Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಸಂವಿಧಾನ ಜಾಗೃತಿ ದಿನದ ಹೆಸರಿನಲ್ಲಿ...

ಸಂವಿಧಾನ ಜಾಗೃತಿ ದಿನದ ಹೆಸರಿನಲ್ಲಿ ಸಂವಿಧಾನಕ್ಕೇ ಅಪಮಾನ ಮಾಡಿದ ಕಾಂಗ್ರೆಸ್ ಸರಕಾರ: ಸಿ.ಟಿ.ರವಿ

ವಾರ್ತಾಭಾರತಿವಾರ್ತಾಭಾರತಿ26 Feb 2024 3:07 PM IST
share
ಸಂವಿಧಾನ ಜಾಗೃತಿ ದಿನದ ಹೆಸರಿನಲ್ಲಿ ಸಂವಿಧಾನಕ್ಕೇ ಅಪಮಾನ ಮಾಡಿದ ಕಾಂಗ್ರೆಸ್ ಸರಕಾರ: ಸಿ.ಟಿ.ರವಿ

ಬೆಂಗಳೂರು: ಸಂವಿಧಾನ ಜಾಗೃತಿ ದಿನದ ಹೆಸರಿನಲ್ಲಿ ಸಂವಿಧಾನಕ್ಕೇ ಅಪಮಾನ ಮಾಡುವ ಕೆಲಸವನ್ನು ಕರ್ನಾಟಕದ ಕಾಂಗ್ರೆಸ್ ಸರಕಾರ ಮಾಡಿದೆ ಎಂದು ಬಿಜೆಪಿ ನಿಕಟಪೂರ್ವ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಮತ್ತು ಮಾಜಿ ಸಚಿವ ಸಿ.ಟಿ.ರವಿ ಅವರು ಆಕ್ಷೇಪ ವ್ಯಕ್ತಪಡಿಸಿದರು.

ನಗರದ ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ನಗರದ ಅರಮನೆ ಮೈದಾನದಲ್ಲಿ ಸರಕಾರಿ ಖರ್ಚಿನಲ್ಲಿ ಕರ್ನಾಟಕ ಸರಕಾರದ ವತಿಯಿಂದ ಆಯೋಜಿಸಿದ್ದ ʼಸಂವಿಧಾನ ಜಾಗೃತಿʼ ದಿನದಲ್ಲಿ ಸಂವಿಧಾನ ಜಾಗೃತಿ ಬಗ್ಗೆ ಮಾತನಾಡಿದ್ದು ಕಡಿಮೆ. ಬದಲಾಗಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರನ್ನು ಟೀಕಿಸಿದ್ದು, ಸುಳ್ಳು ಆರೋಪ ಹೊರಿಸಿದ್ದು, ತಪ್ಪು ಭಾವನೆ ಬರುವಂತೆ ಸುಳ್ಳು ಸುದ್ದಿಯನ್ನು ಹರಡಿಸಿದ್ದು, ಇದು ಸಂವಿಧಾನಕ್ಕೆ ಮಾಡಿದ ಅಪಚಾರ ಎಂದು ಅಭಿಪ್ರಾಯಪಟ್ಟರು.

ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಂಬಿಕೆ ಇಟ್ಟವರು. 4 ಬಾರಿ ಗುಜರಾತ್ ಮುಖ್ಯಮಂತ್ರಿಯಾಗಿದ್ದು, 2 ಬಾರಿ ಬಹುಮತ ಪಡೆದು ಜನರಿಂದ ಆಯ್ಕೆಯಾದ ಪ್ರಧಾನಮಂತ್ರಿ. ಅವರನ್ನು ಒಂದು ಸರಕಾರದ ಪ್ರಾಯೋಜಿತ ಕಾರ್ಯಕ್ರಮದಲ್ಲಿ ಟೀಕೆ ಮಾಡುವುದೇ ಸಂವಿಧಾನ ವಿರೋಧಿ ಕೃತ್ಯ ಎಂದು ತಿಳಿಸಿದರು.

ಪ್ರಧಾನಮಂತ್ರಿಯವರನ್ನು ಟೀಕಿಸಲು ನಿಮಗೆ ಬೇರೆ ವೇದಿಕೆಗಳಿವೆ. ಕಾರ್ಯಕ್ರಮದಲ್ಲಿ ಮಾತನಾಡಿದ ಎಲ್ಲ ಮುಖಂಡರು ಕೇವಲ ಪ್ರಧಾನಮಂತ್ರಿಯವರ ವಿರುದ್ಧ ಟೀಕೆ, ಅಪಪ್ರಚಾರ, ನಿಂದನೆಗೇ ಸರಕಾರಿ ಪ್ರಾಯೋಜಿತ ಕಾರ್ಯಕ್ರಮವನ್ನು ದುರ್ಬಳಕೆ ಮಾಡಿಕೊಂಡದ್ದು ಖಂಡನೀಯ. ಇದಕ್ಕಾಗಿ ಆಯೋಜಕರು ಕ್ಷಮೆ ಯಾಚಿಸಬೇಕು ಎಂದು ಆಗ್ರಹಿಸಿದರು. ವಾಸ್ತವಿಕ ನೆಲೆಯಲ್ಲಿ ಸಂವಿಧಾನ ವಿರೋಧಿಯಾಗಿ ವರ್ತನೆ ಮಾಡಿರುವುದೇ ಕಾಂಗ್ರೆಸ್ ಪಕ್ಷ ಎಂದು ಆರೋಪಿಸಿದರು.

ಸಂವಿಧಾನಕ್ಕೆ 80ಕ್ಕೂ ಹೆಚ್ಚು ತಿದ್ದುಪಡಿ ಮಾಡಿದ್ದ ಕಾಂಗ್ರೆಸ್

ನಮ್ಮ ಸಂವಿಧಾನಕ್ಕೆ ಇದುವರೆಗೆ 106 ತಿದ್ದುಪಡಿಗಳಾಗಿವೆ. ಅದರಲ್ಲಿ 80ಕ್ಕೂ ಹೆಚ್ಚು ತಿದ್ದುಪಡಿ ಮಾಡಿರುವುದು ಕಾಂಗ್ರೆಸ್ ಅಧಿಕಾರದ ಅವಧಿಯಲ್ಲಿ. ಅದರಲ್ಲೂ ವಿಶೇಷವಾಗಿ ತುರ್ತು ಪರಿಸ್ಥಿತಿ ಹೇರಿಕೆ ಸಂದರ್ಭದಲ್ಲಿ, ಎಲ್ಲ ವಿರೋಧ ಪಕ್ಷಗಳ ನಾಯಕರನ್ನು ಜೈಲಿನಲ್ಲಿ ಇಟ್ಟ ಸಂದರ್ಭದಲ್ಲಿ, ನಾಗರಿಕ ಹಕ್ಕುಗಳ ದಮನ ಆದಾಗ, 1975-77ರ ತುರ್ತು ಪರಿಸ್ಥಿತಿ ಅವಧಿಯಲ್ಲೇ ಸಂವಿಧಾನದ 45 ತಿದ್ದುಪಡಿ ಮಾಡಲಾಗಿತ್ತು ಎಂದು ಸಿ.ಟಿ.ರವಿ ಅವರು ತಿಳಿಸಿದರು.

.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X