Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಭದ್ರಾ ನೀರು ಹರಿಸುವಂತೆ ಒತ್ತಾಯ:...

ಭದ್ರಾ ನೀರು ಹರಿಸುವಂತೆ ಒತ್ತಾಯ: ದಾವಣಗೆರೆ ಬಂದ್ ಗೆ ಮಿಶ್ರ ಪ್ರತಿಕ್ರಿಯೆ

ವಾರ್ತಾಭಾರತಿವಾರ್ತಾಭಾರತಿ25 Sept 2023 11:37 AM IST
share
ಭದ್ರಾ ನೀರು ಹರಿಸುವಂತೆ ಒತ್ತಾಯ: ದಾವಣಗೆರೆ ಬಂದ್ ಗೆ ಮಿಶ್ರ ಪ್ರತಿಕ್ರಿಯೆ

ದಾವಣಗೆರೆ: ಭದ್ರಾ ಬಲದಂಡೆ ನಾಲೆಗಳಿಗೆ ನೀರು ಸ್ಥಗಿತಗೊಳಿಸಿರುವುದನ್ನು ವಿರೋಧಿಸಿ ಭಾರತೀಯ ರೈತ ಒಕ್ಕೂಟದ ವತಿಯಿಂದ ಸೋಮವಾರ ಕರೆ ಕೊಟ್ಟಿದ್ದ ದಾವಣಗೆರೆ ಬಂದ್‌ಗೆ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಯಿತು.

ಇಲ್ಲಿನ ಜಯದೇವ ವೃತ್ತದಲ್ಲಿ ಬೆಳ್ಳಂಬೆಳಿಗ್ಗೆ ಜಮಾಯಿಸಿದ ರೈತ ಒಕ್ಕೂಟದ ಸದಸ್ಯರು ನಗರದ ವಿವಿಧ ಕಡೆಗಳಲ್ಲಿ ಸಂಚರಿಸಿ ಸಾರ್ವಜನಿಕರಿಗೆ ಭದ್ರಾ ನೀರಿನ ಬಗ್ಗೆ ಅರಿವು ಮೂಡಿಸಿದರು.

ಗಾಂಧಿ ವೃತ್ತದಲ್ಲಿ ಸಂಚಾರ ಮಾಡುತ್ತಿದ್ದ ಖಾಸಗಿ , ಕೆಎಸ್ಸಾರ್ಟಿಸಿ ಬಸ್‌ಗಳನ್ನು ತಡೆದು ಬಂದ್‌ಗೆ ಬೆಂಬಲ ನೀಡಿ ಎಂದು ಚಾಲಕರ ವಿರುದ್ದ ಆಕ್ರೋಶ ವ್ಯಕ್ತಪಡಿಸಿದರು.

ಬ್ಯಾಂಕ್‌ಗಳು, ಶಾಲಾ, ಕಾಲೇಜುಗಳು, ಆಸ್ಪತ್ರೆಗಳು, ಆಂಚೆ ಕಚೇರಿಗಳು ಎಲ್ಲಾ ಕಚೇರಿಗಳು ಎಂದಿನಂತೆ ಕಾರ್ಯನಿರ್ವಹಿಸಿದವು. ಅದರೆ, 10 ರ ನಂತರ ಖಾಸಗಿ ಮತ್ತು ಸರಕಾರಿ ಬಸ್ ನಿಲ್ದಾಣಗಳಲ್ಲಿ ಬಸ್ ಇಲ್ಲದ ಕಾರಣದಿಂದ ಜನರು ಪರದಾಡಿದ ದೃಶ್ಯಗಳು ಕಂಡುಬಂದವು.

ರೈತ ಮುಖಂಡ ಬೆಳವನೂರು ನಾಗೇಶ್ವರರಾವ್ ಮಾತನಾಡಿ, ಸತತ 100 ದಿನಗಳ ಕಾಲ ನಾಲೆಗಳಲ್ಲಿ ನೀರು ಹರಿಸಬೇಕು. ಆದರೆ, ರಾಜ್ಯ ಸರ್ಕಾರ ಮಾತಿಗೆ ತಪ್ಪಿದೆ ಎಂದು ಕಿಡಿಕಾರಿದರು

100 ದಿನಗಳ ಕಾಲ ನೀರು ನೀಡುವುದಾಗಿ ಹೇಳಿದ್ದ ಸರ್ಕಾರ ಕೇವಲ 40 ದಿನಗಳ ಕಾಲ ನೀರು ಹರಿಸಿದೆ. ಇದರಿಂದಾಗಿ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಭದ್ರಾ ನಾಲೆಯಲ್ಲಿ ನಿರಂತರ ನೀರು ಹರಿಯದಿದ್ದರೆ ವಿಷ ಕುಡಿಯುವ ಪರಿಸ್ಥಿತಿ ಎದುರಾಗಲಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು .

ಮುಖಂಡರಾದ ಕೆ.ಪಿ.ರಾಜೇಶ್ವರಿ ಮಾತನಾಡಿ, ಭದ್ರಾ ನಾಲೆಯಲ್ಲಿ ನೀರು ಹರಿಸಿದ ಕಾರಣ ಭದ್ರಾ ಅಚ್ಚುಕಟ್ಟು ಪ್ರದೇಶದ ರೈತರು ಭತ್ತ ನಾಟಿ ಮಾಡಿದ್ದು, ನಾಲೆಯಲ್ಲಿ ನೀರು ನಿಲುಗಡೆ ಮಾಡಿರುವ ಕಾರಣ ಭತ್ತದ ಬೆಳೆ ಒಣಗುತ್ತಿದೆ. ಇದರಿಂದಾಗಿ ಕೋಟ್ಯಂತರ ನಷ್ಟ ಅಗುತ್ತಿದೆ. ಕಾರಣ ಈ ಕೂಡಲೇ ಸರ್ಕಾರ ತನ್ನ ಆದೇಶವನ್ನು ಬದಲಿಸಿ ಈ ಕೂಡಲೇ ನೀರು ಹರಿಸಿ ರೈತರ ಹಿತ ಕಾಪಾಡಬೇಕೆಂದು ಒತ್ತಾಯಿಸಿದರು.

ಕೆ.ಪಿ.ಕಲ್ಲಿಂಗಪ್ಪ, ಶಾಮನೂರು ಹೆಚ್.ಆರ್.ಲಿಂಗರಾಜ, ಬಿ.ಜಿ.ಅಜಯ್ ಕುಮಾರ್, ಬಿ.ಎಂ.ಸತೀಶ್, ಎಸ್.ಜಿ.ಸೋಮಶೇಖರ್, ವೈ.ಮಲ್ಲೇಶ್, ಹೆಚ್.ಎನ್.ಗುರುನಾಥ, ಕುಂದವಾಡದ ಹೆಚ್.ಜಿ.ಗಣೇಶಪ್ಪ, ಶ್ರೀನಿವಾಸ್ ದಾಸಕರಿಯಪ್ಪ, ಕೆ.ಟಿ.ಕಲ್ಲೇಶ್, ಕರವೇಯ ಐಗೂರು ಸುರೇಶ್, ಹೆಚ್.ಎನ್.ಹಾಲೇಶ್, ಯೋಗೇಶ್, ಶ್ರೀನಿವಾಸ್, ಎಸ್.ಟಿ.ವೀರೇಶ್, ಲೋಕಿಕೆರೆ ನಾಗರಾಜ್, ಎನ್.ರಾಜಶೇಖರ, ಟಿಂಕರ್ ಮಂಜಣ್ಣ, ಡಾ.ಟಿ.ಜಿ.ರವಿಕುಮಾರ್, ಅಣಬೇರು ಜೀವನಮೂರ್ತಿ, ಇತರರು ಇದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X