ʼಉಪಹಾರ ಭೇಟಿʼಯ ಬೆನ್ನಲ್ಲೇ ಎಕ್ಸ್ನಲ್ಲಿ ಪೋಸ್ಟ್ ಹಂಚಿಕೊಂಡ ಸಿಎಂ- ಡಿಸಿಎಂ

ಬೆಂಗಳೂರು, ನ.29: ನಾಯಕತ್ವ ಬಿಕ್ಕಟ್ಟಿನ ಹಿನ್ನೆಲೆಯಲ್ಲಿ ಹೈಕಮಾಂಡ್ ಸೂಚನೆಯಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಉಪಹಾರ ನೆಪದಲ್ಲಿ ಪರಸ್ಪರ ಭೇಟಿಯಾದ ಬೆನ್ನಲ್ಲೇ ಉಭಯ ನಾಯಕರು ಸಾಮಾಜಿಕ ಜಾಲತಾಣ ಎಕ್ಸ್ನಲ್ಲಿ ಪೋಸ್ಟ್ ಹಂಚಿಕೊಂಡಿಕೊಂಡಿದ್ದಾರೆ.
"ಉಪಮುಖ್ಯಮಂತ್ರಿಗಳಾದ ಡಿ.ಕೆ.ಶಿವಕುಮಾರ್ ಅವರ ಜೊತೆ ಬೆಳಗ್ಗಿನ ಉಪಹಾರ ಸೇವಿಸುತ್ತಾ, ಕೆಲಹೊತ್ತು ಮಾತುಕತೆ ನಡೆಸಿದೆ" ಎಂದು ಸಿಎಂ ಸಿದ್ದರಾಮಯ್ಯ ಅವರು ಸಾಮಾಜಿಕ ಜಾಲತಾಣ ಎಕ್ಸ್ ಪೋಸ್ಟ್ ನಲ್ಲಿ ತಿಳಿಸಿದ್ದಾರೆ.
"ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ ಸಿದ್ದರಾಮಯ್ಯ ಅವರನ್ನು ಇಂದು ಅವರ ಕಾವೇರಿ ನಿವಾಸದಲ್ಲಿ ಭೇಟಿಯಾಗಿ ಉಪಾಹಾರ ಸಭೆ ನಡೆಸಲಾಯಿತು." ಎಂದು ಡಿಸಿಎಂ ಡಿಕೆಶಿ ಅವರು ಎಕ್ಸ್ ಪೋಸ್ಟ್ನಲ್ಲಿ ಬರೆದಿದ್ದಾರೆ.
ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ ಅವರನ್ನು ಉಪಹಾರಕ್ಕೆ ಆಹ್ವಾನಿಸಿದ ಹಿನ್ನೆಲೆಯಲ್ಲಿ ಸಿಎಂ ನಿವಾಸ ಕಾವೇರಿಯಲ್ಲಿ ಉಭಯ ನಾಯಕರು ಭೇಟಿಯಾದರು. ಉಪಹಾರ ನಂತರದ ಸಮಾಲೋಚನೆಯ ಬಳಿಕ ಉಭಯ ನಾಯಕರ ಜಂಟಿ ಸುದ್ದಿಗೋಷ್ಟಿ ನಡೆಯಲಿದೆ.







