Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಕೋಟ್ಯಂತರ ರೂ. ಮೌಲ್ಯದ ಬೇನಾಮಿ ಆಸ್ತಿ:...

ಕೋಟ್ಯಂತರ ರೂ. ಮೌಲ್ಯದ ಬೇನಾಮಿ ಆಸ್ತಿ: ತಹಶೀಲ್ದಾರ್ ಅಜಿತ್ ರೈ ವಿರುದ್ಧದ ಪ್ರಕರಣದ ತನಿಖೆಗೆ SIT ರಚನೆ

ವಾರ್ತಾಭಾರತಿವಾರ್ತಾಭಾರತಿ1 July 2023 10:22 AM IST
share
ಕೋಟ್ಯಂತರ ರೂ. ಮೌಲ್ಯದ ಬೇನಾಮಿ ಆಸ್ತಿ: ತಹಶೀಲ್ದಾರ್ ಅಜಿತ್ ರೈ ವಿರುದ್ಧದ ಪ್ರಕರಣದ ತನಿಖೆಗೆ SIT ರಚನೆ

ಬೆಂಗಳೂರು, ಜು.1: ಐನೂರು ಕೋಟಿ ರೂಪಾಯಿಗೂ ಅಧಿಕ ಮೌಲ್ಯದ ಬೇನಾಮಿ ಆಸ್ತಿಗಳನ್ನು ಹೊಂದಿರುವ ಆರೋಪದಡಿ ಬಂಧಿತ ಕೆ.ಆರ್.ಪುರ ತಾಲೂಕು ತಹಶೀಲ್ದಾರ್ ಅಜಿತ್ ಕುಮಾರ್ ರೈ ವಿರುದ್ಧದ ಪ್ರಕರಣಗಳ ತನಿಖೆಗೆ ಲೋಕಾಯುಕ್ತ ಪೊಲೀಸ್ ವಿಭಾಗದಲ್ಲಿ ವಿಶೇಷ ತನಿಖಾ ತಂಡ (SIT) ರಚಿಸಲಾಗಿದೆ ಎಂದು ತಿಳಿದುಬಂದಿದೆ.

ಲೋಕಾಯುಕ್ತದ ಬೆಂಗಳೂರು ನಗರ ಘಟಕದ ಡಿವೈಎಸ್ಪಿ ಪ್ರಮೋದ್ ಕುಮಾರ್ ನೇತೃತ್ವದ ಎಸ್ ಐಟಿ ತಂಡದಲ್ಲಿ ಇಬ್ಬರು ಡಿವೈಎಸ್ಪಿ, ನಾಲ್ವರು ಇನ್ಸ್ಪೆಕ್ಟರ್ಗಳಿದ್ದಾರೆ.

ಒಬ್ಬ ವ್ಯಕ್ತಿಯ ಅಕ್ರಮ ಆಸ್ತಿ ಪ್ರಕರಣದ ತನಿಖೆಗೆ ಲೋಕಾಯುಕ್ತದಲ್ಲಿ ಇದೇ ಮೊದಲ ಬಾರಿಗೆ ಎಸ್ಐಟಿ ರಚಿಸಲಾಗಿದೆ.

ಕೋಟ್ಯಂತರ ರೂ. ಅಕ್ರಮ ಆಸ್ತಿಪಾಸ್ತಿ ಹೊಂದಿರುವ ಆರೋಪದಲ್ಲಿ ಭ್ರಷ್ಟಾಚಾರ ನಿಯಂತ್ರಣ ಕಾಯ್ದೆಯಡಿ ಬಂಧಿತ ಅಜಿತ್ ಕುಮಾರ್ ರೈ ಯನ್ನು 7 ದಿನಗಳ ಕಾಲ ಲೋಕಾಯುಕ್ತರ ವಶಕ್ಕೆ ನೀಡಿ ನಗರದ 78ನೆ ಸಿಸಿಎಚ್ ನ್ಯಾಯಾಲಯ ಶುಕ್ರವಾರ ಆದೇಶಿಸಿದೆ.

ಜೂನ್ 28ರಂದು ಅಜಿತ್ ರೈಗೆ ಸೇರಿದ ಮನೆ ಹಾಗೂ ಕಚೇರಿ ಸೇರಿದಂತೆ 10 ಕಡೆಗಳಲ್ಲಿ ದಾಳಿ ನಡೆಸಿ ರಾತ್ರಿಯವರೆಗೂ ಪರಿಶೀಲನೆ ಮುಂದುವರಿಸಿದ್ದ ಲೋಕಾಯುಕ್ತ ಪೊಲೀಸರು, ಗುರುವಾರ ಬೆಳಗ್ಗೆ ಅವರನ್ನು ವಶಕ್ಕೆ ಪಡೆದಿದ್ದರು.

ಇನ್ನೂ ಶೋಧ ಕಾರ್ಯಾಚರಣೆ ಅಂತಿಮ ಹಂತಕ್ಕೆ ಬಂದಿಲ್ಲ. ಲೋಕಾಯುಕ್ತ ಪೊಲೀಸರು ತನಿಖೆ ಚುರುಕುಗೊಳಿಸಿದ್ದಾರೆ. ಜತೆಗೆ, ಜಪ್ತಿ ಮಾಡಿರುವ ಚರಾಸ್ತಿ ಹಾಗೂ ಸ್ಥಿರಾಸ್ತಿಗಳ ಮೌಲ್ಯಮಾಪನ ನಡೆಸುತ್ತಿದ್ದಾರೆ.

ಅಷ್ಟೇ ಅಲ್ಲದೆ, ತಂದೆಯ ಮರಣದ ಬಳಿಕ ಕಂದಾಯ ಇಲಾಖೆಯಲ್ಲಿ ಅನುಕಂಪದ ಆಧಾರದ ಮೇಲೆ ಎಫ್ಡಿಎ ಹುದ್ದೆ ಪಡೆದುಕೊಂಡಿದ್ದ ಅಜಿತ್ ಹಂತ ಹಂತವಾಗಿ ತಹಶೀಲ್ದಾರ್ ಹುದ್ದೆಗೇರಿದ್ದರು. ವೃತ್ತಿ ಜೀವನದ ಬಹುತೇಕ ಅವಧಿಯನ್ನು ದೊಡ್ಡಬಳ್ಳಾಪುರ, ದೇವನಹಳ್ಳಿ ಸುತ್ತಮುತ್ತಲ ಭಾಗಗಳಲ್ಲಿ ಕಳೆದಿದ್ದಾರೆ. ಅದೇ ಭಾಗದಲ್ಲಿ ಸುಮಾರು 150 ಎಕರೆಗಿಂತ ಜಾಸ್ತಿ ಜಮೀನನ್ನು ಬೇನಾಮಿಗಳ ಹೆಸರುಗಳಲ್ಲಿ ಹೊಂದಿದ್ದಾರೆ. ಈವರೆಗೆ ಅವರ ನಿವಾಸಗಳಲ್ಲಿ 200 ಎಕರೆ ಜಮೀನಿಗೆ ಸಂಬಂಧಿಸಿದ 150 ರಿಂದ 160 ಕ್ರಯಪತ್ರಗಳು ದೊರೆತಿವೆ. ಈ ಜಮೀನುಗಳ ಮೌಲ್ಯವು ಸುಮಾರು 100 ಕೋಟಿ ರೂ. ದಾಟಬಹುದು. ಬಹುತೇಕ ಆಸ್ತಿ ಅಜಿತ್ ಆಪ್ತ ಗೌರವ್ ಶೆಟ್ಟಿ ಹೆಸರಿನಲ್ಲಿದೆ ಎಂದು ಹೇಳಲಾಗುತ್ತಿದೆ.

Tags

Corruption
share
ವಾರ್ತಾಭಾರತಿ
ವಾರ್ತಾಭಾರತಿ
Next Story
X