Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಗಾಂಧಿಯ ಕೊಂದ ಆರೆಸ್ಸೆಸ್ ಶತಮಾನೋತ್ಸವ...

ಗಾಂಧಿಯ ಕೊಂದ ಆರೆಸ್ಸೆಸ್ ಶತಮಾನೋತ್ಸವ ಆಚರಿಸುತ್ತಿರುವುದು ದೇಶದ ದುರಂತ : ಬಿ.ಕೆ.ಹರಿಪ್ರಸಾದ್

ವಾರ್ತಾಭಾರತಿವಾರ್ತಾಭಾರತಿ2 Oct 2025 8:25 PM IST
share
ಗಾಂಧಿಯ ಕೊಂದ ಆರೆಸ್ಸೆಸ್ ಶತಮಾನೋತ್ಸವ ಆಚರಿಸುತ್ತಿರುವುದು ದೇಶದ ದುರಂತ : ಬಿ.ಕೆ.ಹರಿಪ್ರಸಾದ್

ಬೆಂಗಳೂರು, ಅ.2: ರಾಷ್ಟ್ರಪಿತ ಮಹಾತ್ಮಾ ಗಾಂಧಿಯನ್ನು ಹತ್ಯೆ ಮಾಡಿದ ಆರೆಸ್ಸೆಸ್ ಸಂಘಟನೆ ಇಂದು ತನ್ನ 100 ವರ್ಷದ ಶತಮಾನೋತ್ಸವ ಆಚರಿಸುತ್ತಿದೆ. ಇದು ದೇಶದ ದೊಡ್ಡ ದುರಂತ. ಗಾಂಧಿಯನ್ನು ಕೊಂದ ಆರೆಸ್ಸೆಸ್ ಕಾರ್ಯಕರ್ತ ನಾಥೂರಾಮ್ ಗೋಡ್ಸೆ ಈ ದೇಶದ ಮೊಟ್ಟ ಮೊದಲ ಉಗ್ರವಾದಿ ಎಂದು ಕಾಂಗ್ರೆಸ್ ಹಿರಿಯ ನಾಯಕ ಬಿ.ಕೆ.ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ.

ಗುರುವಾರ ನಗರದ ಕ್ವೀನ್ಸ್ ರಸ್ತೆಯ ಕೆಪಿಸಿಸಿ ಕಚೇರಿಯಲ್ಲಿ ನಡೆದ ಮಹಾತ್ಮಾ ಗಾಂಧೀಜಿಯವರ 156ನೇ ಜನ್ಮ ದಿನಾಚರಣೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ಸರ್ವೋದಯ, ಶಾಂತಿ ಮತ್ತು ಸದ್ಭಾವನೆಯ ವಿರುದ್ಧ ಪಾಠ ಮಾಡುವ ಆರೆಸ್ಸೆಸ್ ಸಂಘಟನೆಯು ಶತಮಾನೋತ್ಸವದಂತಹ ಕಾರ್ಯಕ್ರಮ ನಡೆಸುವುದು, ಅದಕ್ಕೆ ಪ್ರಧಾನ ಮಂತ್ರಿಯೇ ಹಾಜರಾಗಿರುವುದು ಸ್ವಾತಂತ್ರ ಭಾರತದ ಇತಿಹಾಸದಲ್ಲಿ ಕರಾಳ ದಿನ ಎಂದರು.

ಇಡೀ ಪ್ರಪಂಚವೇ ಗಾಂಧೀಜಿಯವರ ಜನ್ಮದಿನವನ್ನು ಆಚರಿಸುತ್ತಿದೆ. ವಿಶ್ವಸಂಸ್ಥೆಯೇ ಅಕ್ಟೋಬರ್ 2 ಅನ್ನು ಸತ್ಯ ಮತ್ತು ಅಹಿಂಸೆಯ ದಿನ ಎಂದು ಘೋಷಿಸಿದೆ. ಗಾಂಧೀಜಿ ಸತ್ಯ, ಶಾಂತಿ ಮತ್ತು ಸದ್ಭಾವನೆಯಿಂದ ಬದುಕಿದ ಮಹಾನ್ ವ್ಯಕ್ತಿ. ಇಂದಿನ ರಾಜಕೀಯದಲ್ಲಿ ನಡೆಯುತ್ತಿರುವ ಸುಳ್ಳು ಪ್ರಚಾರಗಳ ನಡುವೆ ಜನರಿಗೆ ಗಾಂಧೀಜಿಯವರ ಸತ್ಯದ ತತ್ವ ಇನ್ನಷ್ಟು ಸ್ಪಷ್ಟವಾಗುತ್ತಿದೆ ಎಂದು ಹರಿಪ್ರಸಾದ್ ಹೇಳಿದರು.

ಗಾಂಧೀಜಿ ಹತ್ಯೆಯಲ್ಲಿ ಆರೆಸ್ಸೆಸ್‍ನ ಪಾತ್ರದ ಹಿನ್ನೆಲೆಯಲ್ಲಿ ಸರ್ದಾರ್ ವಲ್ಲಭಭಾಯಿ ಪಟೇಲರು ಆರೆಸ್ಸೆಸ್ ಸಂಘಟನೆಯನ್ನು ನಿಷೇಧಿಸಿದ್ದರು. ಇಂತಹ ಸಂಘಟನೆಯ ಶತಮಾನೋತ್ಸವದಲ್ಲಿ ಪ್ರಧಾನ ಮಂತ್ರಿ ಭಾಗವಹಿಸಿರುವುದು ರಾಷ್ಟ್ರದ ಜನತೆಗೆ ಅವಮಾನ. ಆರೆಸ್ಸೆಸ್ 62 ವರ್ಷಗಳ ಕಾಲ ತನ್ನ ಕಚೇರಿಯಲ್ಲಿ ತ್ರಿವರ್ಣ ಧ್ವಜ ಹಾರಿಸಿರಲಿಲ್ಲ. ಇಂತಹ ಸಂಘಟನೆಯೊಂದಿಗೆ ನಿಂತಿರುವುದು ಪ್ರಧಾನ ಮಂತ್ರಿಗೆ ಶೋಭೆ ತರುವ ಕೆಲಸವಲ್ಲ ಎಂದು ಹರಿಪ್ರಸಾದ್ ಟೀಕಿಸಿದರು.

ಸ್ವಾತಂತ್ರ ಹೋರಾಟದ ಸಮಯದಲ್ಲಿ ಆರೆಸ್ಸೆಸ್ ಬ್ರಿಟಿಷರ ಪರ ನಿಂತು ಬೂಟು ಕಾಲು ನೆಕ್ಕುತ್ತಿತ್ತು. ಸಾವರ್ಕರ್ ಅವರು ಬ್ರಿಟಿಷರಿಂದ ಪೆನ್ಷನ್ ಪಡೆದರು. 1942ರ ಕ್ವಿಟ್ ಇಂಡಿಯಾ ಚಳುವಳಿಗೆ ವಿರೋಧ ವ್ಯಕ್ತಪಡಿಸಿದವರು ಇವರೇ. ಇಂತಹ ಸಂಘಟನೆಯ ಪರವಾಗಿ ಸ್ಮಾರಕ ನೋಟು-ಕಾಯಿನ್ ಹೊರಡಿಸುತ್ತಿರುವುದು ಲಕ್ಷಾಂತರ ಸ್ವಾತಂತ್ರ ಹೋರಾಟಗಾರರ ತ್ಯಾಗಕ್ಕೆ ಅವಮಾನ ಎಂದು ಹರಿಪ್ರಸಾದ್ ತೀವ್ರ ಕಿಡಿಕಾರಿದರು.

ಆರೆಸ್ಸೆಸ್ ಸಂಘಟನೆ ಶಸ್ತ್ರಾಸ್ತ್ರಗಳನ್ನು ಹಿಡಿದು ಅನೇಕ ದಂಗೆ, ಕೊಲೆಗಳನ್ನು ಸೃಷ್ಟಿಸಿದೆ. ದೇಶದಲ್ಲಿ ಹಿಂಸೆಯನ್ನು ಬೀಜ ಬಿತ್ತಿದವರ ವಿರುದ್ಧವೇ ಜನರು ಶಸ್ತ್ರಾಸ್ತ್ರ ಹಿಡಿಯಬೇಕಾಗಿದೆ. ಇಂತಹ ಚಟುವಟಿಕೆಗಳ ವಿರುದ್ಧ ದೇಶದ್ರೋಹ ಕಾಯ್ದೆಯಡಿ ಪ್ರಕರಣ ದಾಖಲಿಸಬೇಕು ಎಂದು ಹರಿಪ್ರಸಾದ್ ಹರಿಹಾಯ್ದರು.

ಪ್ರತಿಯೊಬ್ಬ ಕಾಂಗ್ರೆಸ್ ಕಾರ್ಯಕರ್ತರೂ ಗಾಂಧೀಜಿ ಆದರ್ಶಗಳನ್ನು ಜನರಿಗೆ ತಲುಪಿಸಬೇಕು. ಸರಳ ಜೀವನ-ಉನ್ನತ ಚಿಂತನೆ, ಸರ್ವಧರ್ಮ ಸಮಭಾವ ಹಾಗೂ ಶಾಂತಿ-ಸದ್ಭಾವನೆ ತತ್ವಗಳನ್ನು ಹೆಚ್ಚು ಪ್ರಚಾರ ಮಾಡಬೇಕು ಎಂದು ಹರಿಪ್ರಸಾದ್ ಕರೆ ನೀಡಿದರು.

ಪ್ರಧಾನಿ ಕ್ಷಮೆಯಾಚಿಸಬೇಕು: ಆರೆಸ್ಸೆಸ್ ಶತಮಾನೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿರುವುದಕ್ಕಾಗಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಜನತೆಗೆ ಕ್ಷಮೆಯಾಚಿಸಬೇಕು. ಧರ್ಮದ ಹೆಸರಿನಲ್ಲಿ ರಾಜಕೀಯ ಮಾಡಿ, ದ್ವೇಷ ಮತ್ತು ಭೇದಭಾವ ಸೃಷ್ಟಿಸುವ ಸಂಘಟನೆ ಇದು. ಇಂತಹವರ ಪರವಾಗಿ ನಿಲ್ಲುವುದು ಸಂವಿಧಾನದ ಗೌರವವನ್ನು ಕುಗ್ಗಿಸುವಂತದ್ದು ಎಂದು ಹರಿಪ್ರಸಾದ್ ತೀವ್ರವಾಗಿ ಹೇಳಿದರು.

ಮೋದಿ ಪ್ರಧಾನಿ ಸ್ಥಾನಕ್ಕೆ ರಾಜೀನಾಮೆ ನೀಡಲಿ: ಬಿ.ಕೆ.ಹರಿಪ್ರಸಾದ್

ಸಾಂವಿಧಾನಿಕ ಹುದ್ದೆಯಲ್ಲಿದ್ದೂ, ಸಂವಿಧಾನ ವಿರೋಧಿ ಸಂಘಟನೆಯ ಪ್ರಚಾರ ನಡೆಸುವುದು ಪ್ರಧಾನಿ ಹುದ್ದೆಗೆ ಶೋಭೆಯಲ್ಲ. ಕೂಡಲೇ ಪ್ರಧಾನಿ ನರೇಂದ್ರ ಮೋದಿ ಪ್ರಧಾನಿ ಸ್ಥಾನಕ್ಕೆ ರಾಜೀನಾಮೆ ನೀಡಿ ಆರೆಸ್ಸೆಸ್ ಸಂಘಟನೆಯ ಪ್ರಚಾರ ಪ್ರಮುಖ್ ಜವಾಬ್ದಾರಿ ವಹಿಸಿಕೊಳ್ಳಲಿ ಎಂದು ಬಿ.ಕೆ.ಹರಿಪ್ರಸಾದ್ ತಮ್ಮ ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿದ್ದಾರೆ.

ಆರೆಸ್ಸೆಸ್ ನೂರು ವರ್ಷದ ನೆನಪಿಗೆ ಪ್ರಧಾನ ಮಂತ್ರಿಗಳು ಅಂಚೆ ಚೀಟಿ ಹಾಗೂ ನಾಣ್ಯ ಬಿಡುಗಡೆ ಮಾಡಿರುವುದು ಸಂವಿಧಾನಕ್ಕೆ ಬಗೆದ ದ್ರೋಹ ಹಾಗೂ ಇತಿಹಾಸಕ್ಕೆ ಮಾಡಿದ ಅಪಚಾರ. ಸ್ವತಂತ್ರ ಚಳುವಳಿಯ ವಿರೋಧಿಯಾಗಿದ್ದ ಆರೆಸ್ಸೆಸ್ ಸಂವಿಧಾನ ವಿರೋಧಿ ಚಟುವಟಿಕೆಯಲ್ಲಿ ನೂರು ವರ್ಷದಿಂದಲೂ ಸಕ್ರಿಯವಾಗಿ ತೊಡಗಿಸಿಕೊಂಡಿದೆ ಎಂದಿದ್ದಾರೆ.

ದೇಶದ ಸೌಹಾರ್ದತೆ, ಐಕ್ಯತೆ, ಪ್ರಜಾಪ್ರಭುತ್ವ ಹಾಗೂ ಜಾತ್ಯಾತೀತ ಆಶಯಗಳಿಗೆ ಸಂಘಪರಿವಾರ ಮಾಡಿರುವ ಗಾಯಗಳಿಗೆ ಲೆಕ್ಕವಿಲ್ಲ. ಭಾರತದ ಸಂವಿಧಾನದ ಬದಲು ಮನುಸ್ಮೃತಿಯನ್ನು ಜಾರಿ ಮಾಡಲು ಹೊರಟಿರುವ ಮನುವಾದಿ ಸಂಘಟನೆಯನ್ನು ಪ್ರಧಾನಿ ಹುದ್ದೆಯಲ್ಲಿದ್ದು ಪ್ರಚಾರ ನಡೆಸುವುದು ಅಕ್ಷಮ್ಯ ಎಂದು ಹರಿಪ್ರಸಾದ್ ಟೀಕಿಸಿದ್ದಾರೆ.

ಕೋಮುದ್ವೇಷ, ಕೊಲೆ, ಪಿತೂರಿ, ಸಮಾಜದ ಸ್ವಾಸ್ಥ್ಯವನ್ನೇ ಹಾಳುಗೆಡವುತ್ತಿರುವ ಸಂಘಟನೆಯ ಶತಮಾನೋತ್ಸದಲ್ಲಿ ಅಂಚೆ ಹಾಗೂ ನಾಣ್ಯ ಬಿಡುಗಡೆ ಮಾಡಿದ್ದು ಯಾವ ಪುರುಷರ್ಥಕ್ಕಾಗಿ? 1963ರಲ್ಲಿ ಗಣರಾಜ್ಯೋತ್ಸವದಲ್ಲಿ ಭಾಗವಹಿಸಿರುವ ಸಂಘದ ಚಿತ್ರವನ್ನು ಅಂಚೆಯಲ್ಲಿ ಹಾಕಿರುವುದು ಇತಿಹಾಸದ ವ್ಯಂಗ್ಯ, ಸಂಘ ಸುಳ್ಳನ್ನೇ ಸತ್ಯವನ್ನಾಗಿಸುವ ವ್ಯರ್ಥ ಪ್ರಯತ್ನವಷ್ಟೇ ಎಂದು ಹರಿಪ್ರಸಾದ್ ತಿಳಿಸಿದ್ದಾರೆ.

ನಾಣ್ಯದಲ್ಲಿ ಆರೆಸ್ಸೆಸ್ ಪ್ರತಿಪಾದಿಸುವ ಭಾಗವ ಧ್ವಜವನ್ನು ಸೇರಿಸುವ ಮೂಲಕ ಸಂವಿಧಾನದ ಧರ್ಮನಿರಪೇಕ್ಷ ಸಿದ್ಧಾಂತವನ್ನು ಅವಮಾನಿಸಿದೆ. ಇಂತಹ ಕೃತ್ಯಗಳನ್ನ ಬಲವಾಗಿ ಖಂಡಿಸಿ, ಸಂವಿಧಾನ ವಿರೋಧಿ ಶಕ್ತಿಗಳನ್ನು ಮಟ್ಟ ಹಾಕಬೇಕಿದೆ ಎಂದು ಹರಿಪ್ರಸಾದ್ ಹೇಳಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X