Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಜಾತಿಗಣತಿ ಮರು ಸಮೀಕ್ಷೆಗೆ ಸಚಿವ ಸಂಪುಟ...

ಜಾತಿಗಣತಿ ಮರು ಸಮೀಕ್ಷೆಗೆ ಸಚಿವ ಸಂಪುಟ ಒಪ್ಪಿಗೆ

ವಾರ್ತಾಭಾರತಿವಾರ್ತಾಭಾರತಿ12 Jun 2025 2:41 PM IST
share
ಜಾತಿಗಣತಿ ಮರು ಸಮೀಕ್ಷೆಗೆ ಸಚಿವ ಸಂಪುಟ ಒಪ್ಪಿಗೆ

ಬೆಂಗಳೂರು : ರಾಜ್ಯ ಹಿಂದುಳಿದ ವರ್ಗಗಳ ಆಯೋಗವು 2015ರಲ್ಲಿ ನಡೆಸಿದಂತಹ ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆ(ಜಾತಿ ಗಣತಿ)ಯು ಹತ್ತು ವರ್ಷಗಳು ಕಳೆದಿರುವ ಹಿನ್ನೆಲೆಯಲ್ಲಿ, ರಾಜ್ಯ ಹಿಂದುಳಿದ ವರ್ಗಗಳ ಆಯೋಗ ಅಧಿನಿಯಮ 1995 ಸೆಕ್ಷನ್ 11 ರಂತೆ ಮರು ಸಮೀಕ್ಷೆ ಕೈಗೊಳ್ಳಲು ಸಚಿವ ಸಂಪುಟವು ಸರ್ವಾನುಮತದ ತೀರ್ಮಾನ ಕೈಗೊಂಡಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಗುರುವಾರ ವಿಧಾನಸೌಧದಲ್ಲಿ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷಾ ವರದಿಯ ಕುರಿತು ಚರ್ಚಿಸಲು ಕರೆಯಲಾಗಿದ್ದ ವಿಶೇಷ ಸಚಿವ ಸಂಪುಟ ಸಭೆಯ ಬಳಿಕ ಅವರು ಸಮ್ಮೇಳನ ಸಭಾಂಗಣದಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದರು.

ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆಯನ್ನು 54 ಮಾನದಂಡಗಳನ್ನು ಇಟ್ಟುಕೊಂಡು ನಡೆಸಲಾಗಿತ್ತು. 2015ರ ಎ.11 ರಂದು ಪ್ರಾರಂಭವಾದ ಸಮೀಕ್ಷೆಯು ಅದೇ ಸಾಲಿನ ಮೇ 30ರಂದು ಮುಕ್ತಾಯವಾಗಿದೆ. ಸುಮಾರು 1.60 ಲಕ್ಷ ಸಿಬ್ಬಂದಿಗಳು ಈ ಸಮೀಕ್ಷೆಯಲ್ಲಿ ತೊಡಗಿಸಿಕೊಂಡಿದ್ದರು. 2011ರ ಜನಗಣತಿ ಪ್ರಕಾರ ಕರ್ನಾಟಕದಲ್ಲಿ 6.11 ಕೋಟಿ ಜನಸಂಖ್ಯೆಯಿತ್ತು. ಇದು 2015ರ ವೇಳೆಗೆ 6.35 ಕೋಟಿ ಎಂದು ಅಂದಾಜಿಸಲಾಗಿದೆ. 5.98 ಕೋಟಿ ಜನರು ಸಮೀಕ್ಷೆಗೆ ಒಳಪಟ್ಟಿದ್ದಾರೆ ಎಂದು ಮುಖ್ಯಮಂತ್ರಿ ತಿಳಿಸಿದರು.

ಕಾನೂನು ಪ್ರಕಾರ ತೀರ್ಮಾನ: ಎಚ್.ಕಾಂತರಾಜು ನೇತೃತ್ವದ ಆಯೋಗ ಸಮೀಕ್ಷೆ ಮಾಡಿ 10 ವರ್ಷಗಳು ಕಳೆದಿದೆ. ಈ ಅವಧಿಯಲ್ಲಿ ಜನಸಂಖ್ಯೆ ಹೆಚ್ಚಾಗಿರುತ್ತದೆ. ಆರ್ಥಿಕವಾಗಿ, ಸಾಮಾಜಿಕವಾಗಿ, ಶೈಕ್ಷಣಿಕವಾಗಿ ಅನೇಕ ಬದಲಾವಣೆಗಳೂ ಆಗಿರುತ್ತವೆ. ಹತ್ತು ವರ್ಷಗಳಾದ ನಂತರ ಹೊಸದಾಗಿ ಸಮೀಕ್ಷೆ ನಡೆಸಬೇಕೆಂದು ಹಿಂದುಳಿದ ವರ್ಗಗಳ ಆಯೋಗದ ಕಾನೂನಿನ ಸೆಕ್ಷನ್ 11(1) ರಲ್ಲಿ ಹೇಳಲಾಗಿದೆ. ಪಕ್ಷದ ವರಿಷ್ಠರು ನಮಗೆ ಇದೇ ಸಲಹೆಯನ್ನು ನೀಡಿದ್ದಾರೆ. ಆದುದರಿಂದ, ಕಾನೂನು ಪ್ರಕಾರ ತೀರ್ಮಾನ ತೆಗೆದುಕೊಂಡಿದ್ದೇವೆ ಎಂದು ಸಿದ್ದರಾಮಯ್ಯ ಹೇಳಿದರು.

ಈ ಹಿಂದಿನ ನಮ್ಮ ಸರಕಾರದ ಅವಧಿಯಲ್ಲಿ ಹಿಂದುಳಿದ ವರ್ಗಗಳ ಆಯೋಗದ ವರದಿ ಮತ್ತು ಅದರ ಶಿಫಾರಸ್ಸುಗಳು ಅಂತಿಮ ಗೊಂಡಿರಲಿಲ್ಲ. 2018ರಲ್ಲಿ ಸಮ್ಮಿಶ್ರ ಸರಕಾರ ರಚನೆಯಾಗಿ ಎಚ್.ಡಿ.ಕುಮಾರಸ್ವಾಮಿ ಮುಖ್ಯಮಂತ್ರಿಯಾದರು. ಪುಟ್ಟರಂಗಶೆಟ್ಟಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಸಚಿವರಾದರು. ಆ ವೇಳೆಗೆ ವರದಿ ಪೂರ್ಣಗೊಂಡಿತ್ತು ಎಂದು ಅವರು ತಿಳಿಸಿದರು.

ವರದಿ ಪಡೆಯದಂತೆ ತಡೆದ ಎಚ್.ಡಿ.ಕುಮಾರಸ್ವಾಮಿ: ಕಾಂತರಾಜು ಹಾಗೂ ಆಯೋಗದ ಸದಸ್ಯರು ಪುಟ್ಟರಂಗ ಶೆಟ್ಟಿಯನ್ನು ಭೇಟಿ ಮಾಡಿ ವರದಿ ಪಡೆಯುವಂತೆ ಕೋರಿದಾಗ, ಅಂದಿನ ಮುಖ್ಯಮಂತ್ರಿಯಾಗಿದ್ದ ಎಚ್.ಡಿ. ಕುಮಾರಸ್ವಾಮಿ ಒತ್ತಡ ಹಾಕಿ ವರದಿಯನ್ನು ಪಡೆಯದಂತೆ ತಡೆದರು. ಕಾಂತರಾಜು ಅವರ ಅವಧಿ ಮುಗಿದ ನಂತರ ಜಯಪ್ರಕಾಶ್ ಹೆಗ್ಡೆಯವರನ್ನು ಬಿಜೆಪಿ ಸರಕಾರ ಆಯೋಗದ ಅಧ್ಯಕ್ಷರನ್ನಾಗಿ ನೇಮಕ ಮಾಡಿತು. ಸದಸ್ಯರೂ ಬಿಜೆಪಿಯವರೇ ಆಗಿದ್ದರು ಎಂದು ಸಿದ್ದರಾಮಯ್ಯ ಹೇಳಿದರು.

ಜಯಪ್ರಕಾಶ್ ಹೆಗ್ಡೆಯವರು ಸಮೀಕ್ಷೆಯ ದತ್ತಾಂಶಗಳ ಆಧಾರದ ಮೇಲೆ ಸರಕಾರಕ್ಕೆ 2024ರ ಫೆ.29ರಂದು ಶಿಫಾರಸ್ಸುಗಳನ್ನು ಒಳಗೊಂಡ ವರದಿಯನ್ನು ಸಲ್ಲಿಸಿದರು. ಲೋಕಸಭಾ ಚುನಾವಣೆ ಬಂದಿದ್ದರಿಂದ ವರದಿಯ ಬಗ್ಗೆ ಚರ್ಚೆ ಮಾಡಲು ಆಗಿರಲಿಲ್ಲ. ನಂತರ ವರದಿಯನ್ನು 2025ರಲ್ಲಿ ಸಚಿವ ಸಂಪುಟದಲ್ಲಿ ಮಂಡಿಸಲಾಯಿತು. ಮಂತ್ರಿ ಮಂಡಲದ ಸದಸ್ಯರು ವರದಿ ಬಗ್ಗೆ ತಮ್ಮ ಅಭಿಪ್ರಾಯಗಳನ್ನು ನೀಡಿದ್ದಾರೆ. ಅಂತಿಮವಾಗಿ ಇಂದು ವರದಿಯ ಬಗ್ಗೆ ಚರ್ಚಿಸಿ ತೀರ್ಮಾನ ಕೈಗೊಳ್ಳಲಾಗಿದೆ ಎಂದು ಅವರು ವಿವರಿಸಿದರು.

ಕೇಂದ್ರ ಸರಕಾರ ಸಾಮಾಜಿಕ-ಶೈಕ್ಷಣಿಕ ಸಮೀಕ್ಷೆ ನಡೆಸುವುದಾಗಿ ಹೇಳಿಲ್ಲ: ಕೇಂದ್ರ ಸರಕಾರ ನಡೆಸಲಿರುವ ಜಾತಿ ಗಣತಿಗಿಂತ ಈ ಸಮೀಕ್ಷೆ ಹೇಗೆ ಭಿನ್ನವಾಗಿ ಇರುತ್ತದೆ ಎಂಬ ಪ್ರಶ್ನೆಗೆ ಉತ್ತರಿಸಿದ ಮುಖ್ಯಮಂತ್ರಿ, ಕೇಂದ್ರ ಸರಕಾರವೂ ಎಲ್ಲಿಯೂ ಕೂಡಾ ಸಾಮಾಜಿಕ-ಶೈಕ್ಷಣಿಕ ಸಮೀಕ್ಷೆ ನಡೆಸುವುದಾಗಿ ಹೇಳಿಲ್ಲ. ಆದುದರಿಂದ, ನಾವು ಈ ಸಮೀಕ್ಷೆ ವರದಿ ಅನ್ವಯ ಸಾಮಾಜಿಕ ನ್ಯಾಯ ನೀಡಲು ಬದ್ಧವಾಗಿದ್ದೇವೆ ಎಂದು ಹೇಳಿದರು.

ತೆಲಂಗಾಣ ರಾಜ್ಯದಲ್ಲಿ 70 ದಿನಗಳಲ್ಲಿ ಈ ಸಮೀಕ್ಷೆ ನಡೆಸಿದ್ದಾರೆ. ನಮ್ಮ ರಾಜ್ಯದಲ್ಲಿ 90 ದಿನಗಳ ಒಳಗೆ ಸಮೀಕ್ಷೆ ನಡೆಸಿ, ವರದಿಯನ್ನು ಸಲ್ಲಿಸುವಂತೆ ರಾಜ್ಯ ಹಿಂದುಳಿದ ವರ್ಗಗಳ ಆಯೋಗಕ್ಕೆ ಸೂಚಿಸಲಾಗುವುದು ಎಂದು ಸಿದ್ದರಾಮಯ್ಯ ಹೇಳಿದರು.

ಈ ಹಿಂದಿನ ಸಮೀಕ್ಷೆ ಕುರಿತು ಒಕ್ಕಲಿಗ ಹಾಗೂ ಲಿಂಗಾಯತ ಸಮುದಾಯಗಳಿಂದ ಆಕ್ಷೇಪಣೆ ಇತ್ತು. ಈ ಸಮೀಕ್ಷೆಯಲ್ಲಿ ಆ ಸಮುದಾಯಗಳಿಗೆ ಯಾವ ರೀತಿ ಭರವಸೆ ನೀಡುತ್ತೀರಾ ಎಂಬ ಪ್ರಶ್ನೆಗೆ ಉತ್ತರಿಸಿದ ಮುಖ್ಯಮಂತ್ರಿ, ಸೆಕ್ಷನ್ 11 ರಂತೆ ಕಾನೂನು ರೀತಿಯ ಕ್ರಮ ಕೈಗೊಳ್ಳುತ್ತಿದ್ದೇವೆ ಎಂದರು.

ಪತ್ರಿಕಾಗೋಷ್ಠಿಯಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್.ಕೆ.ಪಾಟೀಲ್, ಕನ್ನಡ ಮತ್ತು ಸಂಸ್ಕೃತಿ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಶಿವರಾಜ್ ತಂಗಡಗಿ, ಸಮಾಜ ಕಲ್ಯಾಣ ಸಚಿವ ಡಾ.ಎಚ್.ಸಿ.ಮಹದೇವಪ್ಪ ಉಪಸ್ಥಿತರಿದ್ದರು.

ಬಿಜೆಪಿಯ ಆರೋಪಗಳಿಗೆ ಪ್ರತಿಕ್ರಿಯಿಸುವುದಿಲ್ಲ: ಮುಖ್ಯಮಂತ್ರಿ

ಜಾತಿ ಗಣತಿಯ ಮರು ಸಮೀಕ್ಷೆಗೆ ಸಂಬಂಧಿಸಿದಂತೆ ಬಿಜೆಪಿಯ ಯಾವೊಬ್ಬ ನಾಯಕರ ಆರೋಪಗಳಿಗೂ ಈ ಹಂತದಲ್ಲಿ ನಾನು ಪ್ರತಿಕ್ರಿಯಿಸುವುದಿಲ್ಲ. ಮುಂದಿನ ದಿನಗಳಲ್ಲಿ ಅವರ ಎಲ್ಲ ಆರೋಪಗಳಿಗೂ ಉತ್ತರ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

Tags

Cabinetcaste census
share
ವಾರ್ತಾಭಾರತಿ
ವಾರ್ತಾಭಾರತಿ
Next Story
X