Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಭದ್ರಾ, ಉತ್ತರೆಗುಡ್ಡ, ಅರಸೀಕೆರೆ,...

ಭದ್ರಾ, ಉತ್ತರೆಗುಡ್ಡ, ಅರಸೀಕೆರೆ, ಬಂಕಾಪುರ ವನ್ಯಜೀವಿ ಧಾಮದ ಪರಸರ ಸೂಕ್ಷ್ಮ ವಲಯಕ್ಕೆ ಸಂಪುಟ ಉಪ ಸಮಿತಿ ತಾತ್ವಿಕ ಒಪ್ಪಿಗೆ

ಪರಿಸರ ಸೂಕ್ಷ್ಮ ವಲಯ ಘೋಷಣೆಯಿಂದ ಸ್ಥಳೀಯರಿಗೆ ತೊಡಕಿಲ್ಲ: ಈಶ್ವರ್ ಖಂಡ್ರೆ

ವಾರ್ತಾಭಾರತಿವಾರ್ತಾಭಾರತಿ16 Jan 2025 9:04 PM IST
share
ಭದ್ರಾ, ಉತ್ತರೆಗುಡ್ಡ, ಅರಸೀಕೆರೆ, ಬಂಕಾಪುರ ವನ್ಯಜೀವಿ ಧಾಮದ ಪರಸರ ಸೂಕ್ಷ್ಮ ವಲಯಕ್ಕೆ ಸಂಪುಟ ಉಪ ಸಮಿತಿ ತಾತ್ವಿಕ ಒಪ್ಪಿಗೆ

ಬೆಂಗಳೂರು : ಈಗಾಗಲೇ ಘೋಷಿಸಲಾಗಿರುವ ವನ್ಯಜೀವಿಧಾಮಗಳಿಗೆ ಪರಿಸರ ಸೂಕ್ಷ್ಮ ವಲಯ ಘೋಷಣೆಯಿಂದ ಸಾರ್ವಜನಿಕರಿಗಾಗಲೀ, ಸ್ಥಳೀಯರಿಗಾಗಲೀ ಯಾವುದೇ ತೊಡಕುಂಟಾಗುವುದಿಲ್ಲ ಎಂದು ಅರಣ್ಯ ಸಚಿವ ಈಶ್ವರ್ ಖಂಡ್ರೆ ತಿಳಿಸಿದ್ದಾರೆ.

ಗುರುವಾರ ವಿಧಾನಸೌಧದ ಸಮಿತಿ ಕೊಠಡಿಯಲ್ಲಿ ಪರಿಸರ ಸೂಕ್ಷ್ಮ ವಲಯಗಳ ಅಧಿಸೂಚನೆ ಹೊರಡಿಸುವ ಪ್ರಸ್ತಾವನೆಗಳನ್ನು ಕೇಂದ್ರ ಸರಕಾರಕ್ಕೆ ಶಿಫಾರಸು ಮಾಡಲು ರಚಿಸಲಾಗಿರುವ ಸಚಿವ ಸಂಪುಟದ ಉಪಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ರಾಜ್ಯದ 4 ವನ್ಯಜೀವಿಧಾಮಗಳ ವ್ಯಾಪ್ತಿಯಲ್ಲಿ ಕನಿಷ್ಠ 1 ಕಿ.ಮೀ. ನಿಂದ 10 ಕಿ.ಮೀಟರ್‌ವರೆಗೆ ಪರಿಸರ ಸೂಕ್ಷ್ಮ ವಲಯ ಘೋಷಣೆ ಮಾಡಲಾಗುತ್ತಿದ್ದು, ಜನವಸತಿ ಮತ್ತು ಪಟ್ಟಾ ಜಮೀನು ಇರುವ ಪ್ರದೇಶದಲ್ಲಿ ಕೇವಲ 1 ಕಿ.ಮೀ. ಮಾತ್ರವೇ ಘೋಷಿಸುವ ಕಾರಣ ಇದರಿಂದ ಸ್ಥಳೀಯರಿಗಾಗಲೀ, ರೈತರಿಗಾಗಲೀ ಯಾವುದೇ ತೊಂದರೆ ಆಗುವುದಿಲ್ಲ ಎಂದು ಈಶ್ವರ್ ಖಂಡ್ರೆ ಸ್ಪಷ್ಟಪಡಿಸಿದರು.

ಸಭೆಯಲ್ಲಿ ಚಿಕ್ಕಮಗಳೂರು ಜಿಲ್ಲೆಯ ಭದ್ರಾ ವನ್ಯಜೀವಿ ಧಾಮ, ಕೊಪ್ಪಳದ ಬಂಕಾಪುರ ತೋಳ ವನ್ಯಜೀವಿಧಾಮ, ಚಿತ್ರದುರ್ಗದ ಉತ್ತರೆಗುಡ್ಡ ವನ್ಯಜೀವಿಧಾಮ ಮತ್ತು ಹಾಸನ ಜಿಲ್ಲೆಯ ಅರಸೀಕೆರೆ ಕರಡಿ ವನ್ಯಜೀವಿಧಾಮಗಳ ಪರಿಸರ ಸೂಕ್ಷ್ಮ ಪ್ರದೇಶ ಘೋಷಣೆ ಸಂಬಂಧ ಸಂಪುಟಕ್ಕೆ ಶಿಫಾರಸು ಮಾಡಲು ತಾತ್ವಿಕ ಒಪ್ಪಿಗೆ ನೀಡಲಾಯಿತು ಎಂದು ಈಶ್ವರ್ ಖಂಡ್ರೆ ತಿಳಿಸಿದರು.

ಕೇಂದ್ರ ಅರಣ್ಯ, ಪರಿಸರ ಮತ್ತು ಹವಾಮಾನ ಬದಲಾವಣೆ ಸಚಿವಾಲಯದ ಮಾರ್ಗಸೂಚಿಗಳನ್ವಯ ಪರಿಸರ ಸೂಕ್ಷ್ಮ ವಲಯದಲ್ಲಿ ಉತ್ತೇಜಕ ಚಟುವಟಿಕೆ, ನಿರ್ಬಂಧಿತ ಮತ್ತು ನಿಷೇಧಿತ ಚಟುವಟಿಕೆ ಎಂದು ವರ್ಗೀಕರಿಸಲಾಗಿದೆ. ಉತ್ತೇಜಕ ಚಟುವಟಿಕೆಗಳಲ್ಲಿ ಹಾಲಿ ಇರುವ ಕೃಷಿ, ಸಾವಯವ ಕೃಷಿ, ತೋಟಗಾರಿಕೆ, ಸೌರ ಫಲಕ ಅಳವಡಿಕೆಯಂತಹ ಚಟುವಟಿಕೆಗೆ ಯಾವುದೇ ನಿರ್ಬಂಧ ಇರುವುದಿಲ್ಲ ಎಂದು ಈಶ್ವರ್ ಖಂಡ್ರೆ ಹೇಳಿದರು.

ನಿರ್ಬಂಧಿತ ಚಟುವಟಿಕೆಗಳಲ್ಲಿ ಪರಿಸರ ಪ್ರವಾಸೋದ್ಯಮ, ಹೋಂಸ್ಟೇ, ರೆಸಾರ್ಟ್, ಹೋಟೆಲ್, ಶಾಲೆ, ಆಸ್ಪತ್ರೆ, ಸರಕಾರಿ ಕಟ್ಟಡ, ಕಟ್ಟಡ ನಿರ್ಮಾಣ, ವಿದ್ಯುತ್ ಕೇಬಲ್ ಅಳವಡಿಕೆ, ಮೂಲಸೌಕರ್ಯ ಇತ್ಯಾದಿ ಬರುತ್ತದೆ. ಇದಕ್ಕೆ ಪ್ರಾದೇಶಿಕ ಆಯುಕ್ತರ ಸಮಿತಿಗೆ ಪ್ರಸ್ತಾವನೆ ಸಲ್ಲಿಸಿ ಅನುಮತಿ ಪಡೆದು ಕಾರ್ಯಾಚರಣೆ ಮಾಡಬಹುದು ಎಂದು ಈಶ್ವರ್ ಖಂಡ್ರೆ ತಿಳಿಸಿದರು.

ನಿಷೇಧಿತ ಚಟುವಟಿಕೆಗಳಲ್ಲಿ ಅಪಾಯಕಾರಿ ತ್ಯಾಜ್ಯ ಹೊರಹಾಕುವ, ಶಬ್ದ, ವಾಯು ಮಾಲಿನ್ಯ ಉಂಟು ಮಾಡುವ ಕೆಂಪು ಪ್ರವರ್ಗದ ಕೈಗಾರಿಕೆ. ವಾಣಿಜ್ಯ ಗಣಿಗಾರಿಕೆ, ಸಾ ಮಿಲ್ ಸ್ಥಾಪನೆ, ವಾಣಿಜ್ಯ ಉದ್ದೇಶದ ಉರುವಲು ಸಂಗ್ರಹ ಇತ್ಯಾದಿ ಬರುತ್ತದೆ. ಈ ಪ್ರದೇಶಗಳಲ್ಲಿ ಮರ ಕಡಿಯಲು ವೃಕ್ಷ ಸಂರಕ್ಷಣಾ ಕಾಯಿದೆ ಅಡಿ ಪೂರ್ವಾನುಮತಿ ಪಡೆಯಬೇಕಾಗುತ್ತದೆ ಎಂದು ಈಶ್ವರ್ ಖಂಡ್ರೆ ವಿವರ ನೀಡಿದರು.

ಸಭೆಯಲ್ಲಿ ಇಂಧನ ಸಚಿವ ಕೆ.ಜೆ.ಜಾರ್ಜ್, ಆರೋಗ್ಯ ಸಚಿವ ದಿನೇಶ್ ಗುಂಡೂರಾವ್, ಮೀನುಗಾರಿಕೆ ಸಚಿವ ಮಂಕಾಳ ವೈದ್ಯ ಮತ್ತು ಹಿರಿಯ ಅಧಿಕಾರಿಗಳು ಪಾಲ್ಗೊಂಡಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X