Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಸಾಲ ಮನ್ನಾಕ್ಕೆ ನೆರವು ಕೋರಿ ದಿಲ್ಲಿಗೆ...

ಸಾಲ ಮನ್ನಾಕ್ಕೆ ನೆರವು ಕೋರಿ ದಿಲ್ಲಿಗೆ ಸರ್ವಪಕ್ಷ ನಿಯೋಗ : ಸಿಎಂ ಡಿ.ಕೆ.ಶಿವಕುಮಾರ್

"ಬರ ಪರಿಹಾರಕ್ಕೆ ಬಿಜೆಪಿ ನಾಯಕರು ಕೇಂದ್ರ ಸರಕಾರಕ್ಕೆ ಒತ್ತಾಯಿಸಲಿ"

ವಾರ್ತಾಭಾರತಿವಾರ್ತಾಭಾರತಿ4 Sept 2026 2:56 PM IST
share
ಸಾಲ ಮನ್ನಾಕ್ಕೆ ನೆರವು ಕೋರಿ ದಿಲ್ಲಿಗೆ ಸರ್ವಪಕ್ಷ ನಿಯೋಗ : ಸಿಎಂ ಡಿ.ಕೆ.ಶಿವಕುಮಾರ್

ಬೆಂಗಳೂರು: "ಸಾಲ ಮನ್ನಾಕ್ಕೆ ನೆರವು ಕೋರಿ ದಿಲ್ಲಿಗೆ ಸರ್ವಪಕ್ಷ ನಿಯೋಗ ಕರೆದೊಯ್ಯಲಾಗುವುದು" ಎಂದು ಸಿಎಂ ಡಿ.ಕೆ.ಶಿವಕುಮಾರ್ ಅವರು ತಿಳಿಸಿದರು.

ಸದಾಶಿವನಗರದ ನಿವಾಸದ ಬಳಿ ಮಾಧ್ಯಮಗಳಿಗೆ ಶಿವಕುಮಾರ್ ಅವರು ಶುಕ್ರವಾರ ಪ್ರತಿಕ್ರಿಯೆ ನೀಡಿದರು.

"ಬರಗಾಲ ಎಂದು ಪ್ರಧಾನಮಂತ್ರಿಗಳೇ ಹೇಳಿದ್ದು, ಕೇಂದ್ರ ಸರ್ಕಾರ ಸಾಲಮನ್ನಾ ಮಾಡಿಸುವ ಜವಾಬ್ದಾರಿ ಹೊರಬೇಕು. ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ವಿಪಕ್ಷ ನಾಯಕ ಆರ್. ಅಶೋಕ್ ಹಾಗೂ ಇತರೆ ನಾಯಕರು ತಮ್ಮೊಂದಿಗೆ ದಿಲ್ಲಿಗೆ ಬಂದು ಕೇಂದ್ರ ಸರ್ಕಾರದಿಂದ ಅನುದಾನ ಹಾಗೂ ರೈತರ ಸಾಲ ಮನ್ನಾಕ್ಕೆ ಆಗ್ರಹಿಸಬೇಕು. ಬರಗಾಲಕ್ಕೆ ಕೇಂದ್ರ ಸರ್ಕಾರ ಪರಿಹಾರ ಬಿಡುಗಡೆ ಮಾಡಬೇಕು" ಎಂದು ಆಗ್ರಹಿಸಿದರು.

ಬರಗಾಲ; ವಿಪಕ್ಷಗಳಿಂದ ರಾಜಕಾರಣ

"ಬರ ಪರಿಸ್ಥಿತಿ ಕುರಿತಂತೆ ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಲಾಗಿದೆ. ವಿಪಕ್ಷಗಳಿಗೆ ರೈತರು ಹಾಗೂ ಬರ ಪರಿಸ್ಥಿತಿಯ ಬಗ್ಗೆ ಅಧ್ಯಯನ ಮಾಡಲು, ಚರ್ಚಿಸಲು ಕಿಂಚಿತ್ತೂ ಆಸಕ್ತಿ ಇಲ್ಲ. ಬರ ಪರಿಸ್ಥಿತಿ ಚರ್ಚೆ ಬಗ್ಗೆ ಜನತಾ ದಳ ಮತ್ತು ಬಿಜೆಪಿ ಶಾಸಕರೇ ನನ್ನ ಬಳಿ ಬಂದು ಬೇಸರ ತೋಡಿಕೊಂಡಿದ್ದಾರೆ. ಅದಕ್ಕಾಗಿಯೇ ಪ್ರತ್ಯೇಕವಾಗಿ ವಿಶೇಷ ಅಧಿವೇಶನ ನಡೆಸಲಿದ್ದೇವೆ. ಆಯಾ ಕ್ಷೇತ್ರಗಳ ಭಾವನೆ, ಪರಿಸ್ಥಿತಿ ಅರ್ಥಮಾಡಿಕೊಂಡು ನಾನು ಅವರಿಗೆ ಸಹಾಯ ಮಾಡಬೇಕು. ನೈಜ ಪರಿಸ್ಥಿತಿಯನ್ನು ಅಧ್ಯಯನ ಮಾಡುವ ಬದಲು ವಿಪಕ್ಷಗಳು ರಾಜಕಾರಣ ಮಾಡುತ್ತಿವೆ" ಎಂದು ಅಸಮಾಧಾನ ವ್ಯಕ್ತಪಡಿಸಿದರು.

3 ದಿನಗಳ ವಿಶೇಷ ಅಧಿವೇಶನ

“ರೈತರ ಸಮಸ್ಯೆಗಳ ಕುರಿತು ಸುದೀರ್ಘ ಚರ್ಚೆ ನಡೆಸಲು ರಾಜ್ಯ ಸರ್ಕಾರವು ಮೂರು ದಿನಗಳ ವಿಶೇಷ ಅಧಿವೇಶನ ಕರೆದಿದೆ. ಈ ಅಧಿವೇಶನದಲ್ಲಿ ಸಂಪೂರ್ಣವಾಗಿ ರಾಜ್ಯದ ಬರ ಪರಿಸ್ಥಿತಿ, ರೈತರ ತೊಂದರೆಗಳು ಮತ್ತು ಪಶ್ಚಿಮ ಘಟ್ಟಗಳ ಕುರಿತಾದ ಕಸ್ತೂರಿರಂಗನ್ ವರದಿಗೆ ರಾಜ್ಯ ಸಲ್ಲಿಸಬೇಕಾದ ಆಕ್ಷೇಪಣೆಗಳ ಬಗ್ಗೆ ಮಾತ್ರ ಚರ್ಚಿಸಲಾಗುವುದು" ಎಂದು ಸ್ಪಷ್ಟಪಡಿಸಿದರು.

ಬೆಂಗಳೂರು ದಟ್ಟಣೆ ತಪ್ಪಿಸಬೇಕು:

ನೀತಿ ಆಯೋಗದ ಜತೆಗಿನ ಸಭೆಯಲ್ಲಿ ರಾಜ್ಯಕ್ಕೆ ಅನುದಾನ ಹಂಚಿಕೆ ಸರಿಯಾಗಿ ಆಗಬೇಕು ಎಂದು ಆಗ್ರಹಿಸಿದ್ದೀರಿ ಎಂದು ಕೇಳಿದಾಗ, "ಹೊಸ ಬೆಂಗಳೂರು ನಿರ್ಮಾಣ ಮಾಡಬೇಕೆಂದು ನೀತಿ ಆಯೋಗದ ಉಪಾಧ್ಯಕ್ಷರ ಬಳಿ ಚರ್ಚಿಸಲಾಗಿದೆ. ಅದಕ್ಕೆ ಅಗತ್ಯವಿರುವ ನೆರವನ್ನು ಸರ್ಕಾರ ನೀಡಲಿದೆ ಎಂದರು. ಕರ್ನಾಟಕ , ಬೆಂಗಳೂರು ಬಹಳ ಮುಖ್ಯ ಎಂದೂ ಅವರು ಹೇಳಿದ್ದಾರೆ" ಎಂದು ತಿಳಿಸಿದರು.

ಬಿಜೆಪಿಯವರು ಅಭಿವೃದ್ದಿಯ ವಿರೋಧಿಗಳು

ಕರ್ನಾಟಕ ಸರ್ಕಾರಿ ಉದ್ಯಾನವನಗಳ (ಸಂರಕ್ಷಣೆ) ತಿದ್ದುಪಡಿ ವಿಧೇಯಕವನ್ನು ವಾಪಸ್ ಪಡೆದಿರುವ ಕುರಿತು ಸಿಎಂ 'ಯು-ಟರ್ನ್' ಮಾಡಿದ್ದಾರೆ ಎಂಬ ಆರೋಪಗಳ ಬಗ್ಗೆ ಕೇಳಿದಾಗ, “ನಾನು ಯೂಟರ್ನ್ ಏಕೆ ಮಾಡಬೇಕು. ಜನರ ಭಾವನೆಗಳಿಗೆ ಬೆಲೆ ನೀಡಲಾಗಿದೆ. ಯಡಿಯೂರಪ್ಪ, ಬೊಮ್ಮಾಯಿ ಅವರ ಕಾಲದಲ್ಲಿ ಏನಾಗಿದೆ ಎಂಬ ಪಟ್ಟಿ ಬಿಡುಗಡೆ ಮಾಡುತ್ತೇವೆ. ಈ ಬಗ್ಗೆ ಚರ್ಚೆಯಾಗಬೇಕು. ಲಾಲ್ ಬಾಗ್ ನಲ್ಲಿಯೇ ಟನಲ್ ಮಾಡಬೇಕೆಂಬ ಉದ್ದೇಶವಿಲ್ಲ. ಇದಕ್ಕೆ ಪರ್ಯಾಯ ಮಾರ್ಗವನ್ನು ಪರಿಶೀಲಿಸಲಾಗುವುದು. ಹಿಂದೆ ಸಿದ್ದರಾಮಯ್ಯನವರು ಸ್ಟೀಲ್ ಬ್ರಿಡ್ಜ್ ಮಾಡಲು ಹೊರಟಾಗಲು ಬಿಜೆಪಿ ವಿರೋಧಿಸಿತ್ತು. ಬಿಜೆಪಿಯವರು ಅಭಿವೃದ್ದಿಯ ವಿರೋಧಿಗಳು. ಬೆಂಗಳೂರಿಗೆ ಏನಾದರೂ ಶಾಪವಿದ್ದರೆ ಅದು ಬಿಜೆಪಿಯವರದ್ದು. ಅವರ ಕಾಲದಲ್ಲಿ ಒಂದು ಯಾವುದಾದರೂ ಈ ರೀತಿಯ ಗುರುತರ ಯೋಜನೆ ಪಾರಂಭಿಸಿದ್ದರೆ ತಿಳಿಸಲಿ. ಬೆಂಗಳೂರಿನ ಸಂಚಾರ ದಟ್ಟಣೆ ನಿಯಂತ್ರಣಕ್ಕೆ ಟನಲ್ ರಸ್ತೆ, ಡಬಲ್ ಡೆಕ್ಕರ್ ಮಾರ್ಗಗಳು, ಯೋಜನೆಗಳು ಅತ್ಯಗತ್ಯ. ಟನಲ್ ರಸ್ತೆ ಬೇಡ ಎನ್ನುವವರು ಅದಕ್ಕೆ ಪರ್ಯಾಯ ಏನು ಎಂಬುದನ್ನು ಹೇಳಬೇಕಲ್ಲವೇ" ಎಂದು ಸವಾಲು ಹಾಕಿದರು.

ಸರ್ಕಾರದ ಮತ್ತೊಂದು ವಿಕೆಟ್ ಪತನವಾಗಲಿದೆ ಎಂದು ವಿರೋಧ ಪಕ್ಷದವರು ಹೇಳುತ್ತಿದ್ದಾರೆ ಎಂದು ಕೇಳಿದಾಗ, "ನನ್ನನ್ನೇ ಪತನ ಮಾಡುವುದಾಗಿ ಕೆಲವರು ಹೇಳಿದ್ದಾರೆ. ಅದರಲ್ಲಿ ಅವರು ಯಶಸ್ವಿಯಾಗಲಿ ಸಂತೋಷ. ತಪ್ಪು ಮಾಡಿದ್ದರೆ ಎಲ್ಲರೂ ಶಿಕ್ಷೆಗೆ ಒಳಗಾಗಬೇಕು, ಅದಕ್ಕೆ ನಾನೂ ಹೊರತಾಗಿಲ್ಲ" ಎಂದರು.

ಪ್ರಾಸಿಕ್ಯೂಷನ್ ಅನುಮತಿ; ಪರಿಶೀಲನೆ ಬಾಕಿ ಇದೆ

"ಈಗ ನಾನು ಪ್ರಾಸಿಕ್ಯೂಷನ್ ಅನುಮತಿ, ಬಗ್ಗೆ ಯೋಚನೆ ಮಾಡಿಲ್ಲ. ಬಿ. ನಾಗೇಂದ್ರ, ಜಿ. ಜನಾರ್ದನ ರೆಡ್ಡಿ ಹಾಗೂ ಎಂ.ಪಿ. ರೇಣುಕಾಚಾರ್ಯ ಸೇರಿದಂತೆ ಹಲವು ನಾಯಕರ ಪ್ರಾಸಿಕ್ಯೂಷನ್‌ಗೆ ಸಂಬಂಧಿಸಿದಂತೆ ರಾಜ್ಯಪಾಲರಿಂದ ಕಡತಗಳು ಬಂದಿವೆ. ಅದನ್ನು ಇನ್ನೂ ಕಾನೂನಾತ್ಮಕವಾಗಿ ಪರಿಶೀಲಿಸಿಲ್ಲ. ಸಾರಾಂಶ ಸರಿಯಿದೆಯೇ ಎಂದು ಪರಿಶೀಲಿಸಬೇಕಿದೆ. ಒಬ್ಬರಿಗೆ ಒಂದು ಆಗಿದೆಯೇ ಎಂದು ಪರಿಶೀಲಿಸಬೇಕು. ಈ ಬಗ್ಗೆ ಯಾವುದೇ ಆತುರದ ನಿರ್ಧಾರ ಕೈಗೊಳ್ಳಲಾಗುವುದಿಲ್ಲ" ಎಂದು ಸ್ಪಷ್ಟಪಡಿಸಿದರು.

ಕಸ್ತೂರಿ ರಂಗನ್ ವರದಿ: ರಾಜ್ಯದ ಹಿತಾಸಕ್ತಿಯ ವಿಚಾರ

"ಕಸ್ತೂರಿ ರಂಗನ್ ವರದಿಯನ್ನು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ತಿರಸ್ಕರಿಸಿದರು. ಸುಮಾರು ಜಿಲ್ಲೆ ಗ್ರಾಮಗಳಿಗೆ ಇದರಿಂದ ಪರಿಣಾಮ ಬೀರಲಿದೆ ಎಂದು ವಿಚಾರ ಮಾಡಬೇಕಿದೆ. ಇದು ರಾಜ್ಯದ ಹಿತಾಸಕ್ತಿಯ ವಿಚಾರ. ಹೀಗಾಗಿ ಈ ಬಗ್ಗೆ ಚರ್ಚೆಗೆ ಅಧಿವೇಶನ ಕರೆಯಲಾಗಿದೆ" ಎಂದರು.

ಮೈಸೂರು ದಸರಾ ಸಂಭ್ರಮಕ್ಕೆ ಹೊಸ ಮೆರುಗು

"ಮೈಸೂರು ದಸರಾ ಸಿದ್ದತೆಗಳ ಬಗ್ಗೆ ಕೇಳಿದಾಗ, "ದಸರಾ ಸಿದ್ಧತೆಗಳ ಕುರಿತು ಉನ್ನತ ಮಟ್ಟದ ಸಭೆ ನಡೆಸಲಾಗಿದ್ದು, ಹೊಸ ಚಿಂತನೆ, ಆಲೋಚನೆಗಳು, ಹೊಸ ಆವಿಷ್ಕಾರಗಳನ್ನು ದಸರಾದಲ್ಲಿ ತರಲಾಗುವುದು. ಭಾರತೀಯ ವಾಯುಪಡೆ ಹಾಗೂ ರಕ್ಷಣಾ ಸಚಿವಾಲಯದೊಂದಿಗೆ ಮಾತುಕತೆ ನಡೆಸಲಾಗಿದ್ದು, ವಾಯುಪಡೆಯ ತುಕಡಿಯನ್ನು ಒಳಗೊಳ್ಳಲು ಹಾಗೂ ಬೀದರ್, ಗುಲ್ಬರ್ಗ ಸೇರಿದಂತೆ ದಕ್ಷಿಣ ಭಾರತದ ವಿವಿಧ ಸಾಂಸ್ಕೃತಿಕ ಕಲೆಗಳನ್ನು ಪ್ರದರ್ಶಿಸಲು ನಿರ್ಧರಿಸಲಾಗಿದೆ. ದಸರಾ ಆಚರಣೆ ಕುರಿತು ಅನೇಕ ಸಲಹೆಗಳನ್ನು ಸ್ವೀಕರಿಸಲಾಗಿದೆ" ಎಂದು ತಿಳಿಸಿದರು.

Tags

CM D.K. Shivakumar
share
ವಾರ್ತಾಭಾರತಿ
ವಾರ್ತಾಭಾರತಿ
Next Story
X