Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಕಲಾಪಕ್ಕೆ ಸಚಿವರ ಗೈರು: ಬಿಜೆಪಿ ಸದಸ್ಯರ...

ಕಲಾಪಕ್ಕೆ ಸಚಿವರ ಗೈರು: ಬಿಜೆಪಿ ಸದಸ್ಯರ ಆಕ್ಷೇಪ

ವಾರ್ತಾಭಾರತಿವಾರ್ತಾಭಾರತಿ27 Jan 2026 11:51 PM IST
share
ಕಲಾಪಕ್ಕೆ ಸಚಿವರ ಗೈರು: ಬಿಜೆಪಿ ಸದಸ್ಯರ ಆಕ್ಷೇಪ

ಬೆಂಗಳೂರು: ‘ಪ್ರಶ್ನೋತ್ತರ ಕಲಾಪದಲ್ಲಿ ಉತ್ತರ ನೀಡಬೇಕಾದ ಸಂಬಂಧಪಟ್ಟ ಸಚಿವರೇ ಹಾಜರಿಲ್ಲದ್ದರೆ ವಿಧಾನಸಭೆ ಅಧಿವೇಶನವನ್ನು ಕರೆಯುವುದಾದರೂ ಏಕೆ?’ ಎಂದು ವಿಪಕ್ಷ ನಾಯಕ ಆರ್.ಅಶೋಕ್ ಪ್ರಶ್ನಿಸಿದರು.

ಮಂಗಳವಾರ ವಿಧಾನಸಭೆ ಕಲಾಪ ಆರಂಭಿಸಿದ ಸ್ಪೀಕರ್ ಯು.ಟಿ.ಖಾದರ್ ಅವರು, ಪ್ರಶ್ನೆ ಕೇಳಬೇಕಾದ ಸದಸ್ಯರ ಹೆಸರನ್ನು ಕರೆದರು. ಆಗ ಸಂಬಂಧಪಟ್ಟ ಸಚಿವರು ಇರಲಿಲ್ಲ, ಇದನ್ನು ಗಮನಿಸಿದ ವಿಪಕ್ಷ ನಾಯಕ ಆರ್.ಅಶೋಕ್, ‘ಸಚಿವರೇ ಇಲ್ಲ ಎಂದರೆ ಹೇಗೆ?, ಕನಿಷ್ಟ ಜವಾಬ್ದಾರಿ ಬೇಡವೇ? ಇಂದು ಸದನದಲ್ಲಿ ಹಾಜರಿರಬೇಕಾದ ಹೆಸರುಗಳನ್ನು ಹೇಳಿ, ಸದನಕ್ಕೆ ಗೈರುಹಜರಾಗಿರುವವರಿಗೆ ಛೀಮಾರಿ ಹಾಕಿ’ ಎಂದು ಸಲಹೆ ನೀಡಿದರು.

ಆಗ ಸ್ಪೀಕರ್ ಖಾದರ್, ಈ ಸಂದರ್ಭದಲ್ಲಿ ಅದೆಲ್ಲ ಏಕೆ, ಸದನ ಆರಂಭವಾಗಿದೆ?. ಹಾಜರಾತಿ ಏಕೆ ಕಡಿಮೆ ಇದೆ ಎಂಬುದು ನಿಮಗೆ ಗೊತ್ತಿದೆ. ಅದನ್ನು ಪ್ರತ್ಯೇಕವಾಗಿ ಹೇಳಬೇಕಿಲ್ಲ ಎಂದರು. ಅದಕ್ಕೆ ಅಶೋಕ್ ಇಂದು ಸದನದಲ್ಲಿ ಹಾಜರಿರಬೇಕಾದ ಸಚಿವರ ಪಟ್ಟಿಯನ್ನು ಒಮ್ಮೆ ಓದಿ ಎಂದು ಒತ್ತಾಯಿಸಿದರು.

ಬಳಿಕ ಸ್ಪೀಕರ್ ಖಾದರ್, ಇಂದು ಸದನದಲ್ಲಿ ಮುಖ್ಯಮಂತ್ರಿ, ಡಿಸಿಎಂ ಪರವಾಗಿ ಸಚಿವರು ಉತ್ತರ ಕೊಡುತ್ತಾರೆ. ಸದನದ ಕಾರ್ಯಕಲಾಪಗಳ ಸಮಿತಿ ಸಭೆಯಲ್ಲಿ ಸಚಿವರು ಬೆಳಗ್ಗೆ ಮತ್ತು ಮಧ್ಯಾಹ್ನ ಕಡ್ಡಾಯವಾಗಿ ಹಾಜರಿರುವ ಬಗ್ಗೆ ಹೇಳಲಾಗಿದೆ. ಅದರಂತೆ ಬರುತ್ತಾರೆ. ಸಚಿವರಾದ ಕೆ.ಎಚ್. ಮುನಿಯಪ್ಪ, ಕೆ.ಜೆ.ಜಾರ್ಜ್, ದಿನೇಶ್ ಗುಂಡೂರಾವ್, ಡಾ.ಎಚ್.ಸಿ.ಮಹದೇವಪ್ಪ, ಎಂ.ಸಿ.ಸುಧಾಕರ್, ಝಮೀರ್ ಅಹ್ಮದ್ ಖಾನ್ ಅವರ ಹೆಸರನ್ನು ಉಲ್ಲೇಖಿಸಿದರು.

ಈ ವೇಳೆ ಮಧ್ಯಪ್ರವೇಶಿಸಿದ ಬಿಜೆಪಿಯ ಸುನೀಲ್ ಕುಮಾರ್, ‘ಇದು ಇಲ್ಲಗಳ ಸರಕಾರ, ಸದನದಲ್ಲಿ ಮಂತ್ರಿಗಳಿಲ್ಲ, ಶಾಸಕರಿಗೆ ಅನುದಾನವೂ ಇಲ್ಲ’ ಎಂದು ಛೇಡಿಸಿದರು. ಕಂದಾಯ ಸಚಿವ ಕೃಷ್ಣ ಭೈರೇಗೌಡ, ‘ಅಬಕಾರಿ ಸಚಿವ ಆರ್.ಬಿ.ತಿಮ್ಮಾಪೂರ್, ಸಣ್ಣ ನೀರಾವರಿ ಸಚಿವ ಭೋಸರಾಜ್ ಸೇರಿದಂತೆ ಇನ್ನಿತರರು ಇದ್ದೇವೆ, ನಾವು ಉತ್ತರ ನೀಡುತ್ತೇವೆ, ಪ್ರಶ್ನೋತ್ತರ ಆರಂಭಿಸಿ’ ಎಂದು ಮನವಿ ಮಾಡಿದರು.

ಆಗ ಸ್ಪೀಕರ್ ಖಾದರ್ ಅವರು, ಬಿಜೆಪಿ ಸದಸ್ಯ ಎಚ್‍ಕೆ.ಸುರೇಶ್ ಅವರನ್ನು ಪ್ರಶ್ನೆ ಕೇಳುವಂತೆ ಆಹ್ವಾನಿಸಿದರು. ಆದರೆ, ಅವರು ಆ ಸಂದರ್ಭದಲ್ಲಿ ಸದನದಲ್ಲಿ ಹಾಜರಿರಲಿಲ್ಲ. ಇದನ್ನು ಗಮನಿಸಿದ ಸ್ಪೀಕರ್ ನಿಮ್ಮ ಪಕ್ಷದ ಸದಸ್ಯರೂ ಸದನಕ್ಕೆ ಇನ್ನೂ ಬಂದಿಲ್ಲ ಎಂದರು. ಇದಕ್ಕೆ ಪ್ರತಿಕ್ರಿಯಿಸಿದ ಅಶೋಕ್, ‘ನಮ್ಮ ಪಕ್ಷದ ಸದಸ್ಯರೇ ಹೆಚ್ಚಿನ ಸಂಖ್ಯೆಯಲ್ಲಿ ಇದ್ದಾರೆ. ಆಡಳಿತ ಪಕ್ಷದ ಸಾಲಿನಲ್ಲಿ ಕುರ್ಚಿ ಖಾಲಿ ಇವೆ’ ಎಂದು ಗಮನ ಸೆಳೆದರು.

Tags

BJPKarnataka AssemblyAssembly session
share
ವಾರ್ತಾಭಾರತಿ
ವಾರ್ತಾಭಾರತಿ
Next Story
X