Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಹಗರಣಗಳನ್ನು ಮರೆಮಾಚಲು ʼಜಾತಿಗಣತಿʼ ವರದಿ...

ಹಗರಣಗಳನ್ನು ಮರೆಮಾಚಲು ʼಜಾತಿಗಣತಿʼ ವರದಿ ಪ್ರಸ್ತಾಪ : ಆರ್‌.ಅಶೋಕ್

ವಾರ್ತಾಭಾರತಿವಾರ್ತಾಭಾರತಿ9 Oct 2024 4:49 PM IST
share
ಹಗರಣಗಳನ್ನು ಮರೆಮಾಚಲು ʼಜಾತಿಗಣತಿʼ ವರದಿ ಪ್ರಸ್ತಾಪ : ಆರ್‌.ಅಶೋಕ್

ಬೆಂಗಳೂರು : "ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಮುಡಾ ಹಗರಣವನ್ನು ಮರೆ ಮಾಚಲು ಜಾತಿಗಣತಿ ವರದಿ ಬಿಡುಗಡೆಯ ಪ್ರಸ್ತಾಪ ಮಾಡುತ್ತಿದ್ದಾರೆ" ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ್‌ ದೂರಿದರು.

ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ʼಜಾತಿ ಗಣತಿ ವಿಚಾರದಲ್ಲಿ ಕಾಂಗ್ರೆಸ್‌ ನಾಯಕರು ಬಿಜೆಪಿಯ ಮೇಲೆ ಆರೋಪ ಮಾಡುತ್ತಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯನವರು ವರದಿಯಲ್ಲಿ ಏನಿರಬೇಕೆಂದು ಹೇಳಿ ಬರೆಸಿದ್ದಾರೆ ಎಂಬ ಅಭಿಪ್ರಾಯ ಸಾರ್ವಜನಿಕ ವಲಯದಲ್ಲಿ ಕೇಳಿಬಂದಿದೆ. ಯಾರೂ ಮನೆಗೆ ಬಂದೇ ಇಲ್ಲ ಎಂದು ಲಿಂಗಾಯತ, ಒಕ್ಕಲಿಗ ಮೊದಲಾದ ಸಮುದಾಯದವರು ಹೇಳಿದ್ದಾರೆ. ಕೆಲವೇ ಜಾತಿಗಳ ವೈಭವೀಕರಣ, ಇನ್ನೂ ಕೆಲವು ಜಾತಿಗಳ ಮೇಲೆ ದ್ವೇಷ ಹಾಗೂ ಅವೈಜ್ಞಾನಿಕತೆ ಇದರಲ್ಲಿ ಕಂಡುಬಂದಿದೆʼ ಎಂದರು.

ಎಚ್.ಡಿ.ಕುಮಾರಸ್ವಾಮಿ ಮುಖ್ಯಮಂತ್ರಿಯಾಗಿದ್ದಾಗ ಸಿದ್ದರಾಮಯ್ಯನವರು ಈ ವರದಿ ಬಗ್ಗೆ ಬಾಯಿ ಬಿಡಲಿಲ್ಲ. ಒಂದು ಕಡೆ ಮುಡಾ, ಮತ್ತೊಂದು ಕಡೆ ಜಾರಿ ನಿರ್ದೇಶನಾಲಯದ ತನಿಖೆ,‌ ಮತ್ತೊಂದು ಕಡೆ ಲೋಕಾಯುಕ್ತ‌ ತನಿಖೆ ನಡೆಯುತ್ತಿದೆ. ಇವೆಲ್ಲವನ್ನೂ ಮುಚ್ಚಿಹಾಕಲು ಈಗ ವರದಿಯನ್ನು ಹೊರತೆಗೆಯಲಾಗಿದೆ ಎಂದರು.

ಸಿಎಂ ಬದಲಾವಣೆ :

ಮುಖ್ಯಮಂತ್ರಿ ‌ಬದಲಾವಣೆ ಬಗ್ಗೆ ಈಗ ಚರ್ಚೆ ನಡೆಯುತ್ತಿದೆ. ಬೆಳಗಾವಿಯ ಸಚಿವರು ಪ್ರತಿ ಜಿಲ್ಲೆಗೂ ಭೇಟಿ ನೀಡಿ ರೋಡ್ ಶೋ ನಡೆಸುತ್ತಿದ್ದಾರೆ. ಡಾ.ಜಿ.ಪರಮೇಶ್ವರ್ ಮತ್ತಿತರರು ಕೂಡ ಸಿಎಂ‌ ಆಗಲು ಯತ್ನಿಸುತ್ತಿದ್ದಾರೆ. ಪಕ್ಷದ ವಿರುದ್ಧ ಮಾತಾಡಿದರೆ ನೋಟಿಸ್ ನೀಡುತ್ತೇನೆ ಎಂದು ಡಿ.ಕೆ.ಶಿವಕುಮಾರ್ ಎಚ್ಚರಿಕೆ ನೀಡಿದ್ದು, ಅದಕ್ಕೆ ಯಾರೂ ಕ್ಯಾರೇ ಎನ್ನುತ್ತಿಲ್ಲ. ಕುರ್ಚಿ ಭದ್ರಪಡಿಸಿಕೊಳ್ಳಲು ಜಾತಿ ಗಣತಿ ವರದಿಯನ್ನು ಮುನ್ನೆಲೆಗೆ ತಂದಿದ್ದಾರೆ ಎಂದರು.

ಒಳ ಮೀಸಲಾತಿ ತರಲಿ :

ಒಳ ಮೀಸಲಾತಿ ಕುರಿತು ಸುಪ್ರೀಂ ಕೋರ್ಟ್‌ ಆದೇಶ ಮಾಡಿದೆ. ಹಿಂದಿನ ಬಿಜೆಪಿ ಸರ್ಕಾರ ಈ ಕುರಿತು ಪ್ರಯತ್ನ ಮಾಡಿತ್ತು. ಮೀಸಲು ಪ್ರಮಾಣವನ್ನು ಪರಿಶಿಷ್ಟ ಜಾತಿಗೆ ಶೇ.3 ರಿಂದ ಶೇ.7 ಕ್ಕೆ ಏರಿಸಲಾಗಿತ್ತು. ಮೀಸಲಾತಿ ಹೆಚ್ಚಿಸಿ ಸಾಮಾಜಿಕ ನ್ಯಾಯ ನೀಡಿದ್ದೇ ಬಿಜೆಪಿ. ದಲಿತರು, ಹಿಂದುಳಿದವರ ಚಾಂಪಿಯನ್‌ ಎಂದು ಹೇಳಿಕೊಳ್ಳುವ ಕಾಂಗ್ರೆಸ್‌ ಹರ್ಯಾಣ ಚುನಾವಣೆಯಲ್ಲಿ ಸೋತಿದೆ. ಬಿಜೆಪಿ ಎಂದಿಗೂ ಮೀಸಲು ವಿಚಾರದಲ್ಲಿ ಹಿಂದುಳಿದಿಲ್ಲ. ದಲಿತರ ಅಭಿವೃದ್ಧಿಗೆ ಬಿಜೆಪಿ ಸದಾ ಶ್ರಮಿಸಿದೆ. ದಲಿತರ ಪರವಾಗಿ ಕಾಂಗ್ರೆಸ್‌ ಕೆಲಸ ಮಾಡುತ್ತಿದೆ ಎನ್ನುವುದಾದರೆ ಒಳ ಮೀಸಲಾತಿ ತರಲಿ ಎಂದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X