Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಕೋಲಾರ ಕಾಂಗ್ರೆಸ್‌ನಲ್ಲಿ ಅಭ್ಯರ್ಥಿ...

ಕೋಲಾರ ಕಾಂಗ್ರೆಸ್‌ನಲ್ಲಿ ಅಭ್ಯರ್ಥಿ ಆಯ್ಕೆ ಕಲಹ | ಪರ್ಯಾಯ ಅಭ್ಯರ್ಥಿ ಕಣಕ್ಕಿಳಿಸಿದರೆ ಗೆಲುವು ಕಷ್ಟ ಸಾಧ್ಯ ಎಂದ ಕೆ.ಎಚ್.ಮುನಿಯಪ್ಪ

ವಾರ್ತಾಭಾರತಿವಾರ್ತಾಭಾರತಿ29 March 2024 5:10 PM IST
share
ಕೋಲಾರ ಕಾಂಗ್ರೆಸ್‌ನಲ್ಲಿ ಅಭ್ಯರ್ಥಿ ಆಯ್ಕೆ ಕಲಹ | ಪರ್ಯಾಯ ಅಭ್ಯರ್ಥಿ ಕಣಕ್ಕಿಳಿಸಿದರೆ ಗೆಲುವು ಕಷ್ಟ ಸಾಧ್ಯ ಎಂದ ಕೆ.ಎಚ್.ಮುನಿಯಪ್ಪ

ಬೆಂಗಳೂರು: ‘ಕೋಲಾರ ಲೋಕಸಭಾ ಕ್ಷೇತ್ರದಲ್ಲಿ ಪರ್ಯಾಯ ಅಭ್ಯರ್ಥಿಯನ್ನು ಕಣಕ್ಕಿಳಿಸಿದರೆ ಫಲಿತಾಂಶ ಕಾಂಗ್ರೆಸ್ ಪರ ಇರುವುದಿಲ್ಲ. ಹೀಗಾಗಿ ಎರಡೂ ಬಣಗಳ ಒಂದಾದರೆ ಮಾತ್ರ ಗೆಲ್ಲಲು ಸಾಧ್ಯ ಎಂದು ಆಹಾರ ಮತ್ತು ನಾಗರಿಕ ಪೂರೈಕೆ ಖಾತೆ ಸಚಿವ ಕೆ.ಎಚ್.ಮುನಿಯಪ್ಪ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಶುಕ್ರವಾರ ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳ ಜತೆ ಮಾತನಾಡಿದ ಅವರು, ‘ಕೋಲಾರ ಕ್ಷೇತ್ರದಲ್ಲಿ ನನಗೆ ಮೂವತ್ತು ವರ್ಷಗಳಿಂದಲೂ ಇದ್ದೇನೆ. ರಾಜಕೀಯ ಅನುಭವವಿದೆ. ನಾನು ಆ ಕ್ಷೇತ್ರದಲ್ಲಿ ಸೋಲು ಕಂಡಿದ್ದೇನೆ. ಆ ಕ್ಷೇತ್ರವನ್ನು ಗೆಲ್ಲಬೇಕಿದೆ ಎಂಬ ಕಾರಣಕ್ಕಾಗಿ ಅವಕಾಶ ಮಾಡಿಕೊಡಿ ಎಂದು ಮನವಿ ಮಾಡಿದ್ದೇನೆ ಎಂದು ಅವರು ವಿವರಣೆ ನೀಡಿದರು.

ತಾವು ಹೇಳಿದ ಅಭ್ಯರ್ಥಿಗೆ ಕೋಲಾರದಲ್ಲಿ ಟಿಕೆಟ್ ಕೊಟ್ಟರೆ ಗೆಲ್ಲಿಸಿಕೊಂಡು ಬರುತ್ತೇನೆಂದು ಭರವಸೆ ನೀಡಿದ್ದೇನೆ. ಆ ಕ್ಷೇತ್ರದಲ್ಲಿ 7 ಬಾರಿ ನಾನು ಗೆಲುವು ಕಂಡಿದ್ದು, ನಾನು ಕಾಂಗ್ರೆಸ್ ಪಕ್ಷದ ಕಾರ್ಯಕಾರಿ ಸಮಿತಿ ಸೇರಿದಂತೆ ವಿವಿಧ ಹಂತಗಳಲ್ಲಿ ಕೆಲಸ ಮಾಡಿದ್ದೇನೆ. ಚಿಕ್ಕಪೆದ್ದಣ್ಣ ಅವರಿಗೆ ಟಿಕೆಟ್ ನೀಡಬೇಕು ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಮನವಿ ಮಾಡಿದ್ದೇನೆ ಎಂದರು.

ಕ್ಷೇತ್ರದಲ್ಲಿ ಇದೀಗ ಪರ್ಯಾಯ ಅಭ್ಯರ್ಥಿ ಹುಡುಕುತ್ತಿರುವುದು ಸರಿಯಲ್ಲ. ಅದು ಗೆಲುವಿಗೆ ಸಹಕಾರಿಯಲ್ಲ. ಈಗಲೂ ಕಾಲ ಮಿಂಚಿಲ್ಲ. ನಮ್ಮನ್ನೆಲ್ಲಾ ಒಂದು ಮಾಡಿ, ನಾನು ಹೇಳಿದ ಅಭ್ಯರ್ಥಿಗೆ ಟಿಕೆಟ್ ನೀಡಿ. ಹೈಕಮಾಂಡ್ ಯಾರಿಗೇ ಟಿಕೆಟ್ ನೀಡಿದರೂ ಕೋಲಾರ, ಚಿಕ್ಕಬಳ್ಳಾಪುರದಲ್ಲಿ ಗೆಲ್ಲಿಸಿಕೊಂಡು ಬರುತ್ತೇವೆಂದು ಈ ಹಿಂದೆ ಮುಖ್ಯಮಂತ್ರಿ ಹಾಗೂ ಉಪಮುಖ್ಯಮಂತ್ರಿ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ನಾವು ಭರವಸೆ ನೀಡಿದ್ದೆವು ಎಂದು ಅವರು ತಿಳಿಸಿದರು.

ನಾನು ಮತ್ತು ಕೆ.ಆರ್.ರಮೇಶ್‍ಕುಮಾರ್ ಒಗ್ಗಟ್ಟಿನಿಂದ ಕೆಲಸ ಮಾಡಿದರೆ ಮಾತ್ರ ಗೆಲುವು ಸಾಧ್ಯ. ಆದರೆ, ಇದೀಗ ಪರ್ಯಾಯ ಅಭ್ಯರ್ಥಿಯನ್ನು ಹುಡುಕಾಟ ಮಾಡುತ್ತಿದ್ದಾರೆಂಬ ಮಾಹಿತಿ ಬಂದಿದೆ. ನಮ್ಮನ್ನು ಒಂದು ಮಾಡಿ, ಒಮ್ಮತದ ಅಭ್ಯರ್ಥಿಯನ್ನು ಕಣಕ್ಕಿಳಿಸಲು ಸಾಧ್ಯವಿಲ್ಲವೇ? ಎರಡೂ ಬಣದವರು ಒಪ್ಪುವುದಿಲ್ಲ. ಸೋಲಲಿ, ಗೆಲ್ಲಲಿ ಎಂದು ಬೇರೆ ಅಭ್ಯರ್ಥಿಯನ್ನು ಕೊಟ್ಟು ಕೈತೊಳೆದುಕೊಳ್ಳುವುದು ಸರಿಯಲ್ಲ. ಸಿಎಂ, ಡಿಸಿಎಂ ಒಗ್ಗಟ್ಟು ಮೂಡಿಸಲು ಕೆಲಸ ಮಾಡಬೇಕೆಂದು ಅವರು ಸಲಹೆ ನೀಡಿದರು.

ನಾನು ಚುನಾವಣೆಯಲ್ಲಿ ಸೋತರೂ ಜಿಲ್ಲೆಯಲ್ಲಿ ಎಲ್ಲರೂ ಒಟ್ಟಾಗಬೇಕು, ನಮ್ಮ ಸ್ವಪ್ರತಿಷ್ಠೆಯಿಂದ ಕಾಂಗ್ರೆಸ್ ಪಕ್ಷದ ಹಾಳಾಗಬಾರದು ಎಂಬ ಕಾರಣಕ್ಕೆ ಅವರಿಗೆ ವಿರೋಧ ವ್ಯಕ್ತಪಡಿಸಲಿಲ್ಲ. ನನಗೆ ಗೊತ್ತಿಲ್ಲದಂತೆ ನನ್ನನ್ನು ಸೋಲಿಸಿದವರನ್ನು ಕಾಂಗ್ರೆಸ್ ಪಕ್ಷಕ್ಕೆ ಸೇರಿಸಿಕೊಂಡರು. ವಿಧಾನಸಭೆ ಚುನಾವಣೆಯಲ್ಲಿ ಟಿಕೆಟ್ ನೀಡಿದರು, ಸಚಿವರನ್ನಾಗಿಯೂ ಮಾಡಿದರು. ನಾನು ಎಲ್ಲವನ್ನೂ ಒಪ್ಪಿಕೊಂಡಿದ್ದೇನೆ. ಪಕ್ಷದ ದೂರದೃಷ್ಟಿಯಿಂದಾಗಿ ಎಲ್ಲರೂ ಒಟ್ಟಾಗಿ ಕೆಲಸ ಮಾಡಬೇಕು ಎಂದು ಹೇಳಿದರು.

ಕೇವಲ ಮಾದಿಗ(ಎಡಗೈ), ಹೊಲೆಯ (ಬಲಗೈ) ಮತಗಳಿಂದಷ್ಟೆ ಸೀಮಿತವಾಗಿ ನಾನು ಸಂಸದನಾಗಿ ರಾಷ್ಟ್ರ ರಾಜಕಾರಣ ಮಾಡಲಿಲ್ಲ. ಎಲ್ಲ ಸಮುದಾಯದವರೂ ಬೆಂಬಲಿಸಿದ್ದಾರೆ. ಪಕ್ಷ ಯಾವುದೇ ಸಮುದಾಯಕ್ಕೆ ಅವಕಾಶ ಕಲ್ಪಿಸಿದರೂ ನಾನು ಒಪ್ಪಿಕೊಳ್ಳುತ್ತೇನೆ. ಆದರೆ, ಜಾತಿ ರಾಜಕಾರಣ ಮಾಡಿಕೊಂಡು ಕೂರಲು ಸಾಧ್ಯವಿಲ್ಲ. ಕಾಂಗ್ರೆಸ್ ಗೆಲ್ಲುವುದು ಮುಖ್ಯ ಎಂದು ಅವರು ತಿಳಿಸಿದರು.

‘ನಾನು ಯಾರ ವಿರುದ್ಧವೂ ಹೆಗೆ ಸಾಧಿಸುವುದಿಲ್ಲ. ಹಲವು ಶಾಸಕರನ್ನು ತಯಾರು ಮಾಡಿದ್ದೇನೆ. ಗ್ರಾಮ ಹಾಗೂ ನಗರ ಸ್ಥಳೀಯ ಸಂಸ್ಥೆಗಳಲ್ಲೂ ಕೆಲಸ ಮಾಡಿದ್ದೇನೆ. ಒಂದು ಹಂತದಲ್ಲಿ ರಮೇಶ್‍ಕುಮಾರ್ ಜೊತೆ ಚರ್ಚಿಸಲು ನಾನು ಅವರ ಮನೆ ಬಳಿ ಹೋಗಿದ್ದೆ. ಆದರೆ ಅವರು ಸಿಗಲಿಲ್ಲ. ನಮ್ಮ ವೈಯಕ್ತಿಕ ಪ್ರತಿಷ್ಠೆಗಳಿಂದ ಕಾಂಗ್ರೆಸ್ ಪಕ್ಷಕ್ಕೆ ಹಾನಿಯಾಗಬಾರದು ಎಂಬುದು ನನ್ನ ಸ್ಪಷ್ಟ ಅಭಿಪ್ರಾಯ’ ಎಂದು ಹೇಳಿದರು.

Tags

Kolarಕೆ.ಎಚ್.ಮುನಿಯಪ್ಪCongressK. H. MuniappaCandidate selection
share
ವಾರ್ತಾಭಾರತಿ
ವಾರ್ತಾಭಾರತಿ
Next Story
X