Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಸಂಪುಟ ಪುನರ್‌ ರಚನೆ ಮುಖ್ಯಮಂತ್ರಿಗಳ‌...

ಸಂಪುಟ ಪುನರ್‌ ರಚನೆ ಮುಖ್ಯಮಂತ್ರಿಗಳ‌ ಪರಮಾಧಿಕಾರ: ಗೃಹ ಸಚಿವ ಡಾ. ಜಿ. ಪರಮೇಶ್ವರ್

ವಾರ್ತಾಭಾರತಿವಾರ್ತಾಭಾರತಿ12 Oct 2025 12:07 PM IST
share
ಸಂಪುಟ ಪುನರ್‌ ರಚನೆ ಮುಖ್ಯಮಂತ್ರಿಗಳ‌ ಪರಮಾಧಿಕಾರ: ಗೃಹ ಸಚಿವ ಡಾ. ಜಿ. ಪರಮೇಶ್ವರ್
"4000 ಕಾನ್‌ಸ್ಟೇಬಲ್‌ಗಳ ನೇಮಕಾತಿಗೆ ಅಧಿಸೂಚನೆ"

ಹುಬ್ಬಳ್ಳಿ: ರಾಜ್ಯ ಸಚಿವ ಸಂಪುಟ ವಿಸ್ತರಣೆ, ಪುನರ್‌ ರಚನೆ ಮುಖ್ಯಮಂತ್ರಿಗಳ ಪರಮಾಧಿಕಾರ ಹಾಗೂ ಅವರ ವಿವೇಚನೆಗ ಬಿಟ್ಟಿರುವ ವಿಚಾರ. ಸೂಕ್ತ ಸಂದರ್ಭದಲ್ಲಿ ಹೈಕಮಾಂಡ್ ನಿರ್ಧಾರ ಕೈಗೊಳ್ಳಲಿದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್‌ ಅವರು ಹೇಳಿದ್ದಾರೆ.

ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ಆಯ್ಕೆಯಾಗಿರುವ ಎಲ್ಲಾ ಶಾಸಕರಿಗೂ ಮಂತ್ರಿಗಳಾಬೇಕು ಎನ್ನುವ ಆಸೆಯಿರುತ್ತದೆ. ನಾನು ಮುಖ್ಯಮಂತ್ರಿ ಆಗಬಾರದಾ ? ಎಂದ ಅವರು, ಮುಖ್ಯಮಂತ್ರಿಗಳು, ಸಚಿವರು ಔತಣಕೂಟ ಕರೆಯುವುದು ಸಾಮಾನ್ಯ. ಇನ್ನು ಸೋಮವಾರ ಊಟಕ್ಕೆ ಕರೆದಿದ್ದಾರೆ ಎನ್ನುವುದಕ್ಕೆ ಮಹತ್ವ ಕೊಡಬೇಕಾಗಿಲ್ಲ. ಬಿಜೆಪಿಯವರಿಗೆ ಮಾಡಲು ಕೆಲಸವಿಲ್ಲ. ಮೊಸರಲ್ಲಿ ಕಲ್ಲು ಹುಡುಕುವ ಕೆಲಸ ಮಾಡುತ್ತಿದ್ದಾರೆ. ಮುಖ್ಯಮಂತ್ರಿಗಳು, ಸಚಿವರು ಊಟಕ್ಕೆ ಕರೆದು ಒಂದು ಸಭೆ ಮಾಡಿದರೆ ದೊಡ್ಡ ವಿಚಾರ ಎಂದು ತಿಳಿದಿರುವುದು ಬಿಜೆಪಿಯವರ ಮನಸ್ಥಿತಿಯಿಂದಾಗಿ. ಬಿಜೆಪಿಯವರು ಎಲ್ಲದರಲ್ಲೂ ರಾಜಕಾರಣ ಹುಡುಕುತ್ತಾರೆ ಎಂದರು.

ಪಿ.ಎಸ್.ಐಗಳ ಅಂತರ ವಲಯ ವರ್ಗಾವಣೆಗೆ ಸಂಬಂಧಿಸಿದ ಆಯಾ ವಲಯದ ಐಜಿಪಿಗಳು ಶಿಫಾರಸ್ಸು ಮಾಡುತ್ತಾರೆ. ಅದನ್ನು ಪೊಲೀಸ್ ಮಹಾನಿರ್ದೇಶಕರು ಪರಿಗಣಿಸಿ ವರ್ಗಾವಣೆ ಮಾಡಿಕೊಡುತ್ತಾರೆ . ನಾವು ಅಧಿಕಾರಕ್ಕೆ ಬಂದ ನಂತರ ಅಂತಹ ಸಮಸ್ಯೆಯಾಗಿಲ್ಲ. ಹಿಂದಿನ ಸರಕಾರವು ಪೊಲೀಸ್ ಇನ್ಸ್‌ಪೆಕ್ಟರ್ (ಸಿಪಿಐ) ಗಳನ್ನು ಒಂದೇ ವರ್ಷಕ್ಕೆ ವರ್ಗಾವಣೆ ಮಾಡುತ್ತಿದ್ದರು. ನಾವು ಅಧಿಕಾರಿಕ್ಕೆ ಬಂದ ನಂತರ ಅದನ್ನು ಎರಡು ವರ್ಷಕ್ಕೆ ಹೆಚ್ಚಿಸಿದ್ದೇವೆ ಎಂದರು.

ಒಳಮೀಸಲಾತಿ ವಿಚಾರದಲ್ಲಿನಿರ್ಧಾರ ಕೈಗೊಂಡು ಸರಕಾರಿ ಆದೇಶ ಹೊರಡಿಸಿದೆ. ರಾಜ್ಯದ ಎಲ್ಲಾ ಇಲಾಖೆಯಲ್ಲಿ ನೇಮಕಾತಿ ಪ್ರಕ್ರಿಯೆಗೆ ಚಾಲನೆ ನೀಡಿದ್ದಾರೆ. ಈ ಕುರಿತು ಮುಖ್ಯಮಂತ್ರಿಗಳಿಂದ ಆದೇಶ ಬಂದಿದೆ. ನಮ್ಮ ಇಲಾಖೆಯಲ್ಲಿ ಪೊಲೀಸ್ ಕಾನ್‌ಸ್ಟೇಬಲ್ ಸೇರಿದಂತೆ ಸುಮಾರು 15,000 ಹುದ್ದೆಗಳು ಖಾಲಿಯಿವೆ. ಈಗಾಗಲೇ 4000 ಪೊಲೀಸ್ ಕಾನ್‌ಸ್ಟೇಬಲ್ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಹೊರಡಿಸಲಾಗಿದೆ. ಹೊಸದಾಗಿ 600 ಪಿ.ಎಸ್.ಐ ನೇಮಕಾತಿ ಪ್ರಕ್ರಿಯೆ ಆರಂಭಿಸಲಾಗಿದೆ. ಎರಡು ವರ್ಷ ನೇಮಕಾತಿ ಪ್ರಕ್ರಿಯೆ ಇಲ್ಲದ ಕಾರಣ ಅಭ್ಯರ್ಥಿಗಳಿಗೆ ವಯೋಮಿತಿ ಕಾರಣ ಉದ್ಯೋಗದಿಂದ ವಂಚಿತರಾಗಬಾರದು ಎನ್ನುವ ಕಾರಣಕ್ಕೆ ಮೂರು ವರ್ಷ ಹೆಚ್ಚಿಗೆ ನೀಡಲಾಗಿದೆ ಎಂದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X