ರಾಹುಲ್ ಗಾಂಧಿಯನ್ನು ಭಾರತೀಯರಾ ಎಂದು ಸುಪ್ರೀಂಕೋರ್ಟ್ ಪ್ರಶ್ನಿಸಿರುವುದು ದುರದೃಷ್ಟಕರ : ಬಿ.ಕೆ.ಹರಿಪ್ರಸಾದ್
ʼನ್ಯಾಯಾಂಗ ವ್ಯವಸ್ಥೆಯ ಅಧಃಪತನಕ್ಕೆ ಸಾಕ್ಷಿʼ ಎಂದ ಕಾಂಗ್ರೆಸ್ ಹಿರಿಯ ನಾಯಕ

ಬಿ.ಕೆ.ಹರಿಪ್ರಸಾದ್
ಬೆಂಗಳೂರು : ʼಸಾಂವಿಧಾನಿಕ ಹುದ್ದೆಯಲ್ಲಿರುವ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರನ್ನು "ನೀವು ನಿಜವಾದ ಭಾರತೀಯರಾ" ಎಂದು ಸುಪ್ರೀಂ ಕೋರ್ಟಿನ ನ್ಯಾಯಾಧೀಶರು ಪ್ರಶ್ನಿಸಿರುವುದು ದೇಶದಲ್ಲಿ ನ್ಯಾಯಾಂಗದ ವ್ಯವಸ್ಥೆಯ ಅಧಃಪತನಕ್ಕೆ ಸಾಕ್ಷಿ ಮಾತ್ರವಲ್ಲ, ಸರ್ವಾಧಿಕಾರಿ ಧೋರಣೆಗೆ ನೀಡಿದ ಬೆಂಬಲʼ ಎಂದು ಕಾಂಗ್ರೆಸ್ ಹಿರಿಯ ನಾಯಕ ಬಿ.ಕೆ.ಹರಿಪ್ರಸಾದ್ ಆಕ್ರೋಶ ಹೊರಹಾಕಿದ್ದಾರೆ.
ಈ ಸಂಬಂಧ ಸಾಮಾಜಿಕ ಜಾಲತಾಣ ಎಕ್ಸ್ನಲ್ಲಿ ಪೋಸ್ಟ್ ಹಂಚಿಕೊಂಡಿರುವ ಅವರು, ಭಾರತದ ವಿಪಕ್ಷ ನಾಯಕರನ್ನು ಈ ದೇಶದ ಸಂವಿಧಾನ "shadow prime minister" ಎಂದು ಗುರುತಿಸುತ್ತದೆ. ಈ ದೇಶದ "shadow prime minister" ಆಗಿರುವ ರಾಹುಲ್ ಗಾಂಧಿಯಂತಹ ಸಾಂವಿಧಾನಿಕ ಹುದ್ದೆಯನ್ನು ಹೊಂದಿರುವ ವ್ಯಕ್ತಿಯನ್ನು, ಮತ್ತೊಬ್ಬ ಸಾಂವಿಧಾನಿಕ ಹುದ್ದೆಯಲ್ಲಿರುವ ವ್ಯಕ್ತಿ "ನೀವು ಭಾರತೀಯರಾ? ಎಂದು ಪ್ರಶ್ನಿಸಿರುವುದು ದುರಾದೃಷ್ಟಕರ. ಇದು ದೇಶದ ಸಾಂವಿಧಾನಿಕ ಹುದ್ದೆಗೆ ಮಾಡಿದ ಅಪಚಾರ ಎಂದು ಉಲ್ಲೇಖಿಸಿದ್ದಾರೆ.
ಚೀನಾ ದೇಶ ಗಾಲ್ವಾಮಾ ಕಣಿವೆಯಲ್ಲಿ ಎರಡು ಸಾವಿರ ಚದರ ಕಿಲೋಮೀಟರ್ ಕ್ಕಿಂತ ಹೆಚ್ಚು ಭೂಪ್ರದೇಶವನ್ನು ಆಕ್ರಮಿಸಿಕೊಂಡಿರುವುದರ ಬಗ್ಗೆ ಕೇಂದ್ರ ಸರಕಾರಕ್ಕೆ ವಿಪಕ್ಷ ನಾಯಕರಾದ ರಾಹುಲ್ ಗಾಂಧಿ ಅವರು ಸ್ಪಷ್ಟನೆ ಕೇಳಲಾಗಿತ್ತು. ಈ ಕುರಿತು ಸಂಸತ್ತಿನಲ್ಲೇ ಸುಧೀರ್ಘ ಚರ್ಚೆ ನಡೆಸಲಾಗಿದೆ. 38 ಸಾವಿರ ಚದರ ಕಿಲೋಮೀಟರ್ ಭೂಪ್ರದೇಶ ಆಕ್ರಮಿಸಿಕೊಂಡಿರುವುದನ್ನು ಸದನದಲ್ಲೇ ಕೇಂದ್ರದ ವಿದೇಶಾಂಗ ರಾಜ್ಯ ಸಚಿವರಾಗಿದ್ದ ಮುರುಳಿಧರನ್ ಒಪ್ಪಿಕೊಂಡಿದ್ದಾರೆ. ಹೀಗಿರುವಾಗ ಇದೇ ವಿಷಯದಲ್ಲಿ ಸುಪ್ರೀಂ ಕೋರ್ಟ್ ನ ನ್ಯಾಯಾಧೀಶರು ರಾಜಕೀಯ ನಾಯಕರಂತೆ ಹೇಳಿಕೆ ನೀಡಿರುವುದು ಅತ್ಯಂತ ಖಂಡನೀಯ ಎಂದು ಹೇಳಿದ್ದಾರೆ.
ದೇಶದ ಸಂವಿಧಾನ ನೀಡಿದ ಸಾಂವಿಧಾನಿಕ ಹುದ್ದೆಯಲ್ಲಿರುವವರು, ಪ್ರಜಾಪ್ರಭುತ್ವದಡಿಯಲ್ಲಿ ಜನರಿಂದ ಆಯ್ಕೆಯಾದ ಸಂಸದರನ್ನು ಸುಪ್ರೀಂ ಕೋರ್ಟ್ ಅತ್ಯಂತ ಕೀಳುಮಟ್ಟದಿಂದ ವರ್ತಿಸಿರುವುದು ಶೋಭೆಯಲ್ಲ. ಆಳುವ ಸರಕಾರವನ್ನು ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ವಿಪಕ್ಷ ನಾಯಕರು ದೇಶದ ಸಮಸ್ಯೆಗಳ ಬಗ್ಗೆ ಪ್ರಶ್ನೆ ಎತ್ತುವುದೇ ಪ್ರಜಾಪ್ರಭುತ್ವದ ಸೌಂದರ್ಯ. ಸಂವಿಧಾನದ ಪರವಾಗಿ ಹೋರಾಡುತ್ತಾ, ಪ್ರಜಾಪ್ರಭುತ್ವ ಮೌಲ್ಯಗಳನ್ನು ಬಲಪಡಿಸುತ್ತಿರುವ ರಾಹುಲ್ ಗಾಂಧಿ ಅವರ ಹೋರಾಟಕ್ಕ ಸುಪ್ರೀಂ ಕೋರ್ಟ್ ಬೆನ್ನಿಗೆ ನಿಲ್ಲಬೇಕಿತ್ತು ಎಂದಿದ್ದಾರೆ.
ಸುಪ್ರೀಂ ಕೋರ್ಟ್ ಸೇರಿದಂತೆ ಇತ್ತೀಚಿಗೆ ಕೆಲವು ಹೈಕೋರ್ಟ್ ಗಳು ರಾಜಕೀಯ ಪ್ರೇರಿತ ನಿರ್ದೇಶನ ಹಾಗೂ ನೀಡುತ್ತಿರುವ ತೀರ್ಪುಗಳ ವಿರುದ್ಧ ರಾಷ್ಟ್ರಪತಿಗಳು ಮಧ್ಯಪ್ರವೇಶಿಸಿ ಸಂವಿಧಾನ ಹಾಗೂ ನ್ಯಾಯಂಗ ವ್ಯವಸ್ಥೆಯ ನಂಬಿಕೆ ಉಳಿಸಲಿ ಎಂದು ಅವರು ಒತ್ತಾಯಿಸಿದ್ದಾರೆ.
ಸಾಂವಿಧಾನಿಕ ಹುದ್ದೆಯಲ್ಲಿರುವ ವಿರೋಧ ಪಕ್ಷದ ನಾಯಕ ಶ್ರೀ @RahulGandhi ಅವರನ್ನು "ನೀವು ನಿಜವಾದ ಭಾರತೀಯರಾ" ಎಂದು ಸುಪ್ರೀಕೋರ್ಟಿನ ನ್ಯಾಯಾಧೀಶರು ಪ್ರಶ್ನಿಸಿರುವುದು ದೇಶದಲ್ಲಿ ನ್ಯಾಯಾಂಗದ ವ್ಯವಸ್ಥೆಯ ಅಧಃಪತನಕ್ಕೆ ಸಾಕ್ಷಿ ಮಾತ್ರವಲ್ಲ, ಸರ್ವಾಧಿಕಾರಿ ಧೋರಣೆಗೆ ನೀಡಿದ ಬೆಂಬಲ...!
— Hariprasad.B.K. (@HariprasadBK2) August 4, 2025
ಭಾರತದ ವಿಪಕ್ಷ ನಾಯಕರನ್ನು ಈ ದೇಶದ ಸಂವಿಧಾನ "shadow…







