Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಎನ್‍ಡಿಎಯಿಂದ ಆಚೆ ಬಂದು ಕುಮಾರಸ್ವಾಮಿ...

ಎನ್‍ಡಿಎಯಿಂದ ಆಚೆ ಬಂದು ಕುಮಾರಸ್ವಾಮಿ ನನಗೆ ಬೆಂಬಲ ನೀಡುವ ಬಗ್ಗೆ ಮಾತನಾಡಲಿ: ಡಿ.ಕೆ.ಶಿವಕುಮಾರ್

ವಾರ್ತಾಭಾರತಿವಾರ್ತಾಭಾರತಿ4 Nov 2023 7:54 PM IST
share
ಎನ್‍ಡಿಎಯಿಂದ ಆಚೆ ಬಂದು ಕುಮಾರಸ್ವಾಮಿ ನನಗೆ ಬೆಂಬಲ ನೀಡುವ ಬಗ್ಗೆ ಮಾತನಾಡಲಿ: ಡಿ.ಕೆ.ಶಿವಕುಮಾರ್

ಬೆಂಗಳೂರು, ನ.4: ಕುಮಾರಸ್ವಾಮಿ ಎನ್‍ಡಿಎ ಮೈತ್ರಿಕೂಟದವವರು. ನಮಗೂ ಎನ್‍ಡಿಎಗೂ ಸಂಬಂಧವಿಲ್ಲ. ಮೊದಲು ಎನ್‍ಡಿಎಯಿಂದ ಆಚೆ ಬಂದು ನಂತರ ಬೆಂಬಲದ ಬಗ್ಗೆ ಮಾತನಾಡಲಿ. ಅವರು ಬೆಂಬಲ ನೀಡುವ ಕಾಲದಲ್ಲೆ ಬೆಂಬಲ ನೀಡಲಿಲ್ಲ. ಈಗೇನು ಬೆಂಬಲ ನೀಡುತ್ತಾರೆ? ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ತಿರುಗೇಟು ನೀಡಿದ್ದಾರೆ.

ಶಿವಕುಮಾರ್ ನಾಳೆಯೆ ಮುಖ್ಯಮಂತ್ರಿ ಆಗುವುದಾದರೆ ಜೆಡಿಎಸ್ ನ 19 ಶಾಸಕರ ಬೆಂಬಲ ನೀಡುತ್ತೇವೆ ಎಂಬ ಮಾಜಿ ಸಿಎಂ ಕುಮಾರಸ್ವಾಮಿ ಹೇಳಿಕೆ ವಿಚಾರವಾಗಿ ಕುಮಾರಕೃಪಾ ಅತಿಥಿ ಗೃಹದ ಬಳಿ ಸುದ್ದಿಗಾರರ ಪ್ರಶ್ನೆಗೆ ಅವರು ಉತ್ತರಿಸಿದರು.

ಕುಮಾರಸ್ವಾಮಿ ಅವರ ಮಾತು ಕೇಳಿ ಬಹಳ ಸಂತೋಷವಾಗಿದೆ. ಸದ್ಯ ನಮಗೆ ರಾಜ್ಯದ ಜನತೆ 136 ಸೀಟು ಜತೆ ಅಧಿಕಾರ ಕೊಟ್ಟಿದ್ದಾರೆ. ಅವರು ಉತ್ತಮ ವಿರೋಧ ಪಕ್ಷದ ನಾಯಕನಾಗಿ ಸರಕಾರವನ್ನು ತಿದ್ದುವ ಕೆಲಸ ಮಾಡಲಿ ಎಂದು ಶಿವಕುಮಾರ್ ಹೇಳಿದರು.

ಕಾಂಗ್ರೆಸ್ ಹಾಗೂ ಬಿಜೆಪಿ ತಲಾ ಒಂದೊಂದು ಬಾರಿ ಅವರನ್ನು ಮುಖ್ಯಮಂತ್ರಿ ಮಾಡಿದೆ. ಅವರ ತಂದೆಯನ್ನು ಕಾಂಗ್ರೆಸ್ ಪ್ರಧಾನಮಂತ್ರಿ ಮಾಡಿದೆ. ಅವರಿಗಿರುವ ಅಪಾರ ಅನುಭವದ ಮೂಲಕ ನಮಗೆ ಮಾರ್ಗದರ್ಶನ ನೀಡಲಿ. ಈಗ ಜನ ನಮಗೆ ಆಶೀರ್ವಾದ ಮಾಡಿದ್ದಾರೆ. ಅವರ ಪ್ರೀತಿ ವಿಶ್ವಾಸಕ್ಕೆ ನಮಸ್ಕಾರ ಎಂದು ಉಪ ಮುಖ್ಯಮಂತ್ರಿ ತಿಳಿಸಿದರು.

ಕುಮಾರಸ್ವಾಮಿ ನಿಮ್ಮ ಬಗ್ಗೆ ಪ್ರೀತಿ ತೋರಿದ್ದಾರೆ ಎಂದು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಕುಮಾರಸ್ವಾಮಿ ಅವರಿಗೆ ನನ್ನ ಮೇಲೆ ಎಷ್ಟು ಪ್ರೀತಿ ಇದೆ, ದಿಲ್ಲಿಯಲ್ಲಿ ಏನು ಮಾತನಾಡಿದ್ದಾರೆ, ಯಾರ ಯಾರ ಬಳಿ ಏನೇನು ಮಾತನಾಡಿದ್ದಾರೆ, ನನ್ನ ವಿಚಾರದಲ್ಲಿ ಏನೇನು ದೊಡ್ಡ ಪ್ಲಾನ್ ಗಳು ನಡೆಯುತ್ತಿವೆ ಎಂಬುದು ನನಗೆ ಗೊತ್ತಿದೆ ಎಂದರು.

ಅವರ ಜೊತೆಯಲ್ಲಿದ್ದವರೆ ನನಗೆ ಮಾಹಿತಿ ನೀಡಿದ್ದಾರೆ. ನಮಗೆ ಜನ ಆಶೀರ್ವಾದ ಮಾಡಿದ್ದು, ಅವರಿಗೆ ಉತ್ತಮ ಕೆಲಸ ಮಾಡೋಣ. ಕುಮಾರಸ್ವಾಮಿ ಅವರಿಗೆ ನಿಜಕ್ಕೂ ನನ್ನ ಮೇಲೆ ಪ್ರೀತಿ ಇದ್ದರೆ ಮೈತ್ರಿ ಸರಕಾರ ಬಿದ್ದ ನಂತರ ನಡೆದ ಘಟನೆಗಳು, ಅವರು ಆಡಿರುವ ಮಾತುಗಳನ್ನು ನೆನಪು ಮಾಡಿಕೊಂಡು ತಮ್ಮ ಆತ್ಮಸಾಕ್ಷಿಗೆ ಉತ್ತರ ನೀಡಲಿ ಎಂದು ಶಿವಕುಮಾರ್ ತಿಳಿಸಿದರು.

ನನಗೆ ಯಾವ ಶಾಸಕರ ಬೆಂಬಲವೂ ಬೇಡ: ನನಗೆ ಸರಕಾರದಲ್ಲಿ ಯಾವ ಶಾಸಕರ ಬೆಂಬಲವೂ ಬೇಡ. ನನ್ನ ಪರವಾಗಿ ಮಾತನಾಡಿರುವ ಶಾಸಕ ಇಕ್ಬಾಲ್ ಹುಸೇನ್ ಗೂ ನೋಟಿಸ್ ಜಾರಿ ಮಾಡುತ್ತೇನೆ. ನನ್ನ ಹಾಗೂ ಸಿದ್ದರಾಮಯ್ಯ ನೇತೃತ್ವದಲ್ಲಿ ಪಕ್ಷ ಚುನಾವಣೆ ನಡೆಸಿದ್ದು, ರಾಜ್ಯದ ಜನತೆ ನಮಗೆ ಆಶೀರ್ವಾದ ಮಾಡಿದ್ದಾರೆ. ಉತ್ತಮ ಆಡಳಿತ ನೀಡುವುದು ನಮ್ಮ ಗುರಿ. ನನಗೆ ಯಾವುದಕ್ಕೂ ಆತುರವಿಲ್ಲ. ನಾನು ಯಾರಿಗೂ ಬೆಂಬಲ ನೀಡಿಲ್ಲ. ನಮ್ಮ ಹೈಕಮಾಂಡ್ ತೀರ್ಮಾನ ಮಾಡಲಿದೆ. ನಮ್ಮ ಪಕ್ಷದ ನಾಯಕರಿಗೆ ಏನು ಹೇಳಬೇಕೋ ಹೇಳಿದ್ದೇವೆ ಎಂದು ಅವರು ಹೇಳಿದರು.

ಸಿದ್ದರಾಮಯ್ಯ ಅವರು ಹೇಳಿದ್ದನ್ನು ಮಾಧ್ಯಮಗಳು ತಿರುಚಿವೆ. ಸಿದ್ದರಾಮಯ್ಯ ನಮ್ಮ ನಾಯಕರು. ನಾವು ಅವರ ನಾಯಕತ್ವ ಒಪ್ಪಿದ್ದೇವೆ. ಪಕ್ಷ ಹೇಳಿದಂತೆ ನಾವು ಕೇಳುತ್ತೇವೆ ಎಂದು ಶಿವಕುಮಾರ್ ತಿಳಿಸಿದರು.

Tags

DK Sivakumarಕುಮಾರಸ್ವಾಮಿ
share
ವಾರ್ತಾಭಾರತಿ
ವಾರ್ತಾಭಾರತಿ
Next Story
X