Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ‘ಮತಗಳ್ಳತನ’ ವಿರುದ್ಧದ ಹೋರಾಟದಿಂದ ಹಿಂದೆ...

‘ಮತಗಳ್ಳತನ’ ವಿರುದ್ಧದ ಹೋರಾಟದಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ: ಸಿಎಂ ಸಿದ್ದರಾಮಯ್ಯ

ವಾರ್ತಾಭಾರತಿವಾರ್ತಾಭಾರತಿ18 Sept 2025 8:58 PM IST
share
‘ಮತಗಳ್ಳತನ’ ವಿರುದ್ಧದ ಹೋರಾಟದಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ: ಸಿಎಂ ಸಿದ್ದರಾಮಯ್ಯ

ಬೆಂಗಳೂರು, ಸೆ. 18: ‘ಇದು ನಾಡಿನ ಪ್ರತಿ ಮತದಾರನ, ಯುವಜನರ ಮತದಾನದ ಹಕ್ಕಿನ ಪಾವಿತ್ರ್ಯತೆ ಮತ್ತು ಭವಿಷ್ಯದ ಪ್ರಶ್ನೆ. ಮತಗಳ್ಳತನ ಯಶಸ್ವಿಯಾಗಲು ಕಾಂಗ್ರೆಸ್ ಪಕ್ಷ ಬಿಡುವುದಿಲ್ಲ. ಪಾರದರ್ಶಕ, ನಿಷ್ಪಕ್ಷಪಾತ ಚುನಾವಣೆ ಪ್ರಕ್ರಿಯೆಯ ಹೊಣೆಗಾರಿಕೆಯನ್ನು ಸಂಬಂಧಪಟ್ಟವರು ವಹಿಸಿಕೊಳ್ಳುವವರೆಗೆ ಮತ್ತು ದೇಶದ ಪ್ರಜಾಪ್ರಭುತ್ವಕ್ಕೆ ರಕ್ಷಣೆ ದೊರೆಯುವ ವರೆಗೆ ನಾವು ನಮ್ಮ ಹೋರಾಟದಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದಿಲ್ಲಿ ಪ್ರಕಟಿಸಿದ್ದಾರೆ.

ಗುರುವಾರ ಎಕ್ಸ್‌ ನಲ್ಲಿ ಪೋಸ್ಟ್ ಹಾಕಿರುವ ಅವರು, ನಮ್ಮ ನಾಯಕರಾದ ರಾಹುಲ್ ಗಾಂಧಿ ಇಂದು ಬಯಲು ಮಾಡಿರುವ ಚುನಾವಣಾ ಅಕ್ರಮಗಳಿಗೆ ಸಂಬಂಧಿಸಿದ ಸತ್ಯಾಂಶಗಳು ಆಘಾತಕಾರಿಯಾಗಿವೆ. ದೇಶದ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಹೇಗೆ ಮತಗಳ್ಳತನದ ಮೂಲಕ ವ್ಯವಸ್ಥಿತವಾಗಿ ಬುಡಮೇಲು ಗೊಳಿಸಲಾಗುತ್ತಿದೆ ಎಂಬ ಕರಾಳ ಸತ್ಯವನ್ನು ಮತ್ತೊಮ್ಮೆ ರಾಹುಲ್ ಗಾಂಧಿ ದೇಶದ ಜನರೆದುರು ತೆರೆದಿಟ್ಟಿದ್ದಾರೆ.

ಕಲಬುರಗಿ ಜಿಲ್ಲೆಯ ಆಳಂದ ಕ್ಷೇತ್ರದ ಪ್ರಕರಣವು ಕೇವಲ ಈ ಒಂದು ಕ್ಷೇತ್ರಕ್ಕೆ ಸೀಮಿತವಾದುದ್ದಲ್ಲ, ಇದು ದೇಶಾದ್ಯಂತ ವ್ಯಾಪಿಸಿರುವ ಬೃಹತ್ ಚುನಾವಣಾ ಅಕ್ರಮ ಜಾಲದ ಒಂದು ಕೊಂಡಿಯಷ್ಟೇ. ಇದೇ ಮಾದರಿಯಲ್ಲಿ ಇಡೀ ದೇಶದಲ್ಲಿ ಚುನಾವಣಾ ಪ್ರಕ್ರಿಯೆಯ ದುರುಪಯೋಗದ ಮೂಲಕ ಭಾರತೀಯರನ್ನು ಅವರ ಮತದಾನದ ಹಕ್ಕಿನಿಂದ ವಂಚಿಸಲಾಗುತ್ತಿದೆ ಎಂದು ಆರೋಪಿಸಿದ್ದಾರೆ.

‘2022ರ ಫೆಬ್ರವರಿಯಿಂದ 2023ರ ಫೆಬ್ರವರಿ ವರೆಗೆ ಆಳಂದ ಮತಕ್ಷೇತ್ರಕ್ಕೆ ಸಂಬಂಧಿಸಿದಂತೆ ಚುನಾವಣಾ ಆಯೋಗದ ಅಪ್ಲಿಕೇಷನ್ ಮೂಲಕ ಫಾರ್ಮ್ 7ರ ಅಡಿ ಮತದಾರರ ಹೆಸರುಗಳನ್ನು ಅಳಿಸಿಹಾಕುವಂತೆ ಒಟ್ಟು 6,018 ಅರ್ಜಿಗಳು ಸಲ್ಲಿಕೆಯಾಗಿದ್ದವು. ಈ ಪೈಕಿ ಕೇವಲ 24 ಅರ್ಜಿಗಳು ಅಸಲಿಯಾಗಿದ್ದು, ಉಳಿದ 5,994 ಅರ್ಜಿಗಳು ನಕಲಿ ಎಂಬುದು ತನಿಖೆಯ ಮೂಲಕ ತಿಳಿದು ಬಂದಿದೆ.

ಮತದಾರರ ಮಾಹಿತಿ ಕಳವು, ನಕಲಿ ಲಾಗಿನ್ ಗಳು ಹಾಗೂ ಹೊರರಾಜ್ಯದ ಮೊಬೈಲ್ ಸಂಖ್ಯೆಗಳ ಮೂಲಕ ಬೇನಾಮಿ ಅರ್ಜಿಗಳ ಸಲ್ಲಿಕೆ ಮಾಡಲಾಗಿದೆ. ಕುಟುಂಬವೊಂದರ ಅರಿವಿಗೆ ಬಾರದೆಯೇ ಇಡೀ ಕುಟುಂಬದ ಮತದಾರರ ಹೆಸರನ್ನು ಪಟ್ಟಿಯಿಂದ ಕೈಬಿಡುವಂತೆ ಅರ್ಜಿ ಸಲ್ಲಿಕೆಯಾಗಿತ್ತು. ಈ ಬಗ್ಗೆ ದೂರು ದಾಖಲಾಗಿದ್ದು, ಸಿಐಡಿ ತನಿಖೆ ನಡೆಸುತ್ತಿದೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

ಈ ಪ್ರಕರಣದಲ್ಲಿ ಭಾಗಿಯಾದವರು ಯಾರು? ಮತ್ತು ಯಾವ ಸ್ಥಳದಿಂದ ಈ ಎಲ್ಲ ಕೃತ್ಯಗಳು ನಡೆದಿದ್ದವು? ಎಂದು ಪತ್ತೆಹಚ್ಚಲು ಟೆಕ್ನಿಕಲ್ ಮಾಹಿತಿಗಳಾದ ಐಪಿ ಅಡ್ರೆಸ್, ಬಳಕೆಯಾದ ಡಿವೈಸ್‍ಗಳು ಮತ್ತು ಒಟಿಪಿ ಪಡೆದವರ ವಿವರಗಳನ್ನು 18 ತಿಂಗಳಗಳಿಂದ ರಾಜ್ಯದ ಸಿಐಡಿ ತನಿಖಾ ಸಂಸ್ಥೆಯವರು ನಿರಂತರವಾಗಿ ಚುನಾವಣಾ ಆಯೋಗದ ಬಳಿ ಕೇಳುತ್ತಿದ್ದಾರೆ. ಆದರೆ ಚುನಾವಣಾ ಆಯೋಗವು ಈ ಮಾಹಿತಿಯನ್ನು ಒದಗಿಸಲು ನಿರಾಕರಿಸುತ್ತಾ ಬಂದಿದೆ. ಇಂದು ಚುನಾವಣಾ ಆಯೋಗವು ಈ ಬೇಡಿಕೆಗಳಿಗೆ ಸೂಕ್ತ ಮಾಹಿತಿಯನ್ನು ಒದಗಿಸಿ ಸ್ಪಂದಿಸುವ ಬದಲು ನಿರ್ಧಿಷ್ಟ ಪ್ರಕ್ರಿಯೆಗೊಳಪಡದೆ ಮತದಾರರ ಪಟ್ಟಿಯಿಂದ ಹೆಸರನ್ನು ಕೈಬಿಡುವುದು ಅಸಾಧ್ಯವೆಂದು ಹೇಳಿ ಈ ಎಲ್ಲ ಆರೋಪಗಳನ್ನು ‘ಆಧಾರ ರಹಿತ ಮತ್ತು ಅಸತ್ಯ’ ಎಂದು ತಳ್ಳಿಹಾಕಿದೆ. ಸಿಐಡಿ ಕಡೆಯಿಂದ 18 ನಿರಂತರ ಮನವಿಗಳ ಹೊರತಾಗಿಯೂ ಚುನಾವಣಾ ಆಯೋಗ ಡಿಜಿಟಲ್ ಸಾಕ್ಷ್ಯಗಳನ್ನು ನೀಡದಿರಲು ಕಾರಣವೇನು ಎಂಬ ಪ್ರಶ್ನೆ ಮಾತ್ರ ಪ್ರಶ್ನೆಯಾಗಿಯೇ ಉಳಿದಿದೆ ಎಂದು ಸಿದ್ದರಾಮಯ್ಯ ಉಲ್ಲೇಖಿಸಿದ್ದಾರೆ.

ರಾಹುಲ್ ಗಾಂಧಿ ಮುಂದಿಟ್ಟಿರುವ ಸಾಕ್ಷ್ಯಗಳ ಆಧಾರದಲ್ಲಿ ನೋಡುವುದಾದರೆ ಇದು ಸ್ಥಳೀಯವಾಗಿ ನಡೆದ ಅಕ್ರಮವಲ್ಲ ಎಂಬುದಂತು ಸ್ಪಷ್ಟ. ಪ್ರತಿಬೂತ್‍ನ ಮೊದಲ ಮತದಾರನ ಹೆಸರಲ್ಲಿ ಅರ್ಜಿ ಸಲ್ಲಿಕೆಯಾಗಿದೆ, ನಕಲಿ ಫೋನ್ ನಂಬರ್‍ಗಳು ಸೇರ್ಪಡೆಗೊಂಡಿವೆ ಮತ್ತು ಕಾಂಗ್ರೆಸ್ ಪ್ರಾಬಲ್ಯವಿರುವ ಬೂತ್‍ಗಳಲ್ಲಿಯೇ ಮತದಾರರ ಹೆಸರು ಡಿಲೀಟ್ ಮಾಡುವ ಪ್ರಕ್ರಿಯೆಯು ಕೇಂದ್ರೀಕೃತವಾಗಿ ನಡೆದಿದೆ. ಇದೇ ಮಾದರಿಯನ್ನು ಅನುಸರಿಸಿ ಮಹಾರಾಷ್ಟ್ರ, ಹರಿಯಾಣ, ಉತ್ತರಪ್ರದೇಶ ಹಾಗೂ ಇತ್ತೀಚೆಗೆ ಬೆಂಗಳೂರು ಸೆಂಟ್ರಲ್ ಕ್ಷೇತ್ರದ ಮಹದೇವಪುರ ಮತಕ್ಷೇತ್ರದಲ್ಲಿ ಕೂಡ ದೊಡ್ಡ ಪ್ರಮಾಣದಲ್ಲಿ ಅವ್ಯವಹಾರ ನಡೆಸಿರುವುದು ಬೆಳಕಿಗೆ ಬಂದಿದೆ ಎಂದು ಅವರು ತಿಳಿಸಿದ್ದಾರೆ.

ಆಳಂದ ಮತಕ್ಷೇತ್ರ ದೊಡ್ಡ ಅಕ್ರಮದ ಸಣ್ಣ ಕುರುಹಿರಬಹುದೇ? 2018ರಲ್ಲಿ ಇದೇ ಕ್ಷೇತ್ರದಲ್ಲಿ ಬಿಜೆಪಿ ಅತ್ಯಂತ ಅಲ್ಪ ಅಂತರದಲ್ಲಿ ಚುನಾವಣೆ ಜಯಿಸಿತ್ತು. 2023ರಲ್ಲಿ ಸುಮಾರು 6ಸಾವಿರ ಹೆಸರನ್ನು ಡಿಲೀಟ್ ಮಾಡುವ ಪ್ರಯತ್ನ ನಡೆದಿತ್ತು. 2024ರಲ್ಲಿ ಬಿಜೆಪಿ ಮತ್ತದೇ ಪ್ರಯತ್ನಕ್ಕೆ ಕೈಹಾಕಿತ್ತು. ದೇಶಾದ್ಯಂತ ಇಂತಹ ಎಷ್ಟು ಅಕ್ರಮಗಳು ಗಮನಕ್ಕೆ ಬಾರದೆಯೇ ನಡೆದಿರಬಹುದು? ಎಷ್ಟು ಫಲಿತಾಂಶಗಳು ಇದರಿಂದ ಅದಲು ಬದಲಾಗಿರಬಹುದು? ಎಂಬ ಬಗ್ಗೆ ಪ್ರಶ್ನೆಗಳು ಸಹಜವಾಗಿ ಮೂಡುತ್ತಿದೆ ಎಂದು ಅವರು ತಿಳಿಸಿದ್ದಾರೆ.

‘ಸತ್ಯ ಅತ್ಯಂತ ಕಟುವಾಗಿದೆ ಜೊತೆಗೆ ಸರಳವೂ ಆಗಿದೆ. ಬಿಜೆಪಿ ಮತಗಳ್ಳತನದ ಅಕ್ರಮ ಎಸಗುತ್ತದೆ, ಚುನಾವಣಾ ಆಯೋಗವು ಅಗತ್ಯ ಮಾಹಿತಿಯನ್ನು ಒದಗಿಸಲು ನಿರಾಕರಿಸುವ ಮೂಲಕ ತನಿಖೆಗೆ ತಡೆಯೊಡ್ಡುತ್ತದೆ. ದುರಂತವೆಂದರೆ ಪ್ರಜಾಪ್ರಭುತ್ವದ ರಕ್ಷಣೆ ಮಾಡಬೇಕಿದ್ದ ಚುನಾವಣಾ ಆಯೋಗವು ಮತಗಳ್ಳರ ರಕ್ಷಣೆಗೆ ನಿಂತಿದೆ ಎಂದು ಅವರು ದೂರಿದ್ದಾರೆ.

ನಮ್ಮ ನಾಯಕರಾದ @RahulGandhi ಅವರು ಇಂದು ಬಯಲು ಮಾಡಿರುವ ಚುನಾವಣಾ ಅಕ್ರಮಗಳಿಗೆ ಸಂಬಂಧಿಸಿದ ಸತ್ಯಾಂಶಗಳು ಅತ್ಯಂತ ಆಘಾತಕಾರಿಯಾಗಿವೆ. ದೇಶದ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಹೇಗೆ ಮತಗಳ್ಳತನದ ಮೂಲಕ ವ್ಯವಸ್ಥಿತವಾಗಿ ಬುಡಮೇಲುಗೊಳಿಸಲಾಗುತ್ತಿದೆ ಎಂಬ ಕರಾಳ ಸತ್ಯವನ್ನು ಮತ್ತೊಮ್ಮೆ ರಾಹುಲ್‌ ಗಾಂಧಿ ಅವರು ದೇಶದ ಜನರೆದುರು… pic.twitter.com/EgUVmqcMoD

— Siddaramaiah (@siddaramaiah) September 18, 2025

‘ಈ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆಗೆ ಅಗತ್ಯವಿರುವ ಐಪಿ ಅಡ್ರೆಸ್, ಬಳಕೆಯಾದ ಡಿವೈಸ್‍ಗಳು ಹಾಗೂ ಒಟಿಪಿ ಪಡೆದವರ ವಿವರ ಮುಂತಾದ ಮಾಹಿತಿಯನ್ನು ವಾರದ ಒಳಗಾಗಿ ಸಿಐಡಿ ತನಿಖಾ ಸಂಸ್ಥೆಗೆ ಒದಗಿಸಬೇಕೆಂದು ಚು.ಆಯೋಗವನ್ನು ಕರ್ನಾಟಕದ ಜನತೆಯ ಪರವಾಗಿ ಆಗ್ರಹಿಸುತ್ತೇನೆ. ಇದನ್ನು ಒದಗಿಸಲು ಆಯೋಗವು ವಿಫಲವಾದಲ್ಲಿ, ಚುನಾವಣಾ ಅಕ್ರಮಗಳ ಮೂಲಕ ಪ್ರಜಾಪ್ರಭುತ್ವವನ್ನು ದ್ವಂಸಗೈಯ್ಯುತ್ತಿರುವ ದುಷ್ಟರ ರಕ್ಷಣೆಗೆ ಆಯೋಗ ನಿಂತಿದೆ ಎಂಬುದು ಸಾಬೀತಾಗುತ್ತದೆ’

-ಸಿದ್ದರಾಮಯ್ಯ, ಮುಖ್ಯಮಂತ್ರಿ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X