Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಸರಕಾರಿ ಜಾಗಗಳಲ್ಲಿ ಖಾಸಗಿ ಸಂಘಟನೆಗಳ...

ಸರಕಾರಿ ಜಾಗಗಳಲ್ಲಿ ಖಾಸಗಿ ಸಂಘಟನೆಗಳ ಚಟುವಟಿಕೆಗಳಿಗೆ ಪೂರ್ವಾನುಮತಿ ಕಡ್ಡಾಯ : ಸಚಿವ ಸಂಪುಟ ನಿರ್ಧಾರ

ವಾರ್ತಾಭಾರತಿವಾರ್ತಾಭಾರತಿ16 Oct 2025 5:36 PM IST
share
ಸರಕಾರಿ ಜಾಗಗಳಲ್ಲಿ ಖಾಸಗಿ ಸಂಘಟನೆಗಳ ಚಟುವಟಿಕೆಗಳಿಗೆ ಪೂರ್ವಾನುಮತಿ ಕಡ್ಡಾಯ : ಸಚಿವ ಸಂಪುಟ ನಿರ್ಧಾರ
ʼಆರೆಸ್ಸೆಸ್‌ ಚಟುವಟಿಕೆಗಳಿಗೆ ನಿಷೇಧʼ ಕೋರಿ ಪತ್ರ ಬರೆದಿದ್ದ ಸಚಿವ ಪ್ರಿಯಾಂಕ್ ಖರ್ಗೆ

ಬೆಂಗಳೂರು, ಅ.16: ಸರಕಾರಿ ಜಾಗಗಳಲ್ಲಿ ಆರೆಸ್ಸೆಸ್ ಚಟುವಟಿಕೆಗಳಿಗೆ ಅವಕಾಶ ನೀಡಬಾರದು ಎಂದು ಸಚಿವ ಪ್ರಿಯಾಂಕ್ ಖರ್ಗೆ, ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಪತ್ರ ಬರೆದಿರುವುದು ವ್ಯಾಪಕ ಚರ್ಚೆಯಾಗುತ್ತಿರುವ ಬೆನ್ನಲ್ಲೆ, ರಾಜ್ಯ ಸಚಿವ ಸಂಪುಟವು ಸರಕಾರಿ ಜಾಗಗಳಲ್ಲಿ ಖಾಸಗಿ ಸಂಘಟನೆಗಳು, ಸಂಸ್ಥೆಗಳು ಯಾವುದೇ ಬಗೆಯ ಚಟುವಟಿಕೆಗಳನ್ನು ನಡೆಸಬೇಕಿದ್ದರೂ ಸಂಬಂಧಪಟ್ಟ ಪ್ರಾಧಿಕಾರಗಳಿಂದ ಪೂರ್ವಾನುಮತಿ ಪಡೆಯುವುದು ಕಡ್ಡಾಯಗೊಳಿಸಲು ಮಹತ್ವದ ನಿರ್ಧಾರ ಕೈಗೊಂಡಿದೆ.

ಗುರುವಾರ ವಿಧಾನಸೌಧದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಕೈಗೊಂಡ ನಿರ್ಧಾರಗಳ ಕುರಿತು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್.ಕೆ.ಪಾಟೀಲ್ ಸುದ್ದಿಗೋಷ್ಠಿಯಲ್ಲಿ ಮಾಹಿತಿ ಒದಗಿಸಿದರು.

ರಾಜ್ಯದಲ್ಲಿ ಹಲವಾರು ಖಾಸಗಿ ಸಂಸ್ಥೆಗಳು, ಸಂಘಗಳು ತಮ್ಮ ಚಟುವಟಿಕೆಗಳು, ಪ್ರಚಾರ, ತರಬೇತಿ, ಉತ್ಸವಗಳು ಹಾಗೂ ಸದಸ್ಯರ ಮತ್ತು ಬೆಂಬಲಿಗರ ಸಭೆಗಳು ನಡೆಸುವ ಉದ್ದೇಶದಿಂದ ಸಾರ್ವಜನಿಕ ಸ್ಥಳಗಳು, ಸರಕಾರದ ಆಸ್ತಿಗಳು, ಜಮೀನುಗಳು, ಆಟದ ಮೈದಾನಗಳು, ಸಾರ್ವಜನಿಕ ರಸ್ತೆಗಳು ಇತ್ಯಾದಿಗಳನ್ನು ಸರಕಾರ ಅಥವಾ ಸಂಬಂಧಿತ ಇಲಾಖೆಗೆ ಮುಂಚಿತವಾಗಿ ಅನುಮತಿ ಪಡೆಯದೆ, ಅನೇಕ ಸಂದರ್ಭಗಳಲ್ಲಿ ಮಾಹಿತಿ ನೀಡದೆ ಬಳಸಿಕೊಳ್ಳುತ್ತಿರುವುದು ಕಂಡು ಬಂದಿದೆ ಎಂದು ಎಚ್.ಕೆ.ಪಾಟೀಲ್ ಹೇಳಿದರು.

ಆದುದರಿಂದ, ಸಾರ್ವಜನಿಕ ಸ್ಥಳ ಹಾಗೂ ಸರಕಾರಿ ಜಾಗಗಳ ಬಳಕೆಗೆ ಸಂಬಂಧಿಸಿದಂತೆ ನಿಯಮಾವಳಿಗಳನ್ನು ರೂಪಿಸಲು ನಿರ್ಧರಿಸಲಾಗಿದೆ. ಈ ಸಂಬಂಧ ವಿವರವಾದ ಸರಕಾರಿ ಆದೇಶವನ್ನು ಹೊರಡಿಸಲಾಗುವುದು. ಸರಕಾರದ, ಸರಕಾರಿ ಸಾಮ್ಯದ ಶಾಲಾ-ಕಾಲೇಜುಗಳು, ಅನುದಾನಿತ ಶೈಕ್ಷಣಿಕ ಸಂಸ್ಥೆಗಳ ಆವರಣದಲ್ಲಿ ಚಟುವಟಿಕೆಗಳನ್ನು ನಡೆಸಲು ಉನ್ನತ ಶಿಕ್ಷಣ ಇಲಾಖೆ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯಿಂದ ಅನುಮತಿ ಪಡೆಯಬೇಕು ಎಂದು ಅವರು ತಿಳಿಸಿದರು.

ಉದ್ಯಾನವನಗಳು, ಆಟದ ಮೈದಾನಗಳು, ಇತರೆ ತೆರೆದ ಸ್ಥಳಗಳಲ್ಲಿ ಚಟುವಟಿಕೆಗಳನ್ನು ನಡೆಸಲು ನಗರಾಭಿವೃದ್ಧಿ ಇಲಾಖೆ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಿಂದ ಅನುಮತಿ ಪಡೆಯಬೇಕು. ಸಾರ್ವಜನಿಕ ರಸ್ತೆಗಳು, ಸರಕಾರದ ಇತರೆ ಆಸ್ತಿ, ಸ್ಥಳಗಳ ಬಳಕೆಗೆ ಸಂಬಂಧಪಟ್ಟ ಜಿಲ್ಲಾಧಿಕಾರಿಗಳು, ಪೊಲೀಸ್ ಆಯುಕ್ತರು ಅಥವಾ ಪೊಲೀಸ್ ಅಧೀಕ್ಷಕರಿಂದ ಅನುಮತಿ ಪಡೆಯಬೇಕು ಎಂದು ಎಚ್.ಕೆ.ಪಾಟೀಲ್ ಹೇಳಿದರು.

ಸಕ್ಷಮ ಪ್ರಾಧಿಕಾರಗಳು ಅನುಮತಿ ನೀಡುವ ಸಂದರ್ಭದಲ್ಲಿ ಸಂವಿಧಾನ ಬದ್ಧವಾದ ನಾಗರಿಕರ ಹಕ್ಕುಗಳಿಗೆ ಚ್ಯುತಿ ಉಂಟಾಗದಂತೆ ಎಚ್ಚರಿಕೆ ವಹಿಸಲು ಅನುವಾಗುವಂತೆ ಸೂಕ್ತ, ವಿವರವಾದ ಮಾರ್ಗಸೂಚಿಯನ್ನು ಆಯಾ ಇಲಾಖೆಗಳು ಹೊರಡಿಸಬೇಕು ಎಂದು ಸಚಿವ ಸಂಪುಟ ನಿರ್ಣಯಿಸಿದೆ ಎಂದು ಅವರು ತಿಳಿಸಿದರು.

ನೂತನ ವಿಧೇಯಕ ಸಾಧ್ಯತೆ?: ಸರಕಾರಿ ಜಾಗಗಳಲ್ಲಿ ಖಾಸಗಿ ಸಂಘ, ಸಂಸ್ಥೆಗಳ ಚಟುವಟಿಕೆಗಳನ್ನು ನಿಯಂತ್ರಿಸುವ ಸಂಬಂಧ ‘ಸರಕಾರಿ ಆವರಣ ಮತ್ತು ಆಸ್ತಿಗಳ ಬಳಕೆ ನಿಯಂತ್ರಣ ಮಸೂದೆ-2025’ ಮಂಡಿಸಲು ಸರಕಾರ ಚಿಂತನೆ ನಡೆಸಿದೆ. ಈ ಸಂಬಂಧ ಕಾನೂನು ಇಲಾಖೆಯು ಕರಡು ಸಿದ್ಧಗೊಳಿಸಿದೆ ಎಂದು ತಿಳಿದು ಬಂದಿದೆ.

ಸರಕಾರ ಆದೇಶ ಉಲ್ಲಂಘಿಸಿ ಯಾರಾದರೂ ಚಟುವಟಿಕೆಗಳನ್ನು ನಡೆಸಿದರೆ ಅಂತಹ ಸಂಘ, ಸಂಸ್ಥೆಗಳಿಗೆ ದಂಡ ಹಾಗೂ ಜೈಲು ಶಿಕ್ಷೆ ವಿಧಿಸುವ ಅವಕಾಶವನ್ನು ಕಲ್ಪಿಸಿದೆ ಎಂದು ತಿಳಿದು ಬಂದಿದೆ. ಮೊದಲ ಬಾರಿ ನಿಯಮ ಉಲ್ಲಂಘನೆ ಮಾಡಿದರೆ ಎರಡು ವರ್ಷ ಜೈಲು ಶಿಕ್ಷೆ ಹಾಗೂ 50 ಸಾವಿರ ರೂ.ದಂಡ, ಪುನರಾವರ್ತಿತ ಉಲ್ಲಂಘನೆಗಳಿಗೆ ಮೂರು ವರ್ಷದವರೆಗೆ ಜೈಲು ಶಿಕ್ಷೆ ಹಾಗೂ 1 ಲಕ್ಷ ರೂ.ದಂಡ ವಿಧಿಸಲು ಮಸೂದೆಯಲ್ಲಿ ಅವಕಾಶ ಕಲ್ಪಿಸಲಾಗಿದೆ ಎನ್ನಲಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X