Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಆರ್ಥಿಕ ನೆರವು ಪಡೆದು ಕೌಶಲ್ಯ ತರಬೇತಿ...

ಆರ್ಥಿಕ ನೆರವು ಪಡೆದು ಕೌಶಲ್ಯ ತರಬೇತಿ ನೀಡದ ಕಂಪೆನಿಗಳ ವಿರುದ್ಧ ಕ್ರಿಮಿನಲ್ ಕೇಸ್: ಸಚಿವ ಶರಣಪ್ರಕಾಶ್

* ಒಪ್ಪಂದ ಮಾಡಿಕೊಂಡು ನಿಯಮ ಉಲ್ಲಂಘಿಸಿರುವ 8 ಕಂಪೆನಿಗಳನ್ನು ಕಪ್ಪು ಪಟ್ಟಿಗೆ ಸೇರಿಸಲು ಅಧಿಕಾರಿಗಳಿಗೆ ತಾಕೀತು

ವಾರ್ತಾಭಾರತಿವಾರ್ತಾಭಾರತಿ18 Jan 2024 9:34 AM IST
share
ಆರ್ಥಿಕ ನೆರವು ಪಡೆದು ಕೌಶಲ್ಯ ತರಬೇತಿ ನೀಡದ ಕಂಪೆನಿಗಳ ವಿರುದ್ಧ ಕ್ರಿಮಿನಲ್ ಕೇಸ್: ಸಚಿವ ಶರಣಪ್ರಕಾಶ್

ಬೆಂಗಳೂರು, ಜ.18: ದೀನ್ ದಯಾಳ್ ಉಪಾಧ್ಯಾಯ ಗ್ರಾಮೀಣ ಕೌಶಲ್ಯ ಯೋಜನೆಯಡಿ ರಾಜ್ಯ ಸರಕಾರದಿಂದ ಆರ್ಥಿಕ ನೆರವು ಪಡೆದರೂ ಸಹ ಅಭ್ಯರ್ಥಿಗಳಿಗೆ ತರಬೇತಿ ನೀಡದ 8 ಕಂಪೆನಿಗಳನ್ನು ಕಪ್ಪು ಪಟ್ಟಿಗೆ ಸೇರಿಸಿ ತಕ್ಷಣವೇ ಕ್ರಿಮಿನಲ್ ಮೊಕದ್ದಮೆ ದಾಖಲಿಸುವಂತೆ ಜೀವನೋಪಾಯ ಹಾಗೂ ಕೌಶಲ್ಯಭಿವೃದ್ದಿ ಸಚಿವ ಡಾ.ಶರಣ ಪ್ರಕಾಶ್ ಪಾಟೀಲ್ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ವಿಕಾಸಸೌಧದಲ್ಲಿ ಬುಧವಾರ ಸಂಜೆ ರಾಷ್ಟ್ರೀಯ ಜೀವನೋಪಾಯ ಮಿಷನ್ನ ಪ್ರಗತಿ ಪರಿಶೀಲನಾ ಸಭೆ ನಡೆಸಿದ ಸಚಿವರು, ಸರಕಾರದ ಮಹತ್ವದ ಯೋಜನೆಯನ್ನು ಅನುಷ್ಠಾನ ಮಾಡದಿರುವ ಕಂಪೆನಿಗಳ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು.

ಡಿಪ್ಲೊಮಾ, ಐಐಟಿ ಸೇರಿದಂತೆ ಮತ್ತಿತರ ವೃತ್ತಿಪರ ಕೋರ್ಸ್ಗಳಿಗೆ ತರಬೇತಿ ನೀಡಲು ಒಪ್ಪಂದ ಮಾಡಿಕೊಂಡು ನಿಯಮ ಉಲ್ಲಂಘನೆ ಮಾಡಿರುವ 8 ಕಂಪೆನಿಗಳ ವಿರುದ್ಧ ಸಂಬಂಧಪಟ್ಟ ಪೊಲೀಸ್ ಠಾಣೆಗಳಲ್ಲಿ ದೂರು ದಾಖಲಿಸಬೇಕು. ಜೊತೆಗೆ ತಕ್ಷಣದಿಂದಲೇ ಅನ್ವಯವಾಗುವಂತೆ ಕ್ರಿಮಿನಲ್ ಮೊಕದ್ದಮೆಯನ್ನೂ ದಾಖಲಿಸಿ, ಮುಂದೆ ಇಂತಹ ಏಜೆನ್ಸಿಗಳಿಗೆ ತರಬೇತಿ ನೀಡುವ ಟೆಂಡರ್ ಗಳನ್ನು ನೀಡಬಾರದು ಎಂದು ತಾಕೀತು ಮಾಡಿದರು.

ಕೇಂದ್ರ ಮತ್ತು ರಾಜ್ಯ ಸರ್ಕಾರದ ಸಹಭಾಗಿತ್ವದ ಈ ಯೋಜನೆಯಡಿ ಗ್ರಾಮೀಣ ಮತ್ತು ನಗರ ಭಾಗದಲ್ಲಿರುವ ವೃತ್ತಿಪರ ಕೋರ್ಸ್ ಗಳಿಗೆ ತರಬೇತಿ ನೀಡಲು ಒಟ್ಟು 74.65 ಕೋಟಿ ರೂ. ಪಡೆದುಕೊಂಡಿದ್ದಾರೆ. ನಿಯಮಗಳನ್ನು ಪಾಲನೆ ಮಾಡದಿರುವವರಿಂದ ಬಡ್ಡಿ ಸಮೇತವಾಗಿ ವಸೂಲಿ ಮಾಡಲು ಸಚಿವರು ಕಟ್ಟುನಿಟ್ಟಿನ ಸೂಚನೆ ನೀಡಿದರು.

ನಿಗದಿತ ಗುರಿ ತಲುಪಲು ವಿಫಲವಾಗಿರುವವರನ್ನು ಸುಸ್ಥಿದಾರರು (ಡಿಫಾಲ್ಟರ್) ಎಂದು ಪರಿಗಣಿಸಬೇಕು. ಅಲ್ಲದೇ, ಈ ಕಂಪೆನಿಗಳಿಗೆ ಹಣ ಬಿಡುಗಡೆ ಮಾಡಿರುವ ಅಧಿಕಾರಿಗಳ ಮೇಲೂ ಕಾನೂನು ಕ್ರಮ ಜರುಗಿಸುವಂತೆ ಸಚಿವ ಶರಣ್ ಪ್ರಕಾಶ್ ಪಾಟೀಲ್ ಹೇಳಿದರು.

ಕೆಲವು ಕಂಪನಿಗಳು ಹೊರ ರಾಜ್ಯದಲ್ಲಿ ಕಾರ್ಯ ನಿರ್ವಹಿಸುತ್ತವೆ. ಇವರ ಬಗ್ಗೆ ಸಂಪೂರ್ಣ ಮಾಹಿತಿ ಕಲೆಹಾಕಿ ಕೇಂದ್ರ ಸರಕಾರಕ್ಕೆ ಪತ್ರ ಬರೆದು, ಮುಂದಿನ ದಿನಗಳಲ್ಲಿ ಇವರಿಗೆ ಯಾವುದೇ ರೀತಿಯ ಆರ್ಥಿಕ ನೆರವು ನೀಡದಂತೆ ಗಮನಕ್ಕೆ ತನ್ನಿ ಎಂದು ಅಧಿಕಾರಿಗಳಿಗೆ ಸೂಚಿಸಿದರು.

ಕೆಲವರು ಅರ್ಹತೆ ಇಲ್ಲದಿದ್ದರೂ ತರಬೇತಿ ನೋಡುತ್ತೇವೆ ಎಂದು ಇಲಾಖೆಗೆ ತಪ್ಪು ಮಾಹಿತಿ ನೀಡಿದ್ದಾರೆ. ಇದರ ಬಗ್ಗೆಯೂ ತನಿಖೆ ನಡೆಸಬೇಕು. ಮುಂದಿನ ದಿನಗಳಲ್ಲಿ ಇದು ಪುನಾರವರ್ತನೆ ಆದರೆ ಸಂಬಂಧಪಟ್ಟ ಅಧಿಕಾರಿಗಳ ಮೇಲೆ ಶಿಸ್ತು ಕ್ರಮ ಜರುಗಿಸುವುದಾಗಿ ಎಚ್ಚರಿಕೆ ನೀಡಿದರು.

ಗುರಿ ತಲುಪಬೇಕು:

ಇನ್ನು ಮುಂದೆ ಅರ್ಹತೆ ಇರುವ ಕಂಪೆನಿಗಳೊಂದಿಗೆ ಮಾತ್ರ ತರಬೇತಿಗೆ ಒಪ್ಪಂದ ಮಾಡಿಕೊಳ್ಳಬೇಕು. ಅವರು ನಿಗದಿತ ಸಮಯದಲ್ಲಿ ನಾವು ನೀಡಿರುವ ಗುರಿಯನ್ನು ತಲುಪಲೇಬೇಕು. ಒಂದು ವೇಳೆ ನಿಯಮ ಪಾಲನೆ ಮಾಡದಿದ್ದರೆ, ಅಂತಹವರನ್ನು ಕಪ್ಪು ಪಟ್ಡಿಗೆ ಸೇರಿಸಲು ಹಿಂದೆ ಮುಂದೆ ನೋಡಬೇಡಿ ಎಂದುಸಚಿವರು ತಾಕೀತು ಮಾಡಿದರು.

ಇನ್ನು ಮುಂದೆ ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದಲ್ಲಿರುವ ತರಬೇತಿ ಸಂಸ್ಥೆಗಳಿಗೆ ಸಂಬಂಧಪಟ್ಟ ಅಧಿಕಾರಿಗಳು ಪ್ರತಿ ತಿಂಗಳು ಕಡ್ಡಾಯವಾಗಿ ಭೇಟಿ ಕೊಟ್ಟು ಅಲ್ಲಿನ ಪ್ರಗತಿ ಪರಿಶೀಲನೆ ನಡೆಸಬೇಕು. ಬಳಿಕ ಕೆಳ ಹಂತದ ಅಧಿಕಾರಿಗಳು ಹಿರಿಯ ಅಧಿಕಾರಿಗಳಿಗೆ ಕಡ್ಡಾಯವಾಗಿ ವರದಿಯನ್ನು ಸಲ್ಲಿಸಬೇಕು. ಬರುವ ದಿನಗಳಲ್ಲಿ ಖುದ್ದು ನಾನೇ ತಿಂಗಳಿಗೊಮ್ಮೆ ಪ್ರಗತಿ ಪರಿಶೀಲನಾ ಸಭೆ ನಡೆಸುತ್ತೇನೆ. ಉದಾಸೀನ ತೋರಿದರೆ, ಮುಲಾಜಿಲ್ಲದೆ ಕಾನೂನು ಕ್ರಮ ಜರುಗಿಸುತ್ತೇನೆ ಎಂದು ಸಚಿವ ಶರಣ್ ಪ್ರಕಾಶ್ ಪಾಟೀಲ್ ಅಧಿಕಾರಿಗಳಿಗೆ ನೇರ ಎಚ್ಚರಿಕೆ ಕೊಟ್ಟರು.

ಸಭೆಯಲ್ಲಿ ಮಿಷನ್ ನಿರ್ದೇಶಕಿ ಪಿಐ ಶ್ರೀವಿದ್ಯಾ, ಹೆಚ್ಚುವರಿ ಮಿಷನ್ ನಿರ್ದೇಶಕ ಅರ್ಜುನ್ ಒಡೆಯರ್ ಸೇರಿದಂತೆ ಇತರೆ ಅಧಿಕಾರಿಗಳು ಉಪಸ್ಥಿತರಿದ್ದರು.

ಏನಿದು ಯೋಜನೆ?

ದೀನ ದಯಾಳ್ ಉಪಾಧ್ಯಾಯ ಗ್ರಾಮೀಣ ಕೌಶಲ್ಯ ಯೋಜನೆ 2023 ಅನ್ನು 25 ಸೆಪ್ಟೆಂಬರ್ 2014 ರಂದು ಪಂಡಿತ್ ದೀನದಯಾಳ್ ಉಪಾಧ್ಯಾಯ ಅವರ 98 ನೇ ಜನ್ಮದಿನದಂದು ಪ್ರಾರಂಭಿಸಲಾಗಿತ್ತು. ಇದು ಕೌಶಲ್ಯ ಅಭಿವೃದ್ಧಿ ಮತ್ತು ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯಿಂದ ನಿರ್ವಹಿಸಲ್ಪಡುತ್ತದೆ. ದೇಶದ 18 ರಿಂದ 35 ವರ್ಷದೊಳಗಿನ ಯುವಕರಿಗೆ ಉಚಿತ ಕೌಶಲ್ಯಾಭಿವೃದ್ಧಿ ತರಬೇತಿ ನೀಡುವ ಮೂಲಕ ಉದ್ಯೋಗ ನೀಡುವುದು ಈ ಯೋಜನೆಯ ಮುಖ್ಯ ಗುರಿಯಾಗಿದೆ. ದೇಶದ ವಿವಿಧ ಕೇಂದ್ರಗಳಲ್ಲಿ ನಿರುದ್ಯೋಗಿ ಯುವಕರಿಗೆ ತರಬೇತಿ ನೀಡಲಾಗುತ್ತದೆ. ಇದಾದ ನಂತರ ಅವರಿಗೆ ಖಾಸಗಿ ವಲಯದಲ್ಲಿ ಕೆಲಸ ಕೊಡಿಸುವ ಕೆಲಸವೂ ನಡೆಯುತ್ತದೆ.

ದೀನ್ ದಯಾಳ್ ಉಪಾಧ್ಯಾಯ ಗ್ರಾಮೀಣ ಕೌಶಲ್ಯ ಯೋಜನೆಯಡಿಯಲ್ಲಿ, ನಿರುದ್ಯೋಗಿ ಯುವಕರಿಗೆ ಉಚಿತ ಕೌಶಲ್ಯ ತರಬೇತಿ ಮತ್ತು ಉದ್ಯೋಗಗಳು, ಉಚಿತವಾಗಿ ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಬಹುದು. ಉದ್ಯೋಗವನ್ನು ಹುಡುಕುತ್ತಿರುವ ಮತ್ತು ಏನನ್ನಾದರೂ ಮಾಡಲು ಬಯಸುವ ದೇಶದ ಅಂತಹ ಯುವಕರಿಗೆ, ದೇಶ ದೀನದಯಾಳ್ ಉಪಾಧ್ಯಾಯ ಗ್ರಾಮೀಣ ಕೌಶಲ್ಯ ವಿಕಾಸ್ ಯೋಜನೆಯನ್ನು ಪ್ರಧಾನ ಮಂತ್ರಿಯವರು ಪ್ರಾರಂಭಿಸಿದ್ದಾರೆ.

ಯೋಜನೆಯ ಉದ್ದೇಶ

ಗ್ರಾಮೀಣ ಪ್ರದೇಶದಿಂದ ಬರುವ ಯುವಕರು ತಮ್ಮ ಕೌಶಲ್ಯಕ್ಕೆ ತಕ್ಕಂತೆ ತರಬೇತಿ ಪಡೆದು ಸಬಲರಾಗಬೇಕು. ಈ ಯೋಜನೆಯಡಿಯಲ್ಲಿ ದೇಶದ ಮೂಲೆ ಮೂಲೆಗಳಲ್ಲಿ ತರಬೇತಿ ಕೇಂದ್ರಗಳನ್ನು ತೆರೆಯಲಾಗಿದ್ದು, ನಿರುದ್ಯೋಗಿ ಯುವಕರಿಗೆ ಅನುಕೂಲವಾಗಲಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X