Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಅ.19ಕ್ಕೆ ನ್ಯಾಯಬೆಲೆ ಅಂಗಡಿ ಬಂದ್ ಗೆ...

ಅ.19ಕ್ಕೆ ನ್ಯಾಯಬೆಲೆ ಅಂಗಡಿ ಬಂದ್ ಗೆ ಕರೆ

ವಾರ್ತಾಭಾರತಿವಾರ್ತಾಭಾರತಿ18 Oct 2023 2:11 PM IST
share
ಅ.19ಕ್ಕೆ ನ್ಯಾಯಬೆಲೆ ಅಂಗಡಿ ಬಂದ್ ಗೆ ಕರೆ

ಬೆಂಗಳೂರು, ಅ.18: ಅನ್ನಭಾಗ್ಯ ಯೋಜನೆಯಡಿಯಲ್ಲಿ ಗ್ರಾಹಕರಿಗೆ ಹಣವನ್ನು ನೀಡುವ ಬದಲಿಗೆ 10 ಕೆ.ಜಿ. ಅಕ್ಕಿಯನ್ನು ನೀಡುವಂತೆ ಆಗ್ರಹಿಸಿ ಅ.19ಕ್ಕೆ ಸಾಂಕೇತಿಕವಾಗಿ ನ್ಯಾಯಬೆಲೆ ಅಂಗಡಿ ಬಂದ್ ಮಾಡಲಾಗುವುದು ಎಂದು ಬೆಂಗಳೂರು ನಗರ ಸರಕಾರಿ ಪಡಿತರ ವಿತರಕರ ಹಿತರಕ್ಷಣಾ ಸಂಘದ ಕಾರ್ಯದರ್ಶಿ ಡಿ.ಪಿ. ಮಾದಪ್ಪ ತಿಳಿಸಿದ್ದಾರೆ.

ಮಂಗಳವಾರ ಆಹಾರ ಮತ್ತು ನಾಗರೀಕ ಸರಬರಾಜು ಇಲಾಖೆ ಆಯುಕ್ತರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹೊಸ ಸರಕಾರ ಅಧಿಕಾರಕ್ಕೆ ಬಂದು ಆರನೇ ತಿಂಗಳಿಗೆ ಕಾಲಿಟ್ಟಿದ್ದು, ನಗದು ಬದಲು ಹತ್ತು ಕೆ.ಜಿ. ಅಕ್ಕಿ ನೀಡುವಂತೆ ಹಲವು ಬಾರಿ ಮನವಿ ಮಾಡಿದ್ದೇವೆ. ಸೌಜನ್ಯಕ್ಕಾದರೂ ಸರಕಾರ ನಮ್ಮ ಸಂಘಟನೆಗಳೊಂದಿಗೆ ಚರ್ಚಿಸಿಲ್ಲ ಎಂದು ಹೇಳಿದರು.

ಐದು ಕೆ.ಜಿ. ಅಕ್ಕಿ ಬದಲಿಗೆ ನಗದು ಸೌಲಭ್ಯ ಕಲ್ಪಿಸುತ್ತಿರುವುದರಿಂದ ನಮಗೆ ದೊರೆಯಬೇಕಾದ ಕಮೀಷನ್ ಹಣ ಸಿಗದೆ ವಂಚಿತರಾಗುತ್ತಿದ್ದೇವೆ. ಐದು ಕೆ.ಜಿ.ಯ ಅಕ್ಕಿಯ ಬದಲಾಗಿ ಫಲಾನುಭವಿಗಳಿಗೆ ಡಿಬಿಟಿ ಮೂಲಕ ಹಣ ನೀಡುವುದಕ್ಕೆ ನಮ್ಮ ಯಾವುದೇ ತರಕಾರು ಇಲ್ಲ. ಆದರೆ ತಾವು ಈಗಾಗಲೇ ಆಶ್ವಾಸನೆ ನೀಡಿರುವಂತೆ 5 ಕೆಜಿ ಅಕ್ಕಿಗೆ ಬದಲಾಗಿ 170 ರೂಪಾಯಿಗಳ ಹಣಕ್ಕೆ ನಮಗೆ ಬರಬೇಕಾದ 6.50 ರೂ. ಕಮೀಷನ್ ಮೊತ್ತವನ್ನು ನಮಗೆ ಪಾವತಿಸಬೇಕು ಎಂದು ಒತ್ತಾಯಿಸಿದರು.

ಕಷ್ಟದಲ್ಲಿರುವ ನಮ್ಮ ವಿತರಕರು ಯಾವುದೇ ಕಾರಣಕ್ಕೂ ಹೊಸ ಆದೇಶದನ್ವಯ ರಸೀದಿ ಪ್ರಿಂಟರ್ ಗಳನ್ನು ಖರೀದಿಸಲು ಸಾಧ್ಯವಿಲ್ಲ. ಇದನ್ನು ಸರಕಾರದಿಂದಲೇ ಒದಗಿಸಬೇಕು. ಬಾಕಿ ಇರುವ 4 ತಿಂಗಳುಗಳ ಕಮೀಷನ್ ಹಣ ಹಾಗೂ ವರ್ಷಗಳಿಂದ ಪಡಿತರ ವಿತರಕರಿಗೆ ಬರಬೇಕಿರುವ ಬಾಕಿ ಮೊತ್ತವನ್ನು ತಕ್ಷಣವೇ ಒದಗಿಸಬೇಕು. ಮನಸೋ ಇಚ್ಚೆ ನ್ಯಾಯ ಬೆಲೆ ಅಂಗಡಿಗಳನ್ನು ಮಂಜೂರು ಮಾಡಬಾರದು ಎಂದು ಅವರು ಆಗ್ರಹಿಸಿದರು.

ಇದೇ ವೇಳೆ ಬೆಂಗಳೂರು ನಗರ ಸರ್ಕಾರಿ ಪಡಿತರ ವಿತರಕರ ಸಂಘ ಪಡಿತರ ವಿತರಕರ ಸಂಘ ಖಜಾಂಜಿ ರಾಮಯ್ಯ, ರಾಜ್ಯ ಪಡಿತರ ವಿತರಕರ ಸಂಘದ ರಾಜ್ಯಾಧ್ಯಕ್ಷ ಜಯಕುಮಾರ್ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X