Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಚುನಾವಣಾ ಬಾಂಡ್‌ ರದ್ದು: ಸುಪ್ರೀಂ...

ಚುನಾವಣಾ ಬಾಂಡ್‌ ರದ್ದು: ಸುಪ್ರೀಂ ಕೋರ್ಟ್‌ ತೀರ್ಪು ಸ್ವಾಗತಿಸಿದ ಸಿಎಂ ಸಿದ್ದರಾಮಯ್ಯ

"ಚುನಾವಣಾ ಬಾಂಡ್ ಗಳು ಲಂಚದ ಮತ್ತೊಂದು ರೂಪವಾಗಿತ್ತು"

ವಾರ್ತಾಭಾರತಿವಾರ್ತಾಭಾರತಿ15 Feb 2024 11:59 PM IST
share
ಚುನಾವಣಾ ಬಾಂಡ್‌ ರದ್ದು: ಸುಪ್ರೀಂ ಕೋರ್ಟ್‌ ತೀರ್ಪು ಸ್ವಾಗತಿಸಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಚುನಾವಣಾ ಬಾಂಡ್ ಅಸಾಂವಿಧಾನಿಕವಾಗಿದೆ ಎಂದು ಈ ಯೋಜನೆಯನ್ನು ರದ್ದುಗೊಳಿಸಿದ ಸುಪ್ರೀಂ ಕೋರ್ಟ್ ತೀರ್ಪನ್ನು ಸಿಎಂ ಸಿದ್ದರಾಮಯ್ಯ ಸ್ವಾಗತಿಸಿದ್ದಾರೆ.

ಈ ಕುರಿತು ಎಕ್ಸ್‌ ನಲ್ಲಿ ಸರಣಿ ಪೋಸ್ಟ್‌ ಮಾಡಿರುವ ಅವರು, "ಚುನಾವಣಾ ಬಾಂಡ್‌ಗಳು ಅಸಾಂವಿಧಾನಿಕ ಎಂದು ಐವರು ನ್ಯಾಯಮೂರ್ತಿಗಳ ಸುಪ್ರೀಂ ಕೋರ್ಟ್‌ ಪೀಠ ಇಂದು ನೀಡಿರುವ ತೀರ್ಪು ಪ್ರಜಾತಂತ್ರದಲ್ಲಿ ಪಾರದರ್ಶಕತೆಯನ್ನು ಮರುಸ್ಥಾಪಿಸುವ ನಿಟ್ಟಿನಿಂದ ಐತಿಹಾಸಿಕವಾಗಿದೆ. ಕ್ರೋನಿ ಬಂಡವಾಳಿಗರಿಂದ ಚುನಾವಣೆಗಾಗಿ ದೇಣಿಗೆ ಸಂಗ್ರಹಿಸುವ ದುರುದ್ದೇಶದಿಂದಲೇ ಪ್ರಧಾನಿ ನರೇಂದ್ರ ಮೋದಿ ಸರ್ಕಾರ ಜಾರಿಗೆ ತಂದಿದ್ದ ಈ ಚುನಾವಣಾ ಬಾಂಡ್ ಗಳು ಅಸಾಂವಿಧಾನಿಕವಾದುದು ಮಾತ್ರವಲ್ಲ ಇದರಿಂದ ಅಭಿವ್ಯಕ್ತಿ ಸ್ವಾತಂತ್ರ್ಯ ಮತ್ತು ಮಾಹಿತಿ ಹಕ್ಕಿನ ಉಲ್ಲಂಘನೆಯಾಗಿದೆ ಎಂದು ಸುಪ್ರೀಂಕೋರ್ಟ್ ನೀಡಿರುವ ತೀರ್ಪು ಅತ್ಯಂತ ಸ್ವಾಗತಾರ್ಹವಾದುದು" ಎಂದು ಹೇಳಿದ್ದಾರೆ.

"ಚುನಾವಣಾ ವ್ಯವಸ್ಥೆಯ ಸುಧಾರಣೆಯಲ್ಲಿ ಇದೊಂದು ದಿಟ್ಟ ಕ್ರಮವಾಗಿದೆ. ಕೇಂದ್ರದ ಬಿಜೆಪಿ ಸರ್ಕಾರ 2019ರ ಲೋಕಸಭಾ ಚುನಾವಣೆಯ ಪೂರ್ವದಲ್ಲಿ ಜಾರಿಗೆ ತಂದಿದ್ದ ಈ ಚುನಾವಣಾ ಬಾಂಡ್ ಗಳು ಲಂಚದ ಮತ್ತೊಂದು ರೂಪವಾಗಿತ್ತು. ವಿತ್ತೀಯ ಕಾಯಿದೆಯ ಸ್ವರೂಪದಲ್ಲಿ ಚುನಾವಣಾ ಬಾಂಡ್‌ಗಳನ್ನು ತಂದಿದ್ದು ಹಾಗೂ ಇದಕ್ಕಾಗಿ ಸುಮಾರು ಐದು ಕಾಯಿದೆಗಳನ್ನು ತಿದ್ದುಪಡಿ ಮಾಡಲಾಗಿತ್ತು. ಇದೀಗ ಇದೆಲ್ಲವೂ ರದ್ದುಗೊಂಡಿದೆ. ಚುನಾವಣಾ ಬಾಂಡ್‌ಗಳನ್ನು ಜಾರಿಗೆ ತಂದಿದ್ದರ ಹಿಂದೆ ದುರುದ್ದೇಶವಿರುವುದನ್ನು ಕಾಂಗ್ರೆಸ್‌ ಪಕ್ಷ ಆರಂಭದಿಂದಲೂ ಸ್ಪಷ್ಟವಾಗಿ ಹೇಳಿತ್ತು. ಇದೀಗ ಸುಪ್ರೀಂಕೋರ್ಟ್ ಈ ವಿರೋಧಕ್ಕೆ ಮಾನ್ಯತೆ ನೀಡಿದೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

ಚುನಾವಣಾ ಬಾಂಡ್‌ಗಳು ಬಂಡವಾಳಶಾಹಿ ಶಕ್ತಿಗಳು ಹಾಗೂ ಆಡಳಿತಾರೂಢ ಸರ್ಕಾರದ ನಡುವಿನ ಕೊಡುಕೊಳ್ಳುವಿಕೆಗೆ ಕಾರಣವಾಗುತ್ತದೆ. ಚುನಾವಣಾ ಬಾಂಡ್‌ ಯೋಜನೆಯಡಿ ರಾಜಕೀಯ ಪಕ್ಷಗಳಿಗೆ ಅನಾಮಧೇಯವಾಗಿ ಯಾವುದೇ ಮಿತಿ ಇಲ್ಲದೆ ದೇಣಿಗೆ ನೀಡಬಹುದಾಗಿದ್ದರಿಂದ ಬಂಡವಾಳಶಾಹಿ ಶಕ್ತಿಗಳು ಹಾಗೂ ಆಡಳಿತಾರೂಢ ಸರ್ಕಾರದ ನಡುವೆ ಕೊಡುಕೊಳ್ಳುವಿಕೆಯ ಸಂಬಂಧವೇರ್ಪಡುತ್ತದೆ ಎನ್ನುವ ಆತಂಕವನ್ನು ನಮ್ಮ ಪಕ್ಷ ಹಾಗೂ ಪ್ರಜ್ಞಾವಂತ ನಾಗರಿಕರು, ವಿವಿಧ ಸಂಘಟನೆಗಳು ಎತ್ತಿದ್ದವು. ಸುಪ್ರೀಂ ಕೋರ್ಟ್‌ ಸಹ ತನ್ನ ಇಂದಿನ ತೀರ್ಪಿನಲ್ಲಿ ಇಂತಹ ಸಾಧ್ಯತೆಯನ್ನು ಅಲ್ಲಗಳೆಯಲಾಗದು ಎಂದಿದೆ. ಇದು ಕೊಡುಕೊಳ್ಳುವಿಕೆಗೆ ಕಾರಣವಾಗಬಹುದಾದ ಹಿತಾಸಕ್ತಿಗಳನ್ನು ಕಾಯುವ ಸಾಧ್ಯತೆಯ ಆತಂಕದತ್ತ ಬೆರಳು ಮಾಡಿದೆ. ಇದೇ ವೇಳೆ, ಯೋಜನೆಯು ಮಾಹಿತಿ ಹಕ್ಕು ಹಾಗೂ ಮತದಾರರ ಹಕ್ಕಿನ ಉಲ್ಲಂಘನೆ ಎನ್ನುವುದನ್ನು ಸ್ಪಷ್ಟಗೊಳಿಸಿದೆ. ಸುಪ್ರೀಂ ಕೋರ್ಟ್‌ ತೀರ್ಪು ಕೇಂದ್ರ ಬಿಜೆಪಿ ಸರ್ಕಾರದ ಕರಾಳ ಸಂಚಿಗೆ ಹಿಡಿದ ಕನ್ನಡಿಯಾಗಿದ್ದು ಕೇಂದ್ರದ ಗುಪ್ತ ಕಾರ್ಯಸೂಚಿಯ ಮೇಲೆ ಮಾಡಿರುವ ಗದಾಪ್ರಹಾರವಾಗಿದೆ ಎಂದು ಸಿಎಂ ಹೇಳಿದ್ದಾರೆ.

"ಈಗಾಗಲೇ ಚುನಾವಣಾ ಬಾಂಡ್ ಗಳನ್ನು ಖರೀದಿಸಿದವರ ಸಂಪೂರ್ಣ ವಿವರವನ್ನು ಹದಿನೈದು ದಿನಗಳೊಳಗೆ ಭಾರತೀಯ ಸ್ಟೇಟ್ ಬ್ಯಾಂಕ್ ಬಹಿರಂಗ ಪಡಿಸಬೇಕೆಂದು ಹೇಳಿದೆ. ಇದರಿಂದ ಬಿಜೆಪಿ ಪಕ್ಷದ ಕಪಾಟಿನ ಒಳಗಿರುವ ಹಲವಾರು ಅಸ್ಥಿಪಂಜರಗಳು ಹೊರಬೀಳಲಿವೆ. ಸುಪ್ರೀಂಕೋರ್ಟ್ ಸರಿಯಾಗಿ ಗುರುತಿಸಿರುವಂತೆ ಇದು ಕ್ರೋನಿ ಬಂಡವಾಳಿಗರು ಮತ್ತು ಬಿಜೆಪಿಯಂತ ರಾಜಕೀಯ ಪಕ್ಷಗಳ ನಡುವಿನ ಒಂದು ಅಪವಿತ್ರ ಮೈತ್ರಿ ಆಗಿತ್ತು. ತಾನು ಅಧಿಕಾರಕ್ಕೆ ಬಂದ ನಂತರ ನೆರವಾಗುವ ಭರವಸೆ ನೀಡಿಯೇ ಉದ್ಯಮಿಗಳಿಂದ ಚುನಾವಣಾ ಬಾಂಡ್ ಗಳ ಮೂಲಕ ಹಣ ಸಂಗ್ರಹಿಸಲಾಗುತ್ತಿತ್ತು. ಚುನಾವಣಾ ಬಾಂಡ್ ಮೂಲಕ ಬಂದ ದೇಣಿಗೆಯ ಶೇಕಡಾ 90ರಷ್ಟು ಭಾಗ ಭಾರತೀಯ ಜನತಾ ಪಕ್ಷಕ್ಕೆ ಸಂದಾಯವಾಗುತ್ತಿದ್ದ ಕಾರಣ ಇದು ಯಾರ ನೆರವಿಗಾಗಿ ತಂದ ಯೋಜನೆ ಎನ್ನುವುದು ಸ್ಪಷ್ಟವಾಗಿತ್ತು. ಸಾಂವಿಧಾನಿಕ ಸಂಸ್ಥೆಗಳು ತಮ್ಮ ಸ್ವಾಯತ್ತತೆಯನ್ನು ಕಳೆದುಕೊಳ್ಳುತ್ತಿದೆ ಎಂಬ ಆತಂಕದ ನಡುವೆಯೇ ಸುಪ್ರೀಂ ಕೋರ್ಟ್ ಇಂತಹದ್ದೊಂದು ತೀರ್ಪು ನೀಡಿರುವುದು ಪ್ರಜಾಪ್ರಭುತ್ವ ಮತ್ತು ಸಂವಿಧಾನದ ಮೇಲೆ ಭರವಸೆ ಮೂಡಿಸಿದೆ" ಎಂದು ಸಿದ್ದರಾಮಯ್ಯ ಪೋಸ್ಟ್‌ ಮಾಡಿದ್ದಾರೆ

"ಕಪ್ಪು ಹಣ ನಿಯಂತ್ರಿಸಲು ಚುನಾವಣಾ ಬಾಂಡ್‌ ಯೋಜನೆಯಿಂದ ಸಾಧ್ಯ ಎನ್ನುವ ಕೇಂದ್ರ ಸರ್ಕಾರದ ವಾದವನ್ನು ಸುಪ್ರೀಂ ಕೋರ್ಟ್ ಸಾರಾಸಗಟಾಗಿ‌ ತಿರಸ್ಕರಿಸಿದ್ದು, ಕಪ್ಪು ಹಣ ನಿಯಂತ್ರಣಕ್ಕೆ ಅದಕ್ಕಿಂತ ಉತ್ತಮ ವಿಧಾನಗಳಿವೆ ಎಂದು ಹೇಳಿರುವುದು ಕೇಂದ್ರದ ಪೊಳ್ಳು ವಾದಗಳಿಗೆ ಮಾಡಿರುವ ತಕ್ಕ ಶಾಸ್ತಿಯಾಗಿದೆ. ಅಲ್ಲದೆ, ಇದು ಆರ್ಥಿಕ ಅಸಮಾನತೆಯಿಂದ ಅಸಮ ರಾಜಕೀಯ ಮೇಲಾಟಗಳಿಗೆ ಕಾರಣವಾಗುತ್ತದೆ ಎಂದು ನ್ಯಾಯಾಲಯವು ಹೇಳಿರುವುದು ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರವು ಎಂತಹ ಚುನಾವಣಾ ರಾಜಕಾರಣದ ವ್ಯವಸ್ಥೆಯನ್ನು ಸೃಷ್ಟಿಸಲು ಮುಂದಾಗಿತ್ತು ಎನ್ನುವುದನ್ನು ಸ್ಪಷ್ಟಪಡಿಸಿದೆ. ವಿಪಕ್ಷಗಳನ್ನು ಒಂದಿಲ್ಲೊಂದು ರೀತಿಯಲ್ಲಿ ದಮನಿಸಿ, ತನಗೆ ಅನುಕೂಲವಾಗುವ ರೀತಿಯಲ್ಲಿ ವ್ಯವಸ್ಥೆಯನ್ನು ರೂಪಿಸಿಕೊಳ್ಳುವ ಬಿಜೆಪಿಯ ಕುತಂತ್ರಕ್ಕೆ ಸುಪ್ರೀಂ ಕೋರ್ಟ್‌ ಕಪಾಳಮೋಕ್ಷ ಮಾಡಿದೆ" ಎಂದು ಸಿಎಂ ಟೀಕಿಸಿದ್ದಾರೆ.

ಚುನಾವಣಾ ಬಾಂಡ್‌ಗಳು ಬಂಡವಾಳಶಾಹಿ ಶಕ್ತಿಗಳು ಹಾಗೂ ಆಡಳಿತಾರೂಢ ಸರ್ಕಾರದ ನಡುವಿನ ಕೊಡುಕೊಳ್ಳುವಿಕೆಗೆ ಕಾರಣವಾಗುತ್ತದೆ. ಚುನಾವಣಾ ಬಾಂಡ್‌ ಯೋಜನೆಯಡಿ ರಾಜಕೀಯ ಪಕ್ಷಗಳಿಗೆ ಅನಾಮಧೇಯವಾಗಿ ಯಾವುದೇ ಮಿತಿ ಇಲ್ಲದೆ ದೇಣಿಗೆ ನೀಡಬಹುದಾಗಿದ್ದರಿಂದ ಬಂಡವಾಳಶಾಹಿ ಶಕ್ತಿಗಳು ಹಾಗೂ ಆಡಳಿತಾರೂಢ ಸರ್ಕಾರದ ನಡುವೆ ಕೊಡುಕೊಳ್ಳುವಿಕೆಯ ಸಂಬಂಧವೇರ್ಪಡುತ್ತದೆ…

— CM of Karnataka (@CMofKarnataka) February 15, 2024

share
ವಾರ್ತಾಭಾರತಿ
ವಾರ್ತಾಭಾರತಿ
Next Story
X