Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. Budget Session 2026 | ಜಯಂತಿಗಳಲ್ಲಿ...

Budget Session 2026 | ಜಯಂತಿಗಳಲ್ಲಿ ಡಿಜೆ ನಿಷೇಧಕ್ಕೆ ಸಚಿವ ಪಟ್ಟು: ವಿಧಾನಸಭೆಯಲ್ಲಿ ಮಾತಿನ ಚಕಮಕಿ

ವಾರ್ತಾಭಾರತಿವಾರ್ತಾಭಾರತಿ18 March 2026 9:01 PM IST
share
Budget Session 2026 | ಜಯಂತಿಗಳಲ್ಲಿ ಡಿಜೆ ನಿಷೇಧಕ್ಕೆ ಸಚಿವ ಪಟ್ಟು: ವಿಧಾನಸಭೆಯಲ್ಲಿ ಮಾತಿನ ಚಕಮಕಿ

ಬೆಂಗಳೂರು : ರಾಜ್ಯದಲ್ಲಿ ಆಚರಿಸುತ್ತಿರುವ ಎಲ್ಲ ಜಯಂತಿಗಳಲ್ಲಿ ಡಿಜೆ, ಅಶ್ಲೀಲ ನೃತ್ಯ(ಐಟಂ ಸಾಂಗ್) ಕಡ್ಡಾಯವಾಗಿ ನಿಷೇಧಿಸಿ ಎಂದು ಸಚಿವ ಸಂತೋಷ್‌ ಲಾಡ್ ಆಗ್ರಹ ವಿಚಾರವು ವಿಧಾನಸಭೆಯಲ್ಲಿ ಆಡಳಿತ ಮತ್ತು ವಿಪಕ್ಷ ನಡುವೆ ಮಾತಿನ ಚಕಮಕಿಗೆ ಕಾರಣವಾಯಿತು.

ಬುಧವಾರ ವಿಧಾನಸಭೆಯ ಪ್ರಶ್ನೋತ್ತರ ಕಲಾಪದಲ್ಲಿ ರಾಜ್ಯದಲ್ಲಿ ವಿವಿಧ ಜಿಲ್ಲೆಗಳಲ್ಲಿ ಆಯೋಜಿಸುವ ಉತ್ಸವಗಳಿಗೆ ಅನುದಾನ ವಿಚಾರವಾಗಿ ಕೇಳಿದ ಪ್ರಶ್ನೆಯ ಚರ್ಚೆಯ ಸಂದರ್ಭದಲ್ಲಿ ಮಧ್ಯಪ್ರವೇಶ ಮಾಡಿದ ಸಚಿವ ಸಂತೋಷ್‌ ಲಾಡ್, ʼಎಲ್ಲ ಜಯಂತಿಗಳಲ್ಲಿ ಡಿಜೆ ಬಹಳ ದೊಡ್ಡ ಸಮಸ್ಯೆ ಆಗಿದೆ. ರಾಜಕೀಯವಾಗಿ ಈ ಬಗ್ಗೆ ವಿಚಾರ ಮಾಡಬೇಕು. ಯಾವುದೇ ಜಯಂತಿಗಳಲ್ಲಿ ಡಿಜೆಗಳಲ್ಲಿ, ಅಶ್ಲೀಲ ನೃತ್ಯ ಇಲ್ಲದೆ ದೇವರ ಮುಂದೆ ಹೋಗಲ್ಲ. ಇದು ಯಾವುದೇ ಸಂಸ್ಕೃತಿಗೆ ಒಳ್ಳೆಯದಲ್ಲʼ ಎಂದು ಸದನದ ಗಮನ ಸೆಳೆದರು.

ಇದನ್ನು ಬೆಂಬಲಿಸಿದ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ್ ತಂಗಡಗಿ, ಇದೊಂದು ಉತ್ತಮವಾದ ಸಲಹೆಯಾಗಿದೆ. ಬಿಜೆಪಿ ನಾಯಕರು ಇದಕ್ಕೆ ಸ್ವಲ್ಪ ಸಹಕಾರ ಮಾಡಬೇಕು. ಎಲ್ಲರೂ ಒಪ್ಪಿಗೆ ನೀಡಿದರೆ ನಾವು ಆದೇಶ ಹೊರಡಿಸುತ್ತೇವೆ ಎಂದರು.

ಸಚಿವ ಪ್ರಿಯಾಂಕ್ ಖರ್ಗೆ ಮಧ್ಯಪ್ರವೇಶ ಮಾಡಿ, ನಮ್ಮಲ್ಲಿ ಡಿಜೆ ಸಂಸ್ಕೃತಿ ಇರಲಿಲ್ಲ. ಡಿಜೆ ಸಂಸ್ಕೃತಿ ಈಗ ಹುಟ್ಟಿದ್ದು. ಡಿಜೆಗಳಲ್ಲಿ ಹಾಕುವ ಹಾಡುಗಳ ಬಗ್ಗೆ ಸಚಿವರು ಆಕ್ಷೇಪ ವ್ಯಕ್ತಪಡಿಸಿದ್ದಾರೆ ಹೊರತು ಭಜನೆ ಪದ್ಯಕ್ಕೆ ಯಾರೂ ಬೇಡ ಎನ್ನುತ್ತಿಲ್ಲ ಎಂದು ಉಲ್ಲೇಖಿಸಿದರು.

ಈ ವೇಳೆ ಬಿಜೆಪಿ ಸದಸ್ಯ ಚನ್ನಬಸಪ್ಪ (ಚೆನ್ನಿ) ಆಕ್ಷೇಪ ವ್ಯಕ್ತಪಡಿಸಿ, ಡಿಜೆ ಮಾತ್ರ ಏಕೆ? ಸುಪ್ರೀಂ ಕೋರ್ಟ್ ಆದೇಶದಲ್ಲಿ ಆಝಾನ್ ಧ್ವನಿವರ್ಧಕ ನಿಷೇಧ ಮಾಡಿ ಎಂದಿದೆ. ಇದನ್ನು ಮಾಡುವಿರಾ ಎಂದು ಸವಾಲು ಹಾಕಿದರು.

ಇದಕ್ಕೆ ಸ್ಪಷ್ಟನೆ ನೀಡಿದ ಸ್ಪೀಕರ್ ಖಾದರ್, ಸುಪ್ರೀಂ ಕೋರ್ಟ್ ಆದೇಶ ಶಬ್ಧದ ಪ್ರಮಾಣಕ್ಕೆ ಸಂಬಂಧಿಸಿದಂತದ್ದು. ಸರಕಾರ ಆದೇಶ ಮಾಡಿದರೆ ಅದನ್ನು ಪಾಲನೆ ಮಾಡಬೇಕು ಎಂದರು.

ಡಿಜೆ ಶಬ್ಧದಿಂದಲೇ ಹೃದ್ರೋಗ.: ಡಿಜೆ ಶಬ್ಧ ಹೃದ್ರೋಗ ಸಮಸ್ಯೆ ಇರುವವರಿಗೆ ಹಾಗೂ ಫೇಸ್ ಮೇಕರ್ ಹಾಕಿದವರಿಗೆ ತುಂಬಾ ತೊಂದರೆ ಆಗುತ್ತಿದೆ. ಎಳೆಯ ಮಕ್ಕಳು ಕಿವಿ ಮುಚ್ಚಿಕೊಳ್ಳುತ್ತಾರೆ. ಪೊಲೀಸರು ನಿಸ್ಸಾಹಕರಾಗಿದ್ದಾರೆ. ಡಿಜೆ ಶಬ್ಧ ಮಾಲಿನ್ಯ ಹಾಗೂ ದುಷ್ಪರಿಣಾಮದ ಬಗ್ಗೆ ಗಂಭೀರ ಚರ್ಚೆ ಆಗಬೇಕು ಎಂದು ಬಿಜೆಪಿ ಸದಸ್ಯ ಸುರೇಶ್ ಕುಮಾರ್ ಆಗ್ರಹಿಸಿದರು. ಆಗ ಸ್ಪೀಕರ್ ಯು.ಟಿ.ಖಾದರ್, ಈ ಕುರಿತ ಚರ್ಚೆಗೆ ಸಮಯ ನೀಡಲಾಗುವುದು ಎಂದು ಪ್ರಕಟಿಸಿದರು.

Tags

Budget Session 2026
share
ವಾರ್ತಾಭಾರತಿ
ವಾರ್ತಾಭಾರತಿ
Next Story
X