Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ʼಮುಡಾ ಹಗರಣʼ ಪ್ರಕರಣವನ್ನು ಸಿಬಿಐಗೆ...

ʼಮುಡಾ ಹಗರಣʼ ಪ್ರಕರಣವನ್ನು ಸಿಬಿಐಗೆ ಕೊಡಿ : ಛಲವಾದಿ ನಾರಾಯಣಸ್ವಾಮಿ ಆಗ್ರಹ

"ಭ್ರಷ್ಟಾಚಾರ ಅಪರಾಧವಲ್ಲ ಎಂಬ ಮನಸ್ಥಿತಿಗೆ ಕಾಂಗ್ರೆಸ್ ಪಕ್ಷ ಬಂದಂತಿದೆ"

ವಾರ್ತಾಭಾರತಿವಾರ್ತಾಭಾರತಿ18 Oct 2024 5:01 PM IST
share
ʼಮುಡಾ ಹಗರಣʼ ಪ್ರಕರಣವನ್ನು ಸಿಬಿಐಗೆ ಕೊಡಿ : ಛಲವಾದಿ ನಾರಾಯಣಸ್ವಾಮಿ ಆಗ್ರಹ

ಬೆಂಗಳೂರು : ʼಮೈಸೂರು ಮುಡಾ ನಿವೇಶನ ಹಂಚಿಕೆ ಹಗರಣವನ್ನು ಸಿಬಿಐಗೇ ಕೊಡಬೇಕು. ಹಾಗಿದ್ದರೆ ಮಾತ್ರ ಸತ್ಯಾಂಶ ಹೊರಬರಲು ಸಾಧ್ಯʼ ಎಂದು ವಿಧಾನ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು ಪ್ರತಿಪಾದಿಸಿದರು.

ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಶುಕ್ರವಾರ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ತನಿಖೆಯನ್ನು ಸಿಬಿಐಗೆ ಕೊಡದೆ ಇದ್ದಲ್ಲಿ ಕೇಸನ್ನು ಸಂಪೂರ್ಣವಾಗಿ ಮುಚ್ಚಿ ಹಾಕುವ ವ್ಯವಸ್ಥೆ ನಡೆಯುತ್ತಿದೆ ಎಂಬ ಅನುಮಾನವಿದೆ ಎಂದು ತಿಳಿಸಿದರು.

ಕಾಂಗ್ರೆಸ್ಸಿನವರಿಗೆ ಮಾನವೀಯತೆ ಇದ್ದರೆ ವಾಲ್ಮೀಕಿ ಜಯಂತಿಯನ್ನು ಪಶ್ಚಾತ್ತಾಪ ದಿನ ಎಂದು ಆಚರಣೆ ಮಾಡಬೇಕಿತ್ತು ಎಂದ ಅವರು, ಮುಖ್ಯಮಂತ್ರಿಗಳು ತಕ್ಷಣ ರಾಜೀನಾಮೆ ಕೊಡಬೇಕು ಎಂದು ಆಗ್ರಹಿಸಿದರು. ಎಲ್ಲ ಕಡತಗಳನ್ನು ಹೆಲಿಕಾಪ್ಟರ್‌ನಲ್ಲಿ ತುಂಬಿಕೊಂಡು ಬಂದವರನ್ನೂ ತನಿಖೆಗೆ ಒಳಪಡಿಸಿ ಎಂದು ಒತ್ತಾಯಿಸಿದರು.

ವಾಲ್ಮೀಕಿ ನಿಗಮವನ್ನು ತಿಂದು ತೇಗಿದವರು :

ʼಭ್ರಷ್ಟಾಚಾರ ಅಪರಾಧವಲ್ಲ ಎಂಬ ಮನಸ್ಥಿತಿಗೆ ಮುಖ್ಯಮಂತ್ರಿಗಳು ಮತ್ತು ಕಾಂಗ್ರೆಸ್ ಪಕ್ಷ ಬಂದ ಹಾಗಿದೆ. ಕುರಿಗಳನ್ನು ಕಾಯಲು ತೋಳನನ್ನು ಕಾಂಗ್ರೆಸ್ ಪಕ್ಷದ ಸರಕಾರ ನೇಮಿಸಿದಂತಿದೆ. ಇವತ್ತು ಇಷ್ಟೊಂದು ಭ್ರಷ್ಟಾಚಾರ ನಡೆಯುತ್ತಿದ್ದರೂ ಜೈಲಿನಿಂದ ಬಂದವರು ವಿಜೃಂಭಿಸಿ ಬರುತ್ತಿದ್ದಾರೆ. ನಿನ್ನೆ ತಾನೇ ವಾಲ್ಮೀಕಿ ಜಯಂತಿ ನಡೆದಿದೆ. ಸಿದ್ದರಾಮಯ್ಯನವರು ವಾಲ್ಮೀಕಿ ಜಯಂತಿ ಮಾಡುವಾಗ ನನಗೇ ನಾಚಿಕೆ ಅನಿಸಿತ್ತು. ವಾಲ್ಮೀಕಿ ನಿಗಮವನ್ನು ತಿಂದು ತೇಗಿದವರು ವಾಲ್ಮೀಕಿ ಜಯಂತಿ ಮಾಡುವುದು ಎಷ್ಟು ಸರಿʼ ಎಂದು ಪ್ರಶ್ನಿಸಿದರು.

ʼಇಂದು ಬೆಳಿಗ್ಗೆ ಮುಡಾ ಕಚೇರಿ, ತಾಲ್ಲೂಕು ಕಚೇರಿ ಮತ್ತು ದೇವರಾಜು ಅವರ ಮನೆಗೆ ಈ.ಡಿ. ಅಧಿಕಾರಿಗಳು ದಾಳಿ ಮಾಡಿದ್ದಾರೆ. ಮೂರು ಬಾರಿ ಮುಡಾ ಕಡತಗಳನ್ನು ಕೇಳಿದ್ದರೂ ಅಧಿಕಾರಿಗಳು ತಿರಸ್ಕರಿಸಿದ್ದೇ ಇದಕ್ಕೆ ಕಾರಣʼ ಎಂದು ವಿವರಿಸಿದರು.

ʼಈ ಹಗರಣದಲ್ಲಿ ಸತ್ಯ ಹೊರಗಡೆ ಬರುವುದು ರಾಜ್ಯ ಸರಕಾರಕ್ಕೆ ಬೇಕಾಗಿಲ್ಲ. ಮುಡಾ ನಿವೇಶನಗಳನ್ನು ಅವಶ್ಯಕತೆ ಇಲ್ಲದಿದ್ದರೂ ವಾಪಸ್ ಕೊಡಲಾಗಿದೆ. ಅಧ್ಯಕ್ಷರಾಗಿದ್ದ ಮರಿಗೌಡರನ್ನು ಎತ್ತಂಗಡಿ ಮಾಡಿಸಲಾಗಿದೆ. ಅಲ್ಲಿನ ಅಧಿಕಾರಿಗಳನ್ನು ಬೇರೆ ಬೇರೆ ಇಲಾಖೆಗಳಿಗೆ ಕಳುಹಿಸಲಾಗಿದೆ. ಮುಡಾದಲ್ಲಿ ಅಪಾರವಾದ ಭ್ರಷ್ಟಾಚಾರ ನಡೆದಿದೆ ಎಂಬುದನ್ನು ಇದೆಲ್ಲವೂ ತೋರಿಸುತ್ತದೆʼ ಎಂದು ವಿಶ್ಲೇಷಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X