Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಬೌದ್ಧಧರ್ಮ ಪ್ರಚಾರಕ್ಕೊಳಪಟ್ಟಿಲ್ಲ,...

ಬೌದ್ಧಧರ್ಮ ಪ್ರಚಾರಕ್ಕೊಳಪಟ್ಟಿಲ್ಲ, ಧರ್ಮವೇ ಸೆಳೆಯುತ್ತಿತ್ತು: ಮೂಡ್ನಾಕೂಡು ಚಿನ್ನಸ್ವಾಮಿ

ವಾರ್ತಾಭಾರತಿವಾರ್ತಾಭಾರತಿ10 Oct 2023 10:42 PM IST
share
ಬೌದ್ಧಧರ್ಮ ಪ್ರಚಾರಕ್ಕೊಳಪಟ್ಟಿಲ್ಲ, ಧರ್ಮವೇ ಸೆಳೆಯುತ್ತಿತ್ತು: ಮೂಡ್ನಾಕೂಡು ಚಿನ್ನಸ್ವಾಮಿ

ಬೆಂಗಳೂರು, ಅ.10: ಮೊದಲಿನಿಂದಲೂ ಯಾರೂ ಬೌದ್ಧ ಧರ್ಮವನ್ನು ಪ್ರಚಾರ ಮಾಡಿಲ್ಲ. ಧರ್ಮವೇ ತನ್ನತ್ತ ಎಲ್ಲರನ್ನೂ ಸೆಳೆಯುತ್ತಿತ್ತು. ಬೌದ್ಧರು ಎಲ್ಲೇ ಹೋದರು ಅವರ ಹಿಂದೆ ಜನರು ಸೆಳೆಯುತ್ತಿದ್ದರು. ಅದು ಬೌದ್ಧ ಧರ್ಮಕ್ಕಿರುವ ಶಕ್ತಿ ಎಂದು ಹಿರಿಯ ಸಾಹಿತಿ ಮೂಡ್ನಾಕೂಡು ಚಿನ್ನಸ್ವಾಮಿ ಬಣ್ಣಿಸಿದ್ದಾರೆ.

ಮಂಗಳವಾರ ನಗರದ ರವೀಂದ್ರ ಕಲಾಕ್ಷೇತ್ರದಲ್ಲಿ ಭಾರತೀಯ ಸಮಾಜದ ಏಳಿಗೆಗೆ ಬೌದ್ಧ ಧಮ್ಮ ಒಂದೇ ದಾರಿ ಎಂಬ ಆಶಯದಡಿ ಕೇರಳದಿಂದ ನಾಗಪುರದ ವರೆಗೆ ನಡೆಯುತ್ತಿರುವ ‘ಅಶೋಕ ಅಂಬೇಡ್ಕರ್ ಧಮ್ಮ ಯಾತ್ರೆ’ಯು ಕರ್ನಾಟಕವನ್ನು ಪ್ರವೇಶಿಸಿದ ಹಿನ್ನೆಲೆ ಯಾತ್ರೆಯ ಬೀಳ್ಕೊಡುಗೆ ಸಮಾರಂಭದಲ್ಲಿ ಮಾತನಾಡಿದ ಅವರು, ಬುದ್ಧನ ಪ್ರವಚನ ಕೇಳುತ್ತಿದ್ದ ಯಶ ಎಂಬ ಯುವಕ ಮೊದಲು ಬೌದ್ಧ ಧರ್ಮಕ್ಕೆ ಮತಾಂತರಗೊಂಡ, ತದನಂತರದಲ್ಲಿ ಎಲ್ಲರೂ ತಂಡೋಪತಂಡವಾಗಿ ಮತಾಂತರವಾದರು. ಬೇರೆ ಧರ್ಮಗಳು ಆಕ್ರಮಣಕಾರಿಯಾಗಿ ಪ್ರಚಾರ ಕೈಗೊಂಡು ನೆಲೆ ಇಲ್ಲದೆ ಹೋದವು. ಆದರೆ ಬೌದ್ಧ ಧರ್ಮ ತನ್ನ ವಿಚಾರಗಳಿಂದ ಜನರನ್ನು ಸೆಳೆಯಿತು ಎಂದರು.

ದಲಿತ ಮುಖಂಡ ಮಾವಳ್ಳಿ ಶಂಕರ್ ಮಾತನಾಡಿ, ಭಾರತವನ್ನು ಬೌದ್ಧಮಯ ಮಾಡಿದ್ದು ಸಾಮ್ರಾಟ ಅಶೋಕ. ಅಂತಹ ಮಹಾನ್ ನಾಯಕನನ್ನು ಇಂದು ಮರೆಮಾಚಿಸಲಾಗುತ್ತಿದೆ. ಅಹಿಂಸೆ, ಸತ್ಯ, ನ್ಯಾಯ, ಶೋಷಣೆ ವಿರುದ್ಧ ಹೋರಾಡಿದ ಬುದ್ಧ, ಅಶೋಕ, ಅಂಬೇಡ್ಕರ್ ಅವರ ನೆರಳಿನಲ್ಲಿ ನಾವೆಲ್ಲರೂ ಬದುಕಬೇಕಿದೆ ಎಂದರು.

ಭಾರತದ ನೆಲವನ್ನು ಅಗೆದಷ್ಟು ನಮಗೆ ಬುದ್ಧನ ಚಿಂತನೆಗಳನ್ನು ದೊರೆಯುತ್ತವೆ. ನಾವೆಲ್ಲರೂ ಸಾಂಸ್ಕøತಿಕ ಪರಂಪರೆಯನ್ನು ಉಳಿಸಿಕೊಳ್ಳುವ ಪ್ರಯತ್ನ ಮಾಡಬೇಕು, ಸುಳ್ಳಿನ ಮಂದಿರಗಳನ್ನು ಕಟ್ಟುವುದರಿಂದ ಯಾವುದೇ ಪ್ರಯೋಜನವಿಲ್ಲ ಎಂದು ಮಾವಳ್ಳಿ ಶಂಕರ್ ತಿಳಿಸಿದರು.

ಹೋರಾಟಗಾರ ಗೊಲ್ಲಹಳ್ಳಿ ಶಿವಪ್ರಸಾದ್ ಮಾತನಾಡಿ, ಇಂದು ಬುದ್ಧ ಭಾರತಕ್ಕೆ ಬಹಳ ಅನಿವಾರ್ಯ. ಭಾರತಕ್ಕೆ ಬುದ್ಧ, ಬಸವ, ಭೀಮ ಬೆಳಕನ್ನು ನೀಡಿದ್ದಾರೆ. ಆದರೆ ಇಂದು ಅನೇಕರು ಭಾರತದ ನೆಲದಲ್ಲಿ ಕೌರ್ಯ, ಹಿಂಸೆ, ಅಧರ್ಮ, ದಬ್ಬಾಳಿಕೆ, ದೌರ್ಜನ್ಯವನ್ನು ಬಿತ್ತಲು ಹೊರಡಿದ್ದಾರೆ. ಇದನ್ನು ಪ್ರಜ್ಞಾವಂತರಾಗಿ ನಾವೆಲ್ಲ ಅರಿತುಕೊಳ್ಳಬೇಕು ಎಂದರು. ಸಮಾರಂಭದಲ್ಲಿ ಹೋರಾಟಗಾರ್ತಿ ವೆಂಕಮ್ಮ, ಜನಪರ ಹೋರಾಟಗಾರ ಹುಲಿಕುಂಟೆಮೂರ್ತಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X