Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ನಾಳೆ(ಆ.2) ಸಿವಿಲ್ ಪೊಲೀಸ್...

ನಾಳೆ(ಆ.2) ಸಿವಿಲ್ ಪೊಲೀಸ್ ಕಾನ್ಸ್‌ಟೇಬಲ್ ನೇಮಕಾತಿಗೆ ಲಿಖಿತ ಪರೀಕ್ಷೆ

ವಾರ್ತಾಭಾರತಿವಾರ್ತಾಭಾರತಿ1 Aug 2026 8:09 PM IST
share
ನಾಳೆ(ಆ.2) ಸಿವಿಲ್ ಪೊಲೀಸ್ ಕಾನ್ಸ್‌ಟೇಬಲ್ ನೇಮಕಾತಿಗೆ ಲಿಖಿತ ಪರೀಕ್ಷೆ
ಯಾವುದೇ ಧಾರ್ಮಿಕ ವಸ್ತ್ರಕ್ಕೆ ನಿರ್ಬಂಧ ವಿಧಿಸಿಲ್ಲ, ಆದರೆ ಹಿಜಾಬ್ ಗೆ ಅವಕಾಶವಿಲ್ಲ: ಪ್ರಿಯಾಂಕ್ ಖರ್ಗೆ

ಬೆಂಗಳೂರು : ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಆ.2ರಂದು ಸಿವಿಲ್ ಪೊಲೀಸ್ ಕಾನ್ಸ್‌ಟೇಬಲ್ ಹುದ್ದೆಗಳ ನೇಮಕಾತಿಗಾಗಿ ಲಿಖಿತ ಪರೀಕ್ಷೆಯನ್ನು ನಡೆಸುತ್ತಿದ್ದು, ಅಭ್ಯರ್ಥಿಗಳ ಯಾವುದೇ ಧಾರ್ಮಿಕ ವಸ್ತ್ರಕ್ಕೆ ನಿರ್ಬಂಧ ವಿಧಿಸಿಲ್ಲ. ಆದರೆ ಹಿಜಾಬ್ ಗೆ ಅವಕಾಶವಿಲ್ಲ ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸ್ಪಷ್ಟಪಡಿಸಿದ್ದಾರೆ.

ಶನಿವಾರ ವಿಧಾನಸೌಧದ ಆಯೋಜಿಸಿದ್ದ ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿದ ಅವರು, ಅಭ್ಯರ್ಥಿಗಳು ಜನಿವಾರ, ಶಿವದಾರ/ಲಿಂಗ, ಉಡದಾರ, ತಾಯತ, ಕೈಗೆ ಕಟ್ಟುವ ಧಾರ್ಮಿಕ ದಾರಗಳು, ತಾಳಿ, ರುದ್ರಾಕ್ಷಿ, ಮಂಗಳಸೂತ್ರ, ಬಳೆಗಳು, ಉಂಗುರ, ಕುಂಕುಮ/ಹಣೆಬಟ್ಟು ಸೇರಿದಂತೆ ಧಾರ್ಮಿಕ ಆಚರಣೆಗೆ ಸಂಬಂಧಿಸಿದ ಆಭರಣಗಳು ಮತ್ತು ಧಾರ್ಮಿಕ ಚಿಹ್ನೆಗಳನ್ನು ಧರಿಸಲು ಯಾವುದೇ ನಿರ್ಬಂಧವಿಲ್ಲ. ಆದರೆ ಹಿಜಾಬ್ ಧರಿಸಿ ಪರೀಕ್ಷೆಯನ್ನು ಬರೆಯಲು ಅವಕಾಶ ನೀಡುವುದಿಲ್ಲ ಎಂದರು.

ಕೆಲವು ಸಮುದಾಯದ ವಿದ್ಯಾರ್ಥಿಗಳು ಧಾರ್ಮಿಕ ಉಡುಪುಗಳನ್ನು ಧರಿಸಿಕೊಂಡು ಪರೀಕ್ಷೆ ಬರೆಯಲು ಇಚ್ಚಿಸಿದಲ್ಲಿ ಪರೀಕ್ಷೆ ಆರಂಭಕ್ಕೆ 2:30 ಗಂಟೆ ಮೊದಲು ಪರೀಕ್ಷಾ ಕೇಂದ್ರದ ವಸ್ತ್ರ ಸಂಹಿತೆ ಅಧಿಕಾರಿ ಮುಂದೆ ಹಾಜರಾಗಬೇಕು. ವಸ್ತ್ರಸಂಹಿತೆ ಅಧಿಕಾರಿ ಪ್ರತ್ಯೇಕ ಕೊಠಡಿಯಲ್ಲಿ ನಿಯಮಾನುಸಾರ ತಪಾಸಣೆಗೆ ಒಳಪಡಿಸಿ ಪರೀಕ್ಷಾ ಕೊಠಡಿಗೆ ಪ್ರವೇಶ ನೀಡುತ್ತಾರೆ ಎಂದು ಅವರು ತಿಳಿಸಿದರು.

ಅಭ್ಯರ್ಥಿಗಳು ಮೊಬೈಲ್ ಫೋನ್, ಸ್ಮಾರ್ಟ್ ವಾಚ್, ಎಲೆಕ್ಟ್ರಾನಿಕ್ ಸಾಧನಗಳು, ಕ್ಯಾಲ್ಕುಲೇಟರ್, ಪೆನ್ ಡ್ರೈವ್, ಪುಸ್ತಕಗಳು, ಬ್ಯಾಗ್ ಸೇರಿದಂತೆ ನಿಷೇಧಿತ ವಸ್ತುಗಳನ್ನು ಪರೀಕ್ಷಾ ಕೇಂದ್ರಕ್ಕೆ ತರಬಾರದು. ಪರೀಕ್ಷೆಯ ಪಾವಿತ್ರ‍್ಯ ಹಾಗೂ ಪಾರದರ್ಶಕತೆಯನ್ನು ಕಾಪಾಡುವ ಉದ್ದೇಶದಿಂದ ಈ ಕ್ರಮಗಳನ್ನು ಅನುಸರಿಸಲಾಗುತ್ತಿದೆ ಎಂದು ಅವರು ಹೇಳಿದರು.

ಅಭ್ಯರ್ಥಿಗಳ ಭವಿಷ್ಯವನ್ನು ಗಮನದಲ್ಲಿಟ್ಟುಕೊಂಡು ಪರೀಕ್ಷಾ ಪ್ರಕ್ರಿಯೆಯನ್ನು ಸಂಪೂರ್ಣ ಪಾರದರ್ಶಕ, ನ್ಯಾಯಸಮ್ಮತ ಹಾಗೂ ಸುಗಮವಾಗಿ ನಡೆಸಲು ಸರಕಾರ ಬದ್ಧವಾಗಿದೆ. ಯಾವುದೇ ಅಕ್ರಮ ಅಥವಾ ಲೋಪಗಳಿಗೆ ಆಸ್ಪದ ನೀಡದಂತೆ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಅವರು ಹೇಳಿದರು.

ಪರೀಕ್ಷಾ ಕೇಂದ್ರಗಳಲ್ಲಿ ಅನುಸರಿಸಬೇಕಾದ ವಸ್ತ್ರಸಂಹಿತೆ ಹಾಗೂ ತರಬಹುದಾದ ಮತ್ತು ನಿಷೇಧಿತ ವಸ್ತುಗಳ ಕುರಿತು ಈಗಾಗಲೇ ಅಭ್ಯರ್ಥಿಗಳ ಹಾಲ್ ಟಿಕೆಟ್‌ನಲ್ಲಿ ಸ್ಪಷ್ಟ ಮಾಹಿತಿಯನ್ನು ನೀಡಲಾಗಿದೆ. ಅಭ್ಯರ್ಥಿಗಳು ಕಡ್ಡಾಯವಾಗಿ ಈ ಮಾರ್ಗಸೂಚಿಗಳನ್ನು ಪಾಲಿಸುವ ಮೂಲಕ ಪರೀಕ್ಷಾ ಪ್ರಕ್ರಿಯೆಗೆ ಸಹಕರಿಸಬೇಕು ಎಂದು ಪ್ರಿಯಾಂಕ್ ಖರ್ಗೆ ಮನವಿ ಮಾಡಿದರು.

ಸಾಮಾಜಿಕ ಜಾಲತಾಣಗಳು ಅಥವಾ ಇತರೆ ಮೂಲಗಳಲ್ಲಿ ಹರಿದಾಡುವ ಸುಳ್ಳು ಸುದ್ದಿ ಹಾಗೂ ವದಂತಿಗಳಿಗೆ ಅಭ್ಯರ್ಥಿಗಳು ಕಿವಿಗೊಡಬಾರದು. ಸರಕಾರ ಮತ್ತು ನೇಮಕಾತಿ ಪ್ರಾಧಿಕಾರ ಹೊರಡಿಸಿರುವ ಅಧಿಕೃತ ಮಾಹಿತಿಯನ್ನಷ್ಟೇ ನಂಬುಬೇಕು. ಎಲ್ಲ ಉದ್ಯೋಗಾಕಾಂಕ್ಷಿಗಳು ಯಾವುದೇ ಗೊಂದಲಕ್ಕೆ ಒಳಗಾಗದೆ ಆತ್ಮವಿಶ್ವಾಸದಿಂದ ಪರೀಕ್ಷೆಯನ್ನು ಎದುರಿಸಬೇಕು ಎಂದು ಅವರು ತಿಳಿಸಿದರು.

ನಿರ್ಲಕ್ಷ್ಯ ಕಂಡುಬಂದರೆ ಕ್ರಮ: ಐವರು ಪರೀಕ್ಷಾರ್ಥಿಗಳ ಮುಂದೆ ಪ್ರಶ್ನೆ ಪತ್ರಿಕೆಯ ಮುದ್ರೆಯನ್ನು ತೆರವು ಮಾಡಲಾಗುವುದು. ಪರೀಕ್ಷಾ ಕೇಂದ್ರಗಳಲ್ಲಿ ಸಿಸಿಟಿವಿ ಹಾಕಲಾಗುವುದು. ಅಧಿಕಾರಿಗಳ ಮೊಬೈಲ್‌ಗೂ ನಿಷೇಧ ಹೇರಲಾಗಿದೆ. ಸಾಮಾಜಿಕ ಜಾಲತಾಣಗಳ ಮಾನಿಟರ್ ಮಾಡಲಾಗುವುದು. ಹಿಂದಿನ ಆರೋಪಿಗಳು, ಅನುಮಾನಾಸ್ಪದ ವ್ಯಕ್ತಿಗಳು, ಕೋಚಿಂಗ್ ಸೆಂಟರ್ ಮೇಲೆ ನಿಗಾ ವಹಿಸಲಾಗಿದ್ದು, ನಿರ್ಲಕ್ಷ್ಯ ಕಂಡುಬಂದರೆ ಕ್ರಮ ಖಚಿತ ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ ಎಚ್ಚರಿಕೆ ನೀಡಿದ್ದಾರೆ.

ಪತ್ರಿಕಾಗೋಷ್ಟಿಯಲ್ಲಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಎಚ್.ಪ್ರಸನ್ನ ಹಾಗೂ ಪೊಲೀಸ್ ಇಲಾಖೆಯ ಎಡಿಜಿಪಿ (ನೇಮಕಾತಿ) ಉಮೇಶ್ ಕುಮಾರ್ ಹಾಜರಿದ್ದರು.

Tags

Constable RecruitmentCivil Police
share
ವಾರ್ತಾಭಾರತಿ
ವಾರ್ತಾಭಾರತಿ
Next Story
X