Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಜ.21ಕ್ಕೆ ಬೆಳಗಾವಿಯಲ್ಲಿ ‘ಜೈ ಬಾಪು, ಜೈ...

ಜ.21ಕ್ಕೆ ಬೆಳಗಾವಿಯಲ್ಲಿ ‘ಜೈ ಬಾಪು, ಜೈ ಭೀಮ್, ಜೈ ಸಂವಿಧಾನ ಸಮಾವೇಶ’ : ಡಿಸಿಎಂ ಡಿ.ಕೆ.ಶಿವಕುಮಾರ್

ವಾರ್ತಾಭಾರತಿವಾರ್ತಾಭಾರತಿ8 Jan 2025 7:50 PM IST
share
ಜ.21ಕ್ಕೆ ಬೆಳಗಾವಿಯಲ್ಲಿ ‘ಜೈ ಬಾಪು, ಜೈ ಭೀಮ್, ಜೈ ಸಂವಿಧಾನ ಸಮಾವೇಶ’ : ಡಿಸಿಎಂ ಡಿ.ಕೆ.ಶಿವಕುಮಾರ್

ಬೆಂಗಳೂರು : ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ನಿಧನದ ಹಿನ್ನೆಲೆಯಲ್ಲಿ ಮುಂದೂಡಿಕೆಯಾಗಿದ್ದ ಗಾಂಧಿ ಭಾರತ ಕಾರ್ಯಕ್ರಮದ ಅಂಗವಾಗಿ ಬೆಳಗಾವಿ ಸುವರ್ಣ ವಿಧಾನಸೌಧದ ಆವರಣದಲ್ಲಿ ಗಾಂಧಿ ಪ್ರತಿಮೆ ಅನಾವರಣ ಹಾಗೂ ‘ಜೈ ಬಾಪು, ಜೈ ಭೀಮ್, ಜೈ ಸಂವಿಧಾನ ಸಮಾವೇಶ’ವನ್ನು ಇದೇ ತಿಂಗಳ 21ರಂದು ನಡೆಸಲಾಗುವುದು ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.

ಬುಧವಾರ ನಗರದ ಕ್ವೀನ್ಸ್‌ ರಸ್ತೆಯ ಕೆಪಿಸಿಸಿ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಗಾಂಧಿ ಭಾರತ ಕಾರ್ಯಕ್ರಮವನ್ನು ಪಕ್ಷ ಈಗಾಗಲೇ ಆರಂಭಿಸಿದ್ದು, ಗಾಂಧೀಜಿ ಅವರು ಕಾಂಗ್ರೆಸ್ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡು ಕಳೆದ ಡಿ.26ಕ್ಕೆ 100 ವರ್ಷ ತುಂಬಿದ ಹಿನ್ನೆಲೆಯಲ್ಲಿ ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆ ನಡೆಸಲಾಗಿತ್ತು. ಅಂದು ಸಂಜೆ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ನಿಧನರಾದ ಹಿನ್ನೆಲೆಯಲ್ಲಿ ಮರುದಿನದ ಕಾರ್ಯಕ್ರಮಗಳನ್ನು ಮುಂದೂಡಲಾಗಿತ್ತು ಎಂದರು.

ಕಾರ್ಯಕಾರಿ ಸಮಿತಿ ಸಭೆಯಲ್ಲಿ ನಮ್ಮ ಮುಂದಿನ ಹೋರಾಟದ ಬಗ್ಗೆ ತೀರ್ಮಾನ ಮಾಡಲಾಗಿತ್ತು. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹಾಗೂ ಪ್ರಧಾನ ಕಾರ್ಯದರ್ಶಿಗಳು ಚರ್ಚಿಸಿ ಜನವರಿ 21ರಂದು ಈ ಕಾರ್ಯಕ್ರಮ ನಡೆಸಲು ತೀರ್ಮಾನಿಸಲಾಗಿದೆ. 1924ರ ಕಾಂಗ್ರೆಸ್ ಅಧಿವೇಶನದ ಕುರಿತ ಮಾಹಿತಿಗಳ ಪುಸ್ತಕ ಹಾಗೂ ಇತರೆ ಪುಸ್ತಕಗಳನ್ನು ಜ.21ರಂದು ಬಿಡುಗಡೆ ಮಾಡಲಾಗುವುದು ಎಂದು ಡಿ.ಕೆ.ಶಿವಕುಮಾರ್ ಹೇಳಿದರು.

ಜ.21ರಂದು ಬೆಳಗ್ಗೆ ಸುವರ್ಣ ವಿಧಾನಸೌಧದ ಬಳಿ ಗಾಂಧಿ ಪ್ರತಿಮೆ ಅನಾವರಣ ಕಾರ್ಯಕ್ರಮ ನಡೆಯಲಿದೆ. ಈ ಕಾರ್ಯಕ್ರಮಕ್ಕೆ ಎಲ್ಲಾ ಪಕ್ಷದ ಶಾಸಕರಿಗೂ ಆಹ್ವಾನ ನೀಡಲಾಗುವುದು. ಅಂದು ಮಧ್ಯಾಹ್ನ 12 ಗಂಟೆಗೆ ಎಐಸಿಸಿ ವತಿಯಿಂದ ‘ಜೈ ಬಾಪು, ಜೈ ಭೀಮ್, ಜೈ ಸಂವಿಧಾನ’ ಎಂಬ ಹೆಸರಿನಡಿಯಲ್ಲಿ ಸಮಾವೇಶವನ್ನು ಹಮ್ಮಿಕೊಳ್ಳಲಾಗಿದೆ. ಈ ಸಮಾವೇಶಕ್ಕೆ ಎಲ್ಲಾ ವಿಧಾನಸಭಾ ಕ್ಷೇತ್ರದಿಂದ ಕನಿಷ್ಠ 100 ಮಂದಿ ಕಾಂಗ್ರೆಸ್ ಮುಖಂಡರು, ಕಾರ್ಯಕರ್ತರು ಭಾಗವಹಿಸಬೇಕು ಎಂದು ಡಿ.ಕೆ.ಶಿವಕುಮಾರ್ ಕರೆ ನೀಡಿದರು.

ಈ ಸಮಾವೇಶದ ಹಿನ್ನೆಲೆಯಲ್ಲಿ ಜ.13ರಂದು ಬೆಳಗ್ಗೆ 11 ಗಂಟೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಪ್ರಧಾನ ಕಾರ್ಯದರ್ಶಿ ಸುರ್ಜೆವಾಲಾ ಅವರ ನೇತೃತ್ವದಲ್ಲಿ ಪೂರ್ವಭಾವಿ ಸಭೆ ನಡೆಯಲಿದ್ದು, ಕಾಂಗ್ರೆಸ್ ಪಕ್ಷದ ಎಲ್ಲಾ ಪದಾಧಿಕಾರಿಗಳು, ಬ್ಲಾಕ್ ಹಾಗೂ ಜಿಲ್ಲಾಧ್ಯಕ್ಷರು, ಶಾಸಕರು, ವಿವಿಧ ಘಟಕಗಳ ಅಧ್ಯಕ್ಷರು, ಮಾಜಿ ಮಂತ್ರಿಗಳು, ಮಾಜಿ ಶಾಸಕರು ಭಾಗವಹಿಸಲಿದ್ದಾರೆ. ಅದೇ ದಿನ ಸಂಜೆ 4 ಗಂಟೆಗೆ ಕೆಪಿಸಿಸಿ ಪದಾಧಿಕಾರಿಗಳ ಸಭೆ ನಡೆಯಲಿದ್ದು, ಸಂಜೆ 6 ಗಂಟೆಗೆ ಮುಖ್ಯಮಂತ್ರಿಗಳು ಶಾಸಕಾಂಗ ಪಕ್ಷದ ಸಭೆ ನಡೆಸಲಿದ್ದಾರೆ ಎಂದು ಡಿ.ಕೆ.ಶಿವಕುಮಾರ್ ಮಾಹಿತಿ ನೀಡಿದರು.

ಈ ಮಧ್ಯೆ ಜ.15 ಹಾಗೂ 16ರಂದು ಎಲ್ಲಾ ಶಾಸಕರು, ಪರಾಜಿತ ಅಭ್ಯರ್ಥಿಗಳು ತಮ್ಮ ಕಾರ್ಯಕ್ರಮ ರದ್ದು ಮಾಡಿ ತಮ್ಮ ಕ್ಷೇತ್ರಗಳಲ್ಲಿ ಪಕ್ಷ ಸಂಘಟನೆಗೆ ಪೂರ್ವಭಾವಿ ಸಭೆ ನಡೆಸಬೇಕು. ಈ ಸಭೆಯಲ್ಲಿ ಸಂಬಂಧಪಟ್ಟ ಎಲ್ಲಾ ಪದಾಧಿಕಾರಿಗಳು, ಉಸ್ತುವಾರಿ ಹಾಗೂ ವೀಕ್ಷಕರು ಭಾಗವಹಿಸಲಿದ್ದಾರೆ. ಕಿತ್ತೂರು ಕರ್ನಾಟಕ ಭಾಗದ ಮಂತ್ರಿಗಳು, ಶಾಸಕರು. ಪರಿಷತ್ ಸದಸ್ಯರು, ವಿವಿಧ ಸಮಿತಿಗಳ ಸದಸ್ಯರು ತಮ್ಮ ಜವಾಬ್ದಾರಿ ಮುಂದುವರಿಸಬೇಕಿದೆ ಎಂದು ಡಿ.ಕೆ.ಶಿವಕುಮಾರ್ ಕರೆ ನೀಡಿದರು.

ಸುದ್ದಿಗೋಷ್ಠಿಯಲ್ಲಿ ಮಾಜಿ ಮುಖ್ಯಮಂತ್ರಿ ವೀರಪ್ಪ ಮೊಯ್ಲಿ, ಗೃಹ ಸಚಿವ ಡಾ.ಜಿ.ಪರಮೇಶ್ವರ್, ಸಚಿವರಾದ ಕೆ.ಎಚ್.ಮುನಿಯಪ್ಪ, ಸತೀಶ್ ಜಾರಕಿಹೊಳಿ, ಲಕ್ಷ್ಮೀ ಹೆಬ್ಬಾಳ್ಕರ್, ಶಾಸಕ ನೆಲಮಂಗಲ ಶ್ರೀನಿವಾಸ್, ವಿಧಾನ ಪರಿಷತ್ ಸದಸ್ಯ ಎಸ್.ರವಿ ಸೇರಿದಂತೆ ಮತ್ತಿತರ ಮುಖಂಡರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X