ಬಜೆಟ್ | ಶಿಕಣ ಹಕ್ಕು ಕಾಯ್ದೆಯ ಆಶಯಗಳ ಸಾಕಾರಕ್ಕೆ ಪೂರಕ: ನಿರಂಜನಾರಾಧ್ಯ.ವಿ.ಪಿ.

ಬೆಂಗಳೂರು: 'ಮುಖ್ಯಮಂತ್ರಿ ಸಿದ್ದರಾಮಯ್ಯ ನವರು ಮಂಡಿಸಿದ ಆಯ ವ್ಯಯದಲ್ಲಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಗೆ ಒದಗಿಸಿರುವ ಹೊಸ ಕಾರ್ಯಕ್ರಮ, ಯೋಜನಾ ಅನುದಾನಗಳು ಹಾಗೂ ಆಯವ್ಯಯದಲ್ಲಿ ಮೀಸಲಿಟ್ಟಿರುವ ಒಟ್ಟು ಹಣ, ರಾಜ್ಯದಲ್ಲಿ ಸಾರ್ವಜನಿಕ ಶಿಕ್ಷಣ ವ್ಯವಸ್ಥೆಯನ್ನು ಬಲಪಡಿಸಲು ಸಹಾಯಕಾರಿಯಾಗಿದೆ. ಈ ಮೂಲಕ ಶಿಕ್ಷಣ ಹಕ್ಕು ಕಾಯ್ದೆಯ ಆಶಯಗಳನ್ನು ಸಾಕಾರಗೊಳಿಸಲು ಮತ್ತು ಸರಕಾರಿ ಶಾಲೆಗಳನ್ನು ಬಲಪಡಿ ಸಲು ಸರಕಾರವು ಬದ್ಧವಾಗಿದೆ ಎಂಬ ಭರವಸೆಯನ್ನು ಆಯವ್ಯಯ ನೀಡಿದೆ.ಈ ಕಾರಣಕ್ಕಾಗಿ ಮುಖ್ಯಮಂತ್ರಿಯನ್ನು ಸರಕಾರಿ ಶಾಲೆಗಳ ಸಮಸ್ತ ಮೂಲ ವಾರಸುದಾರರ ಪರವಾಗಿ ಅದರಲ್ಲೂ ವಿಶೇಷವಾಗಿ ಶಾಲಾ ಅಭಿವೃದ್ಧಿ ಮತ್ತು ಮೇಲುಸ್ತು ವಾರಿ ಸಮಿತಿಗಳ ಪರವಾಗಿ ಅಭಿನಂದಿಸುತ್ತೇನೆ' ಎಂದು ಶಿಕ್ಷಣ ತಜ್ಞ ನಿರಂಜನಾರಾಧ್ಯ.ವಿ.ಪಿ.ತಿಳಿಸಿದ್ದಾರೆ.
ಹೊಸ ತರಗತಿ ಕೋಣೆಗಳ ನಿರ್ಮಾಣಕ್ಕೆ 540 ಕೋಟಿ ರೂ.; ಶೌಚಾಲಯಗಳನ್ನು ನಿರ್ಮಿಸಲು 200 ಕೋಟಿ ರೂ.; ಅತ್ಯಂತ ಶಿಥಿಲವಾದ ಹಾಗೂ ದುರಸ್ಥಿಗೆ ಬಂದಿರುವ ಕಟ್ಟಡಗಳ ದುರಸ್ಥಿಗೆ 100 ಕೋಟಿ ರೂ. ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳ ನಿರ್ವಹಣೆ ಮತ್ತು ಸುಸ್ಥಿತಿ ಕಾಪಾಡಲು ಈಗಿನ ಅನುದಾನ ವನ್ನು ರೂ.20,000 ದಿಂದ 45,000 ಕ್ಕೆ ಏರಿಸಲು 153 ಕೋಟಿ ರೂ.; ವಾರಕ್ಕೆ 2 ಬಾರಿ ಮೊಟ್ಟೆ ನೀಡುವ ಮೂಲಕ ಮಕ್ಕಳ ಪೌಷ್ಟಿಕತೆಯನ್ನು ಸುಧಾರಿಸಲು 280 ಕೋಟಿ ರೂ.; ಕಲಿಕಾ ನ್ಯೂನತೆಯನ್ನು ಸರಿಪಡಿಸಿ ಗುಣಾತ್ಮಕ ಶಿಕ್ಷಣವನ್ನು ಖಾತರಿ ಗೊಳಿಸಲು 80 ಕೋಟಿ ರೂ.; ಮಕ್ಕಳ ಸೃಜನಾತ್ಮಕ ಚಿಂತನೆ ಹಾಗೂ ಚಟುವಟಿಕೆಗಳ ಅನ್ವೇಷಣೆಗೆ 2 ಕೋಟಿ ರೂ.; ಸಾಟ್ಸ್ (Students Achievement Tracking System)ನ್ನು 2.0ಗೆ ಮೇಲ್ದರ್ಜೆಗೇರಿಸಲು ಕ್ರಮ; ಪರಿಸರ ರಕ್ಷಣೆಗೆ ಶಾಲೆಗಳ ಸುತ್ತಮುತ್ತ ಸುಮಾರು 50 ಲಕ್ಷ ಗಿಡಗಳನ್ನು ನೆಡುವ ಯೋಜನೆ ಹಾಗೂ ಸಾರ್ವಜನಿಕ ಗ್ರಂಥಾಲಯಗಳಿಗೆ ಸದಭಿರುಚಿಯ ಪುಸ್ತಕಗಳನ್ನು ಒದಗಿಸಲು 10 ಕೋಟಿ ರೂ. ವನ್ನು ಒದಗಿಸಿರುವುದು, ಮಾನ್ಯ ಮುಖ್ಯಮಂತ್ರಿಗಳಿಗೆ ಹಾಗೂ ಸರಕಾರಕ್ಕೆ ಸಾರ್ವಜನಿಕ ಶಿಕ್ಷಣ ವ್ಯವಸ್ಥೆಯನ್ನು ಬಲಪಡಿಸಲು ಇರುವ ಸದಾಶಯವನ್ನು ಸಾಬೀತುಪಡಿಸಿದೆ.
ಒಟ್ಟಾರೆ, 2023-24 ನೇ ಸಾಲಿಗೆ ಆಯವ್ಯಯದಲ್ಲಿ ಶಿಕ್ಷಣಕ್ಕೆ 37,587 ಕೋಟಿ ರೂ.ಯನ್ನು (ಒಟ್ಟು ಆಯವ್ಯಯದಲ್ಲಿ ಶೇ. 11) ಮೀಸಲಿಟ್ಟಿರುವುದು ನಿಜಕ್ಕೂ ಸ್ವಾಗತಾರ್ಹ. ಶಿಕ್ಷಣ ಇಲಾಖೆಗೆ, ಉಳಿದೆಲ್ಲ ಇಲಾಖೆಗಳಿಗಿಂತ ಅತಿ ಹೆಚ್ಚು ಹಣವನ್ನು ಒದಗಿಸಿರುವುದು, ಸಾರ್ವಜನಿಕ ಶಿಕ್ಷಣ ವ್ಯವಸ್ಥೆಯನ್ನು ಬಲಗೊಳಿಸಲು ಸತತವಾಗಿ 4 ದಶಕಗಳಿಂದ ಹೋರಾಡುತ್ತಿ ರುವ ನನ್ನಂಥವರಿಗೆ ಹೊಸ ಭರವಸೆಯನ್ನು ಮೂಡಿಸಿದೆ ಎಂದು ನಿರಂಜನಾರಾಧ್ಯ.ವಿ.ಪಿ. ಪ್ರಕಟನೆಯಲ್ಲಿ ತಿಳಿಸಿದ್ದಾರೆ.







