜೆಡಿಎಸ್ ಹಣೆಯಲ್ಲಿ ಬರೆದಿಲ್ಲ : ಡಿಸಿಎಂ ಡಿ.ಕೆ.ಶಿವಕುಮಾರ್

ಬೆಂಗಳೂರು: “ಕಾಂಗ್ರೆಸ್ ಗ್ಯಾರಂಟಿಗಳನ್ನು ಮುಟ್ಟುವುದು ಬಿಜೆಪಿ- ಜೆಡಿಎಸ್ ಹಣೆಯಲ್ಲಿ ಬರೆದಿಲ್ಲ. ಇದಕ್ಕೆ ಕಾಂಗ್ರೆಸ್ ಅವಕಾಶ ಕೊಡುವುದಿಲ್ಲ. ರಾಜ್ಯದಲ್ಲಿ ಕಾಂಗ್ರೆಸ್ 20 ಕ್ಕೂ ಹೆಚ್ಚು ಸ್ಥಾನಗಳನ್ನು ಗೆಲ್ಲಲಿದೆ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಹೇಳಿದ್ದಾರೆ.

ಕೆಪಿಸಿಸಿ ಕಚೇರಿಯಲ್ಲಿ ಬಿಜೆಪಿ ಸಂಸದ ಕರಡಿ ಸಂಗಣ್ಣ ಮತ್ತಿತರರ ಪಕ್ಷ ಸೇರ್ಪಡೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, "ಕೇಂದ್ರದಲ್ಲಿ ಎನ್ ಡಿಎ ಅಧಿಕಾರಕ್ಕೆ ಬಂದರೆ ಗ್ಯಾರಂಟಿಗಳನ್ನು ತೆಗೆದುಹಾಕುತ್ತೇವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಹೇಳಿದ್ದಾರೆ. ಆದರೆ ಯಡಿಯೂರಪ್ಪ, ಕುಮಾರಸ್ವಾಮಿ, ಅಶೋಕ್ ಅವರಿಗೆ ಗ್ಯಾರಂಟಿಗಳನ್ನು ಮುಟ್ಟಲು ರಾಜ್ಯದ ಜನ ಅವಕಾಶ ನೀಡುವುದಿಲ್ಲ" ಎಂದು ಹೇಳಿದರು.

ಕಾಂಗ್ರೆಸ್ ಪಕ್ಷದ ಮೇಲಿನ ಜನರ ಪ್ರೀತಿ ಕಂಡು ಅವರಿಗೆ ಅಸೂಯೆ ಆಗಿದೆ. ಆದ್ದರಿಂದ ನಮ್ಮ ತಾಯಂದಿರ ಬಗ್ಗೆ ಮಾತನಾಡುತ್ತಿದ್ದಾರೆ. ತಾಯಂದಿರು ದಾರಿ ತಪ್ಪಿದ್ದಾರೆ ಎಂದು ಹೇಳಿಕೆ ನೀಡಿರುವ ಅವರಿಗೆ ರಾಜ್ಯದ ಜನರೇ ಉತ್ತರ ನೀಡಲಿದ್ದಾರೆ ಎಂದರು.

ಇಡೀ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷದ ಹಾಗೂ ಗ್ಯಾರಂಟಿಗಳ ಅಲೆಯಿದೆ. ಇಡೀ ದೇಶವೇ ಕರ್ನಾಟಕದ ಕಡೆಗೆ ತಿರುಗಿ ನೋಡುತ್ತಿದೆ. ಮಂಗಳವಾರ ಕೇರಳ ರಾಜ್ಯ ಪ್ರವಾಸಕ್ಕೆ ಹೋಗಿದ್ದೆ, ಅಲ್ಲಿಯೂ ಸಹ ಕಾಂಗ್ರೆಸ್ 20 ಸ್ಥಾನಗಳನ್ನು ಗೆಲ್ಲಲಿದೆ. ಇಡೀ ದೇಶದಲ್ಲಿ 100 ಕ್ಕೂ ಹೆಚ್ಚು ಅಭ್ಯರ್ಥಿಗಳನ್ನು ಎನ್ಡಿಎ ಬದಲಾಯಿಸಿದೆ. ರಾಜ್ಯದಲ್ಲಿ 14 ಸ್ಥಾನಗಳನ್ನು ಬದಲಾಯಿಸಿದೆ. ಯಾವುದೇ ಕಾರಣಕ್ಕೂ ದೇಶದಲ್ಲಿ ಬಿಜೆಪಿ ಅಧಿಕಾರಕ್ಕೆ ಬರಲು ಸಾಧ್ಯವಿಲ್ಲ. ಇಂಡಿಯಾ ಒಕ್ಕೂಟ ಗೆದ್ದೇ, ಗೆಲ್ಲಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ನಿರುದ್ಯೋಗ, ಬೆಲೆಏರಿಕೆ ಸಮಸ್ಯೆಯ ಬಗ್ಗೆ ಜನರು ಚಿಂತನೆ ಮಾಡುತ್ತಿದ್ದಾರೆ. ಧರ್ಮ, ಜಾತಿ ಆದಾರದ ಮೇಲೆ ನಡೆಯುತ್ತಿರುವ ರಾಜಕಾರಣದ ಬಗ್ಗೆ ಜನರಲ್ಲಿ ಜಾಗೃತಿ ಮೂಡಿದೆ. ಪ್ರಧಾನಿ ಮೋದಿ ಅವರು ಸಂವಿಧಾನ ಬದಲಾವಣೆ ಮಾಡುವುದಿಲ್ಲ ಎಂದು ಬಹಿರಂಗವಾಗಿ ಹೇಳಿಕೆ ಕೊಡುತ್ತಿದ್ದಾರೆ. ಬಿಜೆಪಿಯ ಹಾಲಿ ಸಂಸದರೊಬ್ಬರು 400 ಸ್ಥಾನಗಳನ್ನು ಕೊಡಿ, ಸಂವಿಧಾನ ಬದಲಾವಣೆ ಮಾಡುತ್ತೇವೆ ಎಂದು ಎರಡು ಮೂರು ಬಾರಿ ಹೇಳಿದರು. ಅವರನ್ನು ಪಕ್ಷದಿಂದ ಉಚ್ಚಾಟಿಸುವುದಕ್ಕೆ ಬಿಜೆಪಿ ಏಕೆ ಮುಂದಾಗಿಲ್ಲ? ಸಂವಿಧಾನ ಬದಲಾವಣೆ ಹೇಳಿಕೆಯ ನಂತರ ಉತ್ತರ ಭಾರತದಲ್ಲಿ ಜನ ದಂಗೆ ಎದ್ದಿದ್ದಾರೆ. ಆದ ಕಾರಣ ಈಗ ಬದಲಾವಣೆ ಮಾಡುವುದಿಲ್ಲ ಎಂದು ಹೇಳುತ್ತಿದ್ದಾರೆ ಎಂದು ಟೀಕಿಸಿದರು.

ಸವದಿಯವರು ಹೇಳುತ್ತಿದ್ದರು, ಕರಡಿ ಸಂಗಣ್ಣ ಅವರನ್ನು ನಾನೇ ದಳದಿಂದ ಬಿಜೆಪಿಗೆ ಸೇರಿಸಿದ್ದೆ ಎಂದು. ಸರಳ, ಸಜ್ಜನಿಕೆಯ ನಾಯಕ. ಬಿಜೆಪಿ ಸುಮ್ಮನೆ ಅಬ್ಬರ ಮಾಡುತ್ತಿರುವ ಹೊತ್ತಿನಲ್ಲಿ ಅವರು ಕಾಂಗ್ರೆಸ್ ಸೇರುತ್ತಿದ್ದಾರೆ. ಏಕೆಂದರೆ ಕಾಂಗ್ರೆಸ್ ಪಕ್ಷದ ನೀತಿ, ಸಿದ್ಧಾಂತ, ಕಾರ್ಯಕ್ರಮಗಳನ್ನು ಅವರು ಮೆಚ್ಚಿದ್ದಾರೆ. ಕಾಂಗ್ರೆಸ್ ಪಕ್ಷದ ಕಾರ್ಯಕ್ರಮಗಳು ಬಿಜೆಪಿಯನ್ನು ರಾಜ್ಯದಲ್ಲಿ ತೊಳೆದು ಹಾಕುತ್ತಿವೆ. ಬೆಳಗಾವಿಯ ಗಾಂಧಿ ಬಾವಿಯಿಂದ ನೀರನ್ನು ತೆಗೆದು ಕೊಳೆ ತೊಳೆದಂತೆ, ರಾಜ್ಯದ ಜನತೆ ಬಿಜೆಪಿಯನ್ನು ಗುಡಿಸಿ ಹಾಕುತ್ತಾರೆ ಎಂದರು.

Tags

BJPJDSCongress guaranteesDK Shivakumar
share
ವಾರ್ತಾಭಾರತಿ
ವಾರ್ತಾಭಾರತಿ
Next Story
X